Homeಚಳವಳಿಲಾಕ್‌ ಡೌನ್‌ ಕಾಲದಲ್ಲಿ ದೋಣಕುಪ್ಪೆ: ಲೋಕೇಶ್‌ ಬರೆದ ಸ್ವಾರಸ್ಯಕರ ವಿಷಾದಗೀತೆ

ಲಾಕ್‌ ಡೌನ್‌ ಕಾಲದಲ್ಲಿ ದೋಣಕುಪ್ಪೆ: ಲೋಕೇಶ್‌ ಬರೆದ ಸ್ವಾರಸ್ಯಕರ ವಿಷಾದಗೀತೆ

ಲಾಕ್‌ ಡೌನ್‌ ಕಾಲದಲ್ಲಿ ನಗರಗಳೇ ಎಲ್ಲರ ಗಮನ ಸೆಳೆದಿದ್ದವು. ಆದರೆ ಇದೇ ಹೊತ್ತಿನಲ್ಲಿ ನಗರಗಳಲ್ಲಿರುವವರೂ ಹೋಗಲು ಬಯಸುತ್ತಿದ್ದ ಹಳ್ಳಿಗಳ ಕಥೆ ಏನಾಗಿತ್ತು? ಇದನ್ನು ಸಾಕ್ಷಾತ್‌ ಅಲ್ಲೇ ಇದ್ದವರೇ ಬರೆಯಬೇಕೆಂದು, ಹಲವರಿಗೆ ಬೆನ್ನು ಹತ್ತಿದ್ದು ಕೆ.ಪಿ.ಸುರೇಶ್.‌ ಅಂತಹ ಒಂದು ಸ್ವಾರಸ್ಯಕರವಾದ ಆದರೆ ವಿಷಾದವನ್ನೂ ಹುಟ್ಟಿಸುವ ಬರಹವನ್ನು ಲೋಕೇಶ್‌ ಬರೆದಿದ್ದಾರೆ.

- Advertisement -
- Advertisement -

ಯುಗಾದಿ ಹಬ್ಬದ ಹಿಂದು ಮುಂದಿನ ರಾತ್ರಿಗಳು ಸಾಮಾನ್ಯವಾಗಿ ನಮಗೆ ನಿದ್ರಾರಹಿತ ರಾತ್ರಿಗಳು. ನಮ್ಮೂರು ದೋಣಕುಪ್ಪೆ. ಅದು ರಾಜ್ಯ ಹೆದ್ದಾರಿ 86 ರ ಪಕ್ಕದಲ್ಲಿ ಬರುವುದರಿಂದಲೂ, ಹೆದ್ದಾರಿಗೆ ನಮ್ಮ ಮನೆ ಹೊಂದಿಕೊಂಡಿರುವುದರಿಂದಲೂ, ಮಾಗಡಿ ದನಗಳ ಜಾತ್ರೆಗೆ ಮಂಡ್ಯ, ಮದ್ದೂರಿನ ಕಡೆ ರೈತರು ನಮ್ಮ ಮನೆ ಮುಂದೆ ರಸ್ತೆಯಲ್ಲೇ ಮಾಗಡಿ ಜಾತ್ರೆಗೆ ಹೋಗುತ್ತಾರೆ. ಬೇಸಿಗೆಯ ಬಿಸಲ ಬೇಗೆಗೆ ದನ ಬಳಲಿದಾವು ಎಂದು ರಾತ್ರಿ ಪ್ರಯಾಣ ಮಾಡುತ್ತಾರೆ. ರಾತ್ರಿ ಪೂರ ಲಾಳ ಕಟ್ಟಿದ ಗೊರಸುಗಳು ಡಾಂಬರು ರಸ್ತೆಗೆ ತಾಗಿ ಬರುವ ಶಬ್ದವೇ ತಾಳ; ಕೊರಳಿಗೆ ಕಟ್ಟಿದ ಘಂಟೆಗಳ ಸದ್ದೇ ಮೇಳ. ಒಟ್ಟಿನಲ್ಲಿ ದನಗಳ ಯಾತ್ರೆಯೇ ಸಂಗೀತದಂತಿದ್ದ ನಮ್ಮ ರಸ್ತೆಯಲ್ಲಿ ಈ ವರ್ಷ ಕಾರು, ಬೈಕುಗಳ ಮೊರೆತ, ಹಾರ್ನುಗಳ ಕರ್ಕಶ ದನಿಯ ಪರಿಣಾಮ ಕಣ್ಣುಗಳಿಂದ ನಿದ್ದೆ ಹಾರಿಹೋಯಿತು.

ಲಾಕ್‌ ಡೌನ್
ಸಾಂದರ್ಭಿಕ ಚಿತ್ರ

ರೂಢಿಯಂತೆ ಯುಗಾದಿಗೆ ಊರಿಗೆ ಬರುವವರಿದ್ದರೂ, ಈ ವರ್ಷ ಮೊದಲ ಬಾರಿಗೆ ಯುಗಾದಿಗೆ 21 ದಿನಗಳ ರಜೆ ಕೊಟ್ಟು ಇಡೀ ದೇಶವನ್ನೇ ಲಾಕ್ ಡೌನ್ ಮಾಡಿದ ಪರಿಣಾಮ ಬೆಂಗಳೂರಿನಲ್ಲೇ ಹೆಂಡತಿ ಮಕ್ಕಳೊಂದಿಗೆ ಹಬ್ಬವನ್ನು ಆಚರಿಸುತ್ತಿದ್ದವರು, ಹಳ್ಳಿಗೆ ಹೋದರೆ ತಮ್ಮ ಘನತೆಗೆ ಕುಂದೆಂದು ಭಾವಿಸುತ್ತಿದ್ದವರೂ ಕೂಡ 21 ದಿನಗಳು ಹೊರಗೆಲ್ಲೂ ಹೋಗದೆ, ಬೆಂಗಳೂರಿನ ಕಿಷ್ಕಿಂಧೆಯಂತಹ ಮನೆಯಲ್ಲೂ ಇರಲಾರದೆ ಗಂಟು ಮೂಟೆ ಕಟ್ಟಿ ಸಿಕ್ಕ ಸಿಕ್ಕ ವಾಹನಗಳಲ್ಲಿ ಹಳ್ಳಿಗೆ ದೌಡಾಯಿಸಿದ ಪರಿಣಾಮ ಸತತ 2-3 ದಿನ ನಮ್ಮೂರಿನ ರಸ್ತೆ ಗಿಜಿಗುಡುವಂತಾಯಿತು.

ಎರಡು ದಿನಗಳ ನಂತರ ಎಲ್ಲವೂ ಸ್ತಬ್ಧವಾಯಿತು. ರಸ್ತೆಗಳು ಬಿಕೋ ಎನ್ನುತ್ತಿದ್ದವು. ಆದರೆ ತುಂಬಾ ದಿನಗಳಿಂದ ಬರೀ ಮುದಿಜೀವಗಳೇ ಇದ್ದು ಕಳೆಗುಂದಿದ್ದ ಕೆಲವು ಮನೆಗಳಲ್ಲಿ ಮೊಮ್ಮಕ್ಕಳ ಹೆಜ್ಜೆ ಸಪ್ಪಳ ಮೂಡಿ, ಕೊನೆದಿನಗಳ ಎಣಿಸುವವರ ಕೊನೆಯಾಸೆ ತೀರಿತು. ಹಿರಿಜೀವಗಳು ತೃಪ್ತಿಗೊಂಡು ಕರೋನಾಗೆ ಮನದಲ್ಲೇ ನಮಿಸಿದವು.

ಎರಡು ದಿನಗಳು ಯುಗಾದಿ, ಕರಿ ಹಬ್ಬಗಳೆಂದು ಸಡಗರದಲ್ಲಿದ್ದ ನಮಗೆ ಮುಂಬರಲಿರುವ ಭೀಕರತೆಗಳ ಪರಿವೆಯೇ ಇರಲಿಲ್ಲ. ಹಲವು ವರ್ಷಗಳ ನಂತರ ಸಂಧಿಸಿದ್ದರಿಂದ ಆನಂದ ಪರವಶರಾಗಿ ಸುಖಸಾಗರದಲ್ಲಿ ತೇಲುತ್ತಲಿದ್ದವರಿಗೆ ಮುಂಬರುವ ಸುನಾಮಿಗೆ ತಾವು ಕೊಚ್ಚಿ ದಡ ಸೇರುವ ದಿನಗಳು ಇನ್ನೆರಡೇ ಎಂಬುವುದು ತಿಳಿದಿರಲಿಲ್ಲ.


ಹಬ್ಬ ಮುಗಿಯಿತು, ಒಣ ಬೇಸಾಯ ಮಾಡುವ ನಮ್ಮಂತವರಿಗೇನು ಚಿಂತೆಯಿಲ್ಲ, ಜಾನುವಾರುಗಳಿಗೆ ಇನ್ನೂ 2-3 ತಿಂಗಳಿಗಾಗುವಷ್ಟು ರಾಗಿ ಹುಲ್ಲು ಬಣವೆಯಲ್ಲಿತ್ತು. ಮಳೆ ಬರುವವರೆಗೂ ನೆಮ್ಮದಿಯ ಜೀವನ. ಆದರೆ ಸುಮಾರು ವರ್ಷಗಳ ಉಳಿತಾಯದ ಹಣದಲ್ಲೋ, ಸಾಲ ಮಾಡಿಯೋ ಕೊಳವೆ ಬಾವಿ ಕೊರೆಸಿ ಹಣ್ಣು ತರಕಾರಿಗಳನ್ನು ಬೆಳೆದವರಿಗೆ ಸಂಕಷ್ಟ ಶುರುವಾಯಿತು. ನಮ್ಮ ದೊಡ್ಡಪ್ಪನ ಮಗ ನಟರಾಜ ಒಂದು ಎಕರೆಯಲ್ಲಿ ತಿಂಗಳುರುಳಿಕಾಯಿ ಬೆಳೆದಿದ್ದ. ಒಳ್ಳೆಯ ಇಳುವರಿ ಬಂದಿತ್ತು. ಯಾವಾಗಲೂ ಎದುರಿಸುತ್ತಿದ್ದ ಕಾರ್ಮಿಕರ ಸಮಸ್ಯೆ ಇರಲಿಲ್ಲ. ಬೆಂಗಳೂರಿನಿಂದ ಬಂದಿದ್ದ ಅಕ್ಕಂದಿರು, ಅವರ  ಮಕ್ಕಳೆಲ್ಲ ಸೇರಿ ತುಂಬಾ ಘಾಸಿಯಲ್ಲದ ಕಾಯಿಬಿಡಿಸುವ ಕೆಲಸವನ್ನು ಮಾಡಿದ್ದರು. ಮಾರುಕಟ್ಟೆಗೆ ಸಾಗಿಸಲು ಸಾರಿಗೆ ವ್ಯವಸ್ಥೆ ಇಲ್ಲವೇ ಇಲ್ಲ. ಕಾಡಿ, ಬೇಡಿ, ದುಬಾರಿ ಬಾಡಿಗೆಗೆ ಲಗೇಜು ಆಟೋವೊಂದನ್ನು ಗೊತ್ತುಪಡಿಸಿಕೊಂಡು ಮಧ್ಯರಾತ್ರಿಗೇ ರಾಮನಗರ ಮಾರುಕಟ್ಟೆಗೆ ಕೊಂಡೊಯ್ದ. ಆದರೆ ಹುರುಳಿಕಾಯಿ ಕೇಳುವವರೇ ದಿಕ್ಕಿಲ್ಲ. ಬೆಳಗಿನ ಜಾವದವರೆಗೂ ಕಾದು ಇನ್ನು ಇಲ್ಲೇ ಇದ್ದರೆ ನಾತಂದ ಕಾಯನ್ನೇ ಮನೆಗೆ ಒಯ್ಯಬೇಕೆಂದು ಅರಿತು ಅದೇ ಆಟೋದಲ್ಲಿ ಬೆಂಗಳೂರು ಕೃಷ್ಣರಾಜ ಮಾರುಕಟ್ಟೆಗೆ ತಂದ. ಹಬ್ಬದ 2 ದಿನ ರಜೆ ತೆಗೆದುಕೊಂಡಿದ್ದರಿಂದ ಇದ್ದಬದ್ದದ್ದನ್ನೆಲ್ಲ ಒಂದೇ ದಿನ ಮಾರುಕಟ್ಟೆಗೆ ತಂದಿದ್ದಾರೆ ರೈತರು. ಆದರೆ ಕೊಳ್ಳುವ ಗಿರಾಕಿಗಳೇ ಇಲ್ಲ.

ಬೇರೆ ರಾಜ್ಯಕ್ಕೆ ತರಕಾರಿ ಕಳಿಸುವ ವ್ಯಾಪಾರಸ್ಥರು ಸಾಗಿಸಲು ಅವಕಾಶ ಇದೆಯೋ ಇಲ್ಲವೋ ಎಂಬ ಅನುಮಾನದಿಂದ ಕೊಳ್ಳಲು ಮುಂದೆ ಬರುತ್ತಿಲ್ಲ. ಪೊಲೀಸರು ವ್ಯಾಪಾರಕ್ಕೆ ಅವಕಾಶ ಕೊಡುತ್ತಾರೋ ಇಲ್ಲವೋ ಎಂದು ಚಿಲ್ಲರೆ ವ್ಯಾಪಾರಿಗಳು ಹೆಚ್ಚು ತರಕಾರಿಗಳಿಗೆ  ಬಂಡವಾಳ ಹೂಡಲು ಹೆದರಿದರು. ಈ ನಡುವೆ ಜನರ ಗುಂಪು ಸೇರಿದ್ದರಿಂದ ಪೊಲೀಸರು ಲಾಠಿ ಬೀಸಿದರು. ತರಕಾರಿ ಬೆಳದಿದ್ದಕ್ಕೆ ಬೋನಸ್ ಎಂಬಂತೆ ಬಾಸುಂಡೆಗಳು ಉಚಿತವಾಗಿ ದೊರಕಿದವು. ಪ್ರತಿ ವರ್ಷ ಈ ಸಮಯದಲ್ಲಿ ಮಣಕ್ಕೆ 800- 1000 ರೂಪಾಯಿಗಳಿರುತ್ತಿದ್ದ ಹುರುಳಿಕಾಯನ್ನು 250ಕ್ಕೆ ಮಾರಿ ಪೊಲೀಸರು ಹೊಡೆದಿದ್ದ ಕಾಲನ್ನು ಎಳೆಯುತ್ತಾ ಮನೆಗೆ ಬಂದ.

ಲಾಕ್‌ ಡೌನ್
ಎರಡು ಮೂರು ದಿನಗಳಲ್ಲಿ ತರಕಾರಿ ಮತ್ತು ಕೃಷಿ ಉತ್ಪನ್ನಗಳ ಸಾಗಣೆ ಮತ್ತು ವ್ಯಾಪಾರಕ್ಕೆ ಯಾವುದೇ ನಿರ್ಬಂಧವಿಲ್ಲವೆಂದು ಸರ್ಕಾರ ಸ್ಪಷ್ಟಪಡಿಸಿದ ನಂತರ ತರಕಾರಿ ಬೆಳೆದವರು ನಿಟ್ಟುಸಿರುಬಿಟ್ಟರು. ನಟರಾಜ ನಂತರದ ದಿನಗಳಲ್ಲಿ ರಾಮನಗರದಲ್ಲೇ ಮಣಕ್ಕೆ 500-600 ರೂಗಳಂತೆ ಹುರುಳಿಕಾಯನ್ನು ಮಾರಿದ.

ತರಕಾರಿಯದು ಒಂದು ಹಂತಕ್ಕೆ ಬರುತ್ತಿದ್ದಂತೆ ಹಾಲಿನ ಸಮಸ್ಯೆ ಶುರುವಾಯಿತು, ಉತ್ಪಾದನೆಯಾದ ಹಾಲಿನ ಬಹುಪಾಲು ವ್ಯಾಪಾರವಾಗದೆ ಉಳಿಯುತ್ತಿದ್ದುದರಿಂದ ಮತ್ತು ಅಷ್ಟೊಂದು ಹಾಲನ್ನು ಪುಡಿಮಾಡುವ ವ್ಯವಸ್ಥೆ ಇಲ್ಲದ ಕಾರಣ ಹಾಲು ಮಹಾಮಂಡಳಿಯವರು ಹಾಲಿನ ಶೇಖರಣೆ ನಿಲ್ಲಿಸುವರೆಂಬ ಸುದ್ದಿ ಕೇಳಿ, ಇಡೀ ಊರಿಗೂರೇ ದಂಗುಬಡಿದಂತಾಯಿತು. ಸುಮಾರು ರೈತರ ಅನ್ನಮಾರ್ಗವಾಗಿರುವ ಹಾಲು ಶೇಖರಣೆಯನ್ನು ನಿಲ್ಲಿಸಿದರೆ ರೈತರು ಘನಘೋರ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂಬುದನ್ನರಿತ ಸರ್ಕಾರ ಉಚಿತ ಹಾಲು ವಿತರಣೆ ಯೋಜನೆಯ ಮೂಲಕ ರೈತರ ಹಿತ ಕಾಯ್ದದ್ದನ್ನು ಸ್ಮರಿಸಲೇಬೇಕು.‌

ಲಾಕ್‌ ಡೌನ್

ಇತ್ತ ನಮ್ಮಪ್ಪ ಮಾವಿನ ತೋಟವನ್ನು ವ್ಯಾಪರಿಯೊಬ್ಬನಿಗೆ ಮಾರಿ ಆಗಲೇ 3 ತಿಂಗಳಾಗಿತ್ತು. ಆಗಲೇ ಒಂದೆರಡು ಸೇಂದುರ ಮರದ ಕಾಯಿಗಳನ್ನು ಲಾಕ್ ಡೌನ್‌ಗಿಂತ ಮೊದಲೇ ಕಿತ್ತುಕೊಂಡಿದ್ದ. ಈಗ ಅವನನ್ನು ಸ್ವಲ್ಪ ಮುಂಗಡ ಹಣ ಕೇಳಿದರೆ ಲಾಕ್ ಡೌನ್ ಮುಗಿಯಲಿ ಕೊಡುತ್ತೇನೆ ಎನ್ನುತ್ತಾನೆ. ಲಾಕ್ ಡೌನ್ ಮುಗಿಯದೆ ವ್ಯಾಪಾರ ಕಷ್ಟವಾಗುವ ಸಂದರ್ಭ ಬಂದರೆ ನಷ್ಟ ಅನುಭವಿಸಲು ತಯಾರಿಲ್ಲದ ಅವನು ಒಪ್ಪಂದ ರದ್ದುಗೊಳಿಸುವ ಇರಾದೆಯಲ್ಲಿದ್ದಾನೆ. ಆದರೆ ಎಲ್ಲವೂ ಸರಿಹೋಗಿ ವ್ಯಾಪಾರ ಸುಗಮವಾದರೆ? ತೋಟ ಬಿಟ್ಟು ಬರುವ ಲಾಭಕ್ಕೆ ಕಲ್ಲು ಹಾಕಿಕೊಳ್ಳುವುದಕ್ಕೆ ಇಷ್ಟವಿಲ್ಲದೆ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡುತ್ತಾನೆ. ಅವನ ಮಾತುಗಳಿಂದ ಗೊಂದಲಕ್ಕೊಳಗಾದ ನಮ್ಮಪ್ಪ ಮಾತ್ರ ತೋಟವನ್ನು ಬೇರೆ ವ್ಯಾಪಾರಿಗೂ ಮಾರದಂತಹ, ಇವನನ್ನು ನಂಬಿ ಸುಮ್ಮನೆಯೂ ಕೂರದಂತಹ ಎರಡಲುಗಿನ ಕತ್ತಿಗೆ ಕುತ್ತಿಗೆಯೊಡ್ಡಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರು ಊರಿಗೆ ಹೋಗದಂತೆ ತಡೆಯುತ್ತಿರುವುದೇಕೆ?


ಯುಗಾದಿ ಹಬ್ಬ, ಮದುವೆ ಲಗ್ನ ಕಾಲದಲ್ಲಿ ನಡೆಯುವ ಮದುವೆ ಮುಂಜಿ, ಊರ ಹಬ್ಬ, ಜಾತ್ರೆ, ದೇವರ ಉತ್ಸವಗಳನ್ನು ನಂಬಿಕೊಂಡು ಎಕರೆಗಟ್ಟಲೇ ಹೂ ಬೆಳೆದ ನನ್ನ ಇಬ್ಬರು ಸ್ನೇಹಿತರ ಪರಿಸ್ಥಿತಿಯಂತೂ ಯಾರಿಗೂ ಬೇಡ. ಲಾಕ್ ಡೌನ್ ಪರಿಣಾಮವಾಗಿ ಯಾವ ಸಂಭ್ರಮದ ಕಾರ್ಯಕ್ರಮವೂ ಬೇಡ, ಹೆಣದ ಮೇಲೆ ಹಾಕುವುದಕ್ಕೂ ಯಾರೂ ತೆಗೆದುಕೊಂಡು ಹೋಗುತ್ತಿಲ್ಲ. ನಷ್ಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡರೆ ಅವರದ್ದೇ ಹೆಣ ಶೃಂಗರಿಸುವುದಕ್ಕೆ ಮಾತ್ರ ಅವುಗಳ ಉಪಯೋಗ.
ನಮ್ಮೂರಿನ ಈ ಕತೆಗಳ ಮುಂದುವರಿಕೆಯಾಗಿ ಕೇವಲ ಒಂದೇ ವಾರಕ್ಕೆ ಕೆಲವರಿಗೆ ಹಳ್ಳಿ ಬೇಸರವಾಗತೊಡಗಿತು. ಬೆಂಗಳೂರಿನ ಟ್ರಾಫಿಕ್, ಮಾಲಿನ್ಯದಿಂದ ಬೇಸತ್ತವರಿಗೆ ಹಳ್ಳಿ ಆಪ್ತವಾಗತೊಡಗಿತು. ಕೃಷಿಯೋ, ಹೈನುಗಾರಿಕೆಯೋ ಮತ್ತೊಂದೋ ಮಾಡಿಕೊಂಡು ಊರಲ್ಲೇ ಬೇರು ಬಿಡುವ ಮಾನಸ್ಸಾಯಿತು ಕೆಲವರಿಗೆ. ಆದರೆ ಹಳ್ಳಿಯಲ್ಲಿ ಮಕ್ಕಳಿಗೆ ಸೂಕ್ತ ಶಿಕ್ಷಣ ವ್ಯವಸ್ಥೆ ಇಲ್ಲವೆಂಬುದು ಕೆಲವು ನಾರಿಯರ ಗೊಣಗಾಟ. ಸಣ್ಣ ಪುಟ್ಟ ಕೆಲಸ ಮಾಡಿ ತಮ್ಮ ದೇಹದ ಬಲಾಬಲ ಕಂಡ ಕೆಲವರಿಗೆ  ಕೊಬ್ಬುತುಂಬಿದ ತಮ್ಮ ದೇಹ ಕೃಷಿ ಕೆಲಸಗಳಿಗೆ ಸಹಕರಿಸುವುದಿಲ್ಲ ಎಂಬುದನ್ನು ಅರಿತವರು ಕೆಲವರು.. ಇಲ್ಲಿಯೇ ಉಳಿಯಬೇಕೆಂಬ ಅದಮ್ಯ ಆಸೆ ಹೊಂದಿದ ಕೆಲವರಿಗೆ ತಮ್ಮ ಬೈಕು, ಕಾರುಗಳ EMIಗಳು ದುಃಸ್ವಪ್ನವಾದವು. ಕೆಲವರಿಗೆ ಭೂಮಿ ಇಲ್ಲದಿರುವುದು ನುಂಗಲಾರದ ತುತ್ತಾಯಿತು. ಹಣದ ಹಿಂದೆ ಬಿದ್ದವರಿಗೆ, ಹಣವೊಂದೇ ಧ್ಯೇಯವಾದವರಿಗೆ ಹಳ್ಳಿಇನ್ನೂ ಅಸ್ಪೃಷ್ಯವಾಗಿಯೇ ಇದೆ.. ಒಟ್ಟಿನಲ್ಲಿ ನಗರದಿಂದ ಬಂದವರು ಹಳ್ಳಿಗಳಿಗೆ ಕೆಲವು ದಿನಗಳ ನಂತರ ವಿದಾಯ ಹೇಳುವುದು ಖಚಿತ, ಹಳ್ಳಿಗಳು ಮತ್ತೆ ಭಣಗುಡುವುದು ಖಾತರಿ.

ಲೇಖಕರು: ಲೋಕೇಶ್‌ ದೋಣಕುಪ್ಪೆ

ಸರಣಿ ಸಂಪಾದಕರು: ಕೆ.ಪಿ ಸುರೇಶ್‌


ಇದನ್ನೂ ಓದಿ: ಲಾಕ್‌ ಡೌನ್‌ ನಂತರದ ಪ್ರಥಮ ಆದ್ಯತೆ ಏನಾಗಿರಬೇಕು? ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರು ಹೀಗೆ ಹೇಳುತ್ತಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...