Homeಮುಖಪುಟಜನ ಏನ್‌ ಮಾಡ್ಬೇಕು ಅಂತ ಹೇಳ್ತಿರೋ ಸರ್ಕಾರ ತಾನೇನು ಮಾಡಿದೀನಿ ಅಂತನೇ ಹೇಳ್ತಿಲ್ಲ?

ಜನ ಏನ್‌ ಮಾಡ್ಬೇಕು ಅಂತ ಹೇಳ್ತಿರೋ ಸರ್ಕಾರ ತಾನೇನು ಮಾಡಿದೀನಿ ಅಂತನೇ ಹೇಳ್ತಿಲ್ಲ?

- Advertisement -
- Advertisement -

ಒಂದಾನೊಂದು ಕಾಲದಾಗ ಜಾನ್ ಕೆನಡಿ ಅಂತ ಒಬ್ಬರು ಇದ್ದರು. ಅವರು ಅಮೆರಿಕದ ಅಧ್ಯಕ್ಷರಾಗಿದ್ದರು. ಅವರು ತಮ್ಮ ಸಣ್ಣ ಜೀವನ ಕಾಲದಾಗ ಅನೇಕ ಒಳ್ಳೆ ಕೆಲಸ ಮಾಡಿದರು.

ಅವರು 1960ರೊಳಗ ತಮ್ಮ 43ನೇ ವಯಸ್ಸಿಗೆ ಅಧ್ಯಕ್ಷೀಯ ಚುನಾವಣೆ ಗೆದ್ದು ಅತಿಕಮ್ಮಿ ವಯಸ್ಸಿನ ಅಧ್ಯಕ್ಷ ಅಂತ ಅಮೆರಿಕದ ಇತಿಹಾಸದಾಗ ದಾಖಲು ಮಾಡಿದರು. ಆರ್ಥಿಕ ಹಿಂಜರಿಕೆಯಿಂದ ಹೊಡೆತ ತಿಂದಿದ್ದ ಅಮೆರಿಕಾವನ್ನು ಬೆಳವಣಿಗೆಯ ದಾರಿಯೊಳಗ ದೂಡಿದರು. ವಿಶ್ವಾದ್ಯಂತ ಶಾಂತಿ ಹಾಗೂ ಅಭಿವೃದ್ಧಿ ಸ್ಥಾಪಿಸಲಿಕ್ಕೆ ಪೀಸ್‍ಕೋರ್ ಅನ್ನೋ ಸಂಸ್ಥೆ ಸುರು ಮಾಡಿದರು. ರಷಿಯಾ ಒಕ್ಕೂಟದ ಅಧ್ಯಕ್ಷ ಕ್ರುಷೇವ ಅವರ ಜೊತೆಗೆ ಶಾಂತಿ ಒಪ್ಪಂದ ಸಹಿ ಮಾಡಿ ಪರಮಾಣು ಯುದ್ಧ ತಪ್ಪಿಸಿದರು. ನಿರುದ್ಯೋಗಿಗಳಿಗೆ ಭತ್ಯೆ, ಕೌಶಲ್ಯ ತರಬೇತಿ ಮುಂತಾದ ಯೋಜನೆಗಳನ್ನು ಆರಂಭ ಮಾಡಿದರು. ಕರಿಯರು ಹೆಚ್ಚಾಗಿ ಇದ್ದ ಕೊಳಚೆ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು, ಕರಿಯರ ಶಿಕ್ಷಣದ ಸಲುವಾಗಿ ತೆರೆಯಲಾದ ವಿಶೇಷ ಕಾಲೇಜುಗಳನ್ನು ಬೆಳೆಸಲು ಅನುದಾನ ನೀಡಿದರು. ಮಹಿಳಾ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀತಿಯ ಅನುವಾಗಿ ಹೆಚ್ಚಿನ ಕೂಲಿ ಸಿಗುವಂತೆ ಕಾನೂನು ಮಾಡಿದರು, ಇತ್ಯಾದಿ.

ಜಾನ್ ಕೆನಡಿ

ತಮ್ಮ ಚುನಾವಣೆಯ ಗೆಲುವನ್ನು ಅವರು ಇದು `ಒಂದು ಪಕ್ಷದ ಗೆಲುವು ಅಲ್ಲ. ಸ್ವಾತಂತ್ರ್ಯದ ಉತ್ಸವ’ ಅಂತ ಬಣ್ಣಿಸಿದರು. ಇದು ಮನುಷ್ಯರೆಲ್ಲರ ಉತ್ಥಾನದ ಅವಕಾಶದ ದಾರಿ. ಎಲ್ಲ ರೀತಿಯ ಬಡತನವನ್ನೂ, ಗುಲಾಮಗಿರಿಯನ್ನು ತೊಡೆದುಹಾಕುವ ಅವಕಾಶ ಈಗ ನಮ್ಮ ಮುಂದೆ ಇದೆ ಎಂದವರು. ಆದರ ಅವರ ಒಂದು ಮಾತು ಭಾಳ ಫೇಮಸ್ಸು. ಅದು ನಮಗೆಲ್ಲರಿಗೂ ಗೊತ್ತು. ನಿಮಗಾಗಿ ಈ ದೇಶ ಏನು ಮಾಡುತ್ತದೆ ಎಂದು ಕೇಳಬೇಡಿ. ನೀವು ನಿಮ್ಮ ದೇಶಕ್ಕಾಗಿ ಏನು ನೀಡಬಲ್ಲಿರಿ ಎನ್ನುವುದನ್ನು ಕೇಳಿಕೊಳ್ಳಿರಿ.

ಅವರ ವಿಚಾರಗಳನ್ನು, ಸಿದ್ಧಾಂತಗಳನ್ನು ಮನಸೋ ಇಚ್ಛೆ ಪಾಲಿಸುವವರಿಗೆ ಕೆನಡಿಯನ್ ಅಂತ ಕರೀತಾರ. ಹಂಗಂದರ ಕೆನಡಾದಿಂದ ಬಂದವರು ಅಂತ ಅಲ್ಲ. ಜಾನ್ ಕೆನಡಿಯವರ ವಿಚಾರಗಳನ್ನ, ಕಾರ್ಯಕ್ರಮ- ಯೋಜನೆಗಳನ್ನು ಒಪ್ಪಿಕೊಂಡು ನಡೆಯುವವರು ಅಂತ. ಈಗಿನ ನಮ್ಮ ನಾಯಕರನ್ನು ಕೆನೆಡಿಯನ್ ಅಂತ ಕರೀಬಹುದು ಅಂತೀರೇನು?

ಒಂದು ರೀತಿಯಿಂದ ಅನಬಹುದೋ ಏನೋ. ಅದು ಏನಪಾ ಅಂದರ `ನೀವು ದೇಶಕ್ಕೆ ಏನು ಮಾಡಬಲ್ಲಿರಿ’ ಅನ್ನೋ ಮಾತು. ಇಡೀ ಜಗತ್ತಿನ 177 ದೇಶಗಳಲ್ಲಿ ಈ ಕೊರೊನಾ ವ್ಯಾಧಿ ಹೊಡಕೊಂಡದ. ದೊಡ್ಡ ಸಾಹುಕಾರ ಟ್ರಂಪಣ್ಣನವರಿಂದಾ ಹಿಡಕೊಂಡು ಸಣ್ಣಂಗಡಿ ಶೆಟ್ಟರಾದ ಉಗಾಂಡಾದ ಯಾವೋರಿ ಮುಸೇವಿನಿ ಅವರ ತನಕಾ ಎಲ್ಲಾರೂ ಜನರಿಗೆ `ಹಿಂಗ ಮಾಡರಿ, ಹಂಗ ಮಾಡರಿ, ಹಂಗಂತ ಹಂಗ ಮಾಡಬ್ಯಾಡ್ರಿ’ ಅಂತ ಹೇಳಲಿಕ್ಕೆ ಹತ್ಯಾರ. ಯಾರೂ ನಿಮ್ಮ ಸಲುವಾಗಿ ನಾವು ಏನು ಮಾಡತೇವಿ ಅನ್ನೋದನ್ನ ಹೇಳಲಿಕ್ಕೆ ಒಲ್ಲರು. ಊರು ಮುಂದಿನ ಹಣಮಂತನದೇವರ ಗುಡಿ ಸ್ವಾಮಿ ವಾರಕ್ಕೊಮ್ಮೆ ನೀತಿಪಾಠ ಹೇಳಿದಂಗ ಅವರು ಹೇಳಲಿಕ್ಕೆ ಹತ್ಯಾರ.

ಅವರು ಹೇಳಿದ್ದನ್ನ ನಾವು ಜೀ ಹುಜೂರ್ ಅಂತ ಕೇಳಲಿಕ್ಕೆ ಹತ್ತೇವಿ. ತಿರುಗಿ ಮಾತನಾಡಲಿಕ್ಕೆ ಹತ್ತಿಲ್ಲ. ಪ್ರಶ್ನೆ ಕೇಳಲಿಕ್ಕೆ ನಮಗ ಬರಂಗಿಲ್ಲ.

ಉದಾಹರಣೆಗೆ ಮಹಾಮಹಿಮ ಪ್ರಧಾನಿಗಳು ನೀವು ಕಫ್ರ್ಯೂ ಪಾಲಿಸಿರಿ, 14 ತಾಸು ಹೊರಗ ಬರಬ್ಯಾಡ್ರಿ, ಗಾಡಿ ಓಡಸಬ್ಯಾಡ್ರಿ, ಏನೂ ಖರೀದಿ ಮಾಡಬ್ಯಾಡ್ರಿ, ಒಬ್ಬರಿಗೊಬ್ಬರು ಮಾತು ಆಡಬ್ಯಾಡ್ರಿ, ಇತ್ಯಾದಿ ಇತ್ಯಾದಿ ಅಂತ ಫರಮಾನು ಹೊರಡಿಸಿದಾಗ, ನಾವು ಸುಮ್ಮನೇ ಇದ್ದಿವಿ. ಬೆಂದಕಾಳೂರಿನ ದಂಡಾಧಿಕಾರಿಗಳು ಹೊರಗ ಬಂದರ ಕೇಸು ಹಾಕತೇವಿ ಅಂದರು. ಅವಾಗನೂ ಸುಮ್ಮನೇ ಇದ್ದೆವಿ. ಸಂಜೀಕೆ ಐದಕ್ಕ ಮನೀ ಬಾಲ್ಕನಿಯೊಳಗ ಹೋಗಿ ಚಪ್ಪಾಳೆ ಹೊಡಿಯಿರಿ ಅಂದರ ನಾವು ಶಂಖ, ಜಾಗಟೆ, ತಾಳ, ಡಮರು, ತಾಟು, ತಂಬಿಗಿ ಎಲ್ಲಾನೂ ಬಾರಿಸಿದಿವಿ. ಗುಂಪು ಕಟಿಗೋಬ್ಯಾಡ್ರಿ ಅಂತ ಅವರು ಹೇಳಿದರ ನಾವು ಚಪ್ಪಾಳೆ ಹೊಡೆಯೋ ಪವಿತ್ರ ಕಾರ್ಯಕ್ಕಾಗಿ ಗುಂಪು ಕಟ್ಟಿಕೊಂಡು ಬಿಟ್ಟಿವಿ. ಅದು ಬ್ಯಾರೆ ಮಾತು.

ನಮ್ಮ ಪಂತ ಪ್ರಧಾನರು ನೀವು ಹಿಂಗ ಮಾಡ್ರಿ ಅಂದರು ಆದರ ನಾವು ಏನು ಮಾಡತೇವಿ ಅಂತ ಹೇಳಲಿಲ್ಲ. ಒಂದು ತಾಸು ಭಾಷಣ ಮಾಡಿದರೂ ಸಹಿತ ಕೊರೊನಾ ವಿರುದ್ಧ ಸರಕಾರದ ಯೋಜನೆಗಳು ಏನು ಅನ್ನೋದು ಬಾಯಿ ಬಿಡಲಿಲ್ಲ.

ಹಂಗಾರ ಅವರು ಏನು ಹೇಳಬಹುದಿತ್ತು?-
ಈ ವಿಪತ್ತನ್ನು ರಾಷ್ಟ್ರೀಯ ವಿಪತ್ತು ಅಂತ ಘೋಷಿಸಿ ಅದರ ಪರಿಹಾರಕ್ಕ ಏನೇನು ಮಾಡಬಹುದು ಅಂತ ತಿಳಿಸಬಹುದಿತ್ತು. ಆದರ ಅವರು ಅದನ್ನು ಹೇಳಲಿಲ್ಲ. ಚುನಾವಣೆ ರಣತಂತ್ರಜ್ಞ ಪ್ರಶಾಂತ ಕಿಶೋರ ಅವರು ಮೋದಿ ಅವರು ಯಾವ ಕೆಟ್ಟ ಸುದ್ದಿಯನ್ನೂ ಕೊಡಬಾರದು. ಅವರು ಯಾವಾಗಲೂ ಬರೇ ಒಳ್ಳೆ ಸುದ್ದಿ ಕೊಡಬೇಕು ಅಂತ ಹೇಳಿಕೊಟ್ಟಿದ್ದರಂತ. ಇವರು ಅದನ್ನು ಚುನಾವಣೆ ಮುಗದ ಮ್ಯಾಲನೂ ಪಾಲಸಲಿಕ್ಕೆ ಹತ್ಯಾರ.

ಇದಕ್ಕ ಎಷ್ಟು ರೊಕ್ಕ ಇಟ್ಟೇವಿ ಅಂತ ಹೇಳಬಹುದಿತ್ತು. ಚುನಾವಣೆ ಗಿಂತ ಮುಂಚೆ ಹಣಕಾಸಿನ ಮಾತು ಹಗಲೆಲ್ಲಾ ಆಡಿದ ಮೋದಿ ಅವರು ಈಗ ಮಾತಾಡವಲ್ಲರು.

ಅದಕ್ಕೊಂದು ವಿಶೇಷ ತಂಡ ಕಟ್ಟೇವಿ ಅಂತ ಹೇಳಬಹುದಿತ್ತು. ಚುನಾವಣೆ ಕಾರ್ಯಕ್ಕೆ, ಪಕ್ಕದ ಕೆಲಸಕ್ಕೆ ತಂಡ ಕಟ್ಟೋರು ವಿಪತ್ತಿನ ನಿರ್ವಹಣೆಗೆ ಕಟ್ಟತಾರೋ ಇಲ್ಲವೋ, ಗೊತ್ತಿಲ್ಲ.

ಅದರ ಸಲುವಾಗಿ ಒಂದು ಆಸ್ಪತ್ರೆ, ಸಂಶೋಧನಾ ಕೇಂದ್ರ, ಪ್ರಯೋಗಾಲಯ ಇತ್ಯಾದಿ ಮೀಸಲು ಇಡತೇವಿ, ಹೊಸದಾಗಿ ಆರಂಭ ಮಾಡತೇವಿ ಅಂತ ಅನ್ನಬಹುದಿತ್ತು. ಅದನ್ನು ಅನ್ನಲಿಲ್ಲ. ರವಾಂಡಾ, ಸಿಯಾರಾ ಲಿಯೋನ್ ಮುಂತಾದ ಸಣ್ಣಸಣ್ಣ ದೇಶಗಳು ಮಾಡಲಿಕ್ಕೆ ಹತ್ಯಾವು.

ಚೀನಾದವರು ಹತ್ತು ದಿನದಾಗ ಹೊಸಾ ಆಸ್ಪತ್ರೆ ಕಟ್ಟಿದ್ದು ನಾವೆಲ್ಲಾ ನೋಡಿ ಚಪ್ಪಾಳೆ ತಟ್ಟೇವಿ. ಆದರ ಈಗ ನಾಯಕರು ಹೇಳಿದರು ಅಂತ ಚಪ್ಪಾಳೆ ತಟ್ಟಿದಿವಿ. ಅದಕ್ಕೂ ಇದಕ್ಕೂ ನಮಗ ವ್ಯತ್ಯಾಸ ಗೊತ್ತಿಲ್ಲ.

ಚೀನಾದ ಕೊರೊನಾ ಆಸ್ಪತ್ರೆ

ಈಗ ನಮ್ಮ ಮುಂದ ಇರೋದು ಏನು-ಯುದ್ಧನೋ? ಸರ್ಜಿಕಲ್ ಸ್ಟ್ರೈಕೋ? ಹೋರಾಟನೋ? ಅಥವಾ ವಿಪತ್ತೋ? ಕೊರೊನಾ ರೋಗದ ಜೊತೆ ಹೊಡೆದಾಟ ಅಂದರ ಜನರ ಹತ್ತರ ಮುಚ್ಚಿ-ಮುಚ್ಚಿ ಇಡುವಂಥಾ ಸೀಕ್ರೆಟ್ ಏನರ ಅದ ಏನು? ಇದನ್ನ ತಿಳಕೋಬೇಕಾರ ನೀವು ಏನು ಸೈನ್ಯದ ಅಧಿಕಾರಿ ಆಗಿರಬೇಕಿಲ್ಲ. ನಿಮಗ ಕನಿಷ್ಠ ಸಾಮಾನ್ಯ ಜ್ಞಾನ ಇದ್ದರ ಸಾಕು. ಆದರ ಈಗಿನ ಕಾಲ ಹೆಂಗಂದ ಅಂದರ ಬ್ಯಾರೆ ಬೇಕಾದ್ದು ಸಿಗತದ, ಸಾಮಾನ್ಯ ಜ್ಞಾನ ಸಿಗಂಗಿಲ್ಲ. ಅದು ಎಷ್ಟು ಅಪರೂಪ ಅಂದರ ರೊಕ್ಕ ಅಲ್ಲಾ, ಜೀವಾ ಕೊಟ್ಟರೂ ಸಿಗಂಗಿಲ್ಲ. ಇದನ್ನು ಸರಿಮಾಡುವುದು ಘಟಾನುಘಟಿ ನಾಯಕರ ಕಡೆನೂ ಸಾಧ್ಯ ಇಲ್ಲ, ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...