Homeಮುಖಪುಟ‘3 ವರ್ಷಗಳಿಂದ ಏನು ಮಾಡುತ್ತಿದ್ದರು?’: ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ತರಾಟೆ

‘3 ವರ್ಷಗಳಿಂದ ಏನು ಮಾಡುತ್ತಿದ್ದರು?’: ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ತರಾಟೆ

- Advertisement -
- Advertisement -

ವಿಧಾನಸಭೆಯಲ್ಲಿ ಅಂಗೀಕರಿಸಿದ ಮಸೂದೆಗಳನ್ನು ತೆರವುಗೊಳಿಸುವಲ್ಲಿ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ವಿಳಂಬ ಮಾಡುತ್ತಿರುವ ಕುರಿತು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿತ್ತು. ಈ ಬಗ್ಗೆ ಸೋಮವಾರ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಪುನರಾರಂಭಿಸುತ್ತಿದ್ದಂತೆ ರಾಜ್ಯಪಾಲರನ್ನು ತರಾಟೆಗೆ ತೆಗೆದುಕೊಂಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

”ಶಾಸಕಾಂಗ ಸಭೆಯ ಕರ್ತವ್ಯಗಳನ್ನು ನಿರ್ವಹಿಸಲು ಅಡ್ಡಿಪಡಿಸಿದ್ದಾರೆ” ಎಂದು ಆರೋಪಿಸಿ ರಾಜ್ಯಪಾಲ ರವಿ ಅವರ ವಿರುದ್ಧ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು. ರವಿ ಅವರು ಹಲವು ಬಿಲ್‌ಗಳನ್ನು ಬಾಕಿ ಇರಿಸಿರುವುದು ಮಾತ್ರವಲ್ಲದೆ ಹಲವು ಭ್ರಷ್ಟಾಚಾರ ಪ್ರಕರಣಗಳ ತನಿಖೆ ಮತ್ತು ವಿಚಾರಣೆಗೆ ಅನುಮತಿ ನೀಡಿಲ್ಲ ಎಂದು ರಾಜ್ಯ ಸರ್ಕಾರ ತನ್ನ ಅರ್ಜಿಯಲ್ಲಿ ಆರೋಪಿಸಿದೆ.

ತನ್ನ ಒಪ್ಪಿಗೆಗಾಗಿ ಮಂಡಿಸಿದ ಮಸೂದೆಗಳ ಬಗ್ಗೆ ರಾಜ್ಯಪಾಲರ ನಿಷ್ಕ್ರಿಯತೆ ಗಂಭೀರ ಕಾಳಜಿಯ ವಿಷಯವಾಗಿದೆ ಎಂದು ನವೆಂಬರ್ 10 ರಂದು, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಗಮನಿಸಿತು. ತಮಿಳುನಾಡು ವಿಧಾನಸಭೆಯು ರವಿ ಅವರು ಹಿಂದಿರುಗಿಸಿದ 10 ಮಸೂದೆಗಳ ಕುರಿತು ಶನಿವಾರ ಸುಪ್ರೀಂಗೆ ತಿಳಿಸಿದೆ.

”ಈ ಮಸೂದೆಗಳು 2020ರಿಂದ ಬಾಕಿ ಇವೆ. ಮೂರು ವರ್ಷ ಅವರೇನು ಮಾಡುತ್ತಿದ್ದರು?” ಎಂದು ತಮಿಳುನಾಡು ರಾಜ್ಯಪಾಲರನ್ನು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ.

ರಾಜ್ಯಪಾಲ ಸಿ ಎನ್‌ ರವಿ ಅವರು ತಮ್ಮ ಬಳಿ ಬಾಕಿ ಇದ್ದ 10 ಮಸೂದೆಗಳನ್ನು ವಾಪಸ್‌ ಕಳುಹಿಸಿದ ವಿದ್ಯಮಾನದ ಕುರಿತಂತೆ ಸುಪ್ರೀಂ ಕೋರ್ಟ್‌ ಈ ಪ್ರಶ್ನೆಯನ್ನೆತ್ತಿದೆ. ಈ 10 ಮಸೂದೆಗಳಲ್ಲಿ ಎರಡು ಮಸೂದೆಗಳನ್ನು ರಾಜ್ಯದಲ್ಲಿ ಈ ಹಿಂದೆ ಆಡಳಿತದಲ್ಲಿದ್ದ ಎಐಎಡಿಎಂಕೆ ಸರ್ಕಾರದ ಅವಧಿಯ ವೇಳೆ ವಿಧಾನಸಭೆ ಅಂಗೀಕರಿಸಿತ್ತು.

ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಜೆ.ಬಿ ಪರ್ಡಿವಾಲ ಹಾಗೂ ಮಜೋಜ್‌ ಮಿಶ್ರಾ ಅವರಿದ್ದ ಪೀಠ ಅರ್ಜಿಯ ವಿಚಾರಣೆ ನಡೆಸಿತು. ಕೇರಳ ಸರ್ಕಾರದ ಪರ ಹಿರಿಯ ವಕೀಲ ಕೆ.ಕೆ ವೇಣುಗೋ‍‍ಪಾಲ್ ಅವರು ಹಾಜರಾದರು.

ಇದೊಂದು ವ್ಯಾಧಿಯಾಗಿಬಿಟ್ಟಿದೆ. ಸಂವಿಧಾನದ 168 ನೇ ವಿಧಿಯ ಅಡಿಯಲ್ಲಿ ಶಾಸಕಾಂಗದ ಭಾಗವಾಗಿದ್ದಾರೆಂದು ರಾಜ್ಯಪಾಲರು ತಿಳಿದುಕೊಂಡಿರುವುದಿಲ್ಲ ಎಂದು ವೇಣುಗೋಪಾಲ್ ಹೇಳಿದರು. ಸಂವಿಧಾನದ 162ನೇ ವಿಧಿಯನ್ವಯ ರಾಜ್ಯಪಾಲರು ಶಾಸಕಾಂಗ ಭಾಗ. ಮೂರು ಸುಗ್ರೀವಾಜ್ಞೆಗಳಿಗೆ ಒಪ್ಪಿಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. ಬಳಿಕ ಅದರ ಮಸೂದೆಗೆ ವಿಧಾನಸಭೆ ಒಪ್ಪಿಗೆ ನೀಡಿದೆ. ಸುಮಾರು 8 ಮಸೂದೆಗಳು ಕಳೆದ 7–21 ತಿಂಗಳಿನಿಂದ ರಾಜ್ಯಪಾಲರ ಬಳಿಯೇ ಇದೆ ಎಂದು ಕೆ.ಕೆ ವೇಣುಗೋಪಾಲ್ ಕೋರ್ಟ್‌ನ ಗಮನಕ್ಕೆ ತಂದರು.

ಕೇಂದ್ರ ಹಾಗೂ ರಾಜ್ಯಪಾಲರ ಕಚೇರಿಯ ಜತೆಗೆ, ವಿಚಾರಣೆ ಸಂಬಂಧ ನೀವು ಅಥವಾ ಸಾಲಿಸಿಟರ್ ಜನರಲ್ ತುಷಾರ್‌ ಮೆಹ್ತಾ ಅವರು ಸಹಾಯ ಮಾಡಬೇಕು ಎಂದು ಅಟಾರ್ನಿ ಜನರಲ್ ವಿ. ವೆಂಕಟರಮಣಿ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್‌ ಜಾರಿ ಮಾಡಿತು. ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು. ಮಸೂದೆಗಳಿಗೆ ಒಪ್ಪಿಗೆ ನೀಡಲು ವಿಳಂಬ ಮಾಡುವ ಮೂಲಕ ರಾಜ್ಯಪಾಲರು ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ ಎಂದು ಕೇರಳ ಸರ್ಕಾರ ಆರೋಪಿಸಿತ್ತು.

ತೆಲಂಗಾಣ, ಪಂಜಾಬ್ ಮತ್ತು ಕೇರಳ ರಾಜ್ಯಗಳ ರಾಜ್ಯಪಾಲರು ಶಾಸಕಾಂಗ ಮತ್ತು ಕಾರ್ಯಾಂಗದ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿವೆ.

ಏಳು ತಿಂಗಳಿಂದ ಎರಡು ವರ್ಷಗಳ ಅವಧಿಗೆ ತಮ್ಮ ಬಳಿ ಬಾಕಿ ಇರುವ ಎಂಟು ಮಸೂದೆಗಳನ್ನು ಪರಿಗಣಿಸಲು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ವಿಳಂಬ ಮಾಡಿದ ವಿರುದ್ಧ ಕೇರಳ ಸರ್ಕಾರದ ಮನವಿಯ ಕುರಿತು ಪೀಠವು ಸೋಮವಾರ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಾಲಯವು ಡಿಸೆಂಬರ್ 1 ರಂದು ತಮಿಳುನಾಡು ಸರ್ಕಾರದ ಮನವಿಯನ್ನು ಮತ್ತು ಶುಕ್ರವಾರ ಕೇರಳ ಸರ್ಕಾರದ ಮನವಿಯನ್ನು ಆಲಿಸಲಿದೆ.

ಇದನ್ನೂ ಓದಿ: ಮಸೂದೆಗಳಿಗೆ ಅಂಕಿತ ಹಾಕಲು ವಿಳಂಬ: ಕೇರಳ ಗವರ್ನರ್‌, ಕೇಂದ್ರಕ್ಕೆ ಸುಪ್ರೀಂ ನೊಟೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...