Homeಮುಖಪುಟ‘ಪ್ರಧಾನಿಯ ಭದ್ರತಾ ಲೋಪದ ಬಗ್ಗೆ ಎಲ್ಲವನ್ನೂ ನೀವೇ ತೀರ್ಮಾನಿಸಿದರೆ ನಮಗೇನು ಕೆಲಸ?: ಒಕ್ಕೂಟ ಸರ್ಕಾರಕ್ಕೆ ಸುಪ್ರೀಂಕೋರ್ಟ್‌

‘ಪ್ರಧಾನಿಯ ಭದ್ರತಾ ಲೋಪದ ಬಗ್ಗೆ ಎಲ್ಲವನ್ನೂ ನೀವೇ ತೀರ್ಮಾನಿಸಿದರೆ ನಮಗೇನು ಕೆಲಸ?: ಒಕ್ಕೂಟ ಸರ್ಕಾರಕ್ಕೆ ಸುಪ್ರೀಂಕೋರ್ಟ್‌

ನಿಮ್ಮ ಶೋಕಾಸ್‌ ನೋಟಿಸ್‌ ಸಂಪೂರ್ಣ ತದ್ವಿರುದ್ಧವಾಗಿದೆ ಎಂದು ಸುಪ್ರೀಂ ಒಕ್ಕೂಟ ಸರ್ಕಾರದ ಕಿವಿ ಹಿಂಡಿದೆ

- Advertisement -
- Advertisement -

ಪಂಜಾಬ್‌ನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯ ಭದ್ರತಾ ಲೋಪಗಳ ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಈ ಮಧ್ಯೆ, ಘಟನೆಯ ಬಗ್ಗೆ ತನಿಖೆ ನಡೆಸಲು ರಚಿಸಿದ್ದ ಸಮಿತಿಗಳನ್ನು ತಡೆಹಿಡಿಯುವಂತೆ ಒಕ್ಕೂಟ ಮತ್ತು ಪಂಜಾಬ್ ಸರ್ಕಾರಗಳೆರಡಕ್ಕೂ ಕೇಳಿಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಪ್ರಕರಣದ ಬಗ್ಗೆ ಲಾಯರ್ಸ್ ವಾಯ್ಸ್ ಎಂಬ ಸಂಸ್ಥೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ಆರೋಪ: 100 ಕ್ಕೂ ಹೆಚ್ಚು ಅಪರಿಚಿತರ ವಿರುದ್ಧ ಎಫ್‌ಐಆರ್

ಶುಕ್ರವಾರದಂದು ಸರ್ವೋಚ್ಚ ನ್ಯಾಯಾಲಯವು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಪ್ರಧಾನಮಂತ್ರಿಯ ಪಂಜಾಬ್ ಭೇಟಿಯಲ್ಲಿ “ಬೃಹತ್ ಭದ್ರತಾ ಲೋಪ” ಉಂಟಾದಾಗ ಮಾಡಿದ ವ್ಯವಸ್ಥೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು “ಭದ್ರಪಡಿಸಿ ಮತ್ತು ಸಂರಕ್ಷಿಸಲು” ನಿರ್ದೇಶಿಸಿತ್ತು.

ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳು ಪ್ರತ್ಯೇಕವಾಗಿ ರಚಿಸಿರುವ ತನಿಖಾ ಸಮಿತಿಗಳನ್ನು ತಡೆದಿಟ್ಟು, ಜನವರಿ 10 ರವರೆಗೆ ಈ ವಿಷಯವನ್ನು ನ್ಯಾಯಾಲಯವು ಮತ್ತೆ ಕೈಗೆತ್ತಿಕೊಳ್ಳುವವರೆಗೆ ತಮ್ಮ ವಿಚಾರಣೆಯನ್ನು ಮುಂದುವರಿಸಬಾರದು ಎಂದು ಅದು ಹೇಳಿದೆ. ಆದರೆ ನ್ಯಾಯಪೀಠವು ಇದನ್ನು ಆದೇಶದ ಭಾಗವಾಗಿ ನಿರ್ದೇಶಿಸದೆ, ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸುವಂತೆ ವಕೀಲರನ್ನು ಕೇಳಿಕೊಂಡಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ವಿವರವಾದ ಆದೇಶಗಳನ್ನು ನೀಡಲಿದೆ.

ಸಿಜೆಐ ಎನ್‌ವಿ ರಮಣ, ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರ ಪೀಠವು ಅರ್ಜಿಯ ವಿಚಾರಣೆ ನಡೆಸುತ್ತಿದೆ. ವಿಚಾರಣೆ ವೇಳೆ ಒಕ್ಕೂಟ ಸರ್ಕಾರವನ್ನು ಸುಪ್ರೀಂಕೊರ್ಟ್ ತರಾಟೆಗೂ ತೆಗೆದುಕೊಂಡಿದೆ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ಆರೋಪ: ಹೊಸ ವಿಡಿಯೊ ವೈರಲ್ ನೊಂದಿಗೆ ಮತ್ತಷ್ಟು ಪ್ರಶ್ನೆಗಳು

ಒಕ್ಕೂಟ ಸರ್ಕಾರದ ಪರವಾಗಿ ಹಾಜರಾದ ಸಾಲಿಟರ್‌ ಜನರಲ್‌ ತುಷಾರ್ ಮೆಹ್ತಾ, “ಪಂಜಾಬ್ ಪೊಲೀಸರಿಂದ ಯಾವುದೇ ಗುಪ್ತಚರ ಮಾಹಿತಿ ಇರಲಿಲ್ಲ. ಈ ಮಾಹಿತಿ ನೀಡುವುದು ಅವರ ಜವಾಬ್ದಾರಿಯಾಗಿದೆ. ಮಾರ್ಗದಲ್ಲಿ ಪ್ರತಿಭಟನಾಕಾರರ ಗುಂಪು ಗುಂಪು ಸೇರಿದೆ ಎಂದು ಬೆಂಗಾವಲು ಪಡೆಗೆ ಯಾವುದೇ ಸೂಚನೆ ನೀಡಿಲ್ಲ, ಸಂಪೂರ್ಣ ಗುಪ್ತಚರ ವೈಫಲ್ಯ ಕಂಡುಬಂದಿದೆ. ಪಂಜಾಬ್ ಪೊಲೀಸ್ ಡಿಜಿ ಅವರು ಪ್ರಧಾನಿ ಬೆಂಗಾವಲು ಪಡೆಗೆ ಸ್ಪಷ್ಟ ಸಂವಹನವನ್ನು ನೀಡಬೇಕಿತ್ತು.

ಇದು ಎಸ್‌ಪಿಜಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಇದಕ್ಕೆಲ್ಲಾ ಪೊಲೀಸ್ ಅಧಿಕಾರಿಗಳೇ ಹೊಣೆ. ಆದರೆ ರಾಜ್ಯ ಸರ್ಕಾರ ಅವರನ್ನು ರಕ್ಷಿಸುತ್ತಿದೆ ಎಂಬುದು ತುಂಬಾ ಗಂಭೀರ ವಿಚಾರವಾಗಿದೆ. ಕೇಂದ್ರ ಸಮಿತಿ ರಚಿಸಬೇಕಿತ್ತು” ಎಂದು ಹೇಳಿದ್ದಾರೆ.

ತುಷಾರ್ ಮೆಹ್ತಾ ಅವರಿಗೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಹಿಮಾ ಕೊಹ್ಲಿ, “ನೀವು ಈಗಾಗಲೇ ಶೋಕಾಸ್ ನೋಟಿಸ್‌ಗಳಲ್ಲಿ ಎಲ್ಲವನ್ನೂ ಊಹಿಸಿದರೆ ನ್ಯಾಯಾಲಯಕ್ಕೆ ಬರುವುದರಲ್ಲಿ ಏನು ಪ್ರಯೋಜನ?” ಎಂದು ಕೇಳಿದ್ದಾರೆ.

ಇದನ್ನೂ ಓದಿ:ಭದ್ರತಾ ಲೋಪ: ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್, ಪಂಜಾಬ್ ಸರ್ಕಾರದಿಂದ ತನಿಖಾ ತಂಡ…10 ಪಾಯಿಂಟ್ಸ್‌‌

“ನಿಮ್ಮ ಶೋಕಾಸ್‌ ನೋಟಿಸ್ ಸಂಪೂರ್ಣವಾಗಿ ಸ್ವಯಂ ವ್ಯತಿರಿಕ್ತವಾಗಿದೆ. ನೀವು ಎಸ್‌ಪಿಜಿ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ವಿಚಾರಣೆ ಮಾಡಲು ಸಮಿತಿಯನ್ನು ರಚಿಸುತ್ತೀರಿ. ಇದರ ನಂತರ ನೀವು ರಾಜ್ಯದ ಮುಖ್ಯ ಕಾರ್ಯದರ್ಶಿ(ಸಿಎಸ್‌) ಮತ್ತು ಪೊಲೀಸ್ ಮಹಾನಿರ್ದೇಶಕ(ಡಿಜಿ)ರನ್ನು ತಪ್ಪಿತಸ್ಥರೆಂದು ಪರಿಗಣಿಸುತ್ತೀರಿ. ಅವರನ್ನು ಅಪರಾಧಿ ಎಂದು ಪರಿಗಣಿಸಿದವರು ಯಾರು? ಅವರನ್ನು ಯಾರು ಪ್ರಶ್ನಿಸಿದ್ದಾರೆ?” ಎಂದು ಪೀಠದ ಮತ್ತೊಬ್ಬ ನ್ಯಾಯಮೂರ್ತಿ ಸೂರ್ಯ ಕಾಂತ್ ಕೇಳಿದ್ದಾರೆ.

“ಡಿಜಿ ಮತ್ತು ಸಿಎಸ್ ನಮ್ಮ ಮುಂದೆ ಬಂದಿದ್ದಾರೆ. ಲೋಪಕ್ಕೆ ಯಾರು ಹೊಣೆ ಎಂದು ನಾವು ತಿಳಿದುಕೊಳ್ಳುತ್ತೇವೆ. ರಾಜ್ಯ ಸರ್ಕಾರ ಮತ್ತು ಅರ್ಜಿದಾರರು ನ್ಯಾಯಯುತ ವಿಚಾರಣೆಯನ್ನು ಬಯಸುತ್ತಾರೆ. ನೀವು ಕೂಡಾ ನ್ಯಾಯಯುತ ವಿಚಾರಣೆಯನ್ನು ವಿರೋಧಿಸಲು ಸಾಧ್ಯವಿಲ್ಲ. ಹಾಗಾದರೆ ನಿಮ್ಮಿಂದ ಈ ಆಡಳಿತಾತ್ಮಕ ಮತ್ತು ಸತ್ಯಶೋಧನೆಯ ವಿಚಾರಣೆ ಏಕೆ?” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಕೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಸಿದ ತುಷಾರ್ ಮೆಹ್ತಾ, “ಶೋಕಾಸ್ ನೋಟಿಸ್‌ಗಳ ಅಡಿಪಾಯವು ಬ್ಲೂಬುಕ್ ಆಗಿದ್ದು, ಭದ್ರತೆಯ ಜವಾಬ್ದಾರಿ ಪೊಲೀಸ್ ಅಧಿಕಾರಿಗಳದ್ದಾಗಿದೆ ಎಂದು ಹೇಳುತ್ತದೆ. ರಸ್ತೆ ದಿಗ್ಬಂಧನದ ಬಗ್ಗೆ ಯಾವುದೇ ಪೂರ್ವ ಎಚ್ಚರಿಕೆ ಇರಲಿಲ್ಲ… ಡಿಜಿ ನಿಯಮಗಳನ್ನು ಅನುಸರಿಸಬೇಕಿತ್ತು. ನಿಯಮಗಳ ಬಗ್ಗೆ ಯಾವುದೇ ವಿವಾದವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ?’

ಇದಕ್ಕೆ ಮತ್ತೇ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಸೂರ್ಯ ಕಾಂತ್, “ಭದ್ರತಾ ಉಲ್ಲಂಘನೆಯಾಗಿದೆ ಮತ್ತು ಅದು ಗಂಭೀರ ವಿಷಯವಾಗಿದೆ. ಆದರೆ ಯಾರು ಹೊಣೆಗಾರರಾಗಿದ್ದರು ಎಂದು ಉಳಿದ ಸತ್ಯಾಂಶಗಳ ಬಗ್ಗೆ ಪರಿಶೀಲಿಸಬೇಕಾಗಿದೆ” ಎಂದು ಹೇಳಿದ್ದಾರೆ.

“ನೀವು ನಮ್ಮ ಆದೇಶಕ್ಕಿಂಲೂ ಮುಂಚೆ ನೋಟಿಸ್ ನೀಡಿದ್ದೀರಿ, ಇದರ ನಂತರ ನಾವು ನಮ್ಮ ಆದೇಶವನ್ನು ನೀಡಿದ್ದೇವೆ. ನೀವು ಅವರನ್ನು 24 ಗಂಟೆಗಳಲ್ಲಿ ಉತ್ತರಿಸಲು ಕೇಳುತ್ತಿರುವುದು ಸ್ವಲ್ಪ ಕಠಿಣವಾಗಿರಬಹುದು..” ಎಂದು ನ್ಯಾಯಮೂರ್ತಿ ಕೋಹ್ಲಿ ಅವರು ಹೇಳಿದ್ದಾರೆ.

“ನೀವು ರಾಜ್ಯದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಯಸಿದರೆ ಈ ನ್ಯಾಯಾಲಯಕ್ಕೆ ಮಾಡಲು ಏನು ಕೆಲಸವಿದೆ?”ಎಂದು ಮುಖ್ಯ ನ್ಯಾಮೂರ್ತಿ ಎನ್‌ವಿ ರಮಣ ಅವರು ಒಕ್ಕೂಟ ಸರ್ಕಾರವನ್ನು ಕೇಳಿದ್ದಾರೆ.

ಇದನ್ನೂ ಓದಿ:ಪಂಜಾಬ್‌ ಭಇದದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...