Homeಮುಖಪುಟಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ಕಿರುಚಿತ್ರಕ್ಕೆ ಸಾಕಷ್ಟು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಪರ ಹೋರಾಟಕ್ಕೆ ಧನ್ಯವಾದ ಎಂಬ ಕಾಮೆಂಟ್‌ಗಳು ಬರುತ್ತಿವೆ.

- Advertisement -
- Advertisement -

ಹಿಂದಿ ಹೇರಿಕೆ ಬಗ್ಗೆ ಹಿಂದಿ ಮಾತಾಡದ ದಕ್ಷಿಣ ಭಾರತದ ರಾಜ್ಯಗಳಲ್ಲಿ ತೀವ್ರ ಪ್ರತಿರೋಧಗಳು ಕಂಡು ಬಂದಿದ್ದವು. ಸೆ.14 ರ ಹಿಂದಿ ದಿವಸ್‌ ಆಚರಣೆ ದಿನ ವಿವಿಧ ಸ್ವರೂಪಗಳಲ್ಲಿ ಪ್ರತಿಭಟನೆ ನಡೆಸಲಾಯಿತು. ಕನ್ನಡ ಸಿನಿಮಾ ನಿರ್ದೇಶಕ ಪವನ್ ಕುಮಾರ್‌ ಹಿಂದಿ ಹೇರಿಕೆ ಕುರಿತು ಹೊಸ ರೀತಿಯ ಪ್ರತಿರೋಧಕ್ಕೆ ಮುಂದಾಗಿದ್ದರು. ಅದರ ಫಲವೇ ಇಂದು ಬಿಡುಗಡೆಯಾಗಿರುವ “ಏನ್ ಮಾಡೋದು..?” ಎನ್ನುವ ಕನ್ನಡ ಕಿರುಚಿತ್ರ.

ಹೌದು, ಕಳೆದ ಸೆಪ್ಟಂಬರ್‌ನಲ್ಲಿ ಜೊತೆಗೆ ಕನ್ನಡದ ನಟರು, ನಿರ್ದೇಶಕರಿಗೆ ಹೊಸದೊಂದು ಚಾಲೆಂಜ್ ನೀಡುವ ಮೂಲಕ ಹಿಂದಿ ಹೇರಿಕೆ ವಿರೋಧಿಸಲು ಹೊಸ ಯೋಜನೆ ರೂಪಿಸಿರುವುದಾಗಿ ನಿರ್ದೇಶಕ ಪವನ್ ಕುಮಾರ್ ತಿಳಿಸಿದ್ದರು.

“ಹಿಂದಿ ಹೇರಿಕೆಯನ್ನು ವಿರೋಧಿಸುವ ನಿರ್ದೇಶಕರುಗಳು ಪ್ರತಿಯೊಬ್ಬರು ಹಿಂದಿ ಹೇರಿಕೆ ವಿಚಾರವನ್ನು ಮುಖ್ಯವಾಗಿರಿಸಿ 10 ನಿಮಿಷ, 15 ನಿಮಿಷದ ತಲಾ ಒಂದೊಂದು ಚಿತ್ರಗಳನ್ನು ಮಾಡಿ, ಅವುಗಳಿಗೆ ಸೆನ್ಸಾರ್ ಬೋರ್ಡ್‌ ಸರ್ಟಿಫಿಕೆಟ್ ಕನ್ನಡದಲ್ಲಿ ಕೇಳುವುದು. ಆದರೆ ಅವರು ಕೊಡಲಿಲ್ಲ ಎಂದರೆ ಸರ್ಟಿಫಿಕೆಟ್ ಇಲ್ಲದೆಯೇ ಚಿತ್ರ ಬಿಡುಗಡೆ ಮಾಡುವ ಚಾಲೆಂಜ್ ನೀಡಿದ್ದರು.”

ಸೆನ್ಸಾರ್ ಬೋರ್ಡ್‌ ಸರ್ಟಿಫಿಕೆಟ್ ಇಲ್ಲದೇ ಚಿತ್ರ ಬಿಡುಗಡೆ ಮಾಡಿದರೆ ಅದು ಇಂಡಿಯನ್ ಸಿನಿಮಾಟೋಗ್ರಾಫರ್ ಆಕ್ಟ್ ಪ್ರಕಾರ ಅಪರಾಧವಾಗಿ 3 ವರ್ಷ ಜೈಲಿಗೆ ಹಾಕುತ್ತಾರೆ. ಆದರೆ ಒಬ್ಬನೇ ಚಿತ್ರ ಮಾಡಿದರೇ ಜೈಲಿಗೆ ಹಾಕಬಹುದು. 50 ಜನ ಸೇರಿ ಚಿತ್ರ ಮಾಡಿದರೆ ಅದು ಪ್ರತಿಭಟನೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ಪವನ್ ಕುಮಾರ್‌ ಚಾಲೆಂಜ್‌ಗೆ ಹಲವಾರು ನಿರ್ದೇಶಕರು ಸಾಥ್ ನೀಡಿದ್ದರು. ತಾವು ನಿಮ್ಮ ಜೊತೆಗೆ ನಿಲ್ಲುವುದಾಗಿ ಭರವಸೆ ನೀಡಿದ್ದರು. ಸದ್ಯ ಪವನ್ ಕುಮಾರ್‌ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ “ಏನ್ ಮಾಡೋದು..?” ಎಂಬ ಕಿರುಚಿತ್ರವನ್ನು ಬಿಡುಗಡೆ ಮಾಡಿದ್ದಾರೆ.

 

“ಸೆನ್ಸಾರ್‌ ಮಂಡಳಿಗೆ ತಮ್ಮ ಚಿತ್ರವನ್ನು ಕಳುಹಿಸಿ, ಚಿತ್ರಕ್ಕೆ ಕನ್ನಡದಲ್ಲೇ ಸಟೀಫಿಕೆಟ್ ಕೇಳುವ ಒಂದು ಚಿತ್ರ ತಂಡ, ಅವರಿಗೆ ಕನ್ನಡದಲ್ಲಿ ಪ್ರಮಾಣಪತ್ರ ನೀಡಲು ಇಂಡಿಯನ್ ಸಿನಿಮಾಟೋಗ್ರಾಫರ್ ಆಕ್ಟ್ ಅಡ್ಡ ಬರುವ ಕುರಿತು, ಮಂಡಳಿಯ ಸದಸ್ಯರು ಯಾವ ಯಾವ ರೀತಿ ಮಾತಾಡಬಹುದು” ಎಂಬಂತಹ ವಿಚಾರವನ್ನೇ ತಮ್ಮ ಕಿರುಚಿತ್ರದ ಕಥೆಯಾಗಿಟ್ಟುಕೊಂಡು “ಏನ್ ಮಾಡೋದು..?” ಎಂಬ ಚಿತ್ರ ಬಿಡುಗಡೆ ಮಾಡಿದ್ದಾರೆ.

ಇದೊಂದು ಚಳವಳಿ ಎಂಬ ರೀತಿಯಲ್ಲಿ ಈ ಕಿರುಚಿತ್ರವನ್ನು ಬಣ್ಣಿಸಲಾಗಿದೆ. ಹಿಂದೆ ಕೂಡ ನಾನುಗೌರಿ.ಕಾಂ ಜೊತೆ ಮಾತನಾಡಿದ್ದ ನಿರ್ದೇಶಕ ಪವನ್ ಕುಮಾರ್‌, ಈ ರೀತಿಯ ಪ್ರತಿಭಟನೆಯಿಂದ ನಾವು ದೊಡ್ಡಮಟ್ಟದಲ್ಲಿ ಹಿಂದಿ ಹೇರಿಕೆಗೆ ಪ್ರತಿರೋಧ ನೀಡಲು ಸಾಧ್ಯ ಎಂದಿದ್ದರು.

ತಮ್ಮ ಕಿರುಚಿತ್ರದಲ್ಲೂ ಏನ್ ಮಾಡೋದು..? ಎಂಬ ಪ್ರಶ್ನೆಯನ್ನು ಹಾಗೆ ಇಟ್ಟಿದ್ದಾರೆ. ಆದರೆ ಕೊನೆಯಲ್ಲಿ ಕನ್ನಡದಲ್ಲಿ ಪ್ರಮಾಣಪತ್ರ ಕೊಟ್ಟರೆ ಹೇಗಿರುತ್ತದೆ ಎಂಬುದನ್ನು ಪಾತ್ರಗಳಿಂದಲೇ ಪ್ರಮಾಣಪತ್ರ ಓದಿಸಿದ್ದಾರೆ. ಕಿರುಚಿತ್ರಕ್ಕೆ ಸಾಕಷ್ಟು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಪರ ಹೋರಾಟಕ್ಕೆ ಧನ್ಯವಾದ ಎಂಬ ಕಾಮೆಂಟ್‌ಗಳು ಬರುತ್ತಿದ್ದು, ಜನರು ನಿರ್ದೇಶಕರ ಪ್ರಯತ್ನಕ್ಕೆ ಮೆಚ್ಚುಗೆ ಸೂಚಿಸಿ, ತಾವೂ ಜೊತೆ ನಿಲ್ಲುವ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಮೋದಿ ಅವಧಿಯಲ್ಲಿ ಹಿಂದಿ ಹೇರಿಕೆಗೆ ಹೆಚ್ಚು ಅನುದಾನ/ಖರ್ಚು – ಆರ್‌ಟಿಐನಿಂದ ಬಹಿರಂಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...