Homeಮುಖಪುಟಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ಕಿರುಚಿತ್ರಕ್ಕೆ ಸಾಕಷ್ಟು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಪರ ಹೋರಾಟಕ್ಕೆ ಧನ್ಯವಾದ ಎಂಬ ಕಾಮೆಂಟ್‌ಗಳು ಬರುತ್ತಿವೆ.

- Advertisement -
- Advertisement -

ಹಿಂದಿ ಹೇರಿಕೆ ಬಗ್ಗೆ ಹಿಂದಿ ಮಾತಾಡದ ದಕ್ಷಿಣ ಭಾರತದ ರಾಜ್ಯಗಳಲ್ಲಿ ತೀವ್ರ ಪ್ರತಿರೋಧಗಳು ಕಂಡು ಬಂದಿದ್ದವು. ಸೆ.14 ರ ಹಿಂದಿ ದಿವಸ್‌ ಆಚರಣೆ ದಿನ ವಿವಿಧ ಸ್ವರೂಪಗಳಲ್ಲಿ ಪ್ರತಿಭಟನೆ ನಡೆಸಲಾಯಿತು. ಕನ್ನಡ ಸಿನಿಮಾ ನಿರ್ದೇಶಕ ಪವನ್ ಕುಮಾರ್‌ ಹಿಂದಿ ಹೇರಿಕೆ ಕುರಿತು ಹೊಸ ರೀತಿಯ ಪ್ರತಿರೋಧಕ್ಕೆ ಮುಂದಾಗಿದ್ದರು. ಅದರ ಫಲವೇ ಇಂದು ಬಿಡುಗಡೆಯಾಗಿರುವ “ಏನ್ ಮಾಡೋದು..?” ಎನ್ನುವ ಕನ್ನಡ ಕಿರುಚಿತ್ರ.

ಹೌದು, ಕಳೆದ ಸೆಪ್ಟಂಬರ್‌ನಲ್ಲಿ ಜೊತೆಗೆ ಕನ್ನಡದ ನಟರು, ನಿರ್ದೇಶಕರಿಗೆ ಹೊಸದೊಂದು ಚಾಲೆಂಜ್ ನೀಡುವ ಮೂಲಕ ಹಿಂದಿ ಹೇರಿಕೆ ವಿರೋಧಿಸಲು ಹೊಸ ಯೋಜನೆ ರೂಪಿಸಿರುವುದಾಗಿ ನಿರ್ದೇಶಕ ಪವನ್ ಕುಮಾರ್ ತಿಳಿಸಿದ್ದರು.

“ಹಿಂದಿ ಹೇರಿಕೆಯನ್ನು ವಿರೋಧಿಸುವ ನಿರ್ದೇಶಕರುಗಳು ಪ್ರತಿಯೊಬ್ಬರು ಹಿಂದಿ ಹೇರಿಕೆ ವಿಚಾರವನ್ನು ಮುಖ್ಯವಾಗಿರಿಸಿ 10 ನಿಮಿಷ, 15 ನಿಮಿಷದ ತಲಾ ಒಂದೊಂದು ಚಿತ್ರಗಳನ್ನು ಮಾಡಿ, ಅವುಗಳಿಗೆ ಸೆನ್ಸಾರ್ ಬೋರ್ಡ್‌ ಸರ್ಟಿಫಿಕೆಟ್ ಕನ್ನಡದಲ್ಲಿ ಕೇಳುವುದು. ಆದರೆ ಅವರು ಕೊಡಲಿಲ್ಲ ಎಂದರೆ ಸರ್ಟಿಫಿಕೆಟ್ ಇಲ್ಲದೆಯೇ ಚಿತ್ರ ಬಿಡುಗಡೆ ಮಾಡುವ ಚಾಲೆಂಜ್ ನೀಡಿದ್ದರು.”

ಸೆನ್ಸಾರ್ ಬೋರ್ಡ್‌ ಸರ್ಟಿಫಿಕೆಟ್ ಇಲ್ಲದೇ ಚಿತ್ರ ಬಿಡುಗಡೆ ಮಾಡಿದರೆ ಅದು ಇಂಡಿಯನ್ ಸಿನಿಮಾಟೋಗ್ರಾಫರ್ ಆಕ್ಟ್ ಪ್ರಕಾರ ಅಪರಾಧವಾಗಿ 3 ವರ್ಷ ಜೈಲಿಗೆ ಹಾಕುತ್ತಾರೆ. ಆದರೆ ಒಬ್ಬನೇ ಚಿತ್ರ ಮಾಡಿದರೇ ಜೈಲಿಗೆ ಹಾಕಬಹುದು. 50 ಜನ ಸೇರಿ ಚಿತ್ರ ಮಾಡಿದರೆ ಅದು ಪ್ರತಿಭಟನೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ಪವನ್ ಕುಮಾರ್‌ ಚಾಲೆಂಜ್‌ಗೆ ಹಲವಾರು ನಿರ್ದೇಶಕರು ಸಾಥ್ ನೀಡಿದ್ದರು. ತಾವು ನಿಮ್ಮ ಜೊತೆಗೆ ನಿಲ್ಲುವುದಾಗಿ ಭರವಸೆ ನೀಡಿದ್ದರು. ಸದ್ಯ ಪವನ್ ಕುಮಾರ್‌ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ “ಏನ್ ಮಾಡೋದು..?” ಎಂಬ ಕಿರುಚಿತ್ರವನ್ನು ಬಿಡುಗಡೆ ಮಾಡಿದ್ದಾರೆ.

 

“ಸೆನ್ಸಾರ್‌ ಮಂಡಳಿಗೆ ತಮ್ಮ ಚಿತ್ರವನ್ನು ಕಳುಹಿಸಿ, ಚಿತ್ರಕ್ಕೆ ಕನ್ನಡದಲ್ಲೇ ಸಟೀಫಿಕೆಟ್ ಕೇಳುವ ಒಂದು ಚಿತ್ರ ತಂಡ, ಅವರಿಗೆ ಕನ್ನಡದಲ್ಲಿ ಪ್ರಮಾಣಪತ್ರ ನೀಡಲು ಇಂಡಿಯನ್ ಸಿನಿಮಾಟೋಗ್ರಾಫರ್ ಆಕ್ಟ್ ಅಡ್ಡ ಬರುವ ಕುರಿತು, ಮಂಡಳಿಯ ಸದಸ್ಯರು ಯಾವ ಯಾವ ರೀತಿ ಮಾತಾಡಬಹುದು” ಎಂಬಂತಹ ವಿಚಾರವನ್ನೇ ತಮ್ಮ ಕಿರುಚಿತ್ರದ ಕಥೆಯಾಗಿಟ್ಟುಕೊಂಡು “ಏನ್ ಮಾಡೋದು..?” ಎಂಬ ಚಿತ್ರ ಬಿಡುಗಡೆ ಮಾಡಿದ್ದಾರೆ.

ಇದೊಂದು ಚಳವಳಿ ಎಂಬ ರೀತಿಯಲ್ಲಿ ಈ ಕಿರುಚಿತ್ರವನ್ನು ಬಣ್ಣಿಸಲಾಗಿದೆ. ಹಿಂದೆ ಕೂಡ ನಾನುಗೌರಿ.ಕಾಂ ಜೊತೆ ಮಾತನಾಡಿದ್ದ ನಿರ್ದೇಶಕ ಪವನ್ ಕುಮಾರ್‌, ಈ ರೀತಿಯ ಪ್ರತಿಭಟನೆಯಿಂದ ನಾವು ದೊಡ್ಡಮಟ್ಟದಲ್ಲಿ ಹಿಂದಿ ಹೇರಿಕೆಗೆ ಪ್ರತಿರೋಧ ನೀಡಲು ಸಾಧ್ಯ ಎಂದಿದ್ದರು.

ತಮ್ಮ ಕಿರುಚಿತ್ರದಲ್ಲೂ ಏನ್ ಮಾಡೋದು..? ಎಂಬ ಪ್ರಶ್ನೆಯನ್ನು ಹಾಗೆ ಇಟ್ಟಿದ್ದಾರೆ. ಆದರೆ ಕೊನೆಯಲ್ಲಿ ಕನ್ನಡದಲ್ಲಿ ಪ್ರಮಾಣಪತ್ರ ಕೊಟ್ಟರೆ ಹೇಗಿರುತ್ತದೆ ಎಂಬುದನ್ನು ಪಾತ್ರಗಳಿಂದಲೇ ಪ್ರಮಾಣಪತ್ರ ಓದಿಸಿದ್ದಾರೆ. ಕಿರುಚಿತ್ರಕ್ಕೆ ಸಾಕಷ್ಟು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಪರ ಹೋರಾಟಕ್ಕೆ ಧನ್ಯವಾದ ಎಂಬ ಕಾಮೆಂಟ್‌ಗಳು ಬರುತ್ತಿದ್ದು, ಜನರು ನಿರ್ದೇಶಕರ ಪ್ರಯತ್ನಕ್ಕೆ ಮೆಚ್ಚುಗೆ ಸೂಚಿಸಿ, ತಾವೂ ಜೊತೆ ನಿಲ್ಲುವ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಮೋದಿ ಅವಧಿಯಲ್ಲಿ ಹಿಂದಿ ಹೇರಿಕೆಗೆ ಹೆಚ್ಚು ಅನುದಾನ/ಖರ್ಚು – ಆರ್‌ಟಿಐನಿಂದ ಬಹಿರಂಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...