Homeಮುಖಪುಟಜನ ಏನ್‌ ಮಾಡ್ಬೇಕು ಅಂತ ಹೇಳ್ತಿರೋ ಸರ್ಕಾರ ತಾನೇನು ಮಾಡಿದೀನಿ ಅಂತನೇ ಹೇಳ್ತಿಲ್ಲ?

ಜನ ಏನ್‌ ಮಾಡ್ಬೇಕು ಅಂತ ಹೇಳ್ತಿರೋ ಸರ್ಕಾರ ತಾನೇನು ಮಾಡಿದೀನಿ ಅಂತನೇ ಹೇಳ್ತಿಲ್ಲ?

- Advertisement -
- Advertisement -

ಒಂದಾನೊಂದು ಕಾಲದಾಗ ಜಾನ್ ಕೆನಡಿ ಅಂತ ಒಬ್ಬರು ಇದ್ದರು. ಅವರು ಅಮೆರಿಕದ ಅಧ್ಯಕ್ಷರಾಗಿದ್ದರು. ಅವರು ತಮ್ಮ ಸಣ್ಣ ಜೀವನ ಕಾಲದಾಗ ಅನೇಕ ಒಳ್ಳೆ ಕೆಲಸ ಮಾಡಿದರು.

ಅವರು 1960ರೊಳಗ ತಮ್ಮ 43ನೇ ವಯಸ್ಸಿಗೆ ಅಧ್ಯಕ್ಷೀಯ ಚುನಾವಣೆ ಗೆದ್ದು ಅತಿಕಮ್ಮಿ ವಯಸ್ಸಿನ ಅಧ್ಯಕ್ಷ ಅಂತ ಅಮೆರಿಕದ ಇತಿಹಾಸದಾಗ ದಾಖಲು ಮಾಡಿದರು. ಆರ್ಥಿಕ ಹಿಂಜರಿಕೆಯಿಂದ ಹೊಡೆತ ತಿಂದಿದ್ದ ಅಮೆರಿಕಾವನ್ನು ಬೆಳವಣಿಗೆಯ ದಾರಿಯೊಳಗ ದೂಡಿದರು. ವಿಶ್ವಾದ್ಯಂತ ಶಾಂತಿ ಹಾಗೂ ಅಭಿವೃದ್ಧಿ ಸ್ಥಾಪಿಸಲಿಕ್ಕೆ ಪೀಸ್‍ಕೋರ್ ಅನ್ನೋ ಸಂಸ್ಥೆ ಸುರು ಮಾಡಿದರು. ರಷಿಯಾ ಒಕ್ಕೂಟದ ಅಧ್ಯಕ್ಷ ಕ್ರುಷೇವ ಅವರ ಜೊತೆಗೆ ಶಾಂತಿ ಒಪ್ಪಂದ ಸಹಿ ಮಾಡಿ ಪರಮಾಣು ಯುದ್ಧ ತಪ್ಪಿಸಿದರು. ನಿರುದ್ಯೋಗಿಗಳಿಗೆ ಭತ್ಯೆ, ಕೌಶಲ್ಯ ತರಬೇತಿ ಮುಂತಾದ ಯೋಜನೆಗಳನ್ನು ಆರಂಭ ಮಾಡಿದರು. ಕರಿಯರು ಹೆಚ್ಚಾಗಿ ಇದ್ದ ಕೊಳಚೆ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು, ಕರಿಯರ ಶಿಕ್ಷಣದ ಸಲುವಾಗಿ ತೆರೆಯಲಾದ ವಿಶೇಷ ಕಾಲೇಜುಗಳನ್ನು ಬೆಳೆಸಲು ಅನುದಾನ ನೀಡಿದರು. ಮಹಿಳಾ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀತಿಯ ಅನುವಾಗಿ ಹೆಚ್ಚಿನ ಕೂಲಿ ಸಿಗುವಂತೆ ಕಾನೂನು ಮಾಡಿದರು, ಇತ್ಯಾದಿ.

ಜಾನ್ ಕೆನಡಿ

ತಮ್ಮ ಚುನಾವಣೆಯ ಗೆಲುವನ್ನು ಅವರು ಇದು `ಒಂದು ಪಕ್ಷದ ಗೆಲುವು ಅಲ್ಲ. ಸ್ವಾತಂತ್ರ್ಯದ ಉತ್ಸವ’ ಅಂತ ಬಣ್ಣಿಸಿದರು. ಇದು ಮನುಷ್ಯರೆಲ್ಲರ ಉತ್ಥಾನದ ಅವಕಾಶದ ದಾರಿ. ಎಲ್ಲ ರೀತಿಯ ಬಡತನವನ್ನೂ, ಗುಲಾಮಗಿರಿಯನ್ನು ತೊಡೆದುಹಾಕುವ ಅವಕಾಶ ಈಗ ನಮ್ಮ ಮುಂದೆ ಇದೆ ಎಂದವರು. ಆದರ ಅವರ ಒಂದು ಮಾತು ಭಾಳ ಫೇಮಸ್ಸು. ಅದು ನಮಗೆಲ್ಲರಿಗೂ ಗೊತ್ತು. ನಿಮಗಾಗಿ ಈ ದೇಶ ಏನು ಮಾಡುತ್ತದೆ ಎಂದು ಕೇಳಬೇಡಿ. ನೀವು ನಿಮ್ಮ ದೇಶಕ್ಕಾಗಿ ಏನು ನೀಡಬಲ್ಲಿರಿ ಎನ್ನುವುದನ್ನು ಕೇಳಿಕೊಳ್ಳಿರಿ.

ಅವರ ವಿಚಾರಗಳನ್ನು, ಸಿದ್ಧಾಂತಗಳನ್ನು ಮನಸೋ ಇಚ್ಛೆ ಪಾಲಿಸುವವರಿಗೆ ಕೆನಡಿಯನ್ ಅಂತ ಕರೀತಾರ. ಹಂಗಂದರ ಕೆನಡಾದಿಂದ ಬಂದವರು ಅಂತ ಅಲ್ಲ. ಜಾನ್ ಕೆನಡಿಯವರ ವಿಚಾರಗಳನ್ನ, ಕಾರ್ಯಕ್ರಮ- ಯೋಜನೆಗಳನ್ನು ಒಪ್ಪಿಕೊಂಡು ನಡೆಯುವವರು ಅಂತ. ಈಗಿನ ನಮ್ಮ ನಾಯಕರನ್ನು ಕೆನೆಡಿಯನ್ ಅಂತ ಕರೀಬಹುದು ಅಂತೀರೇನು?

ಒಂದು ರೀತಿಯಿಂದ ಅನಬಹುದೋ ಏನೋ. ಅದು ಏನಪಾ ಅಂದರ `ನೀವು ದೇಶಕ್ಕೆ ಏನು ಮಾಡಬಲ್ಲಿರಿ’ ಅನ್ನೋ ಮಾತು. ಇಡೀ ಜಗತ್ತಿನ 177 ದೇಶಗಳಲ್ಲಿ ಈ ಕೊರೊನಾ ವ್ಯಾಧಿ ಹೊಡಕೊಂಡದ. ದೊಡ್ಡ ಸಾಹುಕಾರ ಟ್ರಂಪಣ್ಣನವರಿಂದಾ ಹಿಡಕೊಂಡು ಸಣ್ಣಂಗಡಿ ಶೆಟ್ಟರಾದ ಉಗಾಂಡಾದ ಯಾವೋರಿ ಮುಸೇವಿನಿ ಅವರ ತನಕಾ ಎಲ್ಲಾರೂ ಜನರಿಗೆ `ಹಿಂಗ ಮಾಡರಿ, ಹಂಗ ಮಾಡರಿ, ಹಂಗಂತ ಹಂಗ ಮಾಡಬ್ಯಾಡ್ರಿ’ ಅಂತ ಹೇಳಲಿಕ್ಕೆ ಹತ್ಯಾರ. ಯಾರೂ ನಿಮ್ಮ ಸಲುವಾಗಿ ನಾವು ಏನು ಮಾಡತೇವಿ ಅನ್ನೋದನ್ನ ಹೇಳಲಿಕ್ಕೆ ಒಲ್ಲರು. ಊರು ಮುಂದಿನ ಹಣಮಂತನದೇವರ ಗುಡಿ ಸ್ವಾಮಿ ವಾರಕ್ಕೊಮ್ಮೆ ನೀತಿಪಾಠ ಹೇಳಿದಂಗ ಅವರು ಹೇಳಲಿಕ್ಕೆ ಹತ್ಯಾರ.

ಅವರು ಹೇಳಿದ್ದನ್ನ ನಾವು ಜೀ ಹುಜೂರ್ ಅಂತ ಕೇಳಲಿಕ್ಕೆ ಹತ್ತೇವಿ. ತಿರುಗಿ ಮಾತನಾಡಲಿಕ್ಕೆ ಹತ್ತಿಲ್ಲ. ಪ್ರಶ್ನೆ ಕೇಳಲಿಕ್ಕೆ ನಮಗ ಬರಂಗಿಲ್ಲ.

ಉದಾಹರಣೆಗೆ ಮಹಾಮಹಿಮ ಪ್ರಧಾನಿಗಳು ನೀವು ಕಫ್ರ್ಯೂ ಪಾಲಿಸಿರಿ, 14 ತಾಸು ಹೊರಗ ಬರಬ್ಯಾಡ್ರಿ, ಗಾಡಿ ಓಡಸಬ್ಯಾಡ್ರಿ, ಏನೂ ಖರೀದಿ ಮಾಡಬ್ಯಾಡ್ರಿ, ಒಬ್ಬರಿಗೊಬ್ಬರು ಮಾತು ಆಡಬ್ಯಾಡ್ರಿ, ಇತ್ಯಾದಿ ಇತ್ಯಾದಿ ಅಂತ ಫರಮಾನು ಹೊರಡಿಸಿದಾಗ, ನಾವು ಸುಮ್ಮನೇ ಇದ್ದಿವಿ. ಬೆಂದಕಾಳೂರಿನ ದಂಡಾಧಿಕಾರಿಗಳು ಹೊರಗ ಬಂದರ ಕೇಸು ಹಾಕತೇವಿ ಅಂದರು. ಅವಾಗನೂ ಸುಮ್ಮನೇ ಇದ್ದೆವಿ. ಸಂಜೀಕೆ ಐದಕ್ಕ ಮನೀ ಬಾಲ್ಕನಿಯೊಳಗ ಹೋಗಿ ಚಪ್ಪಾಳೆ ಹೊಡಿಯಿರಿ ಅಂದರ ನಾವು ಶಂಖ, ಜಾಗಟೆ, ತಾಳ, ಡಮರು, ತಾಟು, ತಂಬಿಗಿ ಎಲ್ಲಾನೂ ಬಾರಿಸಿದಿವಿ. ಗುಂಪು ಕಟಿಗೋಬ್ಯಾಡ್ರಿ ಅಂತ ಅವರು ಹೇಳಿದರ ನಾವು ಚಪ್ಪಾಳೆ ಹೊಡೆಯೋ ಪವಿತ್ರ ಕಾರ್ಯಕ್ಕಾಗಿ ಗುಂಪು ಕಟ್ಟಿಕೊಂಡು ಬಿಟ್ಟಿವಿ. ಅದು ಬ್ಯಾರೆ ಮಾತು.

ನಮ್ಮ ಪಂತ ಪ್ರಧಾನರು ನೀವು ಹಿಂಗ ಮಾಡ್ರಿ ಅಂದರು ಆದರ ನಾವು ಏನು ಮಾಡತೇವಿ ಅಂತ ಹೇಳಲಿಲ್ಲ. ಒಂದು ತಾಸು ಭಾಷಣ ಮಾಡಿದರೂ ಸಹಿತ ಕೊರೊನಾ ವಿರುದ್ಧ ಸರಕಾರದ ಯೋಜನೆಗಳು ಏನು ಅನ್ನೋದು ಬಾಯಿ ಬಿಡಲಿಲ್ಲ.

ಹಂಗಾರ ಅವರು ಏನು ಹೇಳಬಹುದಿತ್ತು?-
ಈ ವಿಪತ್ತನ್ನು ರಾಷ್ಟ್ರೀಯ ವಿಪತ್ತು ಅಂತ ಘೋಷಿಸಿ ಅದರ ಪರಿಹಾರಕ್ಕ ಏನೇನು ಮಾಡಬಹುದು ಅಂತ ತಿಳಿಸಬಹುದಿತ್ತು. ಆದರ ಅವರು ಅದನ್ನು ಹೇಳಲಿಲ್ಲ. ಚುನಾವಣೆ ರಣತಂತ್ರಜ್ಞ ಪ್ರಶಾಂತ ಕಿಶೋರ ಅವರು ಮೋದಿ ಅವರು ಯಾವ ಕೆಟ್ಟ ಸುದ್ದಿಯನ್ನೂ ಕೊಡಬಾರದು. ಅವರು ಯಾವಾಗಲೂ ಬರೇ ಒಳ್ಳೆ ಸುದ್ದಿ ಕೊಡಬೇಕು ಅಂತ ಹೇಳಿಕೊಟ್ಟಿದ್ದರಂತ. ಇವರು ಅದನ್ನು ಚುನಾವಣೆ ಮುಗದ ಮ್ಯಾಲನೂ ಪಾಲಸಲಿಕ್ಕೆ ಹತ್ಯಾರ.

ಇದಕ್ಕ ಎಷ್ಟು ರೊಕ್ಕ ಇಟ್ಟೇವಿ ಅಂತ ಹೇಳಬಹುದಿತ್ತು. ಚುನಾವಣೆ ಗಿಂತ ಮುಂಚೆ ಹಣಕಾಸಿನ ಮಾತು ಹಗಲೆಲ್ಲಾ ಆಡಿದ ಮೋದಿ ಅವರು ಈಗ ಮಾತಾಡವಲ್ಲರು.

ಅದಕ್ಕೊಂದು ವಿಶೇಷ ತಂಡ ಕಟ್ಟೇವಿ ಅಂತ ಹೇಳಬಹುದಿತ್ತು. ಚುನಾವಣೆ ಕಾರ್ಯಕ್ಕೆ, ಪಕ್ಕದ ಕೆಲಸಕ್ಕೆ ತಂಡ ಕಟ್ಟೋರು ವಿಪತ್ತಿನ ನಿರ್ವಹಣೆಗೆ ಕಟ್ಟತಾರೋ ಇಲ್ಲವೋ, ಗೊತ್ತಿಲ್ಲ.

ಅದರ ಸಲುವಾಗಿ ಒಂದು ಆಸ್ಪತ್ರೆ, ಸಂಶೋಧನಾ ಕೇಂದ್ರ, ಪ್ರಯೋಗಾಲಯ ಇತ್ಯಾದಿ ಮೀಸಲು ಇಡತೇವಿ, ಹೊಸದಾಗಿ ಆರಂಭ ಮಾಡತೇವಿ ಅಂತ ಅನ್ನಬಹುದಿತ್ತು. ಅದನ್ನು ಅನ್ನಲಿಲ್ಲ. ರವಾಂಡಾ, ಸಿಯಾರಾ ಲಿಯೋನ್ ಮುಂತಾದ ಸಣ್ಣಸಣ್ಣ ದೇಶಗಳು ಮಾಡಲಿಕ್ಕೆ ಹತ್ಯಾವು.

ಚೀನಾದವರು ಹತ್ತು ದಿನದಾಗ ಹೊಸಾ ಆಸ್ಪತ್ರೆ ಕಟ್ಟಿದ್ದು ನಾವೆಲ್ಲಾ ನೋಡಿ ಚಪ್ಪಾಳೆ ತಟ್ಟೇವಿ. ಆದರ ಈಗ ನಾಯಕರು ಹೇಳಿದರು ಅಂತ ಚಪ್ಪಾಳೆ ತಟ್ಟಿದಿವಿ. ಅದಕ್ಕೂ ಇದಕ್ಕೂ ನಮಗ ವ್ಯತ್ಯಾಸ ಗೊತ್ತಿಲ್ಲ.

ಚೀನಾದ ಕೊರೊನಾ ಆಸ್ಪತ್ರೆ

ಈಗ ನಮ್ಮ ಮುಂದ ಇರೋದು ಏನು-ಯುದ್ಧನೋ? ಸರ್ಜಿಕಲ್ ಸ್ಟ್ರೈಕೋ? ಹೋರಾಟನೋ? ಅಥವಾ ವಿಪತ್ತೋ? ಕೊರೊನಾ ರೋಗದ ಜೊತೆ ಹೊಡೆದಾಟ ಅಂದರ ಜನರ ಹತ್ತರ ಮುಚ್ಚಿ-ಮುಚ್ಚಿ ಇಡುವಂಥಾ ಸೀಕ್ರೆಟ್ ಏನರ ಅದ ಏನು? ಇದನ್ನ ತಿಳಕೋಬೇಕಾರ ನೀವು ಏನು ಸೈನ್ಯದ ಅಧಿಕಾರಿ ಆಗಿರಬೇಕಿಲ್ಲ. ನಿಮಗ ಕನಿಷ್ಠ ಸಾಮಾನ್ಯ ಜ್ಞಾನ ಇದ್ದರ ಸಾಕು. ಆದರ ಈಗಿನ ಕಾಲ ಹೆಂಗಂದ ಅಂದರ ಬ್ಯಾರೆ ಬೇಕಾದ್ದು ಸಿಗತದ, ಸಾಮಾನ್ಯ ಜ್ಞಾನ ಸಿಗಂಗಿಲ್ಲ. ಅದು ಎಷ್ಟು ಅಪರೂಪ ಅಂದರ ರೊಕ್ಕ ಅಲ್ಲಾ, ಜೀವಾ ಕೊಟ್ಟರೂ ಸಿಗಂಗಿಲ್ಲ. ಇದನ್ನು ಸರಿಮಾಡುವುದು ಘಟಾನುಘಟಿ ನಾಯಕರ ಕಡೆನೂ ಸಾಧ್ಯ ಇಲ್ಲ, ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...