Homeಅಂಕಣಗಳುನಾನಂತೂ ನಿವೃತ್ತಿಯಾಗಲ್ಲ ಕಂಡ್ರೀ!

ನಾನಂತೂ ನಿವೃತ್ತಿಯಾಗಲ್ಲ ಕಂಡ್ರೀ!

- Advertisement -
- Advertisement -

ಮೋದಿ ಸರಕಾರ ಒಂಬತ್ತು ವರ್ಷ ತುಂಬಿಸಿದ ಸಂತಸವನ್ನು, ದೇಶದ ತುಂಬ ಸಭೆ ಸಮಾರಂಭ ಯಜ್ಞ ಹೋಮ ಹವನ ಇತ್ಯಾದಿ ವೈದಿಕಾಚರಣೆಗಳಿಂದ ವಿಜೃಂಭಿಸಲು ತಯಾರಾಗುತ್ತಿರುವಾಗಲೇ ಭೀಕರ ರೈಲ್ವೆ ಅಪಘಾತ ಸಂಭವಿಸಿದೆ. ಎದೆ ನಡುಗಿಸುವ ಈ ಘಟನೆಯಿಂದ ದೇಶವೇ ಬೆಚ್ಚಿಬಿದ್ದಿದೆ. ಈ ಘಟನೆಗೆ ಕಾರಣರ್‍ಯಾರು, ಹೊಣೆಗಾರರಾರು ಎಂಬ ಚರ್ಚೆಯು ಅವ್ಯಾಹತವಾಗಿ ನಡೆದಿದೆ. ಇದು ಒಂದೆಡೆಯಾದರೆ ಮೋದಿಯವರ ಒಂಬತ್ತು ವರ್ಷದ ಸಂಭ್ರಮದ ಸಮಯದಲ್ಲಿ ಸಂಭವಿಸಿದ ಸಾವುಗಳನ್ನು ನೆನೆಯುವುದಾದರೆ: 2019ರಲ್ಲಿ ನಡೆದ ಘಟನೆಯಲ್ಲಿ, 40 ಜನ ಸೈನಿಕರ ಬಲಿದಾನಕ್ಕೆ ಸರಕಾರದ ನಿರ್ಲಕ್ಷವೇ ಕಾರಾಣವೆಂದು ಜಮ್ಮುಕಾಶ್ಮೀರದ ಮಾಜಿ ರಾಜ್ಯಪಾಲರು ಬಹಿರಂಗಂಪಡಿಸಿದ್ದಾರೆ; ನಂತರ ಕೃಷಿಕಾಯ್ದೆ ಜಾರಿಯನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ನಡೆದ ರೈತ ಪ್ರತಿಭಟನೆಯಲ್ಲಿ 750 ಜನ ರೈತರು ಅಸುನೀಗಿದರು. ಆ ಸಾವುಗಳ ಬಗ್ಗೆ ಮಾತನಾಡದ ಪ್ರಧಾನಿಯವರು, ಶಿವಮೊಗ್ಗ ಸುಬ್ಬಣ್ಣ ಎಂಬ ಗಾಯಕರೊಬ್ಬರು ತೀರಿಕೊಂಡಾಗ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಸಾವಿನಂಚಿನಲ್ಲಿದ್ದ ಸಿದ್ದೇಶ್ವರ ಸ್ವಾಮಿಗಳಿಗೆ ಫೋನ್ ಮಾಡಿದರು; ಆದರೆ ಸಿದ್ದೇಶ್ವರರಿಗೆ ಮಾತನಾಡಲು ಸಾಧ್ಯವಾಯಿತೋ ಇಲ್ಲವೋ! ಇವೆಲ್ಲಾ ಘಟನೆ ಪ್ರಧಾನಿಯ ಒಂಬತ್ತು ವರ್ಷದ ಸಂಭ್ರಮದಲ್ಲಿ ನೆನೆಸುವ ಘಟನೆಗಳಂತಲ್ಲಾ, ಥೂತ್ತೇರಿ.

*****

ಕಾಂಗ್ರೆಸ್ ಪಕ್ಷ ಚುನಾವಣಾ ಸಮಯದಲ್ಲಿ ಘೋಷಣೆ ಮಾಡಿದ ಗ್ಯಾರಂಟಿಗಳನ್ನು, ಸರ್ಕಾರ ರಚಿಸಿದ ಮೇಲೆ ಜಾರಿ ಮಾಡಲು ತೆಗೆದುಕೊಂಡ ಹದಿನೈದು ದಿನಗಳ ಅವಧಿಯಲ್ಲಿ, ಮನೆಯಿಂದ ಈಚೆಗೆದ್ದು ಬಂದ ಸೋತ ಬಿಜೆಪಿ ಎಮ್ಮೆಲ್ಲೆಗಳು, ಗ್ಯಾರಂಟಿಗಳನ್ನು ತಕ್ಷಣವೇ ಜಾರಿ ಮಾಡದಿದ್ದರೆ ಹೋರಾಟ ಮಾಡುತ್ತೇವೆ ಎಂದಿದ್ದರು. ದಳದ ಕುಮಾರಣ್ಣನವರು ಬೀದಿಗಿಳಿಯುವ ಬೆದರಿಕೆ ಹಾಕಿದರು. ಇದಾವುದಕ್ಕೂ ಕಿವಿಗೊಡದ ಸಿದ್ದು ಟೀಮು ಗ್ಯಾರಂಟಿಗಳನ್ನು ಜಾರಿ ಮಾಡಿಯೇಬಿಟ್ಟಿತು. ಇದರಿಂದ ಆಘಾತಗೊಂಡಂತಾದ ಟಿ.ವಿ ಮಾಧ್ಯಮದವರು ಸರಕಾರವನ್ನು ಅಕಾರಣವಾಗಿ ಟೀಕಿಸುವ ಅಡ್ನಾಡಿಗಳನ್ನು ತಂದು ಕೂರಿಸಿಕೊಂಡು ಎರಡು ಸಾವಿರ ರೂಗಳಿಂದ ಅತ್ತೆ ಸೊಸೆ ಜಗಳ ಶುರುವಾಗುತ್ತೆ, ಲಕ್ಷ ರೂಗಳ ಸಂಬಳ ತೆಗೆಯುವ ಕೆಲ ಮಹಿಳೆಯರಿಗೆ 2000 ಕೊಡುವುದು ಎಷ್ಟು ಸರಿ, ಈ ಭಾಗ್ಯಗಳಿಂದ ದೇಶ ದಿವಾಳಿಯಾಗುತ್ತೆ, ಇವುಗಳ ಮುಂದುವರಿಕೆ ಸಾಧ್ಯವಿಲ್ಲ ಎಂದು ಬೊಬ್ಬೆ ಹೊಡೆದವಲ್ಲ. ಸಾಮಾನ್ಯವಾಗಿ ಬಿಜೆಪಿ ಮನಸ್ಸುಗಳು ಬಡವರು ಸಫಲರಾಗುವುದನ್ನು ಸಹಿಸುವುದಿಲ್ಲವಂತಲ್ಲಾ, ಥೂತ್ತೇರಿ.

*****

ಬಿಜೆಪಿ ಮನಸ್ಸುಗಳಿಗೆ ಗ್ಯಾರಂಟಿ ಭಾಗ್ಯಗಳನ್ನು ಏಕೆ ಸಹಿಸಲಾಗುವುದಿಲ್ಲ ಎಂದರೆ ಅವರ ಧರ್ಮಗುರುವಾದ ಗೋಳವಲಕರ ಬಡವರ ಉದ್ಧಾರದ ವಿರೋಧಿ; ಬಡವರು ಅದರಲ್ಲೂ ಶೋಷಿತಜಾತಿ ಜನರಿಗೆ ಯಾವ ಸವಲತ್ತನ್ನು ಕೊಡಬಾರದು, ಅವರು ಉನ್ನತ ಹುದ್ದೆಗೆ ಬರದಂತೆ ನೋಡಿಕೊಳ್ಳಬೇಕು, ಅವರು ಎ.ಸಿ ಮತ್ತು ಡಿ.ಸಿ ಹಾಗೂ ತಹಸೀಲ್ದಾರನಾಗದಂತೆ ನೋಡಿಕೊಳ್ಳಬೇಕು, ನಿಮ್ಮನ್ನ ನೋಡಿದ ಕೂಡಲೇ ಅವರು ನಿಮ್ಮ ಪಾದ ನೋಡುತ್ತ ನಿಲ್ಲಬೇಕು, ಅದು ಬಿಟ್ಟು ಸರಿಸಮಾನರಾಗಿ ವರ್ತಿಸಬಾರದು, ಬಡವರು ಮತ್ತು ಕೆಳಜಾತಿಗಳು ಎಂದಿನವರೆಗೆ ಬಡವರಾಗಿರುತ್ತಾರೊ ಅಲ್ಲಿಯವರೆಗೆ ನೀವು ಸುಖವಾಗಿರುತ್ತೀರಿ ತಿಳಿಯಿರಿ ಎಂದು ಆತ ಹೇಳಿದ್ದಾನೆ. ಈ ವೇದವಾಕ್ಯ ಅವರ ಬರವಣಿಗೆಯಲ್ಲಿ ದಾಖಲಾಗಿದೆ. ಅನುಮಾನಗೊಂಡವರು ಗೋಳವಲಕರನನ್ನ ಓದಬಹುದು. ಅದನ್ನು ಓದಿಕೊಂಡ ಬಿಜೆಪಿಗಳು ಗ್ಯಾರಂಟಿ ಜಾರಿಯಾದಂದಿನಿಂದ ನಿದ್ದೆಯನ್ನೆ ಕಳೆದುಕೊಂಡು, ಗ್ಯಾರಂಟಿ ನಂಬಬೇಡಿ ಎಂದು ಕೂಗಾಡುತ್ತ ತಿರುಗುತ್ತಿವೆಯಂತಲ್ಲಾ, ಥೂತ್ತೇರಿ.

*****

ರಾಜಕಾರಣದಲ್ಲಿದ್ದರೆ ಮಾತ್ರ ಎಲ್ಲ ರೀತಿಯ ಮಜಗಳನ್ನೂ ಮಾಡುತ್ತ, ಆಸ್ತಿಪಾಸ್ತಿ ಗಳಿಸುತ್ತ, ಅದನ್ನು ನಿಭಾಯಿಸುತ್ತಾ ಇರಬಹುದುದೆಂದು ನಂಬಿರುವ ರಾಜಕಾರಣಿಗಳ ಪೈಕಿ ಮುಂಚೂಣಿಯಲ್ಲಿರುವ ಹೊನ್ನಾಳಿ ರೇಣುಕಾಚಾರಿ ಚುನಾವಣಾ ಫಲಿತಾಂಶ ಬಂದಕೂಡಲೇ ಸಿಡಿಲು ಬಡಿದವನಂತೆ ರಾಜಕೀಯಕ್ಕೆ ನಿವೃತ್ತಿ ಘೋಷಿಸಿ ಹೊನ್ನಾಳಿಯ ಜೊತೆಗೆ ಇಡೀ ನಾಡೇ ಬೆಚ್ಚುವಂತೆ ಮಾಡಿಬಿಟ್ಟರಲ್ಲಾ. ಬಿಜೆಪಿಯ ಜೊತೆಗೆ ಇಡೀ ನಾಡನ್ನೇ ಡಲ್ಲು ಮಾಡಿದ ರೇಣುಕಾಚಾರಿಯನ್ನು ಮಾತನಾಡಿಸಿ ಸಾಂತ್ವಾನ ಹೇಳುವುದು ನಮ್ಮ ಕರ್ತವ್ಯ ಎಂದು ಭಾವಿಸಿ ಫೋನ್ ಮಾಡಲಾಗಿ ರಿಂಗಾಯ್ತು. ರಿಂಗ್‌ಟೋನ್: “ನೀವು ಪ್ರಯತ್ನಿಸುತ್ತಿರುವ ಗ್ರಾಹಕ ವ್ಯಾಪ್ತಿ ಪ್ರದೇಶದಿಂದ ಹೊರಗಿದ್ದಾರೆ”; ಮತ್ತೆಮತ್ತೆ ಫೋನ್ ಮಾಡಲಾಗಿ ರಿಂಗಾಯ್ತು. “ಕ್ಯಂಚಾಲೊ ಮಚ್ಚಾಲೊ ಯಂಗವುಲಾ ನಿನ್ ಡವ್‌ಗಳು”..

“ಹಲೊ ಯಾರ್ರಿ?”

“ನಾನು ಸಾರ್ ಯಾಹು. ನಿಮ್ಮ ಬಾಮೈದುನ ಗೆಳೆಯ.”

“ಬಾಮೈದನ ಗೆಳೆಯ ಆಗಿದ್ರೆ ಅವುನಿಗೆ ಫೋನ್ ಮಾಡ್ರಿ.”

“ನಿಮ್ಮತ್ರ ಒಂದೆರಡು ಮಾತಾಡಬೇಕು ಸಾರ್.”

“ಅದೇನು ಜಲ್ದಿ ಹೇಳ್ರಿ.”

“ಬ್ಯುಸಿನಾ ಸಾರ್?”

“ಇಲ್ಲಿ ಕ್ರಿಕೆಟ್ ಆಡ್ತಾಯಿದ್ದಿನಿ ಕಂಡ್ರಿ.”

“ಎಲ್ಲಿ ಸಾರ್?”

“ನಮ್ಮೂರ ಸ್ಕೂಲು ಮೈದಾನದಲ್ಲಿ.”

“ಯಾರ ಜೊತೆ ಸಾರ್?”

“ಇನ್ಯಾರು.. ನಮ್ಮೂರ ಹುಡುಗರ ಜೊತೆ ಆಡ್ತಾಯಿದ್ದಿನಿ ಕಂಡ್ರೀ.”

“ನಿಜಕ್ಕೂ ನೀವು ಅಪರೂಪದ ರಾಜಕಾರಣಿ ಸಾರ್. ಮಂಡಿ ಉದ್ದ ನೀರಲ್ಲಿ ತೆಪ್ಪ ನಡುಸ್ತಿರಿ. ಸಣ್ಣುಡಗರ ಜೊತೆ ಕ್ರಿಕೆಟ್ ಆಡ್ತಿರಿ. ರಾಜಕಾರಣಿ ಈ ತರ ತಮಾಸಿಯಾಗಿರಬೇಕು ಸಾರ್.”

“ನಾನು ಯಾವತ್ತು ತಮಾಸಿ ಕಂಡ್ರಿ. ಯಾವುದ್ನೂ ಸೀರಿಯಸ್ಸಾಗಿ ತಗಳದಿಲ್ಲ.”

“ತಗೊಬಾರ್ದು ಸಾ. ಅಂಗೆ ತಗಂಡಿದ್ರೆ ಇಷ್ಟೊತ್ತಿಗೆ ಮನೆ ಬಿಟ್ಟು ಎಲ್ಲೋ ಇರ್ತಿದ್ರಿ ಅಲ್ಲುವಾ ಸರ್?”

“ಮುಗದೋದ ಕತೆನೆಲ್ಲ ನಾನೇ ಯೋಚನೆ ಮಾಡ್ತಯಿಲ್ಲ, ಇನ್ನ ನೀವ್ಯಾಕೆ ತಲೆ ಕೆಡಿಸಿಕೊಳ್ತಿರಿ.”

“ಈಶ್ವರಪ್ಪ ಅಂಥ ವ್ಯಕ್ತಿ ಮತ್ತೆ ನೀವು ಜೊತೆಲಿ ಸೋತರಿ; ಅವುರು ಚುನಾವಣಾ ರಾಜಕೀಯದಿಂದ ನಿವೃತ್ತರಾದ್ರೆ ನೀವು ರಾಜಕಾರಣದಿಂದ್ಲೇ ನಿವೃತ್ತರಾದರಲ್ಲಾ ಸಾರ್.”

“ರೀ ನಾನಿನ್ನೂ ನಿವೃತ್ತಿಯಾಗಿಲ್ಲ ಕಂಡ್ರಿ.”

“ಮತ್ತೆ ಘೋಷಣೆ ಮಾಡಿದರಲ್ಲಾ ಸಾರ್?”

“ಅದು ರಿಜಲ್ಟ್ ಬಂದಾಗ ಅಂಗಂದೆ; ಈಗ ನಮ್ಮ ಕ್ಷೇತ್ರದ ಜನತೆ ನೀವು ನಿವೃತ್ತಿಯಾದ್ರೆ ನಮ್ಮ ಕತೆಯೇನು ಅಂತಾವುರೆ..”

“ಗೆದ್ದಿರೋರು ನೋಡಕತರೆ ಬುಡಿ ಸಾರ್.”

“ಗೆದ್ದಿರೋರು ಅವುರ ಕಡಿಯೋರ್ನ ನೋಡಕತರೆ ಕಂಡ್ರಿ. ನನ್ನ ಪಾಲೊಯರ್ಸ್‌ನ ಯಾರು ರಕ್ಷಣೆ ಮಾಡ್ತರ್ರಿ?”

“ರಕ್ಷಣೆ ಮಾಡಬೇಕಾದ ಸ್ಥಿತಿಯಿದಿಯಾ ಸಾರ್?”

“ಇಲ್ಲಿನ ಮುಸ್ಲಿಮರಿಗೂ ನನಿಗೂ ಆಗಲ್ಲ ಕಂಡ್ರಿ.”

“ಶಾಸಕನಾದವನು ಎಲ್ಲಾ ಜನಾಂಗದ ರಕ್ಷಕನಾಗಬೇಕು ಸಾರ್. ಅದು ಬಿಟ್ಟು ಒಂದು ಜನಾಂಗನ ಅಪಾಯಕಾರಿಗಳು ದೇಶದ್ರೋಹಿಗಳು, ನಂಬಿಕೆಗೆ ಯೋಗ್ಯರಲ್ಲ ಅಂತ ಸುಳ್ಳುಸುಳ್ಳೆ ಬೈದರೆ ಅವರ ಮನಸ್ಸಿಗೆ ನೋವಾಗಲ್ಲಾವಾ ಸಾರ್?”

“ನೋವಾಗೋ ಅಂತ ಕೆಲಸ ಯಾಕ್ ಮಾಡಬೇಕ್ರಿ?”

“ಹೊನ್ನಾಳಿಲಿ ಯಾರಿಗೂ ಆಗದೆಯಿರೊ ಸಮಸ್ಯೆ ನಿಮಗ್ಯಂಗಾಯ್ತು ಸಾರ್? ಅಲ್ಲಿನ ಮುಸ್ಲಿಮರು, ಕುರುಬರು, ಲಿಂಗಾಯತರು ಮತ್ತು ಇತರೆ ಶೋಷಿತ ಜಾತಿಗಳ ಜೊತೆ ಆರಾಮಾಗಿರುವಾಗ, ನೀವು ಬಂದು ಈ ಮುಸ್ಲಿಮರ ನಂಬಬೇಡಿ ಅವರ ಮಸೀದಿಲಿ ವೆಪನ್ನಿವೆ, ಮಾರಕಾಸ್ತ್ರಗಳಿವೆ ಅಂತ ರೈಲು ಬುಟ್ಟು ಬೊಬ್ಬೆ ಹೊಡೆದರಲ್ಲಾ, ಇದು ಹೊನ್ನಾಳಿ ಜನಗಳಿಗೆ ಸುಳ್ಳು ಅನ್ನಸ್ತು. ಅದಕ್ಕೆ ತಕ್ಕ ಶಿಕ್ಷೆ ಅಂದ್ರೆ ನಿಮ್ಮನ್ನ ಚುನಾವಣೆಲಿ ಸೋಲುಸೋದನ್ನ ಯಲ್ಲ ಜನಾಂಗ ಮಾಡಿ ತೋರಿಸಿದಾವೆ ಸಾರ್. ಈ ಟೈಮಲ್ಲಿ ನಿಮ್ಮ ನಿವೃತ್ತಿ ಘೋಷಣೆ ಬಹಳ ಸೂಕ್ತವಾಗಿದೆ ಸಾರ್. ನಿಜಕ್ಕೂ ಪ್ರಾಯಶ್ಚಿತ್ತ ಅಂದ್ರೆ ಇದೆನೆ.”

“ನಾನು ನಿವೃತ್ತಿಯಾಗಿಲ್ಲ ಕಣ್ರಿ. ಮತ್ತೆ ಚುನಾವಣೆಗೆ ಬರ್ತಿನಿ.”

“ಜನ ಪುನಹ ಸೋಲಿಸಿದ್ರೆ?”

“ಆಗ ಬೇಕಾದ್ರೆ ನಿವೃತ್ತಿ ಘೋಷಣೆ ಮಾಡ್ತಿನಿ.”

“ಥೂತ್ತೇರಿ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...