Homeಮುಖಪುಟಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ಕಿರುಚಿತ್ರಕ್ಕೆ ಸಾಕಷ್ಟು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಪರ ಹೋರಾಟಕ್ಕೆ ಧನ್ಯವಾದ ಎಂಬ ಕಾಮೆಂಟ್‌ಗಳು ಬರುತ್ತಿವೆ.

- Advertisement -
- Advertisement -

ಹಿಂದಿ ಹೇರಿಕೆ ಬಗ್ಗೆ ಹಿಂದಿ ಮಾತಾಡದ ದಕ್ಷಿಣ ಭಾರತದ ರಾಜ್ಯಗಳಲ್ಲಿ ತೀವ್ರ ಪ್ರತಿರೋಧಗಳು ಕಂಡು ಬಂದಿದ್ದವು. ಸೆ.14 ರ ಹಿಂದಿ ದಿವಸ್‌ ಆಚರಣೆ ದಿನ ವಿವಿಧ ಸ್ವರೂಪಗಳಲ್ಲಿ ಪ್ರತಿಭಟನೆ ನಡೆಸಲಾಯಿತು. ಕನ್ನಡ ಸಿನಿಮಾ ನಿರ್ದೇಶಕ ಪವನ್ ಕುಮಾರ್‌ ಹಿಂದಿ ಹೇರಿಕೆ ಕುರಿತು ಹೊಸ ರೀತಿಯ ಪ್ರತಿರೋಧಕ್ಕೆ ಮುಂದಾಗಿದ್ದರು. ಅದರ ಫಲವೇ ಇಂದು ಬಿಡುಗಡೆಯಾಗಿರುವ “ಏನ್ ಮಾಡೋದು..?” ಎನ್ನುವ ಕನ್ನಡ ಕಿರುಚಿತ್ರ.

ಹೌದು, ಕಳೆದ ಸೆಪ್ಟಂಬರ್‌ನಲ್ಲಿ ಜೊತೆಗೆ ಕನ್ನಡದ ನಟರು, ನಿರ್ದೇಶಕರಿಗೆ ಹೊಸದೊಂದು ಚಾಲೆಂಜ್ ನೀಡುವ ಮೂಲಕ ಹಿಂದಿ ಹೇರಿಕೆ ವಿರೋಧಿಸಲು ಹೊಸ ಯೋಜನೆ ರೂಪಿಸಿರುವುದಾಗಿ ನಿರ್ದೇಶಕ ಪವನ್ ಕುಮಾರ್ ತಿಳಿಸಿದ್ದರು.

“ಹಿಂದಿ ಹೇರಿಕೆಯನ್ನು ವಿರೋಧಿಸುವ ನಿರ್ದೇಶಕರುಗಳು ಪ್ರತಿಯೊಬ್ಬರು ಹಿಂದಿ ಹೇರಿಕೆ ವಿಚಾರವನ್ನು ಮುಖ್ಯವಾಗಿರಿಸಿ 10 ನಿಮಿಷ, 15 ನಿಮಿಷದ ತಲಾ ಒಂದೊಂದು ಚಿತ್ರಗಳನ್ನು ಮಾಡಿ, ಅವುಗಳಿಗೆ ಸೆನ್ಸಾರ್ ಬೋರ್ಡ್‌ ಸರ್ಟಿಫಿಕೆಟ್ ಕನ್ನಡದಲ್ಲಿ ಕೇಳುವುದು. ಆದರೆ ಅವರು ಕೊಡಲಿಲ್ಲ ಎಂದರೆ ಸರ್ಟಿಫಿಕೆಟ್ ಇಲ್ಲದೆಯೇ ಚಿತ್ರ ಬಿಡುಗಡೆ ಮಾಡುವ ಚಾಲೆಂಜ್ ನೀಡಿದ್ದರು.”

ಸೆನ್ಸಾರ್ ಬೋರ್ಡ್‌ ಸರ್ಟಿಫಿಕೆಟ್ ಇಲ್ಲದೇ ಚಿತ್ರ ಬಿಡುಗಡೆ ಮಾಡಿದರೆ ಅದು ಇಂಡಿಯನ್ ಸಿನಿಮಾಟೋಗ್ರಾಫರ್ ಆಕ್ಟ್ ಪ್ರಕಾರ ಅಪರಾಧವಾಗಿ 3 ವರ್ಷ ಜೈಲಿಗೆ ಹಾಕುತ್ತಾರೆ. ಆದರೆ ಒಬ್ಬನೇ ಚಿತ್ರ ಮಾಡಿದರೇ ಜೈಲಿಗೆ ಹಾಕಬಹುದು. 50 ಜನ ಸೇರಿ ಚಿತ್ರ ಮಾಡಿದರೆ ಅದು ಪ್ರತಿಭಟನೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ಪವನ್ ಕುಮಾರ್‌ ಚಾಲೆಂಜ್‌ಗೆ ಹಲವಾರು ನಿರ್ದೇಶಕರು ಸಾಥ್ ನೀಡಿದ್ದರು. ತಾವು ನಿಮ್ಮ ಜೊತೆಗೆ ನಿಲ್ಲುವುದಾಗಿ ಭರವಸೆ ನೀಡಿದ್ದರು. ಸದ್ಯ ಪವನ್ ಕುಮಾರ್‌ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ “ಏನ್ ಮಾಡೋದು..?” ಎಂಬ ಕಿರುಚಿತ್ರವನ್ನು ಬಿಡುಗಡೆ ಮಾಡಿದ್ದಾರೆ.

 

“ಸೆನ್ಸಾರ್‌ ಮಂಡಳಿಗೆ ತಮ್ಮ ಚಿತ್ರವನ್ನು ಕಳುಹಿಸಿ, ಚಿತ್ರಕ್ಕೆ ಕನ್ನಡದಲ್ಲೇ ಸಟೀಫಿಕೆಟ್ ಕೇಳುವ ಒಂದು ಚಿತ್ರ ತಂಡ, ಅವರಿಗೆ ಕನ್ನಡದಲ್ಲಿ ಪ್ರಮಾಣಪತ್ರ ನೀಡಲು ಇಂಡಿಯನ್ ಸಿನಿಮಾಟೋಗ್ರಾಫರ್ ಆಕ್ಟ್ ಅಡ್ಡ ಬರುವ ಕುರಿತು, ಮಂಡಳಿಯ ಸದಸ್ಯರು ಯಾವ ಯಾವ ರೀತಿ ಮಾತಾಡಬಹುದು” ಎಂಬಂತಹ ವಿಚಾರವನ್ನೇ ತಮ್ಮ ಕಿರುಚಿತ್ರದ ಕಥೆಯಾಗಿಟ್ಟುಕೊಂಡು “ಏನ್ ಮಾಡೋದು..?” ಎಂಬ ಚಿತ್ರ ಬಿಡುಗಡೆ ಮಾಡಿದ್ದಾರೆ.

ಇದೊಂದು ಚಳವಳಿ ಎಂಬ ರೀತಿಯಲ್ಲಿ ಈ ಕಿರುಚಿತ್ರವನ್ನು ಬಣ್ಣಿಸಲಾಗಿದೆ. ಹಿಂದೆ ಕೂಡ ನಾನುಗೌರಿ.ಕಾಂ ಜೊತೆ ಮಾತನಾಡಿದ್ದ ನಿರ್ದೇಶಕ ಪವನ್ ಕುಮಾರ್‌, ಈ ರೀತಿಯ ಪ್ರತಿಭಟನೆಯಿಂದ ನಾವು ದೊಡ್ಡಮಟ್ಟದಲ್ಲಿ ಹಿಂದಿ ಹೇರಿಕೆಗೆ ಪ್ರತಿರೋಧ ನೀಡಲು ಸಾಧ್ಯ ಎಂದಿದ್ದರು.

ತಮ್ಮ ಕಿರುಚಿತ್ರದಲ್ಲೂ ಏನ್ ಮಾಡೋದು..? ಎಂಬ ಪ್ರಶ್ನೆಯನ್ನು ಹಾಗೆ ಇಟ್ಟಿದ್ದಾರೆ. ಆದರೆ ಕೊನೆಯಲ್ಲಿ ಕನ್ನಡದಲ್ಲಿ ಪ್ರಮಾಣಪತ್ರ ಕೊಟ್ಟರೆ ಹೇಗಿರುತ್ತದೆ ಎಂಬುದನ್ನು ಪಾತ್ರಗಳಿಂದಲೇ ಪ್ರಮಾಣಪತ್ರ ಓದಿಸಿದ್ದಾರೆ. ಕಿರುಚಿತ್ರಕ್ಕೆ ಸಾಕಷ್ಟು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಪರ ಹೋರಾಟಕ್ಕೆ ಧನ್ಯವಾದ ಎಂಬ ಕಾಮೆಂಟ್‌ಗಳು ಬರುತ್ತಿದ್ದು, ಜನರು ನಿರ್ದೇಶಕರ ಪ್ರಯತ್ನಕ್ಕೆ ಮೆಚ್ಚುಗೆ ಸೂಚಿಸಿ, ತಾವೂ ಜೊತೆ ನಿಲ್ಲುವ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಮೋದಿ ಅವಧಿಯಲ್ಲಿ ಹಿಂದಿ ಹೇರಿಕೆಗೆ ಹೆಚ್ಚು ಅನುದಾನ/ಖರ್ಚು – ಆರ್‌ಟಿಐನಿಂದ ಬಹಿರಂಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...