Homeಮುಖಪುಟ‘ಪ್ರಧಾನಿಯ ಭದ್ರತಾ ಲೋಪದ ಬಗ್ಗೆ ಎಲ್ಲವನ್ನೂ ನೀವೇ ತೀರ್ಮಾನಿಸಿದರೆ ನಮಗೇನು ಕೆಲಸ?: ಒಕ್ಕೂಟ ಸರ್ಕಾರಕ್ಕೆ ಸುಪ್ರೀಂಕೋರ್ಟ್‌

‘ಪ್ರಧಾನಿಯ ಭದ್ರತಾ ಲೋಪದ ಬಗ್ಗೆ ಎಲ್ಲವನ್ನೂ ನೀವೇ ತೀರ್ಮಾನಿಸಿದರೆ ನಮಗೇನು ಕೆಲಸ?: ಒಕ್ಕೂಟ ಸರ್ಕಾರಕ್ಕೆ ಸುಪ್ರೀಂಕೋರ್ಟ್‌

ನಿಮ್ಮ ಶೋಕಾಸ್‌ ನೋಟಿಸ್‌ ಸಂಪೂರ್ಣ ತದ್ವಿರುದ್ಧವಾಗಿದೆ ಎಂದು ಸುಪ್ರೀಂ ಒಕ್ಕೂಟ ಸರ್ಕಾರದ ಕಿವಿ ಹಿಂಡಿದೆ

- Advertisement -
- Advertisement -

ಪಂಜಾಬ್‌ನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯ ಭದ್ರತಾ ಲೋಪಗಳ ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಈ ಮಧ್ಯೆ, ಘಟನೆಯ ಬಗ್ಗೆ ತನಿಖೆ ನಡೆಸಲು ರಚಿಸಿದ್ದ ಸಮಿತಿಗಳನ್ನು ತಡೆಹಿಡಿಯುವಂತೆ ಒಕ್ಕೂಟ ಮತ್ತು ಪಂಜಾಬ್ ಸರ್ಕಾರಗಳೆರಡಕ್ಕೂ ಕೇಳಿಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಪ್ರಕರಣದ ಬಗ್ಗೆ ಲಾಯರ್ಸ್ ವಾಯ್ಸ್ ಎಂಬ ಸಂಸ್ಥೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ಆರೋಪ: 100 ಕ್ಕೂ ಹೆಚ್ಚು ಅಪರಿಚಿತರ ವಿರುದ್ಧ ಎಫ್‌ಐಆರ್

ಶುಕ್ರವಾರದಂದು ಸರ್ವೋಚ್ಚ ನ್ಯಾಯಾಲಯವು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಪ್ರಧಾನಮಂತ್ರಿಯ ಪಂಜಾಬ್ ಭೇಟಿಯಲ್ಲಿ “ಬೃಹತ್ ಭದ್ರತಾ ಲೋಪ” ಉಂಟಾದಾಗ ಮಾಡಿದ ವ್ಯವಸ್ಥೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು “ಭದ್ರಪಡಿಸಿ ಮತ್ತು ಸಂರಕ್ಷಿಸಲು” ನಿರ್ದೇಶಿಸಿತ್ತು.

ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳು ಪ್ರತ್ಯೇಕವಾಗಿ ರಚಿಸಿರುವ ತನಿಖಾ ಸಮಿತಿಗಳನ್ನು ತಡೆದಿಟ್ಟು, ಜನವರಿ 10 ರವರೆಗೆ ಈ ವಿಷಯವನ್ನು ನ್ಯಾಯಾಲಯವು ಮತ್ತೆ ಕೈಗೆತ್ತಿಕೊಳ್ಳುವವರೆಗೆ ತಮ್ಮ ವಿಚಾರಣೆಯನ್ನು ಮುಂದುವರಿಸಬಾರದು ಎಂದು ಅದು ಹೇಳಿದೆ. ಆದರೆ ನ್ಯಾಯಪೀಠವು ಇದನ್ನು ಆದೇಶದ ಭಾಗವಾಗಿ ನಿರ್ದೇಶಿಸದೆ, ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸುವಂತೆ ವಕೀಲರನ್ನು ಕೇಳಿಕೊಂಡಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ವಿವರವಾದ ಆದೇಶಗಳನ್ನು ನೀಡಲಿದೆ.

ಸಿಜೆಐ ಎನ್‌ವಿ ರಮಣ, ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರ ಪೀಠವು ಅರ್ಜಿಯ ವಿಚಾರಣೆ ನಡೆಸುತ್ತಿದೆ. ವಿಚಾರಣೆ ವೇಳೆ ಒಕ್ಕೂಟ ಸರ್ಕಾರವನ್ನು ಸುಪ್ರೀಂಕೊರ್ಟ್ ತರಾಟೆಗೂ ತೆಗೆದುಕೊಂಡಿದೆ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ಆರೋಪ: ಹೊಸ ವಿಡಿಯೊ ವೈರಲ್ ನೊಂದಿಗೆ ಮತ್ತಷ್ಟು ಪ್ರಶ್ನೆಗಳು

ಒಕ್ಕೂಟ ಸರ್ಕಾರದ ಪರವಾಗಿ ಹಾಜರಾದ ಸಾಲಿಟರ್‌ ಜನರಲ್‌ ತುಷಾರ್ ಮೆಹ್ತಾ, “ಪಂಜಾಬ್ ಪೊಲೀಸರಿಂದ ಯಾವುದೇ ಗುಪ್ತಚರ ಮಾಹಿತಿ ಇರಲಿಲ್ಲ. ಈ ಮಾಹಿತಿ ನೀಡುವುದು ಅವರ ಜವಾಬ್ದಾರಿಯಾಗಿದೆ. ಮಾರ್ಗದಲ್ಲಿ ಪ್ರತಿಭಟನಾಕಾರರ ಗುಂಪು ಗುಂಪು ಸೇರಿದೆ ಎಂದು ಬೆಂಗಾವಲು ಪಡೆಗೆ ಯಾವುದೇ ಸೂಚನೆ ನೀಡಿಲ್ಲ, ಸಂಪೂರ್ಣ ಗುಪ್ತಚರ ವೈಫಲ್ಯ ಕಂಡುಬಂದಿದೆ. ಪಂಜಾಬ್ ಪೊಲೀಸ್ ಡಿಜಿ ಅವರು ಪ್ರಧಾನಿ ಬೆಂಗಾವಲು ಪಡೆಗೆ ಸ್ಪಷ್ಟ ಸಂವಹನವನ್ನು ನೀಡಬೇಕಿತ್ತು.

ಇದು ಎಸ್‌ಪಿಜಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಇದಕ್ಕೆಲ್ಲಾ ಪೊಲೀಸ್ ಅಧಿಕಾರಿಗಳೇ ಹೊಣೆ. ಆದರೆ ರಾಜ್ಯ ಸರ್ಕಾರ ಅವರನ್ನು ರಕ್ಷಿಸುತ್ತಿದೆ ಎಂಬುದು ತುಂಬಾ ಗಂಭೀರ ವಿಚಾರವಾಗಿದೆ. ಕೇಂದ್ರ ಸಮಿತಿ ರಚಿಸಬೇಕಿತ್ತು” ಎಂದು ಹೇಳಿದ್ದಾರೆ.

ತುಷಾರ್ ಮೆಹ್ತಾ ಅವರಿಗೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಹಿಮಾ ಕೊಹ್ಲಿ, “ನೀವು ಈಗಾಗಲೇ ಶೋಕಾಸ್ ನೋಟಿಸ್‌ಗಳಲ್ಲಿ ಎಲ್ಲವನ್ನೂ ಊಹಿಸಿದರೆ ನ್ಯಾಯಾಲಯಕ್ಕೆ ಬರುವುದರಲ್ಲಿ ಏನು ಪ್ರಯೋಜನ?” ಎಂದು ಕೇಳಿದ್ದಾರೆ.

ಇದನ್ನೂ ಓದಿ:ಭದ್ರತಾ ಲೋಪ: ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್, ಪಂಜಾಬ್ ಸರ್ಕಾರದಿಂದ ತನಿಖಾ ತಂಡ…10 ಪಾಯಿಂಟ್ಸ್‌‌

“ನಿಮ್ಮ ಶೋಕಾಸ್‌ ನೋಟಿಸ್ ಸಂಪೂರ್ಣವಾಗಿ ಸ್ವಯಂ ವ್ಯತಿರಿಕ್ತವಾಗಿದೆ. ನೀವು ಎಸ್‌ಪಿಜಿ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ವಿಚಾರಣೆ ಮಾಡಲು ಸಮಿತಿಯನ್ನು ರಚಿಸುತ್ತೀರಿ. ಇದರ ನಂತರ ನೀವು ರಾಜ್ಯದ ಮುಖ್ಯ ಕಾರ್ಯದರ್ಶಿ(ಸಿಎಸ್‌) ಮತ್ತು ಪೊಲೀಸ್ ಮಹಾನಿರ್ದೇಶಕ(ಡಿಜಿ)ರನ್ನು ತಪ್ಪಿತಸ್ಥರೆಂದು ಪರಿಗಣಿಸುತ್ತೀರಿ. ಅವರನ್ನು ಅಪರಾಧಿ ಎಂದು ಪರಿಗಣಿಸಿದವರು ಯಾರು? ಅವರನ್ನು ಯಾರು ಪ್ರಶ್ನಿಸಿದ್ದಾರೆ?” ಎಂದು ಪೀಠದ ಮತ್ತೊಬ್ಬ ನ್ಯಾಯಮೂರ್ತಿ ಸೂರ್ಯ ಕಾಂತ್ ಕೇಳಿದ್ದಾರೆ.

“ಡಿಜಿ ಮತ್ತು ಸಿಎಸ್ ನಮ್ಮ ಮುಂದೆ ಬಂದಿದ್ದಾರೆ. ಲೋಪಕ್ಕೆ ಯಾರು ಹೊಣೆ ಎಂದು ನಾವು ತಿಳಿದುಕೊಳ್ಳುತ್ತೇವೆ. ರಾಜ್ಯ ಸರ್ಕಾರ ಮತ್ತು ಅರ್ಜಿದಾರರು ನ್ಯಾಯಯುತ ವಿಚಾರಣೆಯನ್ನು ಬಯಸುತ್ತಾರೆ. ನೀವು ಕೂಡಾ ನ್ಯಾಯಯುತ ವಿಚಾರಣೆಯನ್ನು ವಿರೋಧಿಸಲು ಸಾಧ್ಯವಿಲ್ಲ. ಹಾಗಾದರೆ ನಿಮ್ಮಿಂದ ಈ ಆಡಳಿತಾತ್ಮಕ ಮತ್ತು ಸತ್ಯಶೋಧನೆಯ ವಿಚಾರಣೆ ಏಕೆ?” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಕೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಸಿದ ತುಷಾರ್ ಮೆಹ್ತಾ, “ಶೋಕಾಸ್ ನೋಟಿಸ್‌ಗಳ ಅಡಿಪಾಯವು ಬ್ಲೂಬುಕ್ ಆಗಿದ್ದು, ಭದ್ರತೆಯ ಜವಾಬ್ದಾರಿ ಪೊಲೀಸ್ ಅಧಿಕಾರಿಗಳದ್ದಾಗಿದೆ ಎಂದು ಹೇಳುತ್ತದೆ. ರಸ್ತೆ ದಿಗ್ಬಂಧನದ ಬಗ್ಗೆ ಯಾವುದೇ ಪೂರ್ವ ಎಚ್ಚರಿಕೆ ಇರಲಿಲ್ಲ… ಡಿಜಿ ನಿಯಮಗಳನ್ನು ಅನುಸರಿಸಬೇಕಿತ್ತು. ನಿಯಮಗಳ ಬಗ್ಗೆ ಯಾವುದೇ ವಿವಾದವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ?’

ಇದಕ್ಕೆ ಮತ್ತೇ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಸೂರ್ಯ ಕಾಂತ್, “ಭದ್ರತಾ ಉಲ್ಲಂಘನೆಯಾಗಿದೆ ಮತ್ತು ಅದು ಗಂಭೀರ ವಿಷಯವಾಗಿದೆ. ಆದರೆ ಯಾರು ಹೊಣೆಗಾರರಾಗಿದ್ದರು ಎಂದು ಉಳಿದ ಸತ್ಯಾಂಶಗಳ ಬಗ್ಗೆ ಪರಿಶೀಲಿಸಬೇಕಾಗಿದೆ” ಎಂದು ಹೇಳಿದ್ದಾರೆ.

“ನೀವು ನಮ್ಮ ಆದೇಶಕ್ಕಿಂಲೂ ಮುಂಚೆ ನೋಟಿಸ್ ನೀಡಿದ್ದೀರಿ, ಇದರ ನಂತರ ನಾವು ನಮ್ಮ ಆದೇಶವನ್ನು ನೀಡಿದ್ದೇವೆ. ನೀವು ಅವರನ್ನು 24 ಗಂಟೆಗಳಲ್ಲಿ ಉತ್ತರಿಸಲು ಕೇಳುತ್ತಿರುವುದು ಸ್ವಲ್ಪ ಕಠಿಣವಾಗಿರಬಹುದು..” ಎಂದು ನ್ಯಾಯಮೂರ್ತಿ ಕೋಹ್ಲಿ ಅವರು ಹೇಳಿದ್ದಾರೆ.

“ನೀವು ರಾಜ್ಯದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಯಸಿದರೆ ಈ ನ್ಯಾಯಾಲಯಕ್ಕೆ ಮಾಡಲು ಏನು ಕೆಲಸವಿದೆ?”ಎಂದು ಮುಖ್ಯ ನ್ಯಾಮೂರ್ತಿ ಎನ್‌ವಿ ರಮಣ ಅವರು ಒಕ್ಕೂಟ ಸರ್ಕಾರವನ್ನು ಕೇಳಿದ್ದಾರೆ.

ಇದನ್ನೂ ಓದಿ:ಪಂಜಾಬ್‌ ಭಇದದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...