Homeಚಳವಳಿಲಾಕ್‌ ಡೌನ್‌ ಕಾಲದಲ್ಲಿ ದೋಣಕುಪ್ಪೆ: ಲೋಕೇಶ್‌ ಬರೆದ ಸ್ವಾರಸ್ಯಕರ ವಿಷಾದಗೀತೆ

ಲಾಕ್‌ ಡೌನ್‌ ಕಾಲದಲ್ಲಿ ದೋಣಕುಪ್ಪೆ: ಲೋಕೇಶ್‌ ಬರೆದ ಸ್ವಾರಸ್ಯಕರ ವಿಷಾದಗೀತೆ

ಲಾಕ್‌ ಡೌನ್‌ ಕಾಲದಲ್ಲಿ ನಗರಗಳೇ ಎಲ್ಲರ ಗಮನ ಸೆಳೆದಿದ್ದವು. ಆದರೆ ಇದೇ ಹೊತ್ತಿನಲ್ಲಿ ನಗರಗಳಲ್ಲಿರುವವರೂ ಹೋಗಲು ಬಯಸುತ್ತಿದ್ದ ಹಳ್ಳಿಗಳ ಕಥೆ ಏನಾಗಿತ್ತು? ಇದನ್ನು ಸಾಕ್ಷಾತ್‌ ಅಲ್ಲೇ ಇದ್ದವರೇ ಬರೆಯಬೇಕೆಂದು, ಹಲವರಿಗೆ ಬೆನ್ನು ಹತ್ತಿದ್ದು ಕೆ.ಪಿ.ಸುರೇಶ್.‌ ಅಂತಹ ಒಂದು ಸ್ವಾರಸ್ಯಕರವಾದ ಆದರೆ ವಿಷಾದವನ್ನೂ ಹುಟ್ಟಿಸುವ ಬರಹವನ್ನು ಲೋಕೇಶ್‌ ಬರೆದಿದ್ದಾರೆ.

- Advertisement -
- Advertisement -

ಯುಗಾದಿ ಹಬ್ಬದ ಹಿಂದು ಮುಂದಿನ ರಾತ್ರಿಗಳು ಸಾಮಾನ್ಯವಾಗಿ ನಮಗೆ ನಿದ್ರಾರಹಿತ ರಾತ್ರಿಗಳು. ನಮ್ಮೂರು ದೋಣಕುಪ್ಪೆ. ಅದು ರಾಜ್ಯ ಹೆದ್ದಾರಿ 86 ರ ಪಕ್ಕದಲ್ಲಿ ಬರುವುದರಿಂದಲೂ, ಹೆದ್ದಾರಿಗೆ ನಮ್ಮ ಮನೆ ಹೊಂದಿಕೊಂಡಿರುವುದರಿಂದಲೂ, ಮಾಗಡಿ ದನಗಳ ಜಾತ್ರೆಗೆ ಮಂಡ್ಯ, ಮದ್ದೂರಿನ ಕಡೆ ರೈತರು ನಮ್ಮ ಮನೆ ಮುಂದೆ ರಸ್ತೆಯಲ್ಲೇ ಮಾಗಡಿ ಜಾತ್ರೆಗೆ ಹೋಗುತ್ತಾರೆ. ಬೇಸಿಗೆಯ ಬಿಸಲ ಬೇಗೆಗೆ ದನ ಬಳಲಿದಾವು ಎಂದು ರಾತ್ರಿ ಪ್ರಯಾಣ ಮಾಡುತ್ತಾರೆ. ರಾತ್ರಿ ಪೂರ ಲಾಳ ಕಟ್ಟಿದ ಗೊರಸುಗಳು ಡಾಂಬರು ರಸ್ತೆಗೆ ತಾಗಿ ಬರುವ ಶಬ್ದವೇ ತಾಳ; ಕೊರಳಿಗೆ ಕಟ್ಟಿದ ಘಂಟೆಗಳ ಸದ್ದೇ ಮೇಳ. ಒಟ್ಟಿನಲ್ಲಿ ದನಗಳ ಯಾತ್ರೆಯೇ ಸಂಗೀತದಂತಿದ್ದ ನಮ್ಮ ರಸ್ತೆಯಲ್ಲಿ ಈ ವರ್ಷ ಕಾರು, ಬೈಕುಗಳ ಮೊರೆತ, ಹಾರ್ನುಗಳ ಕರ್ಕಶ ದನಿಯ ಪರಿಣಾಮ ಕಣ್ಣುಗಳಿಂದ ನಿದ್ದೆ ಹಾರಿಹೋಯಿತು.

ಲಾಕ್‌ ಡೌನ್
ಸಾಂದರ್ಭಿಕ ಚಿತ್ರ

ರೂಢಿಯಂತೆ ಯುಗಾದಿಗೆ ಊರಿಗೆ ಬರುವವರಿದ್ದರೂ, ಈ ವರ್ಷ ಮೊದಲ ಬಾರಿಗೆ ಯುಗಾದಿಗೆ 21 ದಿನಗಳ ರಜೆ ಕೊಟ್ಟು ಇಡೀ ದೇಶವನ್ನೇ ಲಾಕ್ ಡೌನ್ ಮಾಡಿದ ಪರಿಣಾಮ ಬೆಂಗಳೂರಿನಲ್ಲೇ ಹೆಂಡತಿ ಮಕ್ಕಳೊಂದಿಗೆ ಹಬ್ಬವನ್ನು ಆಚರಿಸುತ್ತಿದ್ದವರು, ಹಳ್ಳಿಗೆ ಹೋದರೆ ತಮ್ಮ ಘನತೆಗೆ ಕುಂದೆಂದು ಭಾವಿಸುತ್ತಿದ್ದವರೂ ಕೂಡ 21 ದಿನಗಳು ಹೊರಗೆಲ್ಲೂ ಹೋಗದೆ, ಬೆಂಗಳೂರಿನ ಕಿಷ್ಕಿಂಧೆಯಂತಹ ಮನೆಯಲ್ಲೂ ಇರಲಾರದೆ ಗಂಟು ಮೂಟೆ ಕಟ್ಟಿ ಸಿಕ್ಕ ಸಿಕ್ಕ ವಾಹನಗಳಲ್ಲಿ ಹಳ್ಳಿಗೆ ದೌಡಾಯಿಸಿದ ಪರಿಣಾಮ ಸತತ 2-3 ದಿನ ನಮ್ಮೂರಿನ ರಸ್ತೆ ಗಿಜಿಗುಡುವಂತಾಯಿತು.

ಎರಡು ದಿನಗಳ ನಂತರ ಎಲ್ಲವೂ ಸ್ತಬ್ಧವಾಯಿತು. ರಸ್ತೆಗಳು ಬಿಕೋ ಎನ್ನುತ್ತಿದ್ದವು. ಆದರೆ ತುಂಬಾ ದಿನಗಳಿಂದ ಬರೀ ಮುದಿಜೀವಗಳೇ ಇದ್ದು ಕಳೆಗುಂದಿದ್ದ ಕೆಲವು ಮನೆಗಳಲ್ಲಿ ಮೊಮ್ಮಕ್ಕಳ ಹೆಜ್ಜೆ ಸಪ್ಪಳ ಮೂಡಿ, ಕೊನೆದಿನಗಳ ಎಣಿಸುವವರ ಕೊನೆಯಾಸೆ ತೀರಿತು. ಹಿರಿಜೀವಗಳು ತೃಪ್ತಿಗೊಂಡು ಕರೋನಾಗೆ ಮನದಲ್ಲೇ ನಮಿಸಿದವು.

ಎರಡು ದಿನಗಳು ಯುಗಾದಿ, ಕರಿ ಹಬ್ಬಗಳೆಂದು ಸಡಗರದಲ್ಲಿದ್ದ ನಮಗೆ ಮುಂಬರಲಿರುವ ಭೀಕರತೆಗಳ ಪರಿವೆಯೇ ಇರಲಿಲ್ಲ. ಹಲವು ವರ್ಷಗಳ ನಂತರ ಸಂಧಿಸಿದ್ದರಿಂದ ಆನಂದ ಪರವಶರಾಗಿ ಸುಖಸಾಗರದಲ್ಲಿ ತೇಲುತ್ತಲಿದ್ದವರಿಗೆ ಮುಂಬರುವ ಸುನಾಮಿಗೆ ತಾವು ಕೊಚ್ಚಿ ದಡ ಸೇರುವ ದಿನಗಳು ಇನ್ನೆರಡೇ ಎಂಬುವುದು ತಿಳಿದಿರಲಿಲ್ಲ.


ಹಬ್ಬ ಮುಗಿಯಿತು, ಒಣ ಬೇಸಾಯ ಮಾಡುವ ನಮ್ಮಂತವರಿಗೇನು ಚಿಂತೆಯಿಲ್ಲ, ಜಾನುವಾರುಗಳಿಗೆ ಇನ್ನೂ 2-3 ತಿಂಗಳಿಗಾಗುವಷ್ಟು ರಾಗಿ ಹುಲ್ಲು ಬಣವೆಯಲ್ಲಿತ್ತು. ಮಳೆ ಬರುವವರೆಗೂ ನೆಮ್ಮದಿಯ ಜೀವನ. ಆದರೆ ಸುಮಾರು ವರ್ಷಗಳ ಉಳಿತಾಯದ ಹಣದಲ್ಲೋ, ಸಾಲ ಮಾಡಿಯೋ ಕೊಳವೆ ಬಾವಿ ಕೊರೆಸಿ ಹಣ್ಣು ತರಕಾರಿಗಳನ್ನು ಬೆಳೆದವರಿಗೆ ಸಂಕಷ್ಟ ಶುರುವಾಯಿತು. ನಮ್ಮ ದೊಡ್ಡಪ್ಪನ ಮಗ ನಟರಾಜ ಒಂದು ಎಕರೆಯಲ್ಲಿ ತಿಂಗಳುರುಳಿಕಾಯಿ ಬೆಳೆದಿದ್ದ. ಒಳ್ಳೆಯ ಇಳುವರಿ ಬಂದಿತ್ತು. ಯಾವಾಗಲೂ ಎದುರಿಸುತ್ತಿದ್ದ ಕಾರ್ಮಿಕರ ಸಮಸ್ಯೆ ಇರಲಿಲ್ಲ. ಬೆಂಗಳೂರಿನಿಂದ ಬಂದಿದ್ದ ಅಕ್ಕಂದಿರು, ಅವರ  ಮಕ್ಕಳೆಲ್ಲ ಸೇರಿ ತುಂಬಾ ಘಾಸಿಯಲ್ಲದ ಕಾಯಿಬಿಡಿಸುವ ಕೆಲಸವನ್ನು ಮಾಡಿದ್ದರು. ಮಾರುಕಟ್ಟೆಗೆ ಸಾಗಿಸಲು ಸಾರಿಗೆ ವ್ಯವಸ್ಥೆ ಇಲ್ಲವೇ ಇಲ್ಲ. ಕಾಡಿ, ಬೇಡಿ, ದುಬಾರಿ ಬಾಡಿಗೆಗೆ ಲಗೇಜು ಆಟೋವೊಂದನ್ನು ಗೊತ್ತುಪಡಿಸಿಕೊಂಡು ಮಧ್ಯರಾತ್ರಿಗೇ ರಾಮನಗರ ಮಾರುಕಟ್ಟೆಗೆ ಕೊಂಡೊಯ್ದ. ಆದರೆ ಹುರುಳಿಕಾಯಿ ಕೇಳುವವರೇ ದಿಕ್ಕಿಲ್ಲ. ಬೆಳಗಿನ ಜಾವದವರೆಗೂ ಕಾದು ಇನ್ನು ಇಲ್ಲೇ ಇದ್ದರೆ ನಾತಂದ ಕಾಯನ್ನೇ ಮನೆಗೆ ಒಯ್ಯಬೇಕೆಂದು ಅರಿತು ಅದೇ ಆಟೋದಲ್ಲಿ ಬೆಂಗಳೂರು ಕೃಷ್ಣರಾಜ ಮಾರುಕಟ್ಟೆಗೆ ತಂದ. ಹಬ್ಬದ 2 ದಿನ ರಜೆ ತೆಗೆದುಕೊಂಡಿದ್ದರಿಂದ ಇದ್ದಬದ್ದದ್ದನ್ನೆಲ್ಲ ಒಂದೇ ದಿನ ಮಾರುಕಟ್ಟೆಗೆ ತಂದಿದ್ದಾರೆ ರೈತರು. ಆದರೆ ಕೊಳ್ಳುವ ಗಿರಾಕಿಗಳೇ ಇಲ್ಲ.

ಬೇರೆ ರಾಜ್ಯಕ್ಕೆ ತರಕಾರಿ ಕಳಿಸುವ ವ್ಯಾಪಾರಸ್ಥರು ಸಾಗಿಸಲು ಅವಕಾಶ ಇದೆಯೋ ಇಲ್ಲವೋ ಎಂಬ ಅನುಮಾನದಿಂದ ಕೊಳ್ಳಲು ಮುಂದೆ ಬರುತ್ತಿಲ್ಲ. ಪೊಲೀಸರು ವ್ಯಾಪಾರಕ್ಕೆ ಅವಕಾಶ ಕೊಡುತ್ತಾರೋ ಇಲ್ಲವೋ ಎಂದು ಚಿಲ್ಲರೆ ವ್ಯಾಪಾರಿಗಳು ಹೆಚ್ಚು ತರಕಾರಿಗಳಿಗೆ  ಬಂಡವಾಳ ಹೂಡಲು ಹೆದರಿದರು. ಈ ನಡುವೆ ಜನರ ಗುಂಪು ಸೇರಿದ್ದರಿಂದ ಪೊಲೀಸರು ಲಾಠಿ ಬೀಸಿದರು. ತರಕಾರಿ ಬೆಳದಿದ್ದಕ್ಕೆ ಬೋನಸ್ ಎಂಬಂತೆ ಬಾಸುಂಡೆಗಳು ಉಚಿತವಾಗಿ ದೊರಕಿದವು. ಪ್ರತಿ ವರ್ಷ ಈ ಸಮಯದಲ್ಲಿ ಮಣಕ್ಕೆ 800- 1000 ರೂಪಾಯಿಗಳಿರುತ್ತಿದ್ದ ಹುರುಳಿಕಾಯನ್ನು 250ಕ್ಕೆ ಮಾರಿ ಪೊಲೀಸರು ಹೊಡೆದಿದ್ದ ಕಾಲನ್ನು ಎಳೆಯುತ್ತಾ ಮನೆಗೆ ಬಂದ.

ಲಾಕ್‌ ಡೌನ್
ಎರಡು ಮೂರು ದಿನಗಳಲ್ಲಿ ತರಕಾರಿ ಮತ್ತು ಕೃಷಿ ಉತ್ಪನ್ನಗಳ ಸಾಗಣೆ ಮತ್ತು ವ್ಯಾಪಾರಕ್ಕೆ ಯಾವುದೇ ನಿರ್ಬಂಧವಿಲ್ಲವೆಂದು ಸರ್ಕಾರ ಸ್ಪಷ್ಟಪಡಿಸಿದ ನಂತರ ತರಕಾರಿ ಬೆಳೆದವರು ನಿಟ್ಟುಸಿರುಬಿಟ್ಟರು. ನಟರಾಜ ನಂತರದ ದಿನಗಳಲ್ಲಿ ರಾಮನಗರದಲ್ಲೇ ಮಣಕ್ಕೆ 500-600 ರೂಗಳಂತೆ ಹುರುಳಿಕಾಯನ್ನು ಮಾರಿದ.

ತರಕಾರಿಯದು ಒಂದು ಹಂತಕ್ಕೆ ಬರುತ್ತಿದ್ದಂತೆ ಹಾಲಿನ ಸಮಸ್ಯೆ ಶುರುವಾಯಿತು, ಉತ್ಪಾದನೆಯಾದ ಹಾಲಿನ ಬಹುಪಾಲು ವ್ಯಾಪಾರವಾಗದೆ ಉಳಿಯುತ್ತಿದ್ದುದರಿಂದ ಮತ್ತು ಅಷ್ಟೊಂದು ಹಾಲನ್ನು ಪುಡಿಮಾಡುವ ವ್ಯವಸ್ಥೆ ಇಲ್ಲದ ಕಾರಣ ಹಾಲು ಮಹಾಮಂಡಳಿಯವರು ಹಾಲಿನ ಶೇಖರಣೆ ನಿಲ್ಲಿಸುವರೆಂಬ ಸುದ್ದಿ ಕೇಳಿ, ಇಡೀ ಊರಿಗೂರೇ ದಂಗುಬಡಿದಂತಾಯಿತು. ಸುಮಾರು ರೈತರ ಅನ್ನಮಾರ್ಗವಾಗಿರುವ ಹಾಲು ಶೇಖರಣೆಯನ್ನು ನಿಲ್ಲಿಸಿದರೆ ರೈತರು ಘನಘೋರ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂಬುದನ್ನರಿತ ಸರ್ಕಾರ ಉಚಿತ ಹಾಲು ವಿತರಣೆ ಯೋಜನೆಯ ಮೂಲಕ ರೈತರ ಹಿತ ಕಾಯ್ದದ್ದನ್ನು ಸ್ಮರಿಸಲೇಬೇಕು.‌

ಲಾಕ್‌ ಡೌನ್

ಇತ್ತ ನಮ್ಮಪ್ಪ ಮಾವಿನ ತೋಟವನ್ನು ವ್ಯಾಪರಿಯೊಬ್ಬನಿಗೆ ಮಾರಿ ಆಗಲೇ 3 ತಿಂಗಳಾಗಿತ್ತು. ಆಗಲೇ ಒಂದೆರಡು ಸೇಂದುರ ಮರದ ಕಾಯಿಗಳನ್ನು ಲಾಕ್ ಡೌನ್‌ಗಿಂತ ಮೊದಲೇ ಕಿತ್ತುಕೊಂಡಿದ್ದ. ಈಗ ಅವನನ್ನು ಸ್ವಲ್ಪ ಮುಂಗಡ ಹಣ ಕೇಳಿದರೆ ಲಾಕ್ ಡೌನ್ ಮುಗಿಯಲಿ ಕೊಡುತ್ತೇನೆ ಎನ್ನುತ್ತಾನೆ. ಲಾಕ್ ಡೌನ್ ಮುಗಿಯದೆ ವ್ಯಾಪಾರ ಕಷ್ಟವಾಗುವ ಸಂದರ್ಭ ಬಂದರೆ ನಷ್ಟ ಅನುಭವಿಸಲು ತಯಾರಿಲ್ಲದ ಅವನು ಒಪ್ಪಂದ ರದ್ದುಗೊಳಿಸುವ ಇರಾದೆಯಲ್ಲಿದ್ದಾನೆ. ಆದರೆ ಎಲ್ಲವೂ ಸರಿಹೋಗಿ ವ್ಯಾಪಾರ ಸುಗಮವಾದರೆ? ತೋಟ ಬಿಟ್ಟು ಬರುವ ಲಾಭಕ್ಕೆ ಕಲ್ಲು ಹಾಕಿಕೊಳ್ಳುವುದಕ್ಕೆ ಇಷ್ಟವಿಲ್ಲದೆ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡುತ್ತಾನೆ. ಅವನ ಮಾತುಗಳಿಂದ ಗೊಂದಲಕ್ಕೊಳಗಾದ ನಮ್ಮಪ್ಪ ಮಾತ್ರ ತೋಟವನ್ನು ಬೇರೆ ವ್ಯಾಪಾರಿಗೂ ಮಾರದಂತಹ, ಇವನನ್ನು ನಂಬಿ ಸುಮ್ಮನೆಯೂ ಕೂರದಂತಹ ಎರಡಲುಗಿನ ಕತ್ತಿಗೆ ಕುತ್ತಿಗೆಯೊಡ್ಡಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರು ಊರಿಗೆ ಹೋಗದಂತೆ ತಡೆಯುತ್ತಿರುವುದೇಕೆ?


ಯುಗಾದಿ ಹಬ್ಬ, ಮದುವೆ ಲಗ್ನ ಕಾಲದಲ್ಲಿ ನಡೆಯುವ ಮದುವೆ ಮುಂಜಿ, ಊರ ಹಬ್ಬ, ಜಾತ್ರೆ, ದೇವರ ಉತ್ಸವಗಳನ್ನು ನಂಬಿಕೊಂಡು ಎಕರೆಗಟ್ಟಲೇ ಹೂ ಬೆಳೆದ ನನ್ನ ಇಬ್ಬರು ಸ್ನೇಹಿತರ ಪರಿಸ್ಥಿತಿಯಂತೂ ಯಾರಿಗೂ ಬೇಡ. ಲಾಕ್ ಡೌನ್ ಪರಿಣಾಮವಾಗಿ ಯಾವ ಸಂಭ್ರಮದ ಕಾರ್ಯಕ್ರಮವೂ ಬೇಡ, ಹೆಣದ ಮೇಲೆ ಹಾಕುವುದಕ್ಕೂ ಯಾರೂ ತೆಗೆದುಕೊಂಡು ಹೋಗುತ್ತಿಲ್ಲ. ನಷ್ಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡರೆ ಅವರದ್ದೇ ಹೆಣ ಶೃಂಗರಿಸುವುದಕ್ಕೆ ಮಾತ್ರ ಅವುಗಳ ಉಪಯೋಗ.
ನಮ್ಮೂರಿನ ಈ ಕತೆಗಳ ಮುಂದುವರಿಕೆಯಾಗಿ ಕೇವಲ ಒಂದೇ ವಾರಕ್ಕೆ ಕೆಲವರಿಗೆ ಹಳ್ಳಿ ಬೇಸರವಾಗತೊಡಗಿತು. ಬೆಂಗಳೂರಿನ ಟ್ರಾಫಿಕ್, ಮಾಲಿನ್ಯದಿಂದ ಬೇಸತ್ತವರಿಗೆ ಹಳ್ಳಿ ಆಪ್ತವಾಗತೊಡಗಿತು. ಕೃಷಿಯೋ, ಹೈನುಗಾರಿಕೆಯೋ ಮತ್ತೊಂದೋ ಮಾಡಿಕೊಂಡು ಊರಲ್ಲೇ ಬೇರು ಬಿಡುವ ಮಾನಸ್ಸಾಯಿತು ಕೆಲವರಿಗೆ. ಆದರೆ ಹಳ್ಳಿಯಲ್ಲಿ ಮಕ್ಕಳಿಗೆ ಸೂಕ್ತ ಶಿಕ್ಷಣ ವ್ಯವಸ್ಥೆ ಇಲ್ಲವೆಂಬುದು ಕೆಲವು ನಾರಿಯರ ಗೊಣಗಾಟ. ಸಣ್ಣ ಪುಟ್ಟ ಕೆಲಸ ಮಾಡಿ ತಮ್ಮ ದೇಹದ ಬಲಾಬಲ ಕಂಡ ಕೆಲವರಿಗೆ  ಕೊಬ್ಬುತುಂಬಿದ ತಮ್ಮ ದೇಹ ಕೃಷಿ ಕೆಲಸಗಳಿಗೆ ಸಹಕರಿಸುವುದಿಲ್ಲ ಎಂಬುದನ್ನು ಅರಿತವರು ಕೆಲವರು.. ಇಲ್ಲಿಯೇ ಉಳಿಯಬೇಕೆಂಬ ಅದಮ್ಯ ಆಸೆ ಹೊಂದಿದ ಕೆಲವರಿಗೆ ತಮ್ಮ ಬೈಕು, ಕಾರುಗಳ EMIಗಳು ದುಃಸ್ವಪ್ನವಾದವು. ಕೆಲವರಿಗೆ ಭೂಮಿ ಇಲ್ಲದಿರುವುದು ನುಂಗಲಾರದ ತುತ್ತಾಯಿತು. ಹಣದ ಹಿಂದೆ ಬಿದ್ದವರಿಗೆ, ಹಣವೊಂದೇ ಧ್ಯೇಯವಾದವರಿಗೆ ಹಳ್ಳಿಇನ್ನೂ ಅಸ್ಪೃಷ್ಯವಾಗಿಯೇ ಇದೆ.. ಒಟ್ಟಿನಲ್ಲಿ ನಗರದಿಂದ ಬಂದವರು ಹಳ್ಳಿಗಳಿಗೆ ಕೆಲವು ದಿನಗಳ ನಂತರ ವಿದಾಯ ಹೇಳುವುದು ಖಚಿತ, ಹಳ್ಳಿಗಳು ಮತ್ತೆ ಭಣಗುಡುವುದು ಖಾತರಿ.

ಲೇಖಕರು: ಲೋಕೇಶ್‌ ದೋಣಕುಪ್ಪೆ

ಸರಣಿ ಸಂಪಾದಕರು: ಕೆ.ಪಿ ಸುರೇಶ್‌


ಇದನ್ನೂ ಓದಿ: ಲಾಕ್‌ ಡೌನ್‌ ನಂತರದ ಪ್ರಥಮ ಆದ್ಯತೆ ಏನಾಗಿರಬೇಕು? ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರು ಹೀಗೆ ಹೇಳುತ್ತಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...