Homeಮುಖಪುಟಮಹಾತ್ಮ ಗಾಂಧಿ ಬಗ್ಗೆ ಸಂಘಪರಿವಾರ ಮತ್ತು ಜರ್ಮನಿಯ ಗೊಬೆಲ್ಸ್‌ಗೆ ಒಂದೇ ತರಹದ ಅಸಹನೆ ಏಕಿತ್ತು?

ಮಹಾತ್ಮ ಗಾಂಧಿ ಬಗ್ಗೆ ಸಂಘಪರಿವಾರ ಮತ್ತು ಜರ್ಮನಿಯ ಗೊಬೆಲ್ಸ್‌ಗೆ ಒಂದೇ ತರಹದ ಅಸಹನೆ ಏಕಿತ್ತು?

ಗಾಂಧಿಯವರ ಅಹಿಂಸೆಯ ದಾರಿಯಿಂದ ಸ್ವಾತಂತ್ರ‍್ಯ ಬರಲಿಲ್ಲ ಎಂಬ ಮಾತನ್ನು ಅವರು 21ನೆಯ ಶತಮಾನದಲ್ಲೂ ಮತ್ತೆ ಮತ್ತೆ ಯುವಪೀಳಿಗೆಗಳ ಮನಸ್ಸಿನಲ್ಲಿ ತುಂಬಲು ಶ್ರಮಿಸುತ್ತಿದ್ದಾರೆ.

- Advertisement -
- Advertisement -

ನಾಜಿ ಜರ್ಮನಿಯನ್ನು ಕಟ್ಟಿದ ಪ್ರಮುಖ ರೂವಾರಿ ಅಡಾಲ್ಪ್ ಹಿಟ್ಲರ್ ಎಷ್ಟು ಮುಖ್ಯನೋ, ಅವನ ಸಚಿವ ಸಂಪುಟದಲ್ಲಿ ಪ್ರಪೊಗಾಂಡ ಸಚಿವನಾಗಿದ್ದ ಗೊಬೆಲ್ಸ್ ಕೂಡ ಅಷ್ಟೇ ಪ್ರಮುಖ. ಆ ಕಾಲದ ಜರ್ಮನಿಯ, ಜರ್ಮನಿಯ ಜನಸಮುದಾಯಗಳ ವಿವೇಕ ಮತ್ತು ಸಾಮಾಜಿಕ ಸಾಮರಸ್ಯದ ಅವಸಾನಕ್ಕೂ ಇವರಿಬ್ಬರೂ ಮುಖ್ಯ ರೂವಾರಿಗಳು ಎಂದು ಬಿಡಿಸಿ ಹೇಳಬೇಕಿಲ್ಲ. ಸರಳವಾಗಿ ಹೇಳುವುದಾದರೆ, ಹಿಟ್ಲರ್‌ನ ಬಲಗೈ ಭಂಟನಾಗಿದ್ದ ಗೊಬೆಲ್ಸ್.

ನಾಜಿ ಜರ್ಮನಿಯ ರೇಡಿಯೋ, ಪತ್ರಿಕೆಗಳು, ರಂಗಭೂಮಿ, ಸಾಹಿತ್ಯ, ಸಂಗೀತ, ಪಿಲ್ಮ್‌ಗಳು ಎಲ್ಲವನ್ನೂ ಬಹಳ ಪರಿಣಾಮಕಾರಿಯಾಗಿ ಬಳಸಿ, ನಿಭಾಯಿಸಿ ಜ್ಯೂಗಳ ವಿರುದ್ಧ ಜನಾಂಗೀಯ ದ್ವೇಷದ ಮನೋಭಾವವನ್ನು ಬಹುಸಂಖ್ಯಾತ ಜರ್ಮನ್ನರಿಗೆ ಸಮರ್ಥವಾಗಿ ತುಂಬಲು ಸಫಲನಾಗಿದ್ದ. ಜರ್ಮನ್ ವಿರೋಧಿ ಸಾಹಿತ್ಯ ಎಂದು ವಿಂಗಡಿಸಿ ಸಾವಿರಾರು ಪುಸ್ತಕಗಳನ್ನು ನಡುರಸ್ತೆಯಲ್ಲಿ ಸುಟ್ಟ ದುಷ್ಕೃತ್ಯದ ಶ್ರೇಯಸ್ಸು ಇವನದ್ದೇ. ಇವತ್ತಿಗೂ ವಿಶ್ವದಾದ್ಯಂತ ಬಲಪಂಥೀಯ ಸಂಘಟನೆಗಳಿಗೆ, ಸರ್ವಾಧಿಕಾರದ ಧೋರಣೆಯ ಸರ್ಕಾರಗಳಿಗೆ ಇವನು ದ್ರೋಣಾಚಾರ್ಯ. ಇವನು ತನ್ನ ಸಿದ್ಧಾಂತಗಳನ್ನು ಪ್ರಚಾರ ನಡೆಸಲು ತೊಡಗಿಸಿಕೊಂಡ ದಾರಿಗಳನ್ನು ಇವತ್ತಿಗೂ ಇವರೆಲ್ಲಾ ಅನುಕರಿಸುತ್ತಾರೆ.

ಗೊಬೆಲ್ಸ್

ಆಸಕ್ತಿದಾಯಕವಾಗಿ ಗೊಬೆಲ್ಸ್ ತನ್ನ ಕೊನೆಯ ವರ್ಷಗಳಲ್ಲಿ ದಿನಚರಿಯನ್ನು ಬರೆದುಕೊಳ್ಳುತ್ತಿದ್ದ. ಆ ದಿನಚರಿಗಳಲ್ಲಿ ಮಹಾತ್ಮ ಗಾಂಧಿಯವರ ಬಗ್ಗೆ ಕೆಲವು ಸಾಲುಗಳನ್ನು ಮೂರು ವಿಭಿನ್ನ ದಿನಾಂಕಗಳಂದು ದಾಖಲಿಸಿದ್ದಾನೆ. ಮಹಾತ್ಮ ಗಾಂಧಿಯವರ ಬಗ್ಗೆ ಅವನಿಗಿದ್ದ ಅಸಹನೆಗೂ, ಅವನ ಕಾಲಕ್ಕೆ ಗಾಂಧಿಯವರ ಬಗ್ಗೆ ಭಾರತದಲ್ಲಿ ಆರ್.ಎಸ್.ಎಸ್ ಸಂಘಟನೆ ಮತ್ತು ಹಿಂದು ಮಹಾಸಭಾದ ಮುಖಂಡರು ತೋರಿಸುತ್ತಿದ್ದ ಅಸಹನೆ, ದ್ವೇಷಕ್ಕೂ ಬಹಳ ಹತ್ತಿರದ ಹೋಲಿಕೆಗಳಿವೆ. ಇಟಲಿಯ ಫ್ಯಾಸಿಸ್ಟ್‌ಗಳಿಂದ, ಜರ್ಮನಿಯ ನಾಜಿಗಳಿಂದ ಅಂದಿನ ಆರ್‌ಎಸ್‌ಎಸ್ ಮತ್ತು ಹಿಂದು ಮಹಾಸಭಾದ ನಾಯಕರು ಉಗ್ರ ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಂಡಿದ್ದು, ಮುಸ್ಲಿಮರ ವಿರುದ್ಧ ಜನಾಂಗೀಯ ದ್ವೇಷವನ್ನು ತೀವ್ರತರಕ್ಕೆ ತೆಗೆದುಕೊಂಡು ಹೋಗಿದ್ದು ಈಗಾಗಲೇ ಹಲವು ಬಾರಿ ದಾಖಲು ಆಗಿದೆ. ಗಾಂಧಿಯ ಬಗ್ಗೆ ದ್ವೇಷವನ್ನೂ ನಾಜಿಗಳು ಕಲಿಸಿಕೊಟ್ಟರೇ?

ಏಪ್ರಿಲ್ 6, 1942ರಂದು ತನ್ನ ಡೈರಿಯಲ್ಲಿ ಗೋಬೆಲ್ಸ್ ಗಾಂಧಿ ಬಗ್ಗೆ ಹೀಗೆ ನಮೂದಿಸಿದ್ದಾನೆ.
“… ಗಾಂಧಿ ಇಂದು ಮುದ್ರಣ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಬ್ರಿಟಿಷರ ಶೋಷಣೆಯ ವಿರುದ್ಧ ಸಂದರ್ಶನ ಪ್ರಕಟಿಸಿದ್ದಾರೆ. ಶಾಂತಿಯುತ ಪ್ರತಿಭಟನೆಯ ಹೊರತಾಗಿ ಇವರು ಬೇರೆ ಯಾವ ತಂತ್ರಗಳನ್ನು ಮುಂದುಮಾಡಿಲ್ಲ. ಶಾಂತಿಯುತ ಪ್ರತಿಭಟನೆ ಇಂಗ್ಲಿಷ್‌ ಜನಗಳಿಗೆ ಸ್ವಾಭಾವಿಕವಾಗಿ ಯಾವುದೇ ತೊಂದರೆ ನೀಡುವುದಿಲ್ಲ. ಗಾಂಧಿ ನೀತಿಗಳು ಭಾರತಕ್ಕೆ ದುರದೃಷ್ಟವನ್ನು ಹೊರತುಪಡಿಸಿ ಬೇರೇನೂ ತಂದುಕೊಟ್ಟಿಲ್ಲ. ಈ ನಾಲ್ಕು ನೂರ ಐವತ್ತು ದಶಲಕ್ಷ ಜನ ಶಕ್ತಿಯುತವಾದ ರಾಷ್ಟ್ರೀಯತೆಯ, ಭಾರತ ಸ್ವಾತಂತ್ರ‍್ಯ ಸಂಗ್ರಾಮದ ರಾಜಕೀಯವನ್ನು ಕಟ್ಟಿದ್ದರೆ ಇವತ್ತಿಗೆ ಇರುವ ಸ್ಥಿತಿಗಿಂತಲೂ ಎಷ್ಟೋ ಮುಂದೆ ಇರುತ್ತಿದ್ದರು”

ಇದು ಇವತ್ತಿಗೂ ಸಂಘ ಪರಿವಾರದವರು ಉಚ್ಚರಿಸುವ ಮಾತುಗಳು. ಗಾಂಧಿಯವರ ಅಹಿಂಸೆಯ ದಾರಿಯಿಂದ ಸ್ವಾತಂತ್ರ‍್ಯ ಬರಲಿಲ್ಲ ಎಂಬ ಮಾತನ್ನು ಅವರು 21ನೆಯ ಶತಮಾನದಲ್ಲೂ ಮತ್ತೆ ಮತ್ತೆ ಯುವಪೀಳಿಗೆಗಳ ಮನಸ್ಸಿನಲ್ಲಿ ತುಂಬಲು ಶ್ರಮಿಸುತ್ತಿದ್ದಾರೆ. ಉಗ್ರ ರಾಷ್ಟ್ರೀಯತೆಯ ಪ್ರತಿಪಾದನೆಯಿಂದ, ಜನಾಂಗೀಯ ದ್ವೇಷಗಳಿಂದ, ಹಿಂಸೆಯಿಂದ ಜರ್ಮನಿ ಮತ್ತು ಇತರ ಯೂರೋಪ್ ದೇಶಗಳು ಸರ್ವನಾಶವಾಗಿ ಹೋಗಿದ್ದರೂ, ಭಾರತದಲ್ಲಿ ಇಂದಿಗೂ ಮುಖ್ಯವಾಹಿನಿಯ ಮಾಧ್ಯಮಗಳಲ್ಲಿ, ಸಾಹಿತ್ಯ ಸಿನೆಮಾಗಳಲ್ಲಿ ಇಂತಹ ಪ್ರತಿಪಾದನೆಗಳು ಪಡೆಯುತ್ತಿರುವ ಸ್ಥಾನ ಆತಂಕ ಮೂಡಿಸುತ್ತದೆ.

ಏಪ್ರಿಲ್ 20, 1942ರಂದು ಮತ್ತೆ ಗಾಂಧಿ ಅವರ ಅಹಿಂಸಾಮಾರ್ಗವನ್ನು ಛೇಡಿಸಿ ತನ್ನ ದಿನಚರಿಯಲ್ಲಿ ಗೋಬೆಲ್ಸ್ ಈ ರೀತಿ ದಾಖಲಿಸಿಕೊಂಡಿದ್ದಾನೆ.

“ಗಾಂಧಿ ಇವತ್ತು ನೀಡಿದ ಸಂದರ್ಶನದಲ್ಲಿ ಮತ್ತೆ ಅಹಿಂಸೆಯನ್ನು ಆಚರಿಸುವಂತೆ ಕರೆಕೊಟ್ಟಿದ್ದಾರೆ. ಭಾರತವನ್ನು ಇನ್ನೂ ಹೆಚ್ಚಿನ ಸಮಸ್ಯೆಗೆ ಎಳೆಯುವುದಕ್ಕೆ ಲೆಕ್ಕಾಚಾರದ ನಡೆ ಇದು”

ಅಂದೇ ತನ್ನ ದಿನಚರಿಯಲ್ಲಿ ಹಿಟ್ಲರ್ ಹುಟ್ಟುಹಬ್ಬವನ್ನು ಆಚರಿಸಿದ ಬಗ್ಗೆ, ಅಲ್ಲಿ ತಾನು ಕೊಟ್ಟ ಭಾಷಣದ ಬಗ್ಗೆ ಬರೆದುಕೊಳ್ಳುತ್ತಾನೆ. ಅಂದರೆ ತನ್ನ ಸರ್ವಾಧಿಕಾರಿಯ ಹುಟ್ಟುಹಬ್ಬದ ಸಂಭ್ರಮಾಚರಣೆಯ ದಿನವೂ ಗಾಂಧಿ ಮತ್ತು ಅಹಿಂಸೆಯ ಬಗೆಗಿನ ಗಾಂಧಿ ಮಾತುಗಳು ಈ ಕ್ರೂರಿಯನ್ನು ಕಾಡಿವೆ. ಇವತ್ತಿಗೂ ಗಾಂಧಿ ಮತ್ತು ಗಾಂಧಿ ಹೇಳಿಕೊಟ್ಟ ಪ್ರತಿಭಟನೆಯ ಪಾಠಗಳು ಸರ್ವಾಧಿಕಾರವನ್ನು ಬಯಸುವ ವರ್ಗಕ್ಕೆ ಭೂತವಾಗಿ ಕಾಡುತ್ತಲೇ ಇದೆ. ಆದುದರಿಂದಲೇ ಗಾಂಧಿಯನ್ನು, ಗಾಂಧಿ ಹೇಳಿಕೊಟ್ಟ ಪಾಠವನ್ನು ಅನುಸರಿಸುವ ಯಾರನ್ನೇ ಆಗಲಿ, ಅವರ ಚಾರಿತ್ರ‍್ಯಹರಣಕ್ಕೆ ಈ ಗುಂಪು ಸದಾಕಾಲ ಸಿದ್ಧರಾಗಿ ಕಾದಿರುತ್ತಾರೆ.

ಕ್ವಿಟ್ ಇಂಡಿಯಾ ಚಳವಳಿಯ ಭಾಗವಾಗಿ, ನಡೆದ ಘರ್ಷಣೆಗಳಿಗೆ ಗಾಂಧಿಯವರ ಮೇಲೆ ನೇರ ಆರೋಪ ಹೊರಿಸಿ ಬಂಧಿಸಿದಾಗ, ಗಾಂಧಿ ಆತ್ಮಶುದ್ಧಿಗಾಗಿ ಜೈಲಿನಲ್ಲಿಯೇ 21 ದಿನಗಳ ಉಪವಾಸ ಮಾಡುತ್ತಾರೆ. ಗಾಂಧಿಯವರು ಉಪವಾಸ ಅಂತ್ಯ ಮಾಡಿದ ನಂತರ ಮಾರ್ಚ್ 5, 1943 ರಂದು ಗೊಬೆಲ್ಸ್ ತನ್ನ ದಿನಚರಿಯಲ್ಲಿ ಹೀಗೆ ದಾಖಲಿಸಿದ್ದಾನೆ.

“ಗಾಂಧಿ ತಮ್ಮ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ. ಅವರು ಇಡೀ ಪ್ರಪಂಚಕ್ಕೆ ತಮಾಷೆ ತೋರಿಸಿದ್ದಾರೆ ಎಂಬುದು ನನ್ನ ನಂಬಿಕೆ. ಇಂಗ್ಲಿಷ್‌ ದಿನಪತ್ರಿಕೆಗಳು ಇದನ್ನು ವರದಿ ಮಾಡಿ ತಮ್ಮದೇ ಆದ ವ್ಯಂಗ್ಯವನ್ನು ಮತ್ತು ಲೇವಡಿ ಮಾಡುವ ಭಾಷೆಯನ್ನು ಸೇರಿಸಿದ್ದಾರೆ. ಗಾಂಧಿ ಸಿಕ್ಕಾಪಟ್ಟೆ ಬುದ್ಧಿವಂತ. ಆತ ಸಂತ ಎಂದು ನಾನು ಯಾವುದೇ ಕಾರಣಕ್ಕೂ ನಂಬುವುದಿಲ್ಲ. ಆದರೆ ಈ ಬಾರಿ ಆತನ ನಾಟಕೀಯ ಉಪವಾಸದಿಂದ ಇಂಗ್ಲಿಷರು ಮೋಸಹೋಗಲಿಲ್ಲ”

ಗಾಂಧಿ ಉಪವಾಸದ ಬಗ್ಗೆ, ಗಾಂಧಿ ಅವರು ಬಯಸುತ್ತಿದ್ದ ಹಿಂದೂ-ಮುಸ್ಲಿಮ್ ಸಾಮರಸ್ಯದ ಬಗ್ಗೆ ಆರ್‌ಎಸ್‌ಎಸ್ ಕೂಡ ಹಲವು ಬಾರಿ ಮೂದಲಿಸಿರುವುದು ದಾಖಲಾಗಿದೆ. ಬಂಗಾಳದಲ್ಲಿ ಹಿಂದೂ ಮುಸ್ಲಿಮರ ಕೋಮುಗಲಭೆಯನ್ನು ಕೊನೆಗಾಣಿಸಲು ಕೊನೆಯ ಅಸ್ತ್ರ ಎಂಬುವಂತೆ ಗಾಂಧಿ ಅವರು ಉಪವಾಸ ಕೂತಾಗ, ಆರ್‌ಎಸ್‌ಎಸ್ ಮುಖವಾಣಿ ಪತ್ರಿಕೆ ಆರ್ಗನೈಸರ್‌ನಲ್ಲಿ “ರೋಮ್ ಹತ್ತಿ ಉರಿಯುವಾಗ ನೀರೋ ಪಿಟೀಲು ಬಾರಿಸುತ್ತಿದ್ದನಂತೆ” ಎಂದಿದ್ದಲ್ಲದೆ “ಇತಿಹಾಸ ನಮ್ಮ ಕಣ್ಣೆದುರಿಗೆ ಇಲ್ಲಿ ಮರುಕಳಿಸುತ್ತಿದೆ. ಕಲ್ಕತ್ತಾದಿಂದ ಮಹಾತ್ಮ ಗಾಂಧಿ ಇಸ್ಲಾಮ್‌ನನ್ನು ಹಾಡಿಹೊಗಳುತ್ತಾ, ಅಲ್ಲ ಓ ಅಕ್ಬರ್ ಕೂಗುತ್ತಿದ್ದಾರೆ ಮತ್ತು ಹಿಂದೂಗಳನ್ನು ಅದನ್ನೇ ಮಾಡಲು ಪ್ರೇರೇಪಿಸುತ್ತಿದ್ದಾರೆ ಆದರೆ ಪಂಜಾಬ್ ಮತ್ತು ಇತರೆಡೆಗಳಲ್ಲಿ ಇಸ್ಲಾಮ್ ಮತ್ತು ಅಲ್ಲ ಓ ಅಕ್ಬರ್ ಕೂಗಿನ ಹೆಸರಿನಲ್ಲಿ ಸ್ವಲ್ಪವೂ ನಾಚಿಕೆಯಿಲ್ಲದ ಬರ್ಬರ ಕ್ರೌರ್ಯ ಮತ್ತು ದೌರ್ಜನ್ಯ ನಡೆಯುತ್ತಿದೆ” ಎಂದು ಬರೆದು ಕೋಮುದಳ್ಳುರಿಯ ಬೆಂಕಿಯನ್ನು ಕಾರಿಕೊಂಡಿತ್ತು.

ಹೀಗೆ ಗಾಂಧಿ ದ್ವೇಷ, ಹಿಂಸೆಯ ಬಗ್ಗೆ ಅತಿರೇಕದ ಪ್ರತಿಪಾದನೆ, ಉಗ್ರ ಧಾರ್ಮಿಕ ರಾಷ್ಟ್ರೀಯತೆ ಮತ್ತು ಜನಾಂಗೀಯ ದ್ವೇಷಗಳು ಗಾಂಧಿ ಕೊಲೆಗೂ ಪ್ರೇರೇಪಿಸಿದ್ದಲ್ಲದೆ, ಹಲವು ಪೀಳಿಗೆಗಳ ಮನಸ್ಸುಗಳನ್ನು ಭ್ರಷ್ಟಗೊಳಿಸಿತು.

ಇಂತಹ ಚಿಂತನೆಗಳನ್ನು ಜರ್ಮನಿಯಲ್ಲಿ ಹರಡಿದ ಗೊಬೆಲ್ಸ್, ಗಾಂಧಿ ಬಗ್ಗೆ ತನ್ನ ದಿನಚರಿಯಲ್ಲಿ ಮೇಲಿನ ಹೇಳಿಕೆ ದಾಖಲಿಸಿದ ಮೇಲೆ ಸುಮಾರು ಎರಡು ವರ್ಷಗಳ ಕಾಲ ಬದುಕಿದ್ದ. ಹಿಟ್ಲರ್ ತನ್ನ ಪಿಸ್ತೂಲಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ. ಆಗ ಜರ್ಮನಿಯ ಚಾನ್ಸಲರ್ ಆಗಿ ನೇಮಕಗೊಂಡ ಗೊಬೆಲ್ಸ್ ಸರ್ವಾಧಿಕಾರ ನಡೆಸಿದ್ದು ಕೇವಲ ಒಂದು ದಿನ. ಅಂದೇ ತನ್ನ ಆರು ಜನ ಮಕ್ಕಳು ಮತ್ತು ಪತ್ನಿಗೆ ವಿಷ ಉಣ್ಣಿಸಿ ತಾನು ವಿಷ ಕುಡಿದು ಏಪ್ರಿಲ್ 30, 1945ರಂದು ತಾನಿದ್ದ ಬಂಕರ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ.

ಹಿಟ್ಲರ್, ಗೊಬೆಲ್ಸ್ ಮತ್ತು ಇತರ ನಾಜಿಗಳು ಸೃಷ್ಟಿಸಿದ ಕ್ರೌರ್ಯದ ಪಾಠಗಳನ್ನು ಭಾರತವೂ ಸೇರಿದಂತೆ ಜಗತ್ತಿನ ಹಲವೆಡೆಗಳಲ್ಲಿ ಈಗಲೂ ಅನುಕರಿಸುವ ಜನ ಇರುವುದು ದುರಂತ. ಇನ್ನಾದರೂ ಗಾಂಧಿ ಚಿಂತನೆಗಳಿಗೆ ಪ್ರಚಾರ ಸಿಕ್ಕಿ, 21ನೆಯ ಶತಮಾನದ ಅವಸಾನವನ್ನು ತಡೆಯಬೇಕಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

RTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ: ₹24 ಲಕ್ಷ ದೇವಸ್ಥಾನದ ಕಾಣಿಕೆ ಹಣ ಮನೆಗೆ ಕೊಂಡೊಯ್ದಿದ್ದ ನರೇಶ್ ಶೆಣೈ

RTI ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಲನ ಮೂಡಿಸುವಂತಹ ಮಹತ್ವದ ದಾಖಲೆಯೊಂದು ಬಹಿರಂಗವಾಗಿದೆ. ಬಾಳಿಗಾ ಹತ್ಯೆ ನಡೆಯುವುದಕ್ಕೂ ಕೆಲವೇ ದಿನಗಳ ಮುನ್ನ, ಪ್ರಕರಣದ ಪ್ರಮುಖ ಆರೋಪಿ ನರೇಶ್...

ಸಿಜೆಪಿ ಪ್ರತಿಭಟನೆ: ಪೊಲೀಸ್ ದೌರ್ಜನ್ಯಗಳ ಆರೋಪದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸುಪ್ರೀಂ ಆದೇಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ನಡೆಸಿದ ಅತಿಯಾದ ಬಲಪ್ರಯೋಗ, ಹಿಂಸಾಚಾರ ಮತ್ತು ಇತರ ಗಂಭೀರ ದುರ್ನಡತೆಯ ಆರೋಪಗಳ ತನಿಖೆಗೆ ಉನ್ನತ...

ನಕಲಿ ಔಷಧ ದಂಧೆ: ತನಿಖೆಗೆ ಕಾನೂನು ತೊಡಕು, ಎಸ್‌ಐಟಿಗೆ ವಿಶೇಷಾಧಿಕಾರಕ್ಕೆ ಬೇಡಿಕೆ

ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡೇರಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಬೆಳಕಿಗೆ ಬಂದಿರುವ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಬೃಹತ್ ನಕಲಿ ಔಷಧ ದಂಧೆಯ ತನಿಖೆಗೆ ಗಂಭೀರವಾದ ಕಾನೂನು ತೊಡಕು...

ಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ ಅಭಿಜೀತ್ ದೀಪ್ಕೆ : ಈಡೇರಿಸಲು 48 ಗಂಟೆಗಳ ಗಡುವು

ಸರ್ಕಾರಿ ಶಾಲೆಯ ದುಃಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಇತರ ಸ್ವಯಂಸೇವಕರ ಮೇಲೆ ದಾಳಿ ನಡೆಸಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು...

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...

ಕರ್ನಾಟಕದ ಒಂದೂವರೆ ಕೋಟಿ ಮತದಾರರನ್ನು ಬಾಧಿಸಿದ SIR

ಎನ್ಯುಮರೇಷನ್ ಫಾರಂ (ಗಣತಿ ನಮೂನೆ) ಸಲ್ಲಿಕೆ ಹಂತ ಮುಗಿದ ಬಳಿಕ (ಆ.18-19ರ ಪ್ರಕಾರ) ದೊರೆತ ಮಾಹಿತಿ ಪ್ರಕಾರ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ನಾಟಕದ ಸುಮಾರು ಒಂದೂವರೆ ಕೋಟಿ (...

ಮಹಾರಾಷ್ಟ್ರ: 8 ವರ್ಷದ ಬಾಲಕಿ ಶಾರ್ಟ್ಸ್ ಧರಿಸಿದ್ದಕ್ಕೆ ಕುಟುಂಬದ ಮೇಲೆ ಭೀಕರ ಹಲ್ಲೆ: ನೈತಿಕ ಪೊಲೀಸ್‌ಗಿರಿಗೆ ಸಾಕ್ಷಿಯಾದ ಸಿಂಹಗಢ ಕೋಟೆ

ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಸಿಂಹಗಢ ಕೋಟೆಯಲ್ಲಿ ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಪ್ರವಾಸಿಗರ ಮೇಲೆ ನೈತಿಕ ಪೊಲೀಸ್‌ಗಿರಿ (ಮೊರಾಲ್ ಪೋಲಿಸಿಂಗ್) ನಡೆಸಿ ಭೀಕರ ಹಲ್ಲೆ ನಡೆಸಲಾಗಿದೆ. ಎಂಟು ವರ್ಷದ ಚಿಕ್ಕ ಬಾಲಕಿಯೊಬ್ಬಳು...

ಜೈಪುರದಲ್ಲಿ ಸರ್ಕಾರಿ ಶಾಲೆ ತಪಾಸಣೆ ವೇಳೆ ಭೀಕರ ಹಿಂಸಾಚಾರ: ‘ಸಿಜೆಪಿ’ನಾಯಕ ಅಶುತೋಷ್ ರಂಕಾ ತಂಡದ ಮೇಲೆ ದಾಳಿ, ಕಲ್ಲು ತೂರಾಟ, ಕಾರು ಧ್ವಂಸ

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರ ಸಮೀಪದ ಬಾಗ್ರು ವಿಧಾನಸಭಾ ಕ್ಷೇತ್ರದ ರಾಂಪುರ ಕನ್ವರ್‌ಪುರ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಸ್ಥಿತಿಗತಿಗಳನ್ನು ಪರಿಶೀಲಿಸಲು ತೆರಳಿದ್ದ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಕಾರ್ಯಕರ್ತರ ಮೇಲೆ ಉಗ್ರ...

BJP 40 ಕ್ಷೇತ್ರಗಳಲ್ಲಿ ಸೋಲಲು ಕಾಂಗ್ರೆಸ್ ಜಾಹೀರಾತೇ ಕಾರಣ: ಹೈಕೋರ್ಟ್‌ಗೆ ಬಿಜೆಪಿ ದೂರು

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳ ಮೊದಲು ಕಾಂಗ್ರೆಸ್ ಪತ್ರಿಕೆಗಳಲ್ಲಿ ಪ್ರಕಟಿಸಿದ್ದ ‘ಭ್ರಷ್ಟಾಚಾರದ ರೇಟ್ ಕಾರ್ಡ್’ (Corruption Rate Card) ಜಾಹೀರಾತಿನಿಂದಾಗಿ ತಾನು 40 ಕ್ಷೇತ್ರಗಳಲ್ಲಿ ಸೋಲು ಅನುಭವಿಸಬೇಕಾಯಿತು ಎಂದು ಭಾರತೀಯ...

“ಎಫ್‌ಐಆರ್ ದಾಖಲಾಗದೆ ಇಲ್ಲಿಂದ ಕದಲಲ್ಲ” : ಡಿಸಿಪಿ ಕಚೇರಿ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ

ಜುಲೈ 20ರಂದು ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪೆಲೆಟ್ ಗನ್‌ ಬಳಕೆ, ಲಾಠಿ ಚಾರ್ಜ್ ಸೇರಿದಂತೆ ಪೊಲೀಸರಿಂದ ವಿವಿಧ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ...