Homeಮುಖಪುಟಜಾತಿಗಣತಿಗೆ ಆರೆಸ್ಸೆಸ್ ನಾಯಕನಿಂದ ವಿರೋಧ

ಜಾತಿಗಣತಿಗೆ ಆರೆಸ್ಸೆಸ್ ನಾಯಕನಿಂದ ವಿರೋಧ

- Advertisement -
- Advertisement -

ಜಾತಿ ಆಧಾರಿತ ಜನಗಣತಿ ಮಾಡಬಾರದು ಎಂದು ಆರೆಸ್ಸೆಸ್ ಕಾರ್ಯಾಧ್ಯಕ್ಷ ಶ್ರೀಧರ್ ಗಾಡ್ಗೆ ಹೇಳಿದ್ದು, ಜಾತಿ ಗಣತಿಯಿಂದ ಏನು ಸಾಧಿಸಬಹುದು? ಜಾತಿಗಣತಿಯು ರಾಜಕೀಯವಾಗಿ ಕೆಲವರಿಗೆ ಲಾಭವನ್ನು ಮಾಡಬಹುದು. ಒಂದು ನಿರ್ದಿಷ್ಠ ಜಾತಿಯ ಜನಸಂಖ್ಯೆಯ ಬಗ್ಗೆ ಡೇಟಾವನ್ನು ನೀಡಬಹುದು, ಆದರೆ ಇದು ಸಾಮಾಜಿಕವಾಗಿ ಮತ್ತು ರಾಷ್ಟ್ರೀಯ ಏಕತೆಯ ದೃಷ್ಟಿಯಿಂದ ಉತ್ತಮವಲ್ಲ ಎಂದು ಜಾತಿಗಣತಿಗೆ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದ ಆಡಳಿತಾರೂಢ ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಸಚಿವರು ಮತ್ತು ಶಾಸಕರು ರೇಶಿಂಬಾಗ್‌ನಲ್ಲಿರುವ ಆರೆಸ್ಸೆಸ್ ಸಂಸ್ಥಾಪಕ ಕೆ ಬಿ ಹೆಡಗೇವಾರ್ ಮತ್ತು ಎಂಎಸ್ ಗೋಲ್ವಾಲ್ಕರ್ ಅವರ ಸ್ಮಾರಕಕ್ಕೆ ಭೇಟಿ ನೀಡಿದ್ದರು.

ಈ ವೇಳೆ ಮಾತನಾಡಿದ ಶ್ರೀಧರ್ ಗಾಡ್ಗೆ , ಜಾತಿವಾರು ಜನಗಣತಿ ಬೇಡ, ಅದಕ್ಕೆ ಕಾರಣವೇನಿಲ್ಲ, ಜಾತಿವಾರು ಜನಗಣತಿ ಮಾಡುವುದರಿಂದ ನಾವೇನು ಸಾಧಿಸುತ್ತೇವೆ? ಜಾತಿ ಗಣತಿ ಮಾಡುವುದು ತಪ್ಪು ಎಂದು ಹೇಳಿದ್ದಾರೆ.

ಜಾತಿ ಆಧಾರಿತ ಜನಗಣತಿಗೂ, ಮೀಸಲಾತಿಗೂ ಯಾವುದೇ ಸಂಬಂಧವಿಲ್ಲ ಎಂದ ಗಾಡ್ಗೆ, ಮೀಸಲಾತಿ ಬೇರೆ ವಿಷಯ ಮತ್ತು ನೀವು ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬಹುದು, ನಾನು ಯಾವ ಜಾತಿಯಲ್ಲಿ ಹುಟ್ಟಿದ್ದೇನೆ ಮತ್ತು ಮೀಸಲಾತಿ ಅಡಿಯಲ್ಲಿ ಬಂದಾಗ ಅದನ್ನು ಜಾತಿ ಉಲ್ಲೇಖಿಸಲಾಗುತ್ತದೆ. ಮೀಸಲಾತಿ ಮತ್ತು ಜಾತಿ ವ್ಯವಸ್ಥೆ ಬೇರೆ ಬೇರೆ ವಿಷಯಗಳಾಗಿದ್ದು, ಸಾಮಾಜಿಕ ಉನ್ನತಿಗಾಗಿ ಮೀಸಲಾತಿ ಜಾರಿಗೆ ತರಲಾಗಿದೆ ಎಂದು ಅವರು ಹೇಳಿದ್ದಾರೆ.

ಆರ್‌ಎಸ್‌ಎಸ್‌ಗೆ ಸ್ಪಷ್ಟ ನಿಲುವು ಇದೆ ಮತ್ತು ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಪ್ರಗತಿ ಹೊಂದುವವರೆಗೂ ಮೀಸಲಾತಿ ಮುಂದುವರಿಯಲಿದೆ ಎಂಬ ನಿರ್ಣಯವನ್ನು ಪ್ರತಿನಿಧಿ ಸಭೆಯಲ್ಲಿ ಅಂಗೀಕರಿಸಲಾಗಿದೆ. ಇದು ಸಾಮಾಜಿಕ ವ್ಯವಸ್ಥೆಯಾಗಿದೆ. ಆದರೆ ಜಾತಿ ಆಧಾರಿತ ಜನಗಣತಿಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ಹೆಡಗೇವಾರ್ ಸ್ಮೃತಿ ಮಂದಿರದ ಆವರಣದಲ್ಲಿ ಮಹಾರಾಷ್ಟ್ರದ ಆಡಳಿತ ಮೈತ್ರಿಕೂಟ ನಾಯಕರಿಗೆ ಆರೆಸ್ಸೆಸ್‌ ಪರಿಚಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಆರೆಸ್ಸೆಸ್ ನಾಯಕನ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌವಾಣ್, ಜಾತಿ ಆಧಾರಿತ ಜನಗಣತಿಯು ಪ್ರತಿ ಸಮುದಾಯದ ಜನ ಸಂಖ್ಯೆಯ ಸ್ಪಷ್ಟ ಚಿತ್ರಣವನ್ನು ನೀಡುತ್ತದೆ ಮತ್ತು ಸಾಮಾಜಿಕ ಕಲ್ಯಾಣ ಯೋಜನೆಗಳನ್ನು ತಲುಪಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಮಾಜವಾದಿ ಪಕ್ಷದ ನಾಯಕ ಅಬು ಅಜ್ಮಿ, ಜಾತಿ ಗಣತಿಯು ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಕಲ್ಯಾಣ ಸೌಲಭ್ಯಗಳನ್ನು ತಲುಪಿಸಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದ್ದಾರೆ.

ಇನ್ನೋರ್ವ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಈ ಬಗ್ಗೆ ಮಾತನಾಡಿದ್ದು, ಜಾತಿ ಗಣತಿ ಬೇಡಿಕೆಯ ಬಗ್ಗೆ ಚರ್ಚೆ ನಡೆಯಬೇಕು. ಏಕೆಂದರೆ ಅಂತಹ ಸಮೀಕ್ಷೆಯು ಸರಿಯಾದ ನೀತಿಗಳನ್ನು ರೂಪಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಬಿಹಾರದ ನಿತೀಶ್ ಕುಮಾರ್ ನೇತೃತ್ವದ ಸರಕಾರ ದೇಶದಲ್ಲೇ ಮೊದಲ ಬಾರಿಗೆ ಜಾತಿ ಗಣತಿಯ ವರದಿಯನ್ನು ಬಿಡುಗಡೆ ಮಾಡಿತ್ತು. ಆ ಬಳಿಕ ವಿವಿಧ ರಾಜ್ಯಗಳಲ್ಲಿ ಜಾತಿಗಣತಿಗೆ ಆಗ್ರಹ ಕೇಳಿಬಂದಿತ್ತು. ಕಾಂಗ್ರೆಸ್ ಹೈಕಮಾಂಡ್, ಪ್ರತಿಪಕ್ಷಗಳು ಜಾತಿಗಣತಿಗೆ ಬೆಂಬಲಿಸಿದ್ದವು.

ಇದನ್ನು ಓದಿ: ಸಂಸತ್ತಿನಲ್ಲಿ ಸಿಎಜಿ ವರದಿಗಳ ಮಂಡನೆಯಲ್ಲಿ ಗಣನೀಯ ಇಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೆ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...