Homeಚಳವಳಿಲಾಕ್‌ ಡೌನ್‌ ಕಾಲದಲ್ಲಿ ದೋಣಕುಪ್ಪೆ: ಲೋಕೇಶ್‌ ಬರೆದ ಸ್ವಾರಸ್ಯಕರ ವಿಷಾದಗೀತೆ

ಲಾಕ್‌ ಡೌನ್‌ ಕಾಲದಲ್ಲಿ ದೋಣಕುಪ್ಪೆ: ಲೋಕೇಶ್‌ ಬರೆದ ಸ್ವಾರಸ್ಯಕರ ವಿಷಾದಗೀತೆ

ಲಾಕ್‌ ಡೌನ್‌ ಕಾಲದಲ್ಲಿ ನಗರಗಳೇ ಎಲ್ಲರ ಗಮನ ಸೆಳೆದಿದ್ದವು. ಆದರೆ ಇದೇ ಹೊತ್ತಿನಲ್ಲಿ ನಗರಗಳಲ್ಲಿರುವವರೂ ಹೋಗಲು ಬಯಸುತ್ತಿದ್ದ ಹಳ್ಳಿಗಳ ಕಥೆ ಏನಾಗಿತ್ತು? ಇದನ್ನು ಸಾಕ್ಷಾತ್‌ ಅಲ್ಲೇ ಇದ್ದವರೇ ಬರೆಯಬೇಕೆಂದು, ಹಲವರಿಗೆ ಬೆನ್ನು ಹತ್ತಿದ್ದು ಕೆ.ಪಿ.ಸುರೇಶ್.‌ ಅಂತಹ ಒಂದು ಸ್ವಾರಸ್ಯಕರವಾದ ಆದರೆ ವಿಷಾದವನ್ನೂ ಹುಟ್ಟಿಸುವ ಬರಹವನ್ನು ಲೋಕೇಶ್‌ ಬರೆದಿದ್ದಾರೆ.

- Advertisement -
- Advertisement -

ಯುಗಾದಿ ಹಬ್ಬದ ಹಿಂದು ಮುಂದಿನ ರಾತ್ರಿಗಳು ಸಾಮಾನ್ಯವಾಗಿ ನಮಗೆ ನಿದ್ರಾರಹಿತ ರಾತ್ರಿಗಳು. ನಮ್ಮೂರು ದೋಣಕುಪ್ಪೆ. ಅದು ರಾಜ್ಯ ಹೆದ್ದಾರಿ 86 ರ ಪಕ್ಕದಲ್ಲಿ ಬರುವುದರಿಂದಲೂ, ಹೆದ್ದಾರಿಗೆ ನಮ್ಮ ಮನೆ ಹೊಂದಿಕೊಂಡಿರುವುದರಿಂದಲೂ, ಮಾಗಡಿ ದನಗಳ ಜಾತ್ರೆಗೆ ಮಂಡ್ಯ, ಮದ್ದೂರಿನ ಕಡೆ ರೈತರು ನಮ್ಮ ಮನೆ ಮುಂದೆ ರಸ್ತೆಯಲ್ಲೇ ಮಾಗಡಿ ಜಾತ್ರೆಗೆ ಹೋಗುತ್ತಾರೆ. ಬೇಸಿಗೆಯ ಬಿಸಲ ಬೇಗೆಗೆ ದನ ಬಳಲಿದಾವು ಎಂದು ರಾತ್ರಿ ಪ್ರಯಾಣ ಮಾಡುತ್ತಾರೆ. ರಾತ್ರಿ ಪೂರ ಲಾಳ ಕಟ್ಟಿದ ಗೊರಸುಗಳು ಡಾಂಬರು ರಸ್ತೆಗೆ ತಾಗಿ ಬರುವ ಶಬ್ದವೇ ತಾಳ; ಕೊರಳಿಗೆ ಕಟ್ಟಿದ ಘಂಟೆಗಳ ಸದ್ದೇ ಮೇಳ. ಒಟ್ಟಿನಲ್ಲಿ ದನಗಳ ಯಾತ್ರೆಯೇ ಸಂಗೀತದಂತಿದ್ದ ನಮ್ಮ ರಸ್ತೆಯಲ್ಲಿ ಈ ವರ್ಷ ಕಾರು, ಬೈಕುಗಳ ಮೊರೆತ, ಹಾರ್ನುಗಳ ಕರ್ಕಶ ದನಿಯ ಪರಿಣಾಮ ಕಣ್ಣುಗಳಿಂದ ನಿದ್ದೆ ಹಾರಿಹೋಯಿತು.

ಲಾಕ್‌ ಡೌನ್
ಸಾಂದರ್ಭಿಕ ಚಿತ್ರ

ರೂಢಿಯಂತೆ ಯುಗಾದಿಗೆ ಊರಿಗೆ ಬರುವವರಿದ್ದರೂ, ಈ ವರ್ಷ ಮೊದಲ ಬಾರಿಗೆ ಯುಗಾದಿಗೆ 21 ದಿನಗಳ ರಜೆ ಕೊಟ್ಟು ಇಡೀ ದೇಶವನ್ನೇ ಲಾಕ್ ಡೌನ್ ಮಾಡಿದ ಪರಿಣಾಮ ಬೆಂಗಳೂರಿನಲ್ಲೇ ಹೆಂಡತಿ ಮಕ್ಕಳೊಂದಿಗೆ ಹಬ್ಬವನ್ನು ಆಚರಿಸುತ್ತಿದ್ದವರು, ಹಳ್ಳಿಗೆ ಹೋದರೆ ತಮ್ಮ ಘನತೆಗೆ ಕುಂದೆಂದು ಭಾವಿಸುತ್ತಿದ್ದವರೂ ಕೂಡ 21 ದಿನಗಳು ಹೊರಗೆಲ್ಲೂ ಹೋಗದೆ, ಬೆಂಗಳೂರಿನ ಕಿಷ್ಕಿಂಧೆಯಂತಹ ಮನೆಯಲ್ಲೂ ಇರಲಾರದೆ ಗಂಟು ಮೂಟೆ ಕಟ್ಟಿ ಸಿಕ್ಕ ಸಿಕ್ಕ ವಾಹನಗಳಲ್ಲಿ ಹಳ್ಳಿಗೆ ದೌಡಾಯಿಸಿದ ಪರಿಣಾಮ ಸತತ 2-3 ದಿನ ನಮ್ಮೂರಿನ ರಸ್ತೆ ಗಿಜಿಗುಡುವಂತಾಯಿತು.

ಎರಡು ದಿನಗಳ ನಂತರ ಎಲ್ಲವೂ ಸ್ತಬ್ಧವಾಯಿತು. ರಸ್ತೆಗಳು ಬಿಕೋ ಎನ್ನುತ್ತಿದ್ದವು. ಆದರೆ ತುಂಬಾ ದಿನಗಳಿಂದ ಬರೀ ಮುದಿಜೀವಗಳೇ ಇದ್ದು ಕಳೆಗುಂದಿದ್ದ ಕೆಲವು ಮನೆಗಳಲ್ಲಿ ಮೊಮ್ಮಕ್ಕಳ ಹೆಜ್ಜೆ ಸಪ್ಪಳ ಮೂಡಿ, ಕೊನೆದಿನಗಳ ಎಣಿಸುವವರ ಕೊನೆಯಾಸೆ ತೀರಿತು. ಹಿರಿಜೀವಗಳು ತೃಪ್ತಿಗೊಂಡು ಕರೋನಾಗೆ ಮನದಲ್ಲೇ ನಮಿಸಿದವು.

ಎರಡು ದಿನಗಳು ಯುಗಾದಿ, ಕರಿ ಹಬ್ಬಗಳೆಂದು ಸಡಗರದಲ್ಲಿದ್ದ ನಮಗೆ ಮುಂಬರಲಿರುವ ಭೀಕರತೆಗಳ ಪರಿವೆಯೇ ಇರಲಿಲ್ಲ. ಹಲವು ವರ್ಷಗಳ ನಂತರ ಸಂಧಿಸಿದ್ದರಿಂದ ಆನಂದ ಪರವಶರಾಗಿ ಸುಖಸಾಗರದಲ್ಲಿ ತೇಲುತ್ತಲಿದ್ದವರಿಗೆ ಮುಂಬರುವ ಸುನಾಮಿಗೆ ತಾವು ಕೊಚ್ಚಿ ದಡ ಸೇರುವ ದಿನಗಳು ಇನ್ನೆರಡೇ ಎಂಬುವುದು ತಿಳಿದಿರಲಿಲ್ಲ.


ಹಬ್ಬ ಮುಗಿಯಿತು, ಒಣ ಬೇಸಾಯ ಮಾಡುವ ನಮ್ಮಂತವರಿಗೇನು ಚಿಂತೆಯಿಲ್ಲ, ಜಾನುವಾರುಗಳಿಗೆ ಇನ್ನೂ 2-3 ತಿಂಗಳಿಗಾಗುವಷ್ಟು ರಾಗಿ ಹುಲ್ಲು ಬಣವೆಯಲ್ಲಿತ್ತು. ಮಳೆ ಬರುವವರೆಗೂ ನೆಮ್ಮದಿಯ ಜೀವನ. ಆದರೆ ಸುಮಾರು ವರ್ಷಗಳ ಉಳಿತಾಯದ ಹಣದಲ್ಲೋ, ಸಾಲ ಮಾಡಿಯೋ ಕೊಳವೆ ಬಾವಿ ಕೊರೆಸಿ ಹಣ್ಣು ತರಕಾರಿಗಳನ್ನು ಬೆಳೆದವರಿಗೆ ಸಂಕಷ್ಟ ಶುರುವಾಯಿತು. ನಮ್ಮ ದೊಡ್ಡಪ್ಪನ ಮಗ ನಟರಾಜ ಒಂದು ಎಕರೆಯಲ್ಲಿ ತಿಂಗಳುರುಳಿಕಾಯಿ ಬೆಳೆದಿದ್ದ. ಒಳ್ಳೆಯ ಇಳುವರಿ ಬಂದಿತ್ತು. ಯಾವಾಗಲೂ ಎದುರಿಸುತ್ತಿದ್ದ ಕಾರ್ಮಿಕರ ಸಮಸ್ಯೆ ಇರಲಿಲ್ಲ. ಬೆಂಗಳೂರಿನಿಂದ ಬಂದಿದ್ದ ಅಕ್ಕಂದಿರು, ಅವರ  ಮಕ್ಕಳೆಲ್ಲ ಸೇರಿ ತುಂಬಾ ಘಾಸಿಯಲ್ಲದ ಕಾಯಿಬಿಡಿಸುವ ಕೆಲಸವನ್ನು ಮಾಡಿದ್ದರು. ಮಾರುಕಟ್ಟೆಗೆ ಸಾಗಿಸಲು ಸಾರಿಗೆ ವ್ಯವಸ್ಥೆ ಇಲ್ಲವೇ ಇಲ್ಲ. ಕಾಡಿ, ಬೇಡಿ, ದುಬಾರಿ ಬಾಡಿಗೆಗೆ ಲಗೇಜು ಆಟೋವೊಂದನ್ನು ಗೊತ್ತುಪಡಿಸಿಕೊಂಡು ಮಧ್ಯರಾತ್ರಿಗೇ ರಾಮನಗರ ಮಾರುಕಟ್ಟೆಗೆ ಕೊಂಡೊಯ್ದ. ಆದರೆ ಹುರುಳಿಕಾಯಿ ಕೇಳುವವರೇ ದಿಕ್ಕಿಲ್ಲ. ಬೆಳಗಿನ ಜಾವದವರೆಗೂ ಕಾದು ಇನ್ನು ಇಲ್ಲೇ ಇದ್ದರೆ ನಾತಂದ ಕಾಯನ್ನೇ ಮನೆಗೆ ಒಯ್ಯಬೇಕೆಂದು ಅರಿತು ಅದೇ ಆಟೋದಲ್ಲಿ ಬೆಂಗಳೂರು ಕೃಷ್ಣರಾಜ ಮಾರುಕಟ್ಟೆಗೆ ತಂದ. ಹಬ್ಬದ 2 ದಿನ ರಜೆ ತೆಗೆದುಕೊಂಡಿದ್ದರಿಂದ ಇದ್ದಬದ್ದದ್ದನ್ನೆಲ್ಲ ಒಂದೇ ದಿನ ಮಾರುಕಟ್ಟೆಗೆ ತಂದಿದ್ದಾರೆ ರೈತರು. ಆದರೆ ಕೊಳ್ಳುವ ಗಿರಾಕಿಗಳೇ ಇಲ್ಲ.

ಬೇರೆ ರಾಜ್ಯಕ್ಕೆ ತರಕಾರಿ ಕಳಿಸುವ ವ್ಯಾಪಾರಸ್ಥರು ಸಾಗಿಸಲು ಅವಕಾಶ ಇದೆಯೋ ಇಲ್ಲವೋ ಎಂಬ ಅನುಮಾನದಿಂದ ಕೊಳ್ಳಲು ಮುಂದೆ ಬರುತ್ತಿಲ್ಲ. ಪೊಲೀಸರು ವ್ಯಾಪಾರಕ್ಕೆ ಅವಕಾಶ ಕೊಡುತ್ತಾರೋ ಇಲ್ಲವೋ ಎಂದು ಚಿಲ್ಲರೆ ವ್ಯಾಪಾರಿಗಳು ಹೆಚ್ಚು ತರಕಾರಿಗಳಿಗೆ  ಬಂಡವಾಳ ಹೂಡಲು ಹೆದರಿದರು. ಈ ನಡುವೆ ಜನರ ಗುಂಪು ಸೇರಿದ್ದರಿಂದ ಪೊಲೀಸರು ಲಾಠಿ ಬೀಸಿದರು. ತರಕಾರಿ ಬೆಳದಿದ್ದಕ್ಕೆ ಬೋನಸ್ ಎಂಬಂತೆ ಬಾಸುಂಡೆಗಳು ಉಚಿತವಾಗಿ ದೊರಕಿದವು. ಪ್ರತಿ ವರ್ಷ ಈ ಸಮಯದಲ್ಲಿ ಮಣಕ್ಕೆ 800- 1000 ರೂಪಾಯಿಗಳಿರುತ್ತಿದ್ದ ಹುರುಳಿಕಾಯನ್ನು 250ಕ್ಕೆ ಮಾರಿ ಪೊಲೀಸರು ಹೊಡೆದಿದ್ದ ಕಾಲನ್ನು ಎಳೆಯುತ್ತಾ ಮನೆಗೆ ಬಂದ.

ಲಾಕ್‌ ಡೌನ್
ಎರಡು ಮೂರು ದಿನಗಳಲ್ಲಿ ತರಕಾರಿ ಮತ್ತು ಕೃಷಿ ಉತ್ಪನ್ನಗಳ ಸಾಗಣೆ ಮತ್ತು ವ್ಯಾಪಾರಕ್ಕೆ ಯಾವುದೇ ನಿರ್ಬಂಧವಿಲ್ಲವೆಂದು ಸರ್ಕಾರ ಸ್ಪಷ್ಟಪಡಿಸಿದ ನಂತರ ತರಕಾರಿ ಬೆಳೆದವರು ನಿಟ್ಟುಸಿರುಬಿಟ್ಟರು. ನಟರಾಜ ನಂತರದ ದಿನಗಳಲ್ಲಿ ರಾಮನಗರದಲ್ಲೇ ಮಣಕ್ಕೆ 500-600 ರೂಗಳಂತೆ ಹುರುಳಿಕಾಯನ್ನು ಮಾರಿದ.

ತರಕಾರಿಯದು ಒಂದು ಹಂತಕ್ಕೆ ಬರುತ್ತಿದ್ದಂತೆ ಹಾಲಿನ ಸಮಸ್ಯೆ ಶುರುವಾಯಿತು, ಉತ್ಪಾದನೆಯಾದ ಹಾಲಿನ ಬಹುಪಾಲು ವ್ಯಾಪಾರವಾಗದೆ ಉಳಿಯುತ್ತಿದ್ದುದರಿಂದ ಮತ್ತು ಅಷ್ಟೊಂದು ಹಾಲನ್ನು ಪುಡಿಮಾಡುವ ವ್ಯವಸ್ಥೆ ಇಲ್ಲದ ಕಾರಣ ಹಾಲು ಮಹಾಮಂಡಳಿಯವರು ಹಾಲಿನ ಶೇಖರಣೆ ನಿಲ್ಲಿಸುವರೆಂಬ ಸುದ್ದಿ ಕೇಳಿ, ಇಡೀ ಊರಿಗೂರೇ ದಂಗುಬಡಿದಂತಾಯಿತು. ಸುಮಾರು ರೈತರ ಅನ್ನಮಾರ್ಗವಾಗಿರುವ ಹಾಲು ಶೇಖರಣೆಯನ್ನು ನಿಲ್ಲಿಸಿದರೆ ರೈತರು ಘನಘೋರ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂಬುದನ್ನರಿತ ಸರ್ಕಾರ ಉಚಿತ ಹಾಲು ವಿತರಣೆ ಯೋಜನೆಯ ಮೂಲಕ ರೈತರ ಹಿತ ಕಾಯ್ದದ್ದನ್ನು ಸ್ಮರಿಸಲೇಬೇಕು.‌

ಲಾಕ್‌ ಡೌನ್

ಇತ್ತ ನಮ್ಮಪ್ಪ ಮಾವಿನ ತೋಟವನ್ನು ವ್ಯಾಪರಿಯೊಬ್ಬನಿಗೆ ಮಾರಿ ಆಗಲೇ 3 ತಿಂಗಳಾಗಿತ್ತು. ಆಗಲೇ ಒಂದೆರಡು ಸೇಂದುರ ಮರದ ಕಾಯಿಗಳನ್ನು ಲಾಕ್ ಡೌನ್‌ಗಿಂತ ಮೊದಲೇ ಕಿತ್ತುಕೊಂಡಿದ್ದ. ಈಗ ಅವನನ್ನು ಸ್ವಲ್ಪ ಮುಂಗಡ ಹಣ ಕೇಳಿದರೆ ಲಾಕ್ ಡೌನ್ ಮುಗಿಯಲಿ ಕೊಡುತ್ತೇನೆ ಎನ್ನುತ್ತಾನೆ. ಲಾಕ್ ಡೌನ್ ಮುಗಿಯದೆ ವ್ಯಾಪಾರ ಕಷ್ಟವಾಗುವ ಸಂದರ್ಭ ಬಂದರೆ ನಷ್ಟ ಅನುಭವಿಸಲು ತಯಾರಿಲ್ಲದ ಅವನು ಒಪ್ಪಂದ ರದ್ದುಗೊಳಿಸುವ ಇರಾದೆಯಲ್ಲಿದ್ದಾನೆ. ಆದರೆ ಎಲ್ಲವೂ ಸರಿಹೋಗಿ ವ್ಯಾಪಾರ ಸುಗಮವಾದರೆ? ತೋಟ ಬಿಟ್ಟು ಬರುವ ಲಾಭಕ್ಕೆ ಕಲ್ಲು ಹಾಕಿಕೊಳ್ಳುವುದಕ್ಕೆ ಇಷ್ಟವಿಲ್ಲದೆ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡುತ್ತಾನೆ. ಅವನ ಮಾತುಗಳಿಂದ ಗೊಂದಲಕ್ಕೊಳಗಾದ ನಮ್ಮಪ್ಪ ಮಾತ್ರ ತೋಟವನ್ನು ಬೇರೆ ವ್ಯಾಪಾರಿಗೂ ಮಾರದಂತಹ, ಇವನನ್ನು ನಂಬಿ ಸುಮ್ಮನೆಯೂ ಕೂರದಂತಹ ಎರಡಲುಗಿನ ಕತ್ತಿಗೆ ಕುತ್ತಿಗೆಯೊಡ್ಡಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರು ಊರಿಗೆ ಹೋಗದಂತೆ ತಡೆಯುತ್ತಿರುವುದೇಕೆ?


ಯುಗಾದಿ ಹಬ್ಬ, ಮದುವೆ ಲಗ್ನ ಕಾಲದಲ್ಲಿ ನಡೆಯುವ ಮದುವೆ ಮುಂಜಿ, ಊರ ಹಬ್ಬ, ಜಾತ್ರೆ, ದೇವರ ಉತ್ಸವಗಳನ್ನು ನಂಬಿಕೊಂಡು ಎಕರೆಗಟ್ಟಲೇ ಹೂ ಬೆಳೆದ ನನ್ನ ಇಬ್ಬರು ಸ್ನೇಹಿತರ ಪರಿಸ್ಥಿತಿಯಂತೂ ಯಾರಿಗೂ ಬೇಡ. ಲಾಕ್ ಡೌನ್ ಪರಿಣಾಮವಾಗಿ ಯಾವ ಸಂಭ್ರಮದ ಕಾರ್ಯಕ್ರಮವೂ ಬೇಡ, ಹೆಣದ ಮೇಲೆ ಹಾಕುವುದಕ್ಕೂ ಯಾರೂ ತೆಗೆದುಕೊಂಡು ಹೋಗುತ್ತಿಲ್ಲ. ನಷ್ಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡರೆ ಅವರದ್ದೇ ಹೆಣ ಶೃಂಗರಿಸುವುದಕ್ಕೆ ಮಾತ್ರ ಅವುಗಳ ಉಪಯೋಗ.
ನಮ್ಮೂರಿನ ಈ ಕತೆಗಳ ಮುಂದುವರಿಕೆಯಾಗಿ ಕೇವಲ ಒಂದೇ ವಾರಕ್ಕೆ ಕೆಲವರಿಗೆ ಹಳ್ಳಿ ಬೇಸರವಾಗತೊಡಗಿತು. ಬೆಂಗಳೂರಿನ ಟ್ರಾಫಿಕ್, ಮಾಲಿನ್ಯದಿಂದ ಬೇಸತ್ತವರಿಗೆ ಹಳ್ಳಿ ಆಪ್ತವಾಗತೊಡಗಿತು. ಕೃಷಿಯೋ, ಹೈನುಗಾರಿಕೆಯೋ ಮತ್ತೊಂದೋ ಮಾಡಿಕೊಂಡು ಊರಲ್ಲೇ ಬೇರು ಬಿಡುವ ಮಾನಸ್ಸಾಯಿತು ಕೆಲವರಿಗೆ. ಆದರೆ ಹಳ್ಳಿಯಲ್ಲಿ ಮಕ್ಕಳಿಗೆ ಸೂಕ್ತ ಶಿಕ್ಷಣ ವ್ಯವಸ್ಥೆ ಇಲ್ಲವೆಂಬುದು ಕೆಲವು ನಾರಿಯರ ಗೊಣಗಾಟ. ಸಣ್ಣ ಪುಟ್ಟ ಕೆಲಸ ಮಾಡಿ ತಮ್ಮ ದೇಹದ ಬಲಾಬಲ ಕಂಡ ಕೆಲವರಿಗೆ  ಕೊಬ್ಬುತುಂಬಿದ ತಮ್ಮ ದೇಹ ಕೃಷಿ ಕೆಲಸಗಳಿಗೆ ಸಹಕರಿಸುವುದಿಲ್ಲ ಎಂಬುದನ್ನು ಅರಿತವರು ಕೆಲವರು.. ಇಲ್ಲಿಯೇ ಉಳಿಯಬೇಕೆಂಬ ಅದಮ್ಯ ಆಸೆ ಹೊಂದಿದ ಕೆಲವರಿಗೆ ತಮ್ಮ ಬೈಕು, ಕಾರುಗಳ EMIಗಳು ದುಃಸ್ವಪ್ನವಾದವು. ಕೆಲವರಿಗೆ ಭೂಮಿ ಇಲ್ಲದಿರುವುದು ನುಂಗಲಾರದ ತುತ್ತಾಯಿತು. ಹಣದ ಹಿಂದೆ ಬಿದ್ದವರಿಗೆ, ಹಣವೊಂದೇ ಧ್ಯೇಯವಾದವರಿಗೆ ಹಳ್ಳಿಇನ್ನೂ ಅಸ್ಪೃಷ್ಯವಾಗಿಯೇ ಇದೆ.. ಒಟ್ಟಿನಲ್ಲಿ ನಗರದಿಂದ ಬಂದವರು ಹಳ್ಳಿಗಳಿಗೆ ಕೆಲವು ದಿನಗಳ ನಂತರ ವಿದಾಯ ಹೇಳುವುದು ಖಚಿತ, ಹಳ್ಳಿಗಳು ಮತ್ತೆ ಭಣಗುಡುವುದು ಖಾತರಿ.

ಲೇಖಕರು: ಲೋಕೇಶ್‌ ದೋಣಕುಪ್ಪೆ

ಸರಣಿ ಸಂಪಾದಕರು: ಕೆ.ಪಿ ಸುರೇಶ್‌


ಇದನ್ನೂ ಓದಿ: ಲಾಕ್‌ ಡೌನ್‌ ನಂತರದ ಪ್ರಥಮ ಆದ್ಯತೆ ಏನಾಗಿರಬೇಕು? ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರು ಹೀಗೆ ಹೇಳುತ್ತಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...