Homeಮುಖಪುಟಮಹಾತ್ಮ ಗಾಂಧಿ ಬಗ್ಗೆ ಸಂಘಪರಿವಾರ ಮತ್ತು ಜರ್ಮನಿಯ ಗೊಬೆಲ್ಸ್‌ಗೆ ಒಂದೇ ತರಹದ ಅಸಹನೆ ಏಕಿತ್ತು?

ಮಹಾತ್ಮ ಗಾಂಧಿ ಬಗ್ಗೆ ಸಂಘಪರಿವಾರ ಮತ್ತು ಜರ್ಮನಿಯ ಗೊಬೆಲ್ಸ್‌ಗೆ ಒಂದೇ ತರಹದ ಅಸಹನೆ ಏಕಿತ್ತು?

ಗಾಂಧಿಯವರ ಅಹಿಂಸೆಯ ದಾರಿಯಿಂದ ಸ್ವಾತಂತ್ರ‍್ಯ ಬರಲಿಲ್ಲ ಎಂಬ ಮಾತನ್ನು ಅವರು 21ನೆಯ ಶತಮಾನದಲ್ಲೂ ಮತ್ತೆ ಮತ್ತೆ ಯುವಪೀಳಿಗೆಗಳ ಮನಸ್ಸಿನಲ್ಲಿ ತುಂಬಲು ಶ್ರಮಿಸುತ್ತಿದ್ದಾರೆ.

- Advertisement -
- Advertisement -

ನಾಜಿ ಜರ್ಮನಿಯನ್ನು ಕಟ್ಟಿದ ಪ್ರಮುಖ ರೂವಾರಿ ಅಡಾಲ್ಪ್ ಹಿಟ್ಲರ್ ಎಷ್ಟು ಮುಖ್ಯನೋ, ಅವನ ಸಚಿವ ಸಂಪುಟದಲ್ಲಿ ಪ್ರಪೊಗಾಂಡ ಸಚಿವನಾಗಿದ್ದ ಗೊಬೆಲ್ಸ್ ಕೂಡ ಅಷ್ಟೇ ಪ್ರಮುಖ. ಆ ಕಾಲದ ಜರ್ಮನಿಯ, ಜರ್ಮನಿಯ ಜನಸಮುದಾಯಗಳ ವಿವೇಕ ಮತ್ತು ಸಾಮಾಜಿಕ ಸಾಮರಸ್ಯದ ಅವಸಾನಕ್ಕೂ ಇವರಿಬ್ಬರೂ ಮುಖ್ಯ ರೂವಾರಿಗಳು ಎಂದು ಬಿಡಿಸಿ ಹೇಳಬೇಕಿಲ್ಲ. ಸರಳವಾಗಿ ಹೇಳುವುದಾದರೆ, ಹಿಟ್ಲರ್‌ನ ಬಲಗೈ ಭಂಟನಾಗಿದ್ದ ಗೊಬೆಲ್ಸ್.

ನಾಜಿ ಜರ್ಮನಿಯ ರೇಡಿಯೋ, ಪತ್ರಿಕೆಗಳು, ರಂಗಭೂಮಿ, ಸಾಹಿತ್ಯ, ಸಂಗೀತ, ಪಿಲ್ಮ್‌ಗಳು ಎಲ್ಲವನ್ನೂ ಬಹಳ ಪರಿಣಾಮಕಾರಿಯಾಗಿ ಬಳಸಿ, ನಿಭಾಯಿಸಿ ಜ್ಯೂಗಳ ವಿರುದ್ಧ ಜನಾಂಗೀಯ ದ್ವೇಷದ ಮನೋಭಾವವನ್ನು ಬಹುಸಂಖ್ಯಾತ ಜರ್ಮನ್ನರಿಗೆ ಸಮರ್ಥವಾಗಿ ತುಂಬಲು ಸಫಲನಾಗಿದ್ದ. ಜರ್ಮನ್ ವಿರೋಧಿ ಸಾಹಿತ್ಯ ಎಂದು ವಿಂಗಡಿಸಿ ಸಾವಿರಾರು ಪುಸ್ತಕಗಳನ್ನು ನಡುರಸ್ತೆಯಲ್ಲಿ ಸುಟ್ಟ ದುಷ್ಕೃತ್ಯದ ಶ್ರೇಯಸ್ಸು ಇವನದ್ದೇ. ಇವತ್ತಿಗೂ ವಿಶ್ವದಾದ್ಯಂತ ಬಲಪಂಥೀಯ ಸಂಘಟನೆಗಳಿಗೆ, ಸರ್ವಾಧಿಕಾರದ ಧೋರಣೆಯ ಸರ್ಕಾರಗಳಿಗೆ ಇವನು ದ್ರೋಣಾಚಾರ್ಯ. ಇವನು ತನ್ನ ಸಿದ್ಧಾಂತಗಳನ್ನು ಪ್ರಚಾರ ನಡೆಸಲು ತೊಡಗಿಸಿಕೊಂಡ ದಾರಿಗಳನ್ನು ಇವತ್ತಿಗೂ ಇವರೆಲ್ಲಾ ಅನುಕರಿಸುತ್ತಾರೆ.

ಗೊಬೆಲ್ಸ್

ಆಸಕ್ತಿದಾಯಕವಾಗಿ ಗೊಬೆಲ್ಸ್ ತನ್ನ ಕೊನೆಯ ವರ್ಷಗಳಲ್ಲಿ ದಿನಚರಿಯನ್ನು ಬರೆದುಕೊಳ್ಳುತ್ತಿದ್ದ. ಆ ದಿನಚರಿಗಳಲ್ಲಿ ಮಹಾತ್ಮ ಗಾಂಧಿಯವರ ಬಗ್ಗೆ ಕೆಲವು ಸಾಲುಗಳನ್ನು ಮೂರು ವಿಭಿನ್ನ ದಿನಾಂಕಗಳಂದು ದಾಖಲಿಸಿದ್ದಾನೆ. ಮಹಾತ್ಮ ಗಾಂಧಿಯವರ ಬಗ್ಗೆ ಅವನಿಗಿದ್ದ ಅಸಹನೆಗೂ, ಅವನ ಕಾಲಕ್ಕೆ ಗಾಂಧಿಯವರ ಬಗ್ಗೆ ಭಾರತದಲ್ಲಿ ಆರ್.ಎಸ್.ಎಸ್ ಸಂಘಟನೆ ಮತ್ತು ಹಿಂದು ಮಹಾಸಭಾದ ಮುಖಂಡರು ತೋರಿಸುತ್ತಿದ್ದ ಅಸಹನೆ, ದ್ವೇಷಕ್ಕೂ ಬಹಳ ಹತ್ತಿರದ ಹೋಲಿಕೆಗಳಿವೆ. ಇಟಲಿಯ ಫ್ಯಾಸಿಸ್ಟ್‌ಗಳಿಂದ, ಜರ್ಮನಿಯ ನಾಜಿಗಳಿಂದ ಅಂದಿನ ಆರ್‌ಎಸ್‌ಎಸ್ ಮತ್ತು ಹಿಂದು ಮಹಾಸಭಾದ ನಾಯಕರು ಉಗ್ರ ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಂಡಿದ್ದು, ಮುಸ್ಲಿಮರ ವಿರುದ್ಧ ಜನಾಂಗೀಯ ದ್ವೇಷವನ್ನು ತೀವ್ರತರಕ್ಕೆ ತೆಗೆದುಕೊಂಡು ಹೋಗಿದ್ದು ಈಗಾಗಲೇ ಹಲವು ಬಾರಿ ದಾಖಲು ಆಗಿದೆ. ಗಾಂಧಿಯ ಬಗ್ಗೆ ದ್ವೇಷವನ್ನೂ ನಾಜಿಗಳು ಕಲಿಸಿಕೊಟ್ಟರೇ?

ಏಪ್ರಿಲ್ 6, 1942ರಂದು ತನ್ನ ಡೈರಿಯಲ್ಲಿ ಗೋಬೆಲ್ಸ್ ಗಾಂಧಿ ಬಗ್ಗೆ ಹೀಗೆ ನಮೂದಿಸಿದ್ದಾನೆ.
“… ಗಾಂಧಿ ಇಂದು ಮುದ್ರಣ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಬ್ರಿಟಿಷರ ಶೋಷಣೆಯ ವಿರುದ್ಧ ಸಂದರ್ಶನ ಪ್ರಕಟಿಸಿದ್ದಾರೆ. ಶಾಂತಿಯುತ ಪ್ರತಿಭಟನೆಯ ಹೊರತಾಗಿ ಇವರು ಬೇರೆ ಯಾವ ತಂತ್ರಗಳನ್ನು ಮುಂದುಮಾಡಿಲ್ಲ. ಶಾಂತಿಯುತ ಪ್ರತಿಭಟನೆ ಇಂಗ್ಲಿಷ್‌ ಜನಗಳಿಗೆ ಸ್ವಾಭಾವಿಕವಾಗಿ ಯಾವುದೇ ತೊಂದರೆ ನೀಡುವುದಿಲ್ಲ. ಗಾಂಧಿ ನೀತಿಗಳು ಭಾರತಕ್ಕೆ ದುರದೃಷ್ಟವನ್ನು ಹೊರತುಪಡಿಸಿ ಬೇರೇನೂ ತಂದುಕೊಟ್ಟಿಲ್ಲ. ಈ ನಾಲ್ಕು ನೂರ ಐವತ್ತು ದಶಲಕ್ಷ ಜನ ಶಕ್ತಿಯುತವಾದ ರಾಷ್ಟ್ರೀಯತೆಯ, ಭಾರತ ಸ್ವಾತಂತ್ರ‍್ಯ ಸಂಗ್ರಾಮದ ರಾಜಕೀಯವನ್ನು ಕಟ್ಟಿದ್ದರೆ ಇವತ್ತಿಗೆ ಇರುವ ಸ್ಥಿತಿಗಿಂತಲೂ ಎಷ್ಟೋ ಮುಂದೆ ಇರುತ್ತಿದ್ದರು”

ಇದು ಇವತ್ತಿಗೂ ಸಂಘ ಪರಿವಾರದವರು ಉಚ್ಚರಿಸುವ ಮಾತುಗಳು. ಗಾಂಧಿಯವರ ಅಹಿಂಸೆಯ ದಾರಿಯಿಂದ ಸ್ವಾತಂತ್ರ‍್ಯ ಬರಲಿಲ್ಲ ಎಂಬ ಮಾತನ್ನು ಅವರು 21ನೆಯ ಶತಮಾನದಲ್ಲೂ ಮತ್ತೆ ಮತ್ತೆ ಯುವಪೀಳಿಗೆಗಳ ಮನಸ್ಸಿನಲ್ಲಿ ತುಂಬಲು ಶ್ರಮಿಸುತ್ತಿದ್ದಾರೆ. ಉಗ್ರ ರಾಷ್ಟ್ರೀಯತೆಯ ಪ್ರತಿಪಾದನೆಯಿಂದ, ಜನಾಂಗೀಯ ದ್ವೇಷಗಳಿಂದ, ಹಿಂಸೆಯಿಂದ ಜರ್ಮನಿ ಮತ್ತು ಇತರ ಯೂರೋಪ್ ದೇಶಗಳು ಸರ್ವನಾಶವಾಗಿ ಹೋಗಿದ್ದರೂ, ಭಾರತದಲ್ಲಿ ಇಂದಿಗೂ ಮುಖ್ಯವಾಹಿನಿಯ ಮಾಧ್ಯಮಗಳಲ್ಲಿ, ಸಾಹಿತ್ಯ ಸಿನೆಮಾಗಳಲ್ಲಿ ಇಂತಹ ಪ್ರತಿಪಾದನೆಗಳು ಪಡೆಯುತ್ತಿರುವ ಸ್ಥಾನ ಆತಂಕ ಮೂಡಿಸುತ್ತದೆ.

ಏಪ್ರಿಲ್ 20, 1942ರಂದು ಮತ್ತೆ ಗಾಂಧಿ ಅವರ ಅಹಿಂಸಾಮಾರ್ಗವನ್ನು ಛೇಡಿಸಿ ತನ್ನ ದಿನಚರಿಯಲ್ಲಿ ಗೋಬೆಲ್ಸ್ ಈ ರೀತಿ ದಾಖಲಿಸಿಕೊಂಡಿದ್ದಾನೆ.

“ಗಾಂಧಿ ಇವತ್ತು ನೀಡಿದ ಸಂದರ್ಶನದಲ್ಲಿ ಮತ್ತೆ ಅಹಿಂಸೆಯನ್ನು ಆಚರಿಸುವಂತೆ ಕರೆಕೊಟ್ಟಿದ್ದಾರೆ. ಭಾರತವನ್ನು ಇನ್ನೂ ಹೆಚ್ಚಿನ ಸಮಸ್ಯೆಗೆ ಎಳೆಯುವುದಕ್ಕೆ ಲೆಕ್ಕಾಚಾರದ ನಡೆ ಇದು”

ಅಂದೇ ತನ್ನ ದಿನಚರಿಯಲ್ಲಿ ಹಿಟ್ಲರ್ ಹುಟ್ಟುಹಬ್ಬವನ್ನು ಆಚರಿಸಿದ ಬಗ್ಗೆ, ಅಲ್ಲಿ ತಾನು ಕೊಟ್ಟ ಭಾಷಣದ ಬಗ್ಗೆ ಬರೆದುಕೊಳ್ಳುತ್ತಾನೆ. ಅಂದರೆ ತನ್ನ ಸರ್ವಾಧಿಕಾರಿಯ ಹುಟ್ಟುಹಬ್ಬದ ಸಂಭ್ರಮಾಚರಣೆಯ ದಿನವೂ ಗಾಂಧಿ ಮತ್ತು ಅಹಿಂಸೆಯ ಬಗೆಗಿನ ಗಾಂಧಿ ಮಾತುಗಳು ಈ ಕ್ರೂರಿಯನ್ನು ಕಾಡಿವೆ. ಇವತ್ತಿಗೂ ಗಾಂಧಿ ಮತ್ತು ಗಾಂಧಿ ಹೇಳಿಕೊಟ್ಟ ಪ್ರತಿಭಟನೆಯ ಪಾಠಗಳು ಸರ್ವಾಧಿಕಾರವನ್ನು ಬಯಸುವ ವರ್ಗಕ್ಕೆ ಭೂತವಾಗಿ ಕಾಡುತ್ತಲೇ ಇದೆ. ಆದುದರಿಂದಲೇ ಗಾಂಧಿಯನ್ನು, ಗಾಂಧಿ ಹೇಳಿಕೊಟ್ಟ ಪಾಠವನ್ನು ಅನುಸರಿಸುವ ಯಾರನ್ನೇ ಆಗಲಿ, ಅವರ ಚಾರಿತ್ರ‍್ಯಹರಣಕ್ಕೆ ಈ ಗುಂಪು ಸದಾಕಾಲ ಸಿದ್ಧರಾಗಿ ಕಾದಿರುತ್ತಾರೆ.

ಕ್ವಿಟ್ ಇಂಡಿಯಾ ಚಳವಳಿಯ ಭಾಗವಾಗಿ, ನಡೆದ ಘರ್ಷಣೆಗಳಿಗೆ ಗಾಂಧಿಯವರ ಮೇಲೆ ನೇರ ಆರೋಪ ಹೊರಿಸಿ ಬಂಧಿಸಿದಾಗ, ಗಾಂಧಿ ಆತ್ಮಶುದ್ಧಿಗಾಗಿ ಜೈಲಿನಲ್ಲಿಯೇ 21 ದಿನಗಳ ಉಪವಾಸ ಮಾಡುತ್ತಾರೆ. ಗಾಂಧಿಯವರು ಉಪವಾಸ ಅಂತ್ಯ ಮಾಡಿದ ನಂತರ ಮಾರ್ಚ್ 5, 1943 ರಂದು ಗೊಬೆಲ್ಸ್ ತನ್ನ ದಿನಚರಿಯಲ್ಲಿ ಹೀಗೆ ದಾಖಲಿಸಿದ್ದಾನೆ.

“ಗಾಂಧಿ ತಮ್ಮ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ. ಅವರು ಇಡೀ ಪ್ರಪಂಚಕ್ಕೆ ತಮಾಷೆ ತೋರಿಸಿದ್ದಾರೆ ಎಂಬುದು ನನ್ನ ನಂಬಿಕೆ. ಇಂಗ್ಲಿಷ್‌ ದಿನಪತ್ರಿಕೆಗಳು ಇದನ್ನು ವರದಿ ಮಾಡಿ ತಮ್ಮದೇ ಆದ ವ್ಯಂಗ್ಯವನ್ನು ಮತ್ತು ಲೇವಡಿ ಮಾಡುವ ಭಾಷೆಯನ್ನು ಸೇರಿಸಿದ್ದಾರೆ. ಗಾಂಧಿ ಸಿಕ್ಕಾಪಟ್ಟೆ ಬುದ್ಧಿವಂತ. ಆತ ಸಂತ ಎಂದು ನಾನು ಯಾವುದೇ ಕಾರಣಕ್ಕೂ ನಂಬುವುದಿಲ್ಲ. ಆದರೆ ಈ ಬಾರಿ ಆತನ ನಾಟಕೀಯ ಉಪವಾಸದಿಂದ ಇಂಗ್ಲಿಷರು ಮೋಸಹೋಗಲಿಲ್ಲ”

ಗಾಂಧಿ ಉಪವಾಸದ ಬಗ್ಗೆ, ಗಾಂಧಿ ಅವರು ಬಯಸುತ್ತಿದ್ದ ಹಿಂದೂ-ಮುಸ್ಲಿಮ್ ಸಾಮರಸ್ಯದ ಬಗ್ಗೆ ಆರ್‌ಎಸ್‌ಎಸ್ ಕೂಡ ಹಲವು ಬಾರಿ ಮೂದಲಿಸಿರುವುದು ದಾಖಲಾಗಿದೆ. ಬಂಗಾಳದಲ್ಲಿ ಹಿಂದೂ ಮುಸ್ಲಿಮರ ಕೋಮುಗಲಭೆಯನ್ನು ಕೊನೆಗಾಣಿಸಲು ಕೊನೆಯ ಅಸ್ತ್ರ ಎಂಬುವಂತೆ ಗಾಂಧಿ ಅವರು ಉಪವಾಸ ಕೂತಾಗ, ಆರ್‌ಎಸ್‌ಎಸ್ ಮುಖವಾಣಿ ಪತ್ರಿಕೆ ಆರ್ಗನೈಸರ್‌ನಲ್ಲಿ “ರೋಮ್ ಹತ್ತಿ ಉರಿಯುವಾಗ ನೀರೋ ಪಿಟೀಲು ಬಾರಿಸುತ್ತಿದ್ದನಂತೆ” ಎಂದಿದ್ದಲ್ಲದೆ “ಇತಿಹಾಸ ನಮ್ಮ ಕಣ್ಣೆದುರಿಗೆ ಇಲ್ಲಿ ಮರುಕಳಿಸುತ್ತಿದೆ. ಕಲ್ಕತ್ತಾದಿಂದ ಮಹಾತ್ಮ ಗಾಂಧಿ ಇಸ್ಲಾಮ್‌ನನ್ನು ಹಾಡಿಹೊಗಳುತ್ತಾ, ಅಲ್ಲ ಓ ಅಕ್ಬರ್ ಕೂಗುತ್ತಿದ್ದಾರೆ ಮತ್ತು ಹಿಂದೂಗಳನ್ನು ಅದನ್ನೇ ಮಾಡಲು ಪ್ರೇರೇಪಿಸುತ್ತಿದ್ದಾರೆ ಆದರೆ ಪಂಜಾಬ್ ಮತ್ತು ಇತರೆಡೆಗಳಲ್ಲಿ ಇಸ್ಲಾಮ್ ಮತ್ತು ಅಲ್ಲ ಓ ಅಕ್ಬರ್ ಕೂಗಿನ ಹೆಸರಿನಲ್ಲಿ ಸ್ವಲ್ಪವೂ ನಾಚಿಕೆಯಿಲ್ಲದ ಬರ್ಬರ ಕ್ರೌರ್ಯ ಮತ್ತು ದೌರ್ಜನ್ಯ ನಡೆಯುತ್ತಿದೆ” ಎಂದು ಬರೆದು ಕೋಮುದಳ್ಳುರಿಯ ಬೆಂಕಿಯನ್ನು ಕಾರಿಕೊಂಡಿತ್ತು.

ಹೀಗೆ ಗಾಂಧಿ ದ್ವೇಷ, ಹಿಂಸೆಯ ಬಗ್ಗೆ ಅತಿರೇಕದ ಪ್ರತಿಪಾದನೆ, ಉಗ್ರ ಧಾರ್ಮಿಕ ರಾಷ್ಟ್ರೀಯತೆ ಮತ್ತು ಜನಾಂಗೀಯ ದ್ವೇಷಗಳು ಗಾಂಧಿ ಕೊಲೆಗೂ ಪ್ರೇರೇಪಿಸಿದ್ದಲ್ಲದೆ, ಹಲವು ಪೀಳಿಗೆಗಳ ಮನಸ್ಸುಗಳನ್ನು ಭ್ರಷ್ಟಗೊಳಿಸಿತು.

ಇಂತಹ ಚಿಂತನೆಗಳನ್ನು ಜರ್ಮನಿಯಲ್ಲಿ ಹರಡಿದ ಗೊಬೆಲ್ಸ್, ಗಾಂಧಿ ಬಗ್ಗೆ ತನ್ನ ದಿನಚರಿಯಲ್ಲಿ ಮೇಲಿನ ಹೇಳಿಕೆ ದಾಖಲಿಸಿದ ಮೇಲೆ ಸುಮಾರು ಎರಡು ವರ್ಷಗಳ ಕಾಲ ಬದುಕಿದ್ದ. ಹಿಟ್ಲರ್ ತನ್ನ ಪಿಸ್ತೂಲಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ. ಆಗ ಜರ್ಮನಿಯ ಚಾನ್ಸಲರ್ ಆಗಿ ನೇಮಕಗೊಂಡ ಗೊಬೆಲ್ಸ್ ಸರ್ವಾಧಿಕಾರ ನಡೆಸಿದ್ದು ಕೇವಲ ಒಂದು ದಿನ. ಅಂದೇ ತನ್ನ ಆರು ಜನ ಮಕ್ಕಳು ಮತ್ತು ಪತ್ನಿಗೆ ವಿಷ ಉಣ್ಣಿಸಿ ತಾನು ವಿಷ ಕುಡಿದು ಏಪ್ರಿಲ್ 30, 1945ರಂದು ತಾನಿದ್ದ ಬಂಕರ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ.

ಹಿಟ್ಲರ್, ಗೊಬೆಲ್ಸ್ ಮತ್ತು ಇತರ ನಾಜಿಗಳು ಸೃಷ್ಟಿಸಿದ ಕ್ರೌರ್ಯದ ಪಾಠಗಳನ್ನು ಭಾರತವೂ ಸೇರಿದಂತೆ ಜಗತ್ತಿನ ಹಲವೆಡೆಗಳಲ್ಲಿ ಈಗಲೂ ಅನುಕರಿಸುವ ಜನ ಇರುವುದು ದುರಂತ. ಇನ್ನಾದರೂ ಗಾಂಧಿ ಚಿಂತನೆಗಳಿಗೆ ಪ್ರಚಾರ ಸಿಕ್ಕಿ, 21ನೆಯ ಶತಮಾನದ ಅವಸಾನವನ್ನು ತಡೆಯಬೇಕಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...

ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ...

‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ

2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಚಾಲನೆ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಡಿಕ್ಕಿ ಹೊಡೆದ ಕಾರಣ ಸಾವನ್ನಪ್ಪಿದ ಭಾರತದ 23 ವರ್ಷದ ಪದವೀಧರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸಿಯಾಟಲ್ ನಗರವು...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್...

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಪುತ್ರ ಶಿವಂ ಮಿಶ್ರಾ ಬಂಧನ

2026 ಫೆಬ್ರವರಿ 8, ಭಾನುವಾರದಂದು ವಿಐಪಿ ರಸ್ತೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದ ಹೈ ಪ್ರೊಫೈಲ್ ಲ್ಯಾಂಬೋರ್ಗಿನಿ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು...

ಫೆಬ್ರವರಿ 12 ರಂದು ಭಾರತ್ ಬಂದ್| ಹಲವು ರಾಜ್ಯಗಳಲ್ಲಿ ಬಂದ್ ಗೆ ಪೂರ್ಣ ಬೆಂಬಲ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಫೆಬ್ರವರಿ 12, ಗುರುವಾರ ಸಾರ್ವತ್ರಿಕ ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿದೆ. ಕರ್ನಾಟಕದಲ್ಲಿಯೂ ಕಾರ್ಮಿಕ ಸಂಘಟನೆಗಳು ಮುಷ್ಕರವನ್ನು ನಡೆಸುತ್ತಿವೆ. ಕೇಂದ್ರ ಸರ್ಕಾರದ 4...