Homeಮುಖಪುಟ‘ಪ್ರಧಾನಿಯ ಭದ್ರತಾ ಲೋಪದ ಬಗ್ಗೆ ಎಲ್ಲವನ್ನೂ ನೀವೇ ತೀರ್ಮಾನಿಸಿದರೆ ನಮಗೇನು ಕೆಲಸ?: ಒಕ್ಕೂಟ ಸರ್ಕಾರಕ್ಕೆ ಸುಪ್ರೀಂಕೋರ್ಟ್‌

‘ಪ್ರಧಾನಿಯ ಭದ್ರತಾ ಲೋಪದ ಬಗ್ಗೆ ಎಲ್ಲವನ್ನೂ ನೀವೇ ತೀರ್ಮಾನಿಸಿದರೆ ನಮಗೇನು ಕೆಲಸ?: ಒಕ್ಕೂಟ ಸರ್ಕಾರಕ್ಕೆ ಸುಪ್ರೀಂಕೋರ್ಟ್‌

ನಿಮ್ಮ ಶೋಕಾಸ್‌ ನೋಟಿಸ್‌ ಸಂಪೂರ್ಣ ತದ್ವಿರುದ್ಧವಾಗಿದೆ ಎಂದು ಸುಪ್ರೀಂ ಒಕ್ಕೂಟ ಸರ್ಕಾರದ ಕಿವಿ ಹಿಂಡಿದೆ

- Advertisement -
- Advertisement -

ಪಂಜಾಬ್‌ನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯ ಭದ್ರತಾ ಲೋಪಗಳ ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಈ ಮಧ್ಯೆ, ಘಟನೆಯ ಬಗ್ಗೆ ತನಿಖೆ ನಡೆಸಲು ರಚಿಸಿದ್ದ ಸಮಿತಿಗಳನ್ನು ತಡೆಹಿಡಿಯುವಂತೆ ಒಕ್ಕೂಟ ಮತ್ತು ಪಂಜಾಬ್ ಸರ್ಕಾರಗಳೆರಡಕ್ಕೂ ಕೇಳಿಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಪ್ರಕರಣದ ಬಗ್ಗೆ ಲಾಯರ್ಸ್ ವಾಯ್ಸ್ ಎಂಬ ಸಂಸ್ಥೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ಆರೋಪ: 100 ಕ್ಕೂ ಹೆಚ್ಚು ಅಪರಿಚಿತರ ವಿರುದ್ಧ ಎಫ್‌ಐಆರ್

ಶುಕ್ರವಾರದಂದು ಸರ್ವೋಚ್ಚ ನ್ಯಾಯಾಲಯವು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಪ್ರಧಾನಮಂತ್ರಿಯ ಪಂಜಾಬ್ ಭೇಟಿಯಲ್ಲಿ “ಬೃಹತ್ ಭದ್ರತಾ ಲೋಪ” ಉಂಟಾದಾಗ ಮಾಡಿದ ವ್ಯವಸ್ಥೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು “ಭದ್ರಪಡಿಸಿ ಮತ್ತು ಸಂರಕ್ಷಿಸಲು” ನಿರ್ದೇಶಿಸಿತ್ತು.

ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳು ಪ್ರತ್ಯೇಕವಾಗಿ ರಚಿಸಿರುವ ತನಿಖಾ ಸಮಿತಿಗಳನ್ನು ತಡೆದಿಟ್ಟು, ಜನವರಿ 10 ರವರೆಗೆ ಈ ವಿಷಯವನ್ನು ನ್ಯಾಯಾಲಯವು ಮತ್ತೆ ಕೈಗೆತ್ತಿಕೊಳ್ಳುವವರೆಗೆ ತಮ್ಮ ವಿಚಾರಣೆಯನ್ನು ಮುಂದುವರಿಸಬಾರದು ಎಂದು ಅದು ಹೇಳಿದೆ. ಆದರೆ ನ್ಯಾಯಪೀಠವು ಇದನ್ನು ಆದೇಶದ ಭಾಗವಾಗಿ ನಿರ್ದೇಶಿಸದೆ, ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸುವಂತೆ ವಕೀಲರನ್ನು ಕೇಳಿಕೊಂಡಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ವಿವರವಾದ ಆದೇಶಗಳನ್ನು ನೀಡಲಿದೆ.

ಸಿಜೆಐ ಎನ್‌ವಿ ರಮಣ, ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರ ಪೀಠವು ಅರ್ಜಿಯ ವಿಚಾರಣೆ ನಡೆಸುತ್ತಿದೆ. ವಿಚಾರಣೆ ವೇಳೆ ಒಕ್ಕೂಟ ಸರ್ಕಾರವನ್ನು ಸುಪ್ರೀಂಕೊರ್ಟ್ ತರಾಟೆಗೂ ತೆಗೆದುಕೊಂಡಿದೆ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ಆರೋಪ: ಹೊಸ ವಿಡಿಯೊ ವೈರಲ್ ನೊಂದಿಗೆ ಮತ್ತಷ್ಟು ಪ್ರಶ್ನೆಗಳು

ಒಕ್ಕೂಟ ಸರ್ಕಾರದ ಪರವಾಗಿ ಹಾಜರಾದ ಸಾಲಿಟರ್‌ ಜನರಲ್‌ ತುಷಾರ್ ಮೆಹ್ತಾ, “ಪಂಜಾಬ್ ಪೊಲೀಸರಿಂದ ಯಾವುದೇ ಗುಪ್ತಚರ ಮಾಹಿತಿ ಇರಲಿಲ್ಲ. ಈ ಮಾಹಿತಿ ನೀಡುವುದು ಅವರ ಜವಾಬ್ದಾರಿಯಾಗಿದೆ. ಮಾರ್ಗದಲ್ಲಿ ಪ್ರತಿಭಟನಾಕಾರರ ಗುಂಪು ಗುಂಪು ಸೇರಿದೆ ಎಂದು ಬೆಂಗಾವಲು ಪಡೆಗೆ ಯಾವುದೇ ಸೂಚನೆ ನೀಡಿಲ್ಲ, ಸಂಪೂರ್ಣ ಗುಪ್ತಚರ ವೈಫಲ್ಯ ಕಂಡುಬಂದಿದೆ. ಪಂಜಾಬ್ ಪೊಲೀಸ್ ಡಿಜಿ ಅವರು ಪ್ರಧಾನಿ ಬೆಂಗಾವಲು ಪಡೆಗೆ ಸ್ಪಷ್ಟ ಸಂವಹನವನ್ನು ನೀಡಬೇಕಿತ್ತು.

ಇದು ಎಸ್‌ಪಿಜಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಇದಕ್ಕೆಲ್ಲಾ ಪೊಲೀಸ್ ಅಧಿಕಾರಿಗಳೇ ಹೊಣೆ. ಆದರೆ ರಾಜ್ಯ ಸರ್ಕಾರ ಅವರನ್ನು ರಕ್ಷಿಸುತ್ತಿದೆ ಎಂಬುದು ತುಂಬಾ ಗಂಭೀರ ವಿಚಾರವಾಗಿದೆ. ಕೇಂದ್ರ ಸಮಿತಿ ರಚಿಸಬೇಕಿತ್ತು” ಎಂದು ಹೇಳಿದ್ದಾರೆ.

ತುಷಾರ್ ಮೆಹ್ತಾ ಅವರಿಗೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಹಿಮಾ ಕೊಹ್ಲಿ, “ನೀವು ಈಗಾಗಲೇ ಶೋಕಾಸ್ ನೋಟಿಸ್‌ಗಳಲ್ಲಿ ಎಲ್ಲವನ್ನೂ ಊಹಿಸಿದರೆ ನ್ಯಾಯಾಲಯಕ್ಕೆ ಬರುವುದರಲ್ಲಿ ಏನು ಪ್ರಯೋಜನ?” ಎಂದು ಕೇಳಿದ್ದಾರೆ.

ಇದನ್ನೂ ಓದಿ:ಭದ್ರತಾ ಲೋಪ: ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್, ಪಂಜಾಬ್ ಸರ್ಕಾರದಿಂದ ತನಿಖಾ ತಂಡ…10 ಪಾಯಿಂಟ್ಸ್‌‌

“ನಿಮ್ಮ ಶೋಕಾಸ್‌ ನೋಟಿಸ್ ಸಂಪೂರ್ಣವಾಗಿ ಸ್ವಯಂ ವ್ಯತಿರಿಕ್ತವಾಗಿದೆ. ನೀವು ಎಸ್‌ಪಿಜಿ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ವಿಚಾರಣೆ ಮಾಡಲು ಸಮಿತಿಯನ್ನು ರಚಿಸುತ್ತೀರಿ. ಇದರ ನಂತರ ನೀವು ರಾಜ್ಯದ ಮುಖ್ಯ ಕಾರ್ಯದರ್ಶಿ(ಸಿಎಸ್‌) ಮತ್ತು ಪೊಲೀಸ್ ಮಹಾನಿರ್ದೇಶಕ(ಡಿಜಿ)ರನ್ನು ತಪ್ಪಿತಸ್ಥರೆಂದು ಪರಿಗಣಿಸುತ್ತೀರಿ. ಅವರನ್ನು ಅಪರಾಧಿ ಎಂದು ಪರಿಗಣಿಸಿದವರು ಯಾರು? ಅವರನ್ನು ಯಾರು ಪ್ರಶ್ನಿಸಿದ್ದಾರೆ?” ಎಂದು ಪೀಠದ ಮತ್ತೊಬ್ಬ ನ್ಯಾಯಮೂರ್ತಿ ಸೂರ್ಯ ಕಾಂತ್ ಕೇಳಿದ್ದಾರೆ.

“ಡಿಜಿ ಮತ್ತು ಸಿಎಸ್ ನಮ್ಮ ಮುಂದೆ ಬಂದಿದ್ದಾರೆ. ಲೋಪಕ್ಕೆ ಯಾರು ಹೊಣೆ ಎಂದು ನಾವು ತಿಳಿದುಕೊಳ್ಳುತ್ತೇವೆ. ರಾಜ್ಯ ಸರ್ಕಾರ ಮತ್ತು ಅರ್ಜಿದಾರರು ನ್ಯಾಯಯುತ ವಿಚಾರಣೆಯನ್ನು ಬಯಸುತ್ತಾರೆ. ನೀವು ಕೂಡಾ ನ್ಯಾಯಯುತ ವಿಚಾರಣೆಯನ್ನು ವಿರೋಧಿಸಲು ಸಾಧ್ಯವಿಲ್ಲ. ಹಾಗಾದರೆ ನಿಮ್ಮಿಂದ ಈ ಆಡಳಿತಾತ್ಮಕ ಮತ್ತು ಸತ್ಯಶೋಧನೆಯ ವಿಚಾರಣೆ ಏಕೆ?” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಕೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಸಿದ ತುಷಾರ್ ಮೆಹ್ತಾ, “ಶೋಕಾಸ್ ನೋಟಿಸ್‌ಗಳ ಅಡಿಪಾಯವು ಬ್ಲೂಬುಕ್ ಆಗಿದ್ದು, ಭದ್ರತೆಯ ಜವಾಬ್ದಾರಿ ಪೊಲೀಸ್ ಅಧಿಕಾರಿಗಳದ್ದಾಗಿದೆ ಎಂದು ಹೇಳುತ್ತದೆ. ರಸ್ತೆ ದಿಗ್ಬಂಧನದ ಬಗ್ಗೆ ಯಾವುದೇ ಪೂರ್ವ ಎಚ್ಚರಿಕೆ ಇರಲಿಲ್ಲ… ಡಿಜಿ ನಿಯಮಗಳನ್ನು ಅನುಸರಿಸಬೇಕಿತ್ತು. ನಿಯಮಗಳ ಬಗ್ಗೆ ಯಾವುದೇ ವಿವಾದವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ?’

ಇದಕ್ಕೆ ಮತ್ತೇ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಸೂರ್ಯ ಕಾಂತ್, “ಭದ್ರತಾ ಉಲ್ಲಂಘನೆಯಾಗಿದೆ ಮತ್ತು ಅದು ಗಂಭೀರ ವಿಷಯವಾಗಿದೆ. ಆದರೆ ಯಾರು ಹೊಣೆಗಾರರಾಗಿದ್ದರು ಎಂದು ಉಳಿದ ಸತ್ಯಾಂಶಗಳ ಬಗ್ಗೆ ಪರಿಶೀಲಿಸಬೇಕಾಗಿದೆ” ಎಂದು ಹೇಳಿದ್ದಾರೆ.

“ನೀವು ನಮ್ಮ ಆದೇಶಕ್ಕಿಂಲೂ ಮುಂಚೆ ನೋಟಿಸ್ ನೀಡಿದ್ದೀರಿ, ಇದರ ನಂತರ ನಾವು ನಮ್ಮ ಆದೇಶವನ್ನು ನೀಡಿದ್ದೇವೆ. ನೀವು ಅವರನ್ನು 24 ಗಂಟೆಗಳಲ್ಲಿ ಉತ್ತರಿಸಲು ಕೇಳುತ್ತಿರುವುದು ಸ್ವಲ್ಪ ಕಠಿಣವಾಗಿರಬಹುದು..” ಎಂದು ನ್ಯಾಯಮೂರ್ತಿ ಕೋಹ್ಲಿ ಅವರು ಹೇಳಿದ್ದಾರೆ.

“ನೀವು ರಾಜ್ಯದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಯಸಿದರೆ ಈ ನ್ಯಾಯಾಲಯಕ್ಕೆ ಮಾಡಲು ಏನು ಕೆಲಸವಿದೆ?”ಎಂದು ಮುಖ್ಯ ನ್ಯಾಮೂರ್ತಿ ಎನ್‌ವಿ ರಮಣ ಅವರು ಒಕ್ಕೂಟ ಸರ್ಕಾರವನ್ನು ಕೇಳಿದ್ದಾರೆ.

ಇದನ್ನೂ ಓದಿ:ಪಂಜಾಬ್‌ ಭಇದದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...