Homeಅಂಕಣಗಳುನಾನಂತೂ ನಿವೃತ್ತಿಯಾಗಲ್ಲ ಕಂಡ್ರೀ!

ನಾನಂತೂ ನಿವೃತ್ತಿಯಾಗಲ್ಲ ಕಂಡ್ರೀ!

- Advertisement -
- Advertisement -

ಮೋದಿ ಸರಕಾರ ಒಂಬತ್ತು ವರ್ಷ ತುಂಬಿಸಿದ ಸಂತಸವನ್ನು, ದೇಶದ ತುಂಬ ಸಭೆ ಸಮಾರಂಭ ಯಜ್ಞ ಹೋಮ ಹವನ ಇತ್ಯಾದಿ ವೈದಿಕಾಚರಣೆಗಳಿಂದ ವಿಜೃಂಭಿಸಲು ತಯಾರಾಗುತ್ತಿರುವಾಗಲೇ ಭೀಕರ ರೈಲ್ವೆ ಅಪಘಾತ ಸಂಭವಿಸಿದೆ. ಎದೆ ನಡುಗಿಸುವ ಈ ಘಟನೆಯಿಂದ ದೇಶವೇ ಬೆಚ್ಚಿಬಿದ್ದಿದೆ. ಈ ಘಟನೆಗೆ ಕಾರಣರ್‍ಯಾರು, ಹೊಣೆಗಾರರಾರು ಎಂಬ ಚರ್ಚೆಯು ಅವ್ಯಾಹತವಾಗಿ ನಡೆದಿದೆ. ಇದು ಒಂದೆಡೆಯಾದರೆ ಮೋದಿಯವರ ಒಂಬತ್ತು ವರ್ಷದ ಸಂಭ್ರಮದ ಸಮಯದಲ್ಲಿ ಸಂಭವಿಸಿದ ಸಾವುಗಳನ್ನು ನೆನೆಯುವುದಾದರೆ: 2019ರಲ್ಲಿ ನಡೆದ ಘಟನೆಯಲ್ಲಿ, 40 ಜನ ಸೈನಿಕರ ಬಲಿದಾನಕ್ಕೆ ಸರಕಾರದ ನಿರ್ಲಕ್ಷವೇ ಕಾರಾಣವೆಂದು ಜಮ್ಮುಕಾಶ್ಮೀರದ ಮಾಜಿ ರಾಜ್ಯಪಾಲರು ಬಹಿರಂಗಂಪಡಿಸಿದ್ದಾರೆ; ನಂತರ ಕೃಷಿಕಾಯ್ದೆ ಜಾರಿಯನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ನಡೆದ ರೈತ ಪ್ರತಿಭಟನೆಯಲ್ಲಿ 750 ಜನ ರೈತರು ಅಸುನೀಗಿದರು. ಆ ಸಾವುಗಳ ಬಗ್ಗೆ ಮಾತನಾಡದ ಪ್ರಧಾನಿಯವರು, ಶಿವಮೊಗ್ಗ ಸುಬ್ಬಣ್ಣ ಎಂಬ ಗಾಯಕರೊಬ್ಬರು ತೀರಿಕೊಂಡಾಗ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಸಾವಿನಂಚಿನಲ್ಲಿದ್ದ ಸಿದ್ದೇಶ್ವರ ಸ್ವಾಮಿಗಳಿಗೆ ಫೋನ್ ಮಾಡಿದರು; ಆದರೆ ಸಿದ್ದೇಶ್ವರರಿಗೆ ಮಾತನಾಡಲು ಸಾಧ್ಯವಾಯಿತೋ ಇಲ್ಲವೋ! ಇವೆಲ್ಲಾ ಘಟನೆ ಪ್ರಧಾನಿಯ ಒಂಬತ್ತು ವರ್ಷದ ಸಂಭ್ರಮದಲ್ಲಿ ನೆನೆಸುವ ಘಟನೆಗಳಂತಲ್ಲಾ, ಥೂತ್ತೇರಿ.

*****

ಕಾಂಗ್ರೆಸ್ ಪಕ್ಷ ಚುನಾವಣಾ ಸಮಯದಲ್ಲಿ ಘೋಷಣೆ ಮಾಡಿದ ಗ್ಯಾರಂಟಿಗಳನ್ನು, ಸರ್ಕಾರ ರಚಿಸಿದ ಮೇಲೆ ಜಾರಿ ಮಾಡಲು ತೆಗೆದುಕೊಂಡ ಹದಿನೈದು ದಿನಗಳ ಅವಧಿಯಲ್ಲಿ, ಮನೆಯಿಂದ ಈಚೆಗೆದ್ದು ಬಂದ ಸೋತ ಬಿಜೆಪಿ ಎಮ್ಮೆಲ್ಲೆಗಳು, ಗ್ಯಾರಂಟಿಗಳನ್ನು ತಕ್ಷಣವೇ ಜಾರಿ ಮಾಡದಿದ್ದರೆ ಹೋರಾಟ ಮಾಡುತ್ತೇವೆ ಎಂದಿದ್ದರು. ದಳದ ಕುಮಾರಣ್ಣನವರು ಬೀದಿಗಿಳಿಯುವ ಬೆದರಿಕೆ ಹಾಕಿದರು. ಇದಾವುದಕ್ಕೂ ಕಿವಿಗೊಡದ ಸಿದ್ದು ಟೀಮು ಗ್ಯಾರಂಟಿಗಳನ್ನು ಜಾರಿ ಮಾಡಿಯೇಬಿಟ್ಟಿತು. ಇದರಿಂದ ಆಘಾತಗೊಂಡಂತಾದ ಟಿ.ವಿ ಮಾಧ್ಯಮದವರು ಸರಕಾರವನ್ನು ಅಕಾರಣವಾಗಿ ಟೀಕಿಸುವ ಅಡ್ನಾಡಿಗಳನ್ನು ತಂದು ಕೂರಿಸಿಕೊಂಡು ಎರಡು ಸಾವಿರ ರೂಗಳಿಂದ ಅತ್ತೆ ಸೊಸೆ ಜಗಳ ಶುರುವಾಗುತ್ತೆ, ಲಕ್ಷ ರೂಗಳ ಸಂಬಳ ತೆಗೆಯುವ ಕೆಲ ಮಹಿಳೆಯರಿಗೆ 2000 ಕೊಡುವುದು ಎಷ್ಟು ಸರಿ, ಈ ಭಾಗ್ಯಗಳಿಂದ ದೇಶ ದಿವಾಳಿಯಾಗುತ್ತೆ, ಇವುಗಳ ಮುಂದುವರಿಕೆ ಸಾಧ್ಯವಿಲ್ಲ ಎಂದು ಬೊಬ್ಬೆ ಹೊಡೆದವಲ್ಲ. ಸಾಮಾನ್ಯವಾಗಿ ಬಿಜೆಪಿ ಮನಸ್ಸುಗಳು ಬಡವರು ಸಫಲರಾಗುವುದನ್ನು ಸಹಿಸುವುದಿಲ್ಲವಂತಲ್ಲಾ, ಥೂತ್ತೇರಿ.

*****

ಬಿಜೆಪಿ ಮನಸ್ಸುಗಳಿಗೆ ಗ್ಯಾರಂಟಿ ಭಾಗ್ಯಗಳನ್ನು ಏಕೆ ಸಹಿಸಲಾಗುವುದಿಲ್ಲ ಎಂದರೆ ಅವರ ಧರ್ಮಗುರುವಾದ ಗೋಳವಲಕರ ಬಡವರ ಉದ್ಧಾರದ ವಿರೋಧಿ; ಬಡವರು ಅದರಲ್ಲೂ ಶೋಷಿತಜಾತಿ ಜನರಿಗೆ ಯಾವ ಸವಲತ್ತನ್ನು ಕೊಡಬಾರದು, ಅವರು ಉನ್ನತ ಹುದ್ದೆಗೆ ಬರದಂತೆ ನೋಡಿಕೊಳ್ಳಬೇಕು, ಅವರು ಎ.ಸಿ ಮತ್ತು ಡಿ.ಸಿ ಹಾಗೂ ತಹಸೀಲ್ದಾರನಾಗದಂತೆ ನೋಡಿಕೊಳ್ಳಬೇಕು, ನಿಮ್ಮನ್ನ ನೋಡಿದ ಕೂಡಲೇ ಅವರು ನಿಮ್ಮ ಪಾದ ನೋಡುತ್ತ ನಿಲ್ಲಬೇಕು, ಅದು ಬಿಟ್ಟು ಸರಿಸಮಾನರಾಗಿ ವರ್ತಿಸಬಾರದು, ಬಡವರು ಮತ್ತು ಕೆಳಜಾತಿಗಳು ಎಂದಿನವರೆಗೆ ಬಡವರಾಗಿರುತ್ತಾರೊ ಅಲ್ಲಿಯವರೆಗೆ ನೀವು ಸುಖವಾಗಿರುತ್ತೀರಿ ತಿಳಿಯಿರಿ ಎಂದು ಆತ ಹೇಳಿದ್ದಾನೆ. ಈ ವೇದವಾಕ್ಯ ಅವರ ಬರವಣಿಗೆಯಲ್ಲಿ ದಾಖಲಾಗಿದೆ. ಅನುಮಾನಗೊಂಡವರು ಗೋಳವಲಕರನನ್ನ ಓದಬಹುದು. ಅದನ್ನು ಓದಿಕೊಂಡ ಬಿಜೆಪಿಗಳು ಗ್ಯಾರಂಟಿ ಜಾರಿಯಾದಂದಿನಿಂದ ನಿದ್ದೆಯನ್ನೆ ಕಳೆದುಕೊಂಡು, ಗ್ಯಾರಂಟಿ ನಂಬಬೇಡಿ ಎಂದು ಕೂಗಾಡುತ್ತ ತಿರುಗುತ್ತಿವೆಯಂತಲ್ಲಾ, ಥೂತ್ತೇರಿ.

*****

ರಾಜಕಾರಣದಲ್ಲಿದ್ದರೆ ಮಾತ್ರ ಎಲ್ಲ ರೀತಿಯ ಮಜಗಳನ್ನೂ ಮಾಡುತ್ತ, ಆಸ್ತಿಪಾಸ್ತಿ ಗಳಿಸುತ್ತ, ಅದನ್ನು ನಿಭಾಯಿಸುತ್ತಾ ಇರಬಹುದುದೆಂದು ನಂಬಿರುವ ರಾಜಕಾರಣಿಗಳ ಪೈಕಿ ಮುಂಚೂಣಿಯಲ್ಲಿರುವ ಹೊನ್ನಾಳಿ ರೇಣುಕಾಚಾರಿ ಚುನಾವಣಾ ಫಲಿತಾಂಶ ಬಂದಕೂಡಲೇ ಸಿಡಿಲು ಬಡಿದವನಂತೆ ರಾಜಕೀಯಕ್ಕೆ ನಿವೃತ್ತಿ ಘೋಷಿಸಿ ಹೊನ್ನಾಳಿಯ ಜೊತೆಗೆ ಇಡೀ ನಾಡೇ ಬೆಚ್ಚುವಂತೆ ಮಾಡಿಬಿಟ್ಟರಲ್ಲಾ. ಬಿಜೆಪಿಯ ಜೊತೆಗೆ ಇಡೀ ನಾಡನ್ನೇ ಡಲ್ಲು ಮಾಡಿದ ರೇಣುಕಾಚಾರಿಯನ್ನು ಮಾತನಾಡಿಸಿ ಸಾಂತ್ವಾನ ಹೇಳುವುದು ನಮ್ಮ ಕರ್ತವ್ಯ ಎಂದು ಭಾವಿಸಿ ಫೋನ್ ಮಾಡಲಾಗಿ ರಿಂಗಾಯ್ತು. ರಿಂಗ್‌ಟೋನ್: “ನೀವು ಪ್ರಯತ್ನಿಸುತ್ತಿರುವ ಗ್ರಾಹಕ ವ್ಯಾಪ್ತಿ ಪ್ರದೇಶದಿಂದ ಹೊರಗಿದ್ದಾರೆ”; ಮತ್ತೆಮತ್ತೆ ಫೋನ್ ಮಾಡಲಾಗಿ ರಿಂಗಾಯ್ತು. “ಕ್ಯಂಚಾಲೊ ಮಚ್ಚಾಲೊ ಯಂಗವುಲಾ ನಿನ್ ಡವ್‌ಗಳು”..

“ಹಲೊ ಯಾರ್ರಿ?”

“ನಾನು ಸಾರ್ ಯಾಹು. ನಿಮ್ಮ ಬಾಮೈದುನ ಗೆಳೆಯ.”

“ಬಾಮೈದನ ಗೆಳೆಯ ಆಗಿದ್ರೆ ಅವುನಿಗೆ ಫೋನ್ ಮಾಡ್ರಿ.”

“ನಿಮ್ಮತ್ರ ಒಂದೆರಡು ಮಾತಾಡಬೇಕು ಸಾರ್.”

“ಅದೇನು ಜಲ್ದಿ ಹೇಳ್ರಿ.”

“ಬ್ಯುಸಿನಾ ಸಾರ್?”

“ಇಲ್ಲಿ ಕ್ರಿಕೆಟ್ ಆಡ್ತಾಯಿದ್ದಿನಿ ಕಂಡ್ರಿ.”

“ಎಲ್ಲಿ ಸಾರ್?”

“ನಮ್ಮೂರ ಸ್ಕೂಲು ಮೈದಾನದಲ್ಲಿ.”

“ಯಾರ ಜೊತೆ ಸಾರ್?”

“ಇನ್ಯಾರು.. ನಮ್ಮೂರ ಹುಡುಗರ ಜೊತೆ ಆಡ್ತಾಯಿದ್ದಿನಿ ಕಂಡ್ರೀ.”

“ನಿಜಕ್ಕೂ ನೀವು ಅಪರೂಪದ ರಾಜಕಾರಣಿ ಸಾರ್. ಮಂಡಿ ಉದ್ದ ನೀರಲ್ಲಿ ತೆಪ್ಪ ನಡುಸ್ತಿರಿ. ಸಣ್ಣುಡಗರ ಜೊತೆ ಕ್ರಿಕೆಟ್ ಆಡ್ತಿರಿ. ರಾಜಕಾರಣಿ ಈ ತರ ತಮಾಸಿಯಾಗಿರಬೇಕು ಸಾರ್.”

“ನಾನು ಯಾವತ್ತು ತಮಾಸಿ ಕಂಡ್ರಿ. ಯಾವುದ್ನೂ ಸೀರಿಯಸ್ಸಾಗಿ ತಗಳದಿಲ್ಲ.”

“ತಗೊಬಾರ್ದು ಸಾ. ಅಂಗೆ ತಗಂಡಿದ್ರೆ ಇಷ್ಟೊತ್ತಿಗೆ ಮನೆ ಬಿಟ್ಟು ಎಲ್ಲೋ ಇರ್ತಿದ್ರಿ ಅಲ್ಲುವಾ ಸರ್?”

“ಮುಗದೋದ ಕತೆನೆಲ್ಲ ನಾನೇ ಯೋಚನೆ ಮಾಡ್ತಯಿಲ್ಲ, ಇನ್ನ ನೀವ್ಯಾಕೆ ತಲೆ ಕೆಡಿಸಿಕೊಳ್ತಿರಿ.”

“ಈಶ್ವರಪ್ಪ ಅಂಥ ವ್ಯಕ್ತಿ ಮತ್ತೆ ನೀವು ಜೊತೆಲಿ ಸೋತರಿ; ಅವುರು ಚುನಾವಣಾ ರಾಜಕೀಯದಿಂದ ನಿವೃತ್ತರಾದ್ರೆ ನೀವು ರಾಜಕಾರಣದಿಂದ್ಲೇ ನಿವೃತ್ತರಾದರಲ್ಲಾ ಸಾರ್.”

“ರೀ ನಾನಿನ್ನೂ ನಿವೃತ್ತಿಯಾಗಿಲ್ಲ ಕಂಡ್ರಿ.”

“ಮತ್ತೆ ಘೋಷಣೆ ಮಾಡಿದರಲ್ಲಾ ಸಾರ್?”

“ಅದು ರಿಜಲ್ಟ್ ಬಂದಾಗ ಅಂಗಂದೆ; ಈಗ ನಮ್ಮ ಕ್ಷೇತ್ರದ ಜನತೆ ನೀವು ನಿವೃತ್ತಿಯಾದ್ರೆ ನಮ್ಮ ಕತೆಯೇನು ಅಂತಾವುರೆ..”

“ಗೆದ್ದಿರೋರು ನೋಡಕತರೆ ಬುಡಿ ಸಾರ್.”

“ಗೆದ್ದಿರೋರು ಅವುರ ಕಡಿಯೋರ್ನ ನೋಡಕತರೆ ಕಂಡ್ರಿ. ನನ್ನ ಪಾಲೊಯರ್ಸ್‌ನ ಯಾರು ರಕ್ಷಣೆ ಮಾಡ್ತರ್ರಿ?”

“ರಕ್ಷಣೆ ಮಾಡಬೇಕಾದ ಸ್ಥಿತಿಯಿದಿಯಾ ಸಾರ್?”

“ಇಲ್ಲಿನ ಮುಸ್ಲಿಮರಿಗೂ ನನಿಗೂ ಆಗಲ್ಲ ಕಂಡ್ರಿ.”

“ಶಾಸಕನಾದವನು ಎಲ್ಲಾ ಜನಾಂಗದ ರಕ್ಷಕನಾಗಬೇಕು ಸಾರ್. ಅದು ಬಿಟ್ಟು ಒಂದು ಜನಾಂಗನ ಅಪಾಯಕಾರಿಗಳು ದೇಶದ್ರೋಹಿಗಳು, ನಂಬಿಕೆಗೆ ಯೋಗ್ಯರಲ್ಲ ಅಂತ ಸುಳ್ಳುಸುಳ್ಳೆ ಬೈದರೆ ಅವರ ಮನಸ್ಸಿಗೆ ನೋವಾಗಲ್ಲಾವಾ ಸಾರ್?”

“ನೋವಾಗೋ ಅಂತ ಕೆಲಸ ಯಾಕ್ ಮಾಡಬೇಕ್ರಿ?”

“ಹೊನ್ನಾಳಿಲಿ ಯಾರಿಗೂ ಆಗದೆಯಿರೊ ಸಮಸ್ಯೆ ನಿಮಗ್ಯಂಗಾಯ್ತು ಸಾರ್? ಅಲ್ಲಿನ ಮುಸ್ಲಿಮರು, ಕುರುಬರು, ಲಿಂಗಾಯತರು ಮತ್ತು ಇತರೆ ಶೋಷಿತ ಜಾತಿಗಳ ಜೊತೆ ಆರಾಮಾಗಿರುವಾಗ, ನೀವು ಬಂದು ಈ ಮುಸ್ಲಿಮರ ನಂಬಬೇಡಿ ಅವರ ಮಸೀದಿಲಿ ವೆಪನ್ನಿವೆ, ಮಾರಕಾಸ್ತ್ರಗಳಿವೆ ಅಂತ ರೈಲು ಬುಟ್ಟು ಬೊಬ್ಬೆ ಹೊಡೆದರಲ್ಲಾ, ಇದು ಹೊನ್ನಾಳಿ ಜನಗಳಿಗೆ ಸುಳ್ಳು ಅನ್ನಸ್ತು. ಅದಕ್ಕೆ ತಕ್ಕ ಶಿಕ್ಷೆ ಅಂದ್ರೆ ನಿಮ್ಮನ್ನ ಚುನಾವಣೆಲಿ ಸೋಲುಸೋದನ್ನ ಯಲ್ಲ ಜನಾಂಗ ಮಾಡಿ ತೋರಿಸಿದಾವೆ ಸಾರ್. ಈ ಟೈಮಲ್ಲಿ ನಿಮ್ಮ ನಿವೃತ್ತಿ ಘೋಷಣೆ ಬಹಳ ಸೂಕ್ತವಾಗಿದೆ ಸಾರ್. ನಿಜಕ್ಕೂ ಪ್ರಾಯಶ್ಚಿತ್ತ ಅಂದ್ರೆ ಇದೆನೆ.”

“ನಾನು ನಿವೃತ್ತಿಯಾಗಿಲ್ಲ ಕಣ್ರಿ. ಮತ್ತೆ ಚುನಾವಣೆಗೆ ಬರ್ತಿನಿ.”

“ಜನ ಪುನಹ ಸೋಲಿಸಿದ್ರೆ?”

“ಆಗ ಬೇಕಾದ್ರೆ ನಿವೃತ್ತಿ ಘೋಷಣೆ ಮಾಡ್ತಿನಿ.”

“ಥೂತ್ತೇರಿ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...