Homeಮುಖಪುಟ‘3 ವರ್ಷಗಳಿಂದ ಏನು ಮಾಡುತ್ತಿದ್ದರು?’: ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ತರಾಟೆ

‘3 ವರ್ಷಗಳಿಂದ ಏನು ಮಾಡುತ್ತಿದ್ದರು?’: ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ತರಾಟೆ

- Advertisement -
- Advertisement -

ವಿಧಾನಸಭೆಯಲ್ಲಿ ಅಂಗೀಕರಿಸಿದ ಮಸೂದೆಗಳನ್ನು ತೆರವುಗೊಳಿಸುವಲ್ಲಿ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ವಿಳಂಬ ಮಾಡುತ್ತಿರುವ ಕುರಿತು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿತ್ತು. ಈ ಬಗ್ಗೆ ಸೋಮವಾರ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಪುನರಾರಂಭಿಸುತ್ತಿದ್ದಂತೆ ರಾಜ್ಯಪಾಲರನ್ನು ತರಾಟೆಗೆ ತೆಗೆದುಕೊಂಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

”ಶಾಸಕಾಂಗ ಸಭೆಯ ಕರ್ತವ್ಯಗಳನ್ನು ನಿರ್ವಹಿಸಲು ಅಡ್ಡಿಪಡಿಸಿದ್ದಾರೆ” ಎಂದು ಆರೋಪಿಸಿ ರಾಜ್ಯಪಾಲ ರವಿ ಅವರ ವಿರುದ್ಧ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು. ರವಿ ಅವರು ಹಲವು ಬಿಲ್‌ಗಳನ್ನು ಬಾಕಿ ಇರಿಸಿರುವುದು ಮಾತ್ರವಲ್ಲದೆ ಹಲವು ಭ್ರಷ್ಟಾಚಾರ ಪ್ರಕರಣಗಳ ತನಿಖೆ ಮತ್ತು ವಿಚಾರಣೆಗೆ ಅನುಮತಿ ನೀಡಿಲ್ಲ ಎಂದು ರಾಜ್ಯ ಸರ್ಕಾರ ತನ್ನ ಅರ್ಜಿಯಲ್ಲಿ ಆರೋಪಿಸಿದೆ.

ತನ್ನ ಒಪ್ಪಿಗೆಗಾಗಿ ಮಂಡಿಸಿದ ಮಸೂದೆಗಳ ಬಗ್ಗೆ ರಾಜ್ಯಪಾಲರ ನಿಷ್ಕ್ರಿಯತೆ ಗಂಭೀರ ಕಾಳಜಿಯ ವಿಷಯವಾಗಿದೆ ಎಂದು ನವೆಂಬರ್ 10 ರಂದು, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಗಮನಿಸಿತು. ತಮಿಳುನಾಡು ವಿಧಾನಸಭೆಯು ರವಿ ಅವರು ಹಿಂದಿರುಗಿಸಿದ 10 ಮಸೂದೆಗಳ ಕುರಿತು ಶನಿವಾರ ಸುಪ್ರೀಂಗೆ ತಿಳಿಸಿದೆ.

”ಈ ಮಸೂದೆಗಳು 2020ರಿಂದ ಬಾಕಿ ಇವೆ. ಮೂರು ವರ್ಷ ಅವರೇನು ಮಾಡುತ್ತಿದ್ದರು?” ಎಂದು ತಮಿಳುನಾಡು ರಾಜ್ಯಪಾಲರನ್ನು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ.

ರಾಜ್ಯಪಾಲ ಸಿ ಎನ್‌ ರವಿ ಅವರು ತಮ್ಮ ಬಳಿ ಬಾಕಿ ಇದ್ದ 10 ಮಸೂದೆಗಳನ್ನು ವಾಪಸ್‌ ಕಳುಹಿಸಿದ ವಿದ್ಯಮಾನದ ಕುರಿತಂತೆ ಸುಪ್ರೀಂ ಕೋರ್ಟ್‌ ಈ ಪ್ರಶ್ನೆಯನ್ನೆತ್ತಿದೆ. ಈ 10 ಮಸೂದೆಗಳಲ್ಲಿ ಎರಡು ಮಸೂದೆಗಳನ್ನು ರಾಜ್ಯದಲ್ಲಿ ಈ ಹಿಂದೆ ಆಡಳಿತದಲ್ಲಿದ್ದ ಎಐಎಡಿಎಂಕೆ ಸರ್ಕಾರದ ಅವಧಿಯ ವೇಳೆ ವಿಧಾನಸಭೆ ಅಂಗೀಕರಿಸಿತ್ತು.

ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಜೆ.ಬಿ ಪರ್ಡಿವಾಲ ಹಾಗೂ ಮಜೋಜ್‌ ಮಿಶ್ರಾ ಅವರಿದ್ದ ಪೀಠ ಅರ್ಜಿಯ ವಿಚಾರಣೆ ನಡೆಸಿತು. ಕೇರಳ ಸರ್ಕಾರದ ಪರ ಹಿರಿಯ ವಕೀಲ ಕೆ.ಕೆ ವೇಣುಗೋ‍‍ಪಾಲ್ ಅವರು ಹಾಜರಾದರು.

ಇದೊಂದು ವ್ಯಾಧಿಯಾಗಿಬಿಟ್ಟಿದೆ. ಸಂವಿಧಾನದ 168 ನೇ ವಿಧಿಯ ಅಡಿಯಲ್ಲಿ ಶಾಸಕಾಂಗದ ಭಾಗವಾಗಿದ್ದಾರೆಂದು ರಾಜ್ಯಪಾಲರು ತಿಳಿದುಕೊಂಡಿರುವುದಿಲ್ಲ ಎಂದು ವೇಣುಗೋಪಾಲ್ ಹೇಳಿದರು. ಸಂವಿಧಾನದ 162ನೇ ವಿಧಿಯನ್ವಯ ರಾಜ್ಯಪಾಲರು ಶಾಸಕಾಂಗ ಭಾಗ. ಮೂರು ಸುಗ್ರೀವಾಜ್ಞೆಗಳಿಗೆ ಒಪ್ಪಿಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. ಬಳಿಕ ಅದರ ಮಸೂದೆಗೆ ವಿಧಾನಸಭೆ ಒಪ್ಪಿಗೆ ನೀಡಿದೆ. ಸುಮಾರು 8 ಮಸೂದೆಗಳು ಕಳೆದ 7–21 ತಿಂಗಳಿನಿಂದ ರಾಜ್ಯಪಾಲರ ಬಳಿಯೇ ಇದೆ ಎಂದು ಕೆ.ಕೆ ವೇಣುಗೋಪಾಲ್ ಕೋರ್ಟ್‌ನ ಗಮನಕ್ಕೆ ತಂದರು.

ಕೇಂದ್ರ ಹಾಗೂ ರಾಜ್ಯಪಾಲರ ಕಚೇರಿಯ ಜತೆಗೆ, ವಿಚಾರಣೆ ಸಂಬಂಧ ನೀವು ಅಥವಾ ಸಾಲಿಸಿಟರ್ ಜನರಲ್ ತುಷಾರ್‌ ಮೆಹ್ತಾ ಅವರು ಸಹಾಯ ಮಾಡಬೇಕು ಎಂದು ಅಟಾರ್ನಿ ಜನರಲ್ ವಿ. ವೆಂಕಟರಮಣಿ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್‌ ಜಾರಿ ಮಾಡಿತು. ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು. ಮಸೂದೆಗಳಿಗೆ ಒಪ್ಪಿಗೆ ನೀಡಲು ವಿಳಂಬ ಮಾಡುವ ಮೂಲಕ ರಾಜ್ಯಪಾಲರು ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ ಎಂದು ಕೇರಳ ಸರ್ಕಾರ ಆರೋಪಿಸಿತ್ತು.

ತೆಲಂಗಾಣ, ಪಂಜಾಬ್ ಮತ್ತು ಕೇರಳ ರಾಜ್ಯಗಳ ರಾಜ್ಯಪಾಲರು ಶಾಸಕಾಂಗ ಮತ್ತು ಕಾರ್ಯಾಂಗದ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿವೆ.

ಏಳು ತಿಂಗಳಿಂದ ಎರಡು ವರ್ಷಗಳ ಅವಧಿಗೆ ತಮ್ಮ ಬಳಿ ಬಾಕಿ ಇರುವ ಎಂಟು ಮಸೂದೆಗಳನ್ನು ಪರಿಗಣಿಸಲು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ವಿಳಂಬ ಮಾಡಿದ ವಿರುದ್ಧ ಕೇರಳ ಸರ್ಕಾರದ ಮನವಿಯ ಕುರಿತು ಪೀಠವು ಸೋಮವಾರ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಾಲಯವು ಡಿಸೆಂಬರ್ 1 ರಂದು ತಮಿಳುನಾಡು ಸರ್ಕಾರದ ಮನವಿಯನ್ನು ಮತ್ತು ಶುಕ್ರವಾರ ಕೇರಳ ಸರ್ಕಾರದ ಮನವಿಯನ್ನು ಆಲಿಸಲಿದೆ.

ಇದನ್ನೂ ಓದಿ: ಮಸೂದೆಗಳಿಗೆ ಅಂಕಿತ ಹಾಕಲು ವಿಳಂಬ: ಕೇರಳ ಗವರ್ನರ್‌, ಕೇಂದ್ರಕ್ಕೆ ಸುಪ್ರೀಂ ನೊಟೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...