Homeಕರ್ನಾಟಕದೆಹಲಿಯ ಐತಿಹಾಸಿಕ ರೈತ ಹೋರಾಟದಲ್ಲಿ ಭಾಗಿಯಾಗಿರುವ ಕರ್ನಾಟಕದ ರೈತ ಮುಖಂಡರು ಹೇಳಿದ್ದೇನು?

ದೆಹಲಿಯ ಐತಿಹಾಸಿಕ ರೈತ ಹೋರಾಟದಲ್ಲಿ ಭಾಗಿಯಾಗಿರುವ ಕರ್ನಾಟಕದ ರೈತ ಮುಖಂಡರು ಹೇಳಿದ್ದೇನು?

'ಸರ್ಕಾರ ಪ್ರತಿಭಟನಾಕಾರರನ್ನು ಭಯೋತ್ಪಾದಕರು, ಖಾಲಿಸ್ತಾನಿಗಳು ಎಂದು ಅಪಪ್ರಚಾರ ಮಾಡುತ್ತಿದೆ. ಅಷ್ಟಕ್ಕೂ ಅವರು ಭಯೋತ್ಪಾದಕರಾದರೆ ಸರ್ಕಾರವೇಕೆ ಪ್ರತಿಭಟನಾಕಾರರನ್ನು ಎರೆಡೆರಡು ಬಾರಿ ಮಾತುಕತೆಗೆ ಕರೆದಿದೆ?'

- Advertisement -
- Advertisement -

ಸುಗ್ರೀವಾಜ್ಞೆಗಳ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾನೂನುಗಳ ವಿರುದ್ಧ ದೇಶದ ರಾಜಧಾನಿಯಲ್ಲಿ ನಡೆಯುತ್ತಿರುವ ದೆಹಲಿ ಚಲೋ ಆಂದೋಲನ ಇಂದಿಗೆ 6ನೇ ದಿನಕ್ಕೆ ಕಾಲಿಟ್ಟಿದೆ. ಲಕ್ಷಾಂತರ ರೈತರು ದೆಹಲಿಯ ಐದು ಪ್ರಮುಖ ಗಡಿಗಳಲ್ಲಿ ಜಮಾಯಿಸಿದ್ದು ಇವರನ್ನು ಸೇರಲು ಇನ್ನಷ್ಟು ರೈತರು ಹಲವು ರಾಜ್ಯದಿಂದ ಹೊರಟಿದ್ದಾರೆ. ಪ್ರತಿಭಟನಾಕಾರರು ಸರ್ಕಾರ ಜಾರಿಗೆ ತಂದಿರುವ ಮೂರು ಕಾನೂನುಗಳನ್ನು ವಾಪಾಸು ಪಡೆಯಬೇಕು ಇಲ್ಲವಾದಲ್ಲಿ ಪ್ರತಿಭಟನೆಯಿಂದ ಕದಲುವ ಮಾತೇ ಇಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ರಾಷ್ಟ್ರದ ರಾಜಧಾನಿ ದೆಹಲಿಗೆ ನಿಕಟದಲ್ಲಿರುವ ರಾಜ್ಯಗಳ ರೈತರಿಗೆ ಹೋಲಿಸಿದರೆ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರೈತರು ಭಾರಿ ಸಂಖ್ಯೆಯಲ್ಲಿ ಭಾಗಿಯಾಗಿಲ್ಲವಾದರೂ, ಈ ಐತಿಹಾಸಿಕ ಹೋರಾಟದಲ್ಲಿ ಗಮನಾರ್ಹ ಸಂಖ್ಯೆಯಲ್ಲಿ ಭಾಗಿಯಾಗಿದ್ದಾರೆ ಮತ್ತು ಇನ್ನೂ ಸೇರಿಕೊಳ್ಳುತ್ತಿದ್ದಾರೆ. ಕರ್ನಾಟಕವೊಂದರಿಂದಲೇ 9 ಪ್ರಮುಖ ರೈತ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಿವೆ.

ಸಿಂಧೂ ಸ್ವಾಮಿ

ಕಳೆದ ಹಲವಾರು ವರ್ಷಗಳಿಂದ ರೈತ ಹೋರಾಟದ ಭಾಗವಾಗಿರುವ ತುಮಕೂರಿನ ಜ್ಞಾನ ಸಿಂಧೂ ಸ್ವಾಮಿ ಅವರು ಹೇಳುವಂತೆ, “ಇದೊಂದು ಐತಿಹಾಸಿಕ ಹೋರಾಟವಾಗಿದೆ. ನವೆಂಬರ್ 22ರಂದು ಕರ್ನಾಟಕದ ಹಲವು ಪ್ರಮುಖ ರೈತ ಸಂಘಟನೆಗಳ ಜೊತೆಗೂಡಿ, ನಾವೆಲ್ಲಾ ದೆಹಲಿಗೆ ಹೊರಟಿದ್ದೆವು. ನಮ್ಮ ಪ್ರಯಾಣದ ನಡುವೆ ಆಂಧ್ರ ಪ್ರದೇಶ, ತೆಲಂಗಾಣ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ತಾನ ಸೇರಿದಂತೆ ಪ್ರತಿದಿನವು ನಮ್ಮ ತಂಡ ಪತ್ರಿಕಾಗೋಷ್ಠಿ, ಸಭೆಗಳನ್ನು ನಡೆಸಿದ್ದೇವೆ. ಜೊತೆಗೆ ಪ್ರತಿ ರಾಜ್ಯದಲ್ಲೂ ನಮಗೆ ಭಾರಿ ಜನಸ್ಪಂದನೆ ದೊರೆತಿದ್ದಲ್ಲದೆ, ಅಲ್ಲಿನ ರೈತರ ಜಾಥಾ ಕೂಡಾ ನಮ್ಮನ್ನು ಸೇರಿಕೊಂಡು ನಾವು ರಾಜಸ್ತಾನದವರೆಗೂ ಯಾವುದೇ ತೊಂದರೆಯಿಲ್ಲದೆ ತಲುಪಿದೆವು.

“ಆದರೆ ರಾಜಸ್ತಾನ-ಉತ್ತರ ಪ್ರದೇಶ ಗಡಿಯಲ್ಲಿ ನಮಗೆ ತೊಂದರೆಗಳಾಯಿತು. ಗಡಿಯಲ್ಲಿ ನಿಂತಿದ್ದ ಉತ್ತರ ಪ್ರದೇಶ ಪೊಲೀಸರು ಪ್ರತಿಯೊಂದು ವಾಹನಗಳನ್ನು ತಪಾಸಣೆ ಮಾಡುತ್ತಿದ್ದರು. ಮಧ್ಯಪ್ರದೇಶದಲ್ಲಿ ನಮ್ಮ ಜೊತೆ ಸೇರಿಕೊಂಡಿದ್ದ ನರ್ಮದಾ ಬಚಾವೋ ಆಂದೋಲನದ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ಬಂಧಿಸಿದ್ದರಲ್ಲದೆ, ನಮ್ಮನ್ನು ಮುಂದುವರೆಯಲು ತಡೆಯೊಡ್ಡಿದರು. ಇದರ ವಿರುದ್ದ ನವೆಂಬರ್ 25ರಿಂದ ನಾವು ಎರಡು ದಿನ ಹೆದ್ದಾರಿಯನ್ನು ತಡೆದು ಪ್ರತಿಭಟನೆ ಮಾಡಿದೆವು. ಈ ಹೊತ್ತಿನಲ್ಲಿ ಯುಪಿ ಪೊಲೀಸರು ನಿರಂತವಾಗಿ ಎರಡು ದಿನ ನಮಗೆ ತೊಂದರೆಗಳನ್ನು ಕೊಟ್ಟಿದ್ದಾರೆ” ಎಂದು ಹೇಳಿದರು.

“ಈ ಪ್ರತಿಭಟನೆಯ ನಂತರ ಯುಪಿ ಪೊಲೀಸರು ನಮ್ಮನ್ನು ದೆಹಲಿಗೆ ಪ್ರಯಾಣಿಸಲು ಅನುಮತಿ ನೀಡಿದರಾದರೂ, ಅವರ ಎಸ್ಕಾರ್ಟ್ ಮುಖಾಂತರ ದೆಹಲಿಯ ಬರಾರಿ ನಿರಂಕರಿ ಮೈದಾನಕ್ಕೆ ಕರೆದುಕೊಂಡು ಬಂದರು. ಈ ಹೊತ್ತಿಗೆ ಟಿಕ್ರಿ ಗಡಿಯಿಂದ ರೈತರನ್ನು ಅಲ್ಲಿಗೆ ಕರೆತರಲಾಗಿತ್ತು. ಆದರೆ ರೈತರನ್ನು ಬಂಧಿಸಲು ಬೇಕಾಗಿಯೇ ಈ ಮೈದಾನವನ್ನು ಬಳಸಲು ದೆಹಲಿ ಸರ್ಕಾರವನ್ನು ಕೇಂದ್ರ ಸರ್ಕಾರ ಕೇಳಿತ್ತು ಎಂದು ನಮಗೆ ನಂತರವೇ ಅರಿವಾಗಿದ್ದು. ಪ್ರತಿಭಟನಾಕಾರರನ್ನು ಬೇರೆ ಬೇರೆ ಕಡೆಗೆ ಸೇರಿಸಿ ಅಲ್ಲಿ ಬಂಧಿಸಿಡುವ ಕುತಂತ್ರವನ್ನು ಕೇಂದ್ರ ಸರ್ಕಾರ ಹೂಡಿತ್ತು. ಇದು ತಿಳಿದ ನಂತರ ರೈತರು ಅಲ್ಲಿಗೆ ಬರಲು ನಿರಾಕರಿಸಿದರು. ಇದರ ನಂತರ ರೈತರು ನಿರಂಕರಿ ಕ್ರೀಡಾಂಗಣಕ್ಕೆ ಬರದೆ ಗಡಿಯಲ್ಲೇ ಪ್ರತಿಭಟನೆಯನ್ನು ಮುಂದುವರೆಸಿದ್ದು, ದೆಹಲಿಯನ್ನು ಸಂಪರ್ಕಿಸುವ ಐದು ಗಡಿಯಲ್ಲಿ ಜಮಾಯಿಸಿರುವ ಕಾರಣಕ್ಕೆ ರಸ್ತೆಗಳು ಬಂದಾಗಿದೆ. ನಮ್ಮ ಹೋರಾಟದ ಗುರಿ ಒಂದೇ ಆಗಿದ್ದು, ಕೇಂದ್ರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನನ್ನು ವಾಪಾಸು ಪಡೆಯಬೇಕು ಎಂದಷ್ಟೇ” ಎಂದು ಜ್ಞಾನ ಸಿಂಧು ಸ್ವಾಮಿ ಹೇಳಿದರು.

ಟಿ.ಯಶವಂತ

ನವೆಂಬರ್ 21ರಂದು ಬೆಂಗಳೂರಿನಿಂದ ಹೊರಟು ಇಲ್ಲಿಯತನಕ ದೆಹಲಿ ರೈತ ಹೋರಾಟದಲ್ಲಿ ಪಾಲ್ಗೊಂಡಿರುವ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಸಮಿತಿ ಸದಸ್ಯ ಟಿ.ಯಶವಂತ ಅವರು ಹೇಳುವಂತೆ, “ರಾಜಸ್ತಾನದ ಗಡಿಯಲ್ಲಿ ಯುಪಿ ಪೊಲೀಸರು ನಮ್ಮನ್ನು ತಡೆದಾಗ ಕೆಲವು ಸಂಘ ಪರಿವಾರದ ಪುಂಡರು ಪ್ರಯಾಣಿಕರ ಸೋಗಿನಲ್ಲಿ ಬಂದು ಮಹಿಳಾ ಹೋರಾಟಗಾರರನ್ನು ಅಶ್ಲೀಲವಾಗಿ ನಿಂದನೆ ಮಾಡಿ ನಮ್ಮನ್ನು ಪ್ರಚೋದಿಸಲು ನೋಡಿದ್ದರು. ಅದೇ ಪ್ರಯತ್ನವನ್ನು ಮರುದಿನ ಬೆಳಿಗ್ಗೆ ಕೂಡಾ ಮುಂದುವರೆಸಿದ್ದರು. ಆದರೆ ಹೋರಾಟಗಾರರು ವಿಚಲಿತರಾಗದೆ ಶಾಂತವಾಗಿ ಇದ್ದುದರಿಂದ ಅವರ ಪ್ರಯತ್ನ ವಿಫಲವಾಯಿತು” ಎನ್ನುತ್ತಾರೆ.

“ದೆಹಲಿಯ ಐದು ಗಡಿಗಳು ಈಗಾಗಲೇ ಬಂದಾಗಿದೆ, ಜೊತೆಗೆ ಅಲ್ಲಿ ಇನ್ನೂ ಹೆಚ್ಚಿನ ರೈತರು ಬಂದು ಸೇರುತ್ತಿದ್ದಾರೆ. ಅಲ್ಲದೆ ಇಂದು ಉತ್ತರ ಪ್ರದೇಶದ ಗಾಝಿಯಾಬಾದ್‍ನಲ್ಲಿ ಇವತ್ತು ಕೂಡ ಹೆಚ್ಚಿನ ಜನರು ಬಂದು ಸೇರುತ್ತಿದ್ದಾರೆ. ಹೋರಾಟ ಇನ್ನೂ ತೀವ್ರಗೊಳ್ಳುತ್ತದೆ.

ಕೇಂದ್ರ ಸರ್ಕಾರ ರೈತ ಸಂಘಟನೆಗಳಲ್ಲಿ ಒಡಕು ತರಲು ಪ್ರಯತ್ನಿಸಿದರೂ ಅವುಗಳನ್ನು ರೈತರು ಹಿಮ್ಮೆಟ್ಟಿಸಿದ್ದಾರೆ. ಇಡೀ ಪ್ರತಿಭಟನೆ ರೈತ ವಿರೋಧಿ ಕಾನೂನುಗಳನ್ನು ವಾಪಾಸು ಪಡೆಯಬೇಕು ಎನ್ನುವುದರ ಬಗ್ಗೆ ಅಚಲವಾಗಿದೆ” ಎಂದರು.

ನರೇಂದ್ರ ಮೋದಿ ಸರ್ಕಾರ ಕೃಷಿಯನ್ನು ಕಾರ್ಪೊರೆಟೀಕರಣ ಮಾಡಲು ಹಾಗೂ ಬಹುರಾಷ್ಟ್ರೀಯ ಕಂಪೆನಿಗಳಿಗೆ ಕೊಡಲು ಭಾರಿ ಆತುರಪಡುತ್ತಿದೆ. ಈ ಮಟ್ಟದ ಪ್ರತಿಭಟನೆಗಳನ್ನು ಅವರು ನಿರೀಕ್ಷೆ ಮಾಡಿರಲಿಲ್ಲ. ದೆಹಲಿ ಸುತ್ತ ಕೋಟ್ಯಾಂತರ ರೈತರು ನೆರೆದಿದ್ದರೂ ಕೇಂದ್ರ ಸರ್ಕಾರ ಇನ್ನೂ ಕೃಷಿ ಕಾನೂನನ್ನು ಸಮರ್ಥನೆ ಮಾಡುತ್ತಲೇ ಇದೆ. ಒಂದು ಕಡೆ ರೈತರನ್ನು ಮಾತುಕತೆಗೆ ಕರೆಯುತ್ತಾ ಇನ್ನೊಂದು ಕಡೆ ರೈತರನ್ನು ಅವರು ರೈತರೇ ಅಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆಕ್ಟೋಪಸ್‍ನ ಕಾಲುಗಳು ಬೇರೆಬೇರೆ ಕಡೆ ಹರಡಿ ಬೇರೆ ಬೇರೆ ರೀತಿಯಲ್ಲಿ ವರ್ತಿಸುತ್ತವಾದರೂ ಅವನ್ನು ಕೇವಲ ಒಂದೇ ಮೆದುಳು ಹೇಗೆ ನಿಯಂತ್ರಿಸುತ್ತದೆಯೋ ಹಾಗೆಯೇ ಕೇಂದ್ರ ಸರ್ಕಾರ ವರ್ತಿಸುತ್ತಿದೆ. ಇದರ ಮೆದುಳನ್ನು ಆರ್‌ಎಸ್‍ಎಸ್ ನಿರ್ವಹಿಸುತ್ತಾ ಇದೆ. ಒಟ್ಟಿನಲ್ಲಿ ಇವರು ರೈತರ ಈ ಹೋರಾಟವನ್ನು ಕುಖ್ಯಾತಿಗೊಳಿಸಲು ಹಾಗೂ ರೈತ ಸಂಘಟನೆಗಳ ನಡುವೆ ಒಡಕು ತರಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಅವರು ಅಪಪ್ರಚಾರ ಮಾಡಿದಂತೆ ಇಲ್ಲಿ ರೈತರಲ್ಲಿ ಆಕ್ರೋಶ ಹೆಚ್ಚುತ್ತಿದೆ” ಎನ್ನುತ್ತಾರೆ ಯಶವಂತ್.

“ಈ ಕರಾಳ ಕಾಯದೆಗಳನ್ನು ವಾಪಾಸು ಪಡೆಯುವವರೆಗೂ ಈ ಪ್ರತಿಭಟನೆ ಮುಂದುವರೆಯುತ್ತದೆ, ಇದಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನು ಮಾಡಿಯೇ ರೈತರು ದೆಹಲಿಗೆ ಬಂದಿದ್ದಾರೆ. ಪ್ರತಿಭಟನೆಯಲ್ಲಿ ಪಂಜಾಬ್ ಮತ್ತು ಹರಿಯಾಣದ ರೈತರು ಮುಂಚೂಣಿಯಲ್ಲಿದ್ದಾರೆಂಬುದು ನಿಜವಾದರೂ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಉತ್ತರಪ್ರದೇಶ, ಉತ್ತರಾಖಂಡ ಹಾಗೂ ರಾಜಸ್ತಾನದ ರೈತರು ಕೂಡಾ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ” ಎಂದು ಯಶವಂತ್ ತಿಳಿಸಿದರು.

ಶಿವಕುಮಾರ್ ಗುಳಘಟ್ಟ

ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಕರ್ನಾಟಕ ಜನಶಕ್ತಿ ಸಂಘಟನೆಯ ಶಿವಕುಮಾರ್ ಗುಳಘಟ್ಟ, “ಪ್ರತಿಭಟನೆಯಲ್ಲಿ ರೈತ ಮಹಿಳೆಯರ ಸಂಖ್ಯೆ ಕಡಿಮೆಯಿರುವುದನ್ನು ಬಿಟ್ಟರೆ ಉಳಿದಂತೆ ಪ್ರತಿಭಟನೆ ಯಶಸ್ವಿಯಾಗಿ ಮುಂದುವರೆಯುತ್ತಿದೆ. ಸರ್ಕಾರ ಪ್ರತಿಭಟನಾಕಾರರನ್ನು ನಕ್ಸಲೈಟ್ ಹಾಗೂ ಖಾಲಿಸ್ತಾನಿಗಳು ಎಂದು ಅಪಪ್ರಚಾರ ಮಾಡುತ್ತಿದೆ. ಅವರ ವೈಫಲ್ಯವನ್ನು ಮುಚ್ಚಿಕೊಳ್ಳಲು ಬೇಕಾಗಿಯೇ ಇಂತಹ ಪದಗಳನ್ನು ಬಳಸುತ್ತಿದ್ದಾರೆ. ಅಷ್ಟಕ್ಕೂ ಅವರು ಭಯೋತ್ಪಾದಕರಾದರೆ ಸರ್ಕಾರವೇಕೆ ಪ್ರತಿಭಟನಾಕಾರರನ್ನು ಎರೆಡೆರಡು ಬಾರಿ ಮಾತುಕತೆಗೆ ಕರೆದಿದೆ?” ಎಂದು ಪ್ರಶ್ನಿಸುತ್ತಾರೆ.

“ಮುಖ್ಯವಾಗಿ ಕೇಂದ್ರ ಸರ್ಕಾರ ಚಳವಳಿಯನ್ನು ಒಡೆಯಲು ಪ್ರಯತ್ನಿಸುತ್ತಿದೆ. ಆದರೆ ರೈತರು ಈಗಾಗಲೇ ತಮ್ಮ ಆರು ತಿಂಗಳ ಆಹಾರವನ್ನು ತಮ್ಮೊಂದಿಗೆ ತಂದಿದ್ದು, ತಮ್ಮ ಎಲ್ಲಾ ಕೆಲಸಗಳನ್ನು ಮುಗಿಸಿಕೊಂಡೇ ಬನ್ನಿ, ನಾವು ಕಾಯುತ್ತೇವೆ ಎಂದು ಸರ್ಕಾರದೊಂದಿಗೆ ಹೇಳುತ್ತಿದ್ದಾರೆ. ಒಟ್ಟಾರೆಯಾಗಿ ಇದೊಂದು ಯಶಸ್ವಿ ಜನಚಳವಳಿಯಾಗಿದ್ದು, ಕಾನೂನನ್ನು ವಾಪಾಸು ಪಡೆಯದೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ರೈತರು ಗಟ್ಟಿಯಾಗಿದ್ದಾರೆ” ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರ ದೆಹಲಿ ಚಲೋ ನಂತರ ರೈತ ಮುಖಂಡರನ್ನು ಡಿಸೆಂಬರ್ 1 ಮತ್ತು 3 ರಂದು ಎರುಡು ಬಾರಿ ಮಾತುಕತೆಗೆ ಕರೆದಿತ್ತಾದರೂ ಅದು ಮುರಿದುಬಿದ್ದಿದೆ. ಹೊಸ ಕಾನೂನಿನ ಬಗ್ಗೆ ಚರ್ಚೆ ಮಾಡಲು ಸರ್ಕಾರ ಹಾಗೂ ರೈತರನ್ನೊಳಗೊಂಡ ಸಮಿತಿಯನ್ನು ರಚಿಸುವುದಾಗಿ ಹೇಳಿದೆಯಾದರೂ ರೈತರು ಅದನ್ನು ಒಪ್ಪದೆ, ರೈತ ವಿರೋಧಿ ಕಾನೂನನ್ನು ವಾಪಾಸು ಪಡೆಯಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಹೋರಾಟ ಇನ್ನೂ ಮುಂದುವರೆಯಲಿದ್ದು ಸರ್ವಾಧಿಕಾರಿ ಧೋರಣೆಯ ಸರ್ಕಾರದ ಬುಡಕ್ಕೆ ರೈತನ ನೇಗಿಲು ಆಳವಾಗಿ ಹುದುಗಿದೆ. ಹೋರಾಟ ಮುಂದುವರೆದಿದೆ…


ಇದನ್ನೂ ಓದಿ: ದೆಹಲಿಯಲ್ಲಿ ರೈತರ ಗುಡುಗು: ಇಂದಿನ ಹೋರಾಟದ ಚಿತ್ರಗಳು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...