Homeಮುಖಪುಟ‘ಪ್ರಧಾನಿಯ ಭದ್ರತಾ ಲೋಪದ ಬಗ್ಗೆ ಎಲ್ಲವನ್ನೂ ನೀವೇ ತೀರ್ಮಾನಿಸಿದರೆ ನಮಗೇನು ಕೆಲಸ?: ಒಕ್ಕೂಟ ಸರ್ಕಾರಕ್ಕೆ ಸುಪ್ರೀಂಕೋರ್ಟ್‌

‘ಪ್ರಧಾನಿಯ ಭದ್ರತಾ ಲೋಪದ ಬಗ್ಗೆ ಎಲ್ಲವನ್ನೂ ನೀವೇ ತೀರ್ಮಾನಿಸಿದರೆ ನಮಗೇನು ಕೆಲಸ?: ಒಕ್ಕೂಟ ಸರ್ಕಾರಕ್ಕೆ ಸುಪ್ರೀಂಕೋರ್ಟ್‌

ನಿಮ್ಮ ಶೋಕಾಸ್‌ ನೋಟಿಸ್‌ ಸಂಪೂರ್ಣ ತದ್ವಿರುದ್ಧವಾಗಿದೆ ಎಂದು ಸುಪ್ರೀಂ ಒಕ್ಕೂಟ ಸರ್ಕಾರದ ಕಿವಿ ಹಿಂಡಿದೆ

- Advertisement -
- Advertisement -

ಪಂಜಾಬ್‌ನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯ ಭದ್ರತಾ ಲೋಪಗಳ ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಈ ಮಧ್ಯೆ, ಘಟನೆಯ ಬಗ್ಗೆ ತನಿಖೆ ನಡೆಸಲು ರಚಿಸಿದ್ದ ಸಮಿತಿಗಳನ್ನು ತಡೆಹಿಡಿಯುವಂತೆ ಒಕ್ಕೂಟ ಮತ್ತು ಪಂಜಾಬ್ ಸರ್ಕಾರಗಳೆರಡಕ್ಕೂ ಕೇಳಿಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಪ್ರಕರಣದ ಬಗ್ಗೆ ಲಾಯರ್ಸ್ ವಾಯ್ಸ್ ಎಂಬ ಸಂಸ್ಥೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ಆರೋಪ: 100 ಕ್ಕೂ ಹೆಚ್ಚು ಅಪರಿಚಿತರ ವಿರುದ್ಧ ಎಫ್‌ಐಆರ್

ಶುಕ್ರವಾರದಂದು ಸರ್ವೋಚ್ಚ ನ್ಯಾಯಾಲಯವು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಪ್ರಧಾನಮಂತ್ರಿಯ ಪಂಜಾಬ್ ಭೇಟಿಯಲ್ಲಿ “ಬೃಹತ್ ಭದ್ರತಾ ಲೋಪ” ಉಂಟಾದಾಗ ಮಾಡಿದ ವ್ಯವಸ್ಥೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು “ಭದ್ರಪಡಿಸಿ ಮತ್ತು ಸಂರಕ್ಷಿಸಲು” ನಿರ್ದೇಶಿಸಿತ್ತು.

ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳು ಪ್ರತ್ಯೇಕವಾಗಿ ರಚಿಸಿರುವ ತನಿಖಾ ಸಮಿತಿಗಳನ್ನು ತಡೆದಿಟ್ಟು, ಜನವರಿ 10 ರವರೆಗೆ ಈ ವಿಷಯವನ್ನು ನ್ಯಾಯಾಲಯವು ಮತ್ತೆ ಕೈಗೆತ್ತಿಕೊಳ್ಳುವವರೆಗೆ ತಮ್ಮ ವಿಚಾರಣೆಯನ್ನು ಮುಂದುವರಿಸಬಾರದು ಎಂದು ಅದು ಹೇಳಿದೆ. ಆದರೆ ನ್ಯಾಯಪೀಠವು ಇದನ್ನು ಆದೇಶದ ಭಾಗವಾಗಿ ನಿರ್ದೇಶಿಸದೆ, ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸುವಂತೆ ವಕೀಲರನ್ನು ಕೇಳಿಕೊಂಡಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ವಿವರವಾದ ಆದೇಶಗಳನ್ನು ನೀಡಲಿದೆ.

ಸಿಜೆಐ ಎನ್‌ವಿ ರಮಣ, ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರ ಪೀಠವು ಅರ್ಜಿಯ ವಿಚಾರಣೆ ನಡೆಸುತ್ತಿದೆ. ವಿಚಾರಣೆ ವೇಳೆ ಒಕ್ಕೂಟ ಸರ್ಕಾರವನ್ನು ಸುಪ್ರೀಂಕೊರ್ಟ್ ತರಾಟೆಗೂ ತೆಗೆದುಕೊಂಡಿದೆ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ಆರೋಪ: ಹೊಸ ವಿಡಿಯೊ ವೈರಲ್ ನೊಂದಿಗೆ ಮತ್ತಷ್ಟು ಪ್ರಶ್ನೆಗಳು

ಒಕ್ಕೂಟ ಸರ್ಕಾರದ ಪರವಾಗಿ ಹಾಜರಾದ ಸಾಲಿಟರ್‌ ಜನರಲ್‌ ತುಷಾರ್ ಮೆಹ್ತಾ, “ಪಂಜಾಬ್ ಪೊಲೀಸರಿಂದ ಯಾವುದೇ ಗುಪ್ತಚರ ಮಾಹಿತಿ ಇರಲಿಲ್ಲ. ಈ ಮಾಹಿತಿ ನೀಡುವುದು ಅವರ ಜವಾಬ್ದಾರಿಯಾಗಿದೆ. ಮಾರ್ಗದಲ್ಲಿ ಪ್ರತಿಭಟನಾಕಾರರ ಗುಂಪು ಗುಂಪು ಸೇರಿದೆ ಎಂದು ಬೆಂಗಾವಲು ಪಡೆಗೆ ಯಾವುದೇ ಸೂಚನೆ ನೀಡಿಲ್ಲ, ಸಂಪೂರ್ಣ ಗುಪ್ತಚರ ವೈಫಲ್ಯ ಕಂಡುಬಂದಿದೆ. ಪಂಜಾಬ್ ಪೊಲೀಸ್ ಡಿಜಿ ಅವರು ಪ್ರಧಾನಿ ಬೆಂಗಾವಲು ಪಡೆಗೆ ಸ್ಪಷ್ಟ ಸಂವಹನವನ್ನು ನೀಡಬೇಕಿತ್ತು.

ಇದು ಎಸ್‌ಪಿಜಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಇದಕ್ಕೆಲ್ಲಾ ಪೊಲೀಸ್ ಅಧಿಕಾರಿಗಳೇ ಹೊಣೆ. ಆದರೆ ರಾಜ್ಯ ಸರ್ಕಾರ ಅವರನ್ನು ರಕ್ಷಿಸುತ್ತಿದೆ ಎಂಬುದು ತುಂಬಾ ಗಂಭೀರ ವಿಚಾರವಾಗಿದೆ. ಕೇಂದ್ರ ಸಮಿತಿ ರಚಿಸಬೇಕಿತ್ತು” ಎಂದು ಹೇಳಿದ್ದಾರೆ.

ತುಷಾರ್ ಮೆಹ್ತಾ ಅವರಿಗೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಹಿಮಾ ಕೊಹ್ಲಿ, “ನೀವು ಈಗಾಗಲೇ ಶೋಕಾಸ್ ನೋಟಿಸ್‌ಗಳಲ್ಲಿ ಎಲ್ಲವನ್ನೂ ಊಹಿಸಿದರೆ ನ್ಯಾಯಾಲಯಕ್ಕೆ ಬರುವುದರಲ್ಲಿ ಏನು ಪ್ರಯೋಜನ?” ಎಂದು ಕೇಳಿದ್ದಾರೆ.

ಇದನ್ನೂ ಓದಿ:ಭದ್ರತಾ ಲೋಪ: ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್, ಪಂಜಾಬ್ ಸರ್ಕಾರದಿಂದ ತನಿಖಾ ತಂಡ…10 ಪಾಯಿಂಟ್ಸ್‌‌

“ನಿಮ್ಮ ಶೋಕಾಸ್‌ ನೋಟಿಸ್ ಸಂಪೂರ್ಣವಾಗಿ ಸ್ವಯಂ ವ್ಯತಿರಿಕ್ತವಾಗಿದೆ. ನೀವು ಎಸ್‌ಪಿಜಿ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ವಿಚಾರಣೆ ಮಾಡಲು ಸಮಿತಿಯನ್ನು ರಚಿಸುತ್ತೀರಿ. ಇದರ ನಂತರ ನೀವು ರಾಜ್ಯದ ಮುಖ್ಯ ಕಾರ್ಯದರ್ಶಿ(ಸಿಎಸ್‌) ಮತ್ತು ಪೊಲೀಸ್ ಮಹಾನಿರ್ದೇಶಕ(ಡಿಜಿ)ರನ್ನು ತಪ್ಪಿತಸ್ಥರೆಂದು ಪರಿಗಣಿಸುತ್ತೀರಿ. ಅವರನ್ನು ಅಪರಾಧಿ ಎಂದು ಪರಿಗಣಿಸಿದವರು ಯಾರು? ಅವರನ್ನು ಯಾರು ಪ್ರಶ್ನಿಸಿದ್ದಾರೆ?” ಎಂದು ಪೀಠದ ಮತ್ತೊಬ್ಬ ನ್ಯಾಯಮೂರ್ತಿ ಸೂರ್ಯ ಕಾಂತ್ ಕೇಳಿದ್ದಾರೆ.

“ಡಿಜಿ ಮತ್ತು ಸಿಎಸ್ ನಮ್ಮ ಮುಂದೆ ಬಂದಿದ್ದಾರೆ. ಲೋಪಕ್ಕೆ ಯಾರು ಹೊಣೆ ಎಂದು ನಾವು ತಿಳಿದುಕೊಳ್ಳುತ್ತೇವೆ. ರಾಜ್ಯ ಸರ್ಕಾರ ಮತ್ತು ಅರ್ಜಿದಾರರು ನ್ಯಾಯಯುತ ವಿಚಾರಣೆಯನ್ನು ಬಯಸುತ್ತಾರೆ. ನೀವು ಕೂಡಾ ನ್ಯಾಯಯುತ ವಿಚಾರಣೆಯನ್ನು ವಿರೋಧಿಸಲು ಸಾಧ್ಯವಿಲ್ಲ. ಹಾಗಾದರೆ ನಿಮ್ಮಿಂದ ಈ ಆಡಳಿತಾತ್ಮಕ ಮತ್ತು ಸತ್ಯಶೋಧನೆಯ ವಿಚಾರಣೆ ಏಕೆ?” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಕೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಸಿದ ತುಷಾರ್ ಮೆಹ್ತಾ, “ಶೋಕಾಸ್ ನೋಟಿಸ್‌ಗಳ ಅಡಿಪಾಯವು ಬ್ಲೂಬುಕ್ ಆಗಿದ್ದು, ಭದ್ರತೆಯ ಜವಾಬ್ದಾರಿ ಪೊಲೀಸ್ ಅಧಿಕಾರಿಗಳದ್ದಾಗಿದೆ ಎಂದು ಹೇಳುತ್ತದೆ. ರಸ್ತೆ ದಿಗ್ಬಂಧನದ ಬಗ್ಗೆ ಯಾವುದೇ ಪೂರ್ವ ಎಚ್ಚರಿಕೆ ಇರಲಿಲ್ಲ… ಡಿಜಿ ನಿಯಮಗಳನ್ನು ಅನುಸರಿಸಬೇಕಿತ್ತು. ನಿಯಮಗಳ ಬಗ್ಗೆ ಯಾವುದೇ ವಿವಾದವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ?’

ಇದಕ್ಕೆ ಮತ್ತೇ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಸೂರ್ಯ ಕಾಂತ್, “ಭದ್ರತಾ ಉಲ್ಲಂಘನೆಯಾಗಿದೆ ಮತ್ತು ಅದು ಗಂಭೀರ ವಿಷಯವಾಗಿದೆ. ಆದರೆ ಯಾರು ಹೊಣೆಗಾರರಾಗಿದ್ದರು ಎಂದು ಉಳಿದ ಸತ್ಯಾಂಶಗಳ ಬಗ್ಗೆ ಪರಿಶೀಲಿಸಬೇಕಾಗಿದೆ” ಎಂದು ಹೇಳಿದ್ದಾರೆ.

“ನೀವು ನಮ್ಮ ಆದೇಶಕ್ಕಿಂಲೂ ಮುಂಚೆ ನೋಟಿಸ್ ನೀಡಿದ್ದೀರಿ, ಇದರ ನಂತರ ನಾವು ನಮ್ಮ ಆದೇಶವನ್ನು ನೀಡಿದ್ದೇವೆ. ನೀವು ಅವರನ್ನು 24 ಗಂಟೆಗಳಲ್ಲಿ ಉತ್ತರಿಸಲು ಕೇಳುತ್ತಿರುವುದು ಸ್ವಲ್ಪ ಕಠಿಣವಾಗಿರಬಹುದು..” ಎಂದು ನ್ಯಾಯಮೂರ್ತಿ ಕೋಹ್ಲಿ ಅವರು ಹೇಳಿದ್ದಾರೆ.

“ನೀವು ರಾಜ್ಯದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಯಸಿದರೆ ಈ ನ್ಯಾಯಾಲಯಕ್ಕೆ ಮಾಡಲು ಏನು ಕೆಲಸವಿದೆ?”ಎಂದು ಮುಖ್ಯ ನ್ಯಾಮೂರ್ತಿ ಎನ್‌ವಿ ರಮಣ ಅವರು ಒಕ್ಕೂಟ ಸರ್ಕಾರವನ್ನು ಕೇಳಿದ್ದಾರೆ.

ಇದನ್ನೂ ಓದಿ:ಪಂಜಾಬ್‌ ಭಇದದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...