Homeಮುಖಪುಟ‘ಪ್ರಧಾನಿಯ ಭದ್ರತಾ ಲೋಪದ ಬಗ್ಗೆ ಎಲ್ಲವನ್ನೂ ನೀವೇ ತೀರ್ಮಾನಿಸಿದರೆ ನಮಗೇನು ಕೆಲಸ?: ಒಕ್ಕೂಟ ಸರ್ಕಾರಕ್ಕೆ ಸುಪ್ರೀಂಕೋರ್ಟ್‌

‘ಪ್ರಧಾನಿಯ ಭದ್ರತಾ ಲೋಪದ ಬಗ್ಗೆ ಎಲ್ಲವನ್ನೂ ನೀವೇ ತೀರ್ಮಾನಿಸಿದರೆ ನಮಗೇನು ಕೆಲಸ?: ಒಕ್ಕೂಟ ಸರ್ಕಾರಕ್ಕೆ ಸುಪ್ರೀಂಕೋರ್ಟ್‌

ನಿಮ್ಮ ಶೋಕಾಸ್‌ ನೋಟಿಸ್‌ ಸಂಪೂರ್ಣ ತದ್ವಿರುದ್ಧವಾಗಿದೆ ಎಂದು ಸುಪ್ರೀಂ ಒಕ್ಕೂಟ ಸರ್ಕಾರದ ಕಿವಿ ಹಿಂಡಿದೆ

- Advertisement -
- Advertisement -

ಪಂಜಾಬ್‌ನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯ ಭದ್ರತಾ ಲೋಪಗಳ ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಈ ಮಧ್ಯೆ, ಘಟನೆಯ ಬಗ್ಗೆ ತನಿಖೆ ನಡೆಸಲು ರಚಿಸಿದ್ದ ಸಮಿತಿಗಳನ್ನು ತಡೆಹಿಡಿಯುವಂತೆ ಒಕ್ಕೂಟ ಮತ್ತು ಪಂಜಾಬ್ ಸರ್ಕಾರಗಳೆರಡಕ್ಕೂ ಕೇಳಿಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಪ್ರಕರಣದ ಬಗ್ಗೆ ಲಾಯರ್ಸ್ ವಾಯ್ಸ್ ಎಂಬ ಸಂಸ್ಥೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ಆರೋಪ: 100 ಕ್ಕೂ ಹೆಚ್ಚು ಅಪರಿಚಿತರ ವಿರುದ್ಧ ಎಫ್‌ಐಆರ್

ಶುಕ್ರವಾರದಂದು ಸರ್ವೋಚ್ಚ ನ್ಯಾಯಾಲಯವು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಪ್ರಧಾನಮಂತ್ರಿಯ ಪಂಜಾಬ್ ಭೇಟಿಯಲ್ಲಿ “ಬೃಹತ್ ಭದ್ರತಾ ಲೋಪ” ಉಂಟಾದಾಗ ಮಾಡಿದ ವ್ಯವಸ್ಥೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು “ಭದ್ರಪಡಿಸಿ ಮತ್ತು ಸಂರಕ್ಷಿಸಲು” ನಿರ್ದೇಶಿಸಿತ್ತು.

ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳು ಪ್ರತ್ಯೇಕವಾಗಿ ರಚಿಸಿರುವ ತನಿಖಾ ಸಮಿತಿಗಳನ್ನು ತಡೆದಿಟ್ಟು, ಜನವರಿ 10 ರವರೆಗೆ ಈ ವಿಷಯವನ್ನು ನ್ಯಾಯಾಲಯವು ಮತ್ತೆ ಕೈಗೆತ್ತಿಕೊಳ್ಳುವವರೆಗೆ ತಮ್ಮ ವಿಚಾರಣೆಯನ್ನು ಮುಂದುವರಿಸಬಾರದು ಎಂದು ಅದು ಹೇಳಿದೆ. ಆದರೆ ನ್ಯಾಯಪೀಠವು ಇದನ್ನು ಆದೇಶದ ಭಾಗವಾಗಿ ನಿರ್ದೇಶಿಸದೆ, ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸುವಂತೆ ವಕೀಲರನ್ನು ಕೇಳಿಕೊಂಡಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ವಿವರವಾದ ಆದೇಶಗಳನ್ನು ನೀಡಲಿದೆ.

ಸಿಜೆಐ ಎನ್‌ವಿ ರಮಣ, ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರ ಪೀಠವು ಅರ್ಜಿಯ ವಿಚಾರಣೆ ನಡೆಸುತ್ತಿದೆ. ವಿಚಾರಣೆ ವೇಳೆ ಒಕ್ಕೂಟ ಸರ್ಕಾರವನ್ನು ಸುಪ್ರೀಂಕೊರ್ಟ್ ತರಾಟೆಗೂ ತೆಗೆದುಕೊಂಡಿದೆ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ಆರೋಪ: ಹೊಸ ವಿಡಿಯೊ ವೈರಲ್ ನೊಂದಿಗೆ ಮತ್ತಷ್ಟು ಪ್ರಶ್ನೆಗಳು

ಒಕ್ಕೂಟ ಸರ್ಕಾರದ ಪರವಾಗಿ ಹಾಜರಾದ ಸಾಲಿಟರ್‌ ಜನರಲ್‌ ತುಷಾರ್ ಮೆಹ್ತಾ, “ಪಂಜಾಬ್ ಪೊಲೀಸರಿಂದ ಯಾವುದೇ ಗುಪ್ತಚರ ಮಾಹಿತಿ ಇರಲಿಲ್ಲ. ಈ ಮಾಹಿತಿ ನೀಡುವುದು ಅವರ ಜವಾಬ್ದಾರಿಯಾಗಿದೆ. ಮಾರ್ಗದಲ್ಲಿ ಪ್ರತಿಭಟನಾಕಾರರ ಗುಂಪು ಗುಂಪು ಸೇರಿದೆ ಎಂದು ಬೆಂಗಾವಲು ಪಡೆಗೆ ಯಾವುದೇ ಸೂಚನೆ ನೀಡಿಲ್ಲ, ಸಂಪೂರ್ಣ ಗುಪ್ತಚರ ವೈಫಲ್ಯ ಕಂಡುಬಂದಿದೆ. ಪಂಜಾಬ್ ಪೊಲೀಸ್ ಡಿಜಿ ಅವರು ಪ್ರಧಾನಿ ಬೆಂಗಾವಲು ಪಡೆಗೆ ಸ್ಪಷ್ಟ ಸಂವಹನವನ್ನು ನೀಡಬೇಕಿತ್ತು.

ಇದು ಎಸ್‌ಪಿಜಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಇದಕ್ಕೆಲ್ಲಾ ಪೊಲೀಸ್ ಅಧಿಕಾರಿಗಳೇ ಹೊಣೆ. ಆದರೆ ರಾಜ್ಯ ಸರ್ಕಾರ ಅವರನ್ನು ರಕ್ಷಿಸುತ್ತಿದೆ ಎಂಬುದು ತುಂಬಾ ಗಂಭೀರ ವಿಚಾರವಾಗಿದೆ. ಕೇಂದ್ರ ಸಮಿತಿ ರಚಿಸಬೇಕಿತ್ತು” ಎಂದು ಹೇಳಿದ್ದಾರೆ.

ತುಷಾರ್ ಮೆಹ್ತಾ ಅವರಿಗೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಹಿಮಾ ಕೊಹ್ಲಿ, “ನೀವು ಈಗಾಗಲೇ ಶೋಕಾಸ್ ನೋಟಿಸ್‌ಗಳಲ್ಲಿ ಎಲ್ಲವನ್ನೂ ಊಹಿಸಿದರೆ ನ್ಯಾಯಾಲಯಕ್ಕೆ ಬರುವುದರಲ್ಲಿ ಏನು ಪ್ರಯೋಜನ?” ಎಂದು ಕೇಳಿದ್ದಾರೆ.

ಇದನ್ನೂ ಓದಿ:ಭದ್ರತಾ ಲೋಪ: ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್, ಪಂಜಾಬ್ ಸರ್ಕಾರದಿಂದ ತನಿಖಾ ತಂಡ…10 ಪಾಯಿಂಟ್ಸ್‌‌

“ನಿಮ್ಮ ಶೋಕಾಸ್‌ ನೋಟಿಸ್ ಸಂಪೂರ್ಣವಾಗಿ ಸ್ವಯಂ ವ್ಯತಿರಿಕ್ತವಾಗಿದೆ. ನೀವು ಎಸ್‌ಪಿಜಿ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ವಿಚಾರಣೆ ಮಾಡಲು ಸಮಿತಿಯನ್ನು ರಚಿಸುತ್ತೀರಿ. ಇದರ ನಂತರ ನೀವು ರಾಜ್ಯದ ಮುಖ್ಯ ಕಾರ್ಯದರ್ಶಿ(ಸಿಎಸ್‌) ಮತ್ತು ಪೊಲೀಸ್ ಮಹಾನಿರ್ದೇಶಕ(ಡಿಜಿ)ರನ್ನು ತಪ್ಪಿತಸ್ಥರೆಂದು ಪರಿಗಣಿಸುತ್ತೀರಿ. ಅವರನ್ನು ಅಪರಾಧಿ ಎಂದು ಪರಿಗಣಿಸಿದವರು ಯಾರು? ಅವರನ್ನು ಯಾರು ಪ್ರಶ್ನಿಸಿದ್ದಾರೆ?” ಎಂದು ಪೀಠದ ಮತ್ತೊಬ್ಬ ನ್ಯಾಯಮೂರ್ತಿ ಸೂರ್ಯ ಕಾಂತ್ ಕೇಳಿದ್ದಾರೆ.

“ಡಿಜಿ ಮತ್ತು ಸಿಎಸ್ ನಮ್ಮ ಮುಂದೆ ಬಂದಿದ್ದಾರೆ. ಲೋಪಕ್ಕೆ ಯಾರು ಹೊಣೆ ಎಂದು ನಾವು ತಿಳಿದುಕೊಳ್ಳುತ್ತೇವೆ. ರಾಜ್ಯ ಸರ್ಕಾರ ಮತ್ತು ಅರ್ಜಿದಾರರು ನ್ಯಾಯಯುತ ವಿಚಾರಣೆಯನ್ನು ಬಯಸುತ್ತಾರೆ. ನೀವು ಕೂಡಾ ನ್ಯಾಯಯುತ ವಿಚಾರಣೆಯನ್ನು ವಿರೋಧಿಸಲು ಸಾಧ್ಯವಿಲ್ಲ. ಹಾಗಾದರೆ ನಿಮ್ಮಿಂದ ಈ ಆಡಳಿತಾತ್ಮಕ ಮತ್ತು ಸತ್ಯಶೋಧನೆಯ ವಿಚಾರಣೆ ಏಕೆ?” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಕೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಸಿದ ತುಷಾರ್ ಮೆಹ್ತಾ, “ಶೋಕಾಸ್ ನೋಟಿಸ್‌ಗಳ ಅಡಿಪಾಯವು ಬ್ಲೂಬುಕ್ ಆಗಿದ್ದು, ಭದ್ರತೆಯ ಜವಾಬ್ದಾರಿ ಪೊಲೀಸ್ ಅಧಿಕಾರಿಗಳದ್ದಾಗಿದೆ ಎಂದು ಹೇಳುತ್ತದೆ. ರಸ್ತೆ ದಿಗ್ಬಂಧನದ ಬಗ್ಗೆ ಯಾವುದೇ ಪೂರ್ವ ಎಚ್ಚರಿಕೆ ಇರಲಿಲ್ಲ… ಡಿಜಿ ನಿಯಮಗಳನ್ನು ಅನುಸರಿಸಬೇಕಿತ್ತು. ನಿಯಮಗಳ ಬಗ್ಗೆ ಯಾವುದೇ ವಿವಾದವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ?’

ಇದಕ್ಕೆ ಮತ್ತೇ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಸೂರ್ಯ ಕಾಂತ್, “ಭದ್ರತಾ ಉಲ್ಲಂಘನೆಯಾಗಿದೆ ಮತ್ತು ಅದು ಗಂಭೀರ ವಿಷಯವಾಗಿದೆ. ಆದರೆ ಯಾರು ಹೊಣೆಗಾರರಾಗಿದ್ದರು ಎಂದು ಉಳಿದ ಸತ್ಯಾಂಶಗಳ ಬಗ್ಗೆ ಪರಿಶೀಲಿಸಬೇಕಾಗಿದೆ” ಎಂದು ಹೇಳಿದ್ದಾರೆ.

“ನೀವು ನಮ್ಮ ಆದೇಶಕ್ಕಿಂಲೂ ಮುಂಚೆ ನೋಟಿಸ್ ನೀಡಿದ್ದೀರಿ, ಇದರ ನಂತರ ನಾವು ನಮ್ಮ ಆದೇಶವನ್ನು ನೀಡಿದ್ದೇವೆ. ನೀವು ಅವರನ್ನು 24 ಗಂಟೆಗಳಲ್ಲಿ ಉತ್ತರಿಸಲು ಕೇಳುತ್ತಿರುವುದು ಸ್ವಲ್ಪ ಕಠಿಣವಾಗಿರಬಹುದು..” ಎಂದು ನ್ಯಾಯಮೂರ್ತಿ ಕೋಹ್ಲಿ ಅವರು ಹೇಳಿದ್ದಾರೆ.

“ನೀವು ರಾಜ್ಯದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಯಸಿದರೆ ಈ ನ್ಯಾಯಾಲಯಕ್ಕೆ ಮಾಡಲು ಏನು ಕೆಲಸವಿದೆ?”ಎಂದು ಮುಖ್ಯ ನ್ಯಾಮೂರ್ತಿ ಎನ್‌ವಿ ರಮಣ ಅವರು ಒಕ್ಕೂಟ ಸರ್ಕಾರವನ್ನು ಕೇಳಿದ್ದಾರೆ.

ಇದನ್ನೂ ಓದಿ:ಪಂಜಾಬ್‌ ಭಇದದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...