Homeಅಂಕಣಗಳುನಮ್ಮ ದೇಶದಲ್ಲಿ ಏನಾತು? ಯಾಕ ಹಿಂಗಾತು? ಏನಾಗಬೇಕಿತ್ತು?

ನಮ್ಮ ದೇಶದಲ್ಲಿ ಏನಾತು? ಯಾಕ ಹಿಂಗಾತು? ಏನಾಗಬೇಕಿತ್ತು?

- Advertisement -
- Advertisement -

ಪಂಥ ಪ್ರಧಾನ ಸೇವಕರು ಮತ್ತು ಅವರ ಆಜ್ಞಾಧಾರಕರಾದ ಕೆಲವು ಮಂತ್ರಿಗಳು ಭಾರತದ ಸರಕಾರ 20 ಲಕ್ಷ ಕೋಟಿ ಪರಿಹಾರ ಬಿಡುಗಡೆ ಮಾಡಿದ್ದರಿಂದ ಭರತ ವರ್ಷದ ಎಲ್ಲಾ ಸಮಸ್ಯೆಗಳು ಮುಗದು ಹೋದವು ಅಂತ ಹೇಳಾಕ ಹತ್ಯಾರ. ಅದ ಖರೆ ಅಂತ ಕೆಲವರು ತಿಳಕೊಂಡೂ ಬಿಟ್ಟಾರ.

ಆದರು ಅದರಾಗ ಚಿಪ್ಸ ಪಾಕೀಟಿನ ಗತೆ ಬರೇ ಹವಾ ಐತಿ, ಆದರ ಅಸಲು ಮಸಾಲೆ ಏನೂ ಇಲ್ಲಾ ಅಂತ ಹೇಳಿ ಕೆಲವು ತಜ್ಞರು ಅಭಿಪ್ರಾಯ ಪಟ್ಟಾರ. ಅದರಾಗ ಬರೇ ಸರಕಾರಿ ಸ್ವತ್ತುಗಳ ಖಾಸಗೀಕರಣ, ಕಾರ್ಮಿಕ ಕಾನೂನುಗಳ ಸಡಿಲಿಕೆ, ರದ್ದು, ಹಾಗೂ ಜನಸಾಮಾನ್ಯರ ಮೇಲಿನ ಸಾಲದ ಹೆಚ್ಚಳ ಬಿಟ್ಟರ ಏನೂ ಇಲ್ಲ ಅಂತ ಅವರ ಅಂಬೋಣ.

ಆ ಮನಿಷಾ ಅಷ್ಟು ಕಷ್ಟ ಪಡಲಿಕ್ಕೆ ಹತ್ಯಾರು, ಏನೇನೋ ಕಸರತ್ತು ಮಾಡತಾರು. ಅವರನ್ನ ಹೊಗಳೋದು ಬಿಟ್ಟು ತೆಗಳಲಿಕ್ಕೆ ಹತ್ತೀರಿ, ನಿಮಗ ಟೀಕೆ ಮಾಡಲಿಕ್ಕೆ ಬ್ಯಾರ ಟೈಮು ಇಲ್ಲೇನು, ನಿಮ ನಿಮ ಟೀಕಾಕಾರ ಒಯ್ದು ಒಂದು ಅಂತ ಕೆಲವರು ಶಾಪ ಹಾಕಾಕ ಹತ್ಯಾರು.

ನಿಮ್ಮ ಹತ್ತರ ಬರೇ ಪ್ರಶ್ನೆ ಅದಾವು. ಯಾವುದಕ್ಕರ ಉತ್ತರ ಏನರ ಅದಾವು ಏನು? ಅಂತ ಕೆಲವರು ಕೇಳತಾರು. ನಿಮ್ಮನ್ನೂ ಕೇಳಬಹುದು.
ಅಂಥವರ ಸಲುವಾಗಿ ಕೆಲವು ಉತ್ತರಗಳು.

ಮೊದಲಿಗೆ ಮಾಡಬೇಕಾಗಿದ್ದು ಆಡಳಿತದ ವಿಕೇಂದ್ರೀಕರಣ. ಈಗ ಐತೆಲ್ಲಾ ಗ್ರಾಮ ಪಂಚಾಯಿತಿ – ನಗರ ಸಭೆ -ಪಟ್ಟಣ ಪಂಚಾಯಿತಿ ಎಲ್ಲಾನೂ ಅದಾವು ಅಂತ ನೀವು ಅನ್ನಬಹುದು. ಆದರ ಅದು ನಿಜವಾದ ಅರ್ಥದೊಳಗ ಇಲ್ಲ.

ಇದರ ಹಿನ್ನೆಲೆ ಭಾಳ ಮಜಾ ಐತಿ. ಸುಮಾರು 1910 ರವರೆಗೆ ಅಫಘಾನಿಸ್ತಾನದಿಂದ ಹಿಡಿದು ಬರ್ಮಾವರೆಗೆ ಭಾರತದ ಭೂಪಟ ಚಾಚಿತ್ತು. ಅಷ್ಟು ದೊಡ್ಡ ದೇಶ ಆಳೋ ಬ್ರಿಟೀಷರ ಸಂಖ್ಯೆ ಮಾತ್ರ ಎರಡು ಸಾವಿರಕ್ಕಿಂತ ಹೆಚ್ಚು ಇರಲಿಲ್ಲ. ಇದರಿಂದ ಏನಾತಪಾ ಅಂದರ ಏಳೂವರೆ ಸಾವಿರ ಕಿಲೋಮೀಟರು ದೂರದ ಇಂಗ್ಲಂಡಿನ ಈಸ್ಟು ಇಂಡಿಯಾ ಕಂಪನಿ ಕಚೇರಿಯೊಳಗ ಕೂತುಗೊಂಡ ಕೆಲವರು ಇಲ್ಲಿನ ಕೆಲವೇ ಜನ ಬಿಳಿಯ ಅಧಿಕಾರಿಗಳ ಮೂಲಕ ಆಡಳಿತ ನಡಸಿದರು. ಸುಮಾರು 200 ವರ್ಷ ಅವರು ಆಡಳಿತ ನಡೆಸಿದರ, ಒಂದು ನೂರು ವರ್ಷ ಅಲ್ಲಿನ ರಾಣಿ ಹೆಸರಿನಲ್ಲಿ ಅಲ್ಲಿನ ಪ್ರಧಾನಿ ಆಡಳಿತ ನಡೆಸಿದರು. ಆಡಳಿತ ಸುಗಮವಾಗಿರಬೇಕು, ದಿನಾ ಬೆಳಿಗ್ಗೆ ಕಿರಿಕಿರಿ ಇರಬಾರದು ಅಂತ ಹೇಳಿ ಅವರು ಈ ದೇಶವನ್ನ ದೊಡ್ಡ ದೊಡ್ಡ ಜಿಲ್ಲೆಗಳಾಗಿ ವಿಭಜನೆ ಮಾಡಿದರು. ಅದು ಇಂದಿಗೂ ನಡಕೊಂಡು ಬಂದೇತಿ. ಈಗ ಕೇಂದ್ರ ಸರಕಾರನೂ ಸಹಿತ ಜಿಲ್ಲಾಡಳಿತದ ಮುಖಾಂತರ ಯೋಜನೆ ಜಾರಿ ಮಾಡತೇತಿ. ಅದರ ಬದಲಿಗೆ ತಾಲೂಕು ಕೇಂದ್ರಿತ ಆಡಳಿತ ಆಗಬಹುದು. ಆವಾಗ ಜನರಿಗೆ ಕಮ್ಮಿ ಕಷ್ಟ ಆಗತೇತಿ.

ಖರೇ ಹೇಳಬೇಕಂದರ ಜನಾ ವಿಚಾರ ಮಾಡೋದು ನಮ್ಮ ಹಳ್ಳಿ- ನಮ್ಮ ಊರು- ನಮ್ಮ ಪಟ್ಟಣ ಅಂತ. ನಮ್ಮ ಜಿಲ್ಲೆ – ತಾಲೂಕು ಅನ್ನೋದು ಭಾವನಾತ್ಮಕ ವಿಷಯ ಅಷ್ಟ. ಹಂಗಾಗಿ ಗ್ರಾಮ ಪಂಚಾಯಿತಿ ಹಾಗೂ ನಗರ ಸಭೆ ಮುಂತಾದ ಘಟಕಗಳಿಗೆ ಆದ್ಯತೆ ಸಿಗಬೇಕು. ಇದು ಹೆಚ್ಚು ಆದಂತೆ, ಪ್ರಾದೇಶಿಕ ಅಸಮತೋಲನ ಕಮ್ಮಿ ಆಗತೇತಿ.

ಅಲ್ಲೆ ಒಳ್ಳೆಯದಾದರೂ ಜಲ್ದೀ ತಿಳೀತೇತಿ, ಬ್ರಷ್ಟಾಚಾರ ಆದರೂ ಎಲ್ಲಾರ ಮುಂದ ಆಗತೇತಿ, ಎಲ್ಲಾರಿಗೂ ಕಾಣತೇತಿ. ಅದರಿಂದ ಅದು ಕಮ್ಮಿ ಆದರೂ ಆಗಬಹುದು. ಪಾರದರ್ಶಕತೆ ಇಲ್ಲಾ ಅಂದರ ಅದು ಕಮ್ಮಿ ಆಗೋ ಸಾಧ್ಯತೆ ಇಲ್ಲ.

ಎರಡನೇಯದಾಗಿ ಸ್ಥಳೀಯ ಮಾರುಕಟ್ಟೆಗಳ ಆರಂಭ ಮತ್ತು ಪುನರುಜ್ಜೀವನ. ಗಾಂಧೀವಾದಿ ಇಳಾ ಭಟ್ ಅವರು ಹೇಳಿದಂತೆ ಆಹಾರ, ನೀರು- ಬಟ್ಟೆ- ವಸತಿ ಎನ್ನುವ ಸರಕುಗಳು ಹಾಗೂ ಆರೋಗ್ಯ- ಶಿಕ್ಷಣ- ಬ್ಯಾಂಕಿಂಗ್ ಅಥವಾ ಹಣಕಾಸು ಅನುಕೂಲ ಈ ಸೇವೆಗಳನ್ನ ಮೂಲಭೂತವಾದವು ಅಂತ ಪರಿಗಣಿಸಬೇಕು. ಇವುಗಳನ್ನ ಸಾಧ್ಯವಾದಷ್ಟು ಮಟ್ಟಿಗೆ ಸ್ಥಳೀಯವಾಗಿ ತಯಾರು ಮಾಡಬೇಕು, ಸ್ಥಳೀಯವಾಗಿ ಮಾರಾಟ- ಖರೀದಿ ಮಾಡಬೇಕು. ಇದರಿಂದ ಸಾಗಾಣಿಕೆ ವೆಚ್ಚ ಉಳಿತಾಯ, ಸ್ಥಳೀಯ ಕೆಲಸಗಾರರು ಬದುಕುತ್ತಾರೆ ಹಾಗೂ ವ್ಯವಸ್ಥೆ ಪಾರದರ್ಶಕವಾಗುತ್ತದೆ. ಎಲ್ಲಕ್ಕಿಂತ ಹೆಚ್ಚಾಗಿ ತಳ ಸಂಸ್ಕೃತಿ ಉಳಿದುಕೊಳ್ಳುತ್ತದೆ ಅಂತ ಅವರ ಅನಿಸಿಕೆ. ಇನ್ನು ಗುಡಿ ಕೈಗಾರಿಕೆ ಹಾಗೂ ಗೃಹ ಕೈಗಾರಿಕೆ, ಗ್ರಾಮೋದ್ಯೋಗ ಇವಕ್ಕೆ ಉತ್ತೇಜನ ಕೊಡಬೇಕು, ಖಾದಿ ಉಳಿಸಬೇಕು, ಯಂತ್ರಗಳ ಬಳಕೆ ಕಮ್ಮಿ ಆಗಬೇಕು, ಜಾನಪದ ಸಂಸ್ಕೃತಿ ಉಳಿದು – ಬೆಳೆಯಬೇಕು ಅಂತ ಕೆಲವರು ಹೇಳತಾರ.

ಏ ಅದೇನು ಹಚ್ಚೀರಿ? ಯುದ್ಧ ವಿಮಾನ ಏನು ಹಳ್ಳಿಯೊಳಗ ಮಾಡಲಿಕ್ಕೆ ಬರತೇತೇನು? ಯಂತ್ರಗಳಿಲ್ಲದೇ ಉಪಗ್ರಹ ಉಡಾವಣೆ ಮಾಡೋದು ಅಂದರ ಅದೇನು ಬಿದರಿನ ಕಂಬದ ಮ್ಯಾಲೆ ಮಾಡಾಕ ಆಕಾಶ ಬುಟ್ಟಿ ಬಿಟ್ಟಂಗೇನು ಅಂತ ಇನ್ನ ಕೆಲವರು ಅಂತಾರು.

ಈ ಭಿನ್ನಾಭಿಪ್ರಾಯದಿಂದಾಗಿ ಅವರಿಗೂ- ಇವರಿಗೂ ಜಗಳ ಆಗತಾ ಇರತೇತಿ. ಅವರನ್ನ ಇವರು ಅಪ್ರಾಯೋಗಿಕರು ಅಂತ, ಇವರನ್ನ ಅವರು ನಿಜ ಜೀವನದಿಂದ ದೂರ ಇರೋ ರಮ್ಯತಾವಾದಿಗಳು ಅಂತ ಬೈಕೋತ ಇರತಾರ. ಪ್ರತಿಯೊಂದು ಕ್ಷೇತ್ರದೊಳಗ ಕೇವಲ ನಾಲ್ಕು ಸರಕಾರಿ ಸಂಸ್ಥೆಗಳು ಇರಬೇಕು, ಉಳಿದದ್ದನ್ನ ಖಾಸಗಿ ಸಂಸ್ಥೆಗಳು ನೋಡಿಕೋಬೇಕು ಅಂತ ಹಣಕಾಸು ಸಚಿವರಾದ ನಿರ್ಮಲಾ ಅಕ್ಕೋರು ಹೇಳಿದಾರು. ಇದು ತಪ್ಪು, ಸರಕಾರಿ- ಖಾಸಗಿ ಸಂಸ್ಥೆಗಳು ಸಹಭಾಗಿತ್ವ ಇರಬೇಕು ಅಂತ ಕೆಲವರು ಅಂತಾರ. ಬರೇ ಸರಕಾರಿ ಸಂಸ್ಥೆಗಳು ಇರಬೇಕು. ಇಲ್ಲಾ ಅಂದರ ಬರೇ ಖಾಸಗಿ ಸಂಸ್ಥೆಗಳಿಗೆ ಬಿಟ್ಟು ಬಿಟ್ಟರ ಅವರು ಅದನ್ನು ಒಲಿಗಾರ್ಕಿ ಅಥವಾ ಮಿತ ಜನತಂತ್ರ, ಅಲ್ಪಸಂಖ್ಯಾತರ ಪ್ರಭುತ್ವ ಅಥವಾ ಕೂಟಾಳ್ವಿಕೆ ಮಾಡಿಬಿಡತಾರ. ಆಮ್ಯಾಲೆ ಪ್ರತೀ ಕ್ಷೇತ್ರದೊಳಗ ಕೇವಲ ನಾಲ್ಕು ಖಾಸಗಿ ಸಂಸ್ಥೆಗಳು ಉಳಿಯೋ ಹಂಗ ಆಗತೇತಿ ಅಂತ ಇನ್ನ ಕೆಲವರು ಅಂತಾರು.

ಎಲ್ಲಾ ವಿಷಯಗಳಲ್ಲಿ ಇದ್ದಂತೆ ಇದರಲ್ಲಿಯೂ ಯಾವುದೋ ಒಂದು ಮಂತ್ರದಂಡ ಅಂತ ಇಲ್ಲ. ಎಲ್ಲಾ ಸಮಸ್ಯೆಗಳಿಗೆ ಒಂದೇ ಪರಿಹಾರ ಇಲ್ಲ, ಇರಲಿಕ್ಕೆ ಸಾಧ್ಯ ಇಲ್ಲ. ಆಯಾ ಕ್ಷೇತ್ರದ ಅವಶ್ಯಕತೆಗಳಿಗೆ ತಕ್ಕಂತೆ ಇದನ್ನು ಒಂದು ಸ್ವಲ್ಪು ಅದನ್ನ ಒಂದು ಸ್ವಲ್ಪು ಉಪಯೋಗಿಸಿಕೊಂಡು ಎಲ್ಲರಿಗೂ ಸಮಾವಕಾಶ ಕಲ್ಪಿಸುವ ಸಮ ಸಮಾಜದ ಕಡೆ ಹೋಗಬೇಕು. ಜನ ಬರೇ ಮತದಾರರಾಗಿ ಉಳಿಯಬಾರದು. ನಾಗರಿಕರಾಗಿ ವಿಕಾಸಗೊಳ್ಳಬೇಕು. ನಾಗರಿಕರು ತಮ್ಮನ್ನಾಳುವವರು ದಾರಿ ತಪ್ಪಿದಾಗ ಅವರನ್ನ ಸರಿ ಮಾಡಬೇಕು. ತಿದ್ದಿ ಹೇಳಿದ್ದು ಕೇಳದಾಗ, ತಮ್ಮ ಮಾತು ಕೇಳುವವರನ್ನು ಆರಿಸಿ ತರಬೇಕು.

`ಅರ್ಥ ಶಾಸ್ತ್ರ ಎನ್ನುವುದು ಊರ ಮುಂದಿನ ಜಾತ್ರೆ ಇದ್ದಂತೆ. ಎಲ್ಲರೂ ತಮಗೆ ತಿಳಿದದ್ದನ್ನ ಜೋರಾಗಿ ಮಾತಾಡೋದಕ್ಕೆ ಯಾರ ಮಾತೂ ಯಾರಿಗೂ ತಿಳಿಯೋದಿಲ್ಲ’ ಅಂತ ಯುವ ಅರ್ಥ ಶಾಸ್ತ್ರಜ್ಞ ಸ್ಟೀಫನ್ ಲೆವಿಟ್ ಹೇಳಿದಾರು. ಈ ಮಾತು ನಾವು ನೆನಪು ಇಟಗೋಬೇಕು. ಒಳ್ಳೆಯ ವಿಚಾರಗಳು ಎಲ್ಲರಿಗೂ ತಲುಪಬೇಕು. ಅವರು ಒಪ್ಪಲಿ – ಬಿಡಲಿ ಚರ್ಚೆ ಆಗಬೇಕು. ಸಕಲ ಕಲ್ಯಾಣಕ್ಕೆ ಕಾರಣವಾಗೋ ವಿಚಾರಗಳನ್ನ ಜಾರಿ ಮಾಡೋ ಪ್ರಯತ್ನ ಮಾಡಬೇಕು. ಅಲ್ಲವೇ, ಮನೋಲ್ಲಾಸಿನಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...