Homeಮುಖಪುಟಅಯೋಧ್ಯ ತೀರ್ಪಿನಲ್ಲಿ ಏನೇನಿದೆ?: ಇಲ್ಲಿವೆ ಹೈಲೈಟ್ಸ್

ಅಯೋಧ್ಯ ತೀರ್ಪಿನಲ್ಲಿ ಏನೇನಿದೆ?: ಇಲ್ಲಿವೆ ಹೈಲೈಟ್ಸ್

- Advertisement -
- Advertisement -

ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಯ್ ನೇತೃತ್ವದ ಪಂಚ ಸದಸ್ಯರ ಪೀಠ ಅಯೋಧ್ಯ ಭೂವಿವಾದಕ್ಕೆ ಸಂಬಂಧಿಸಿದ ತೀರ್ಪು ಪ್ರಕಟಿಸಿದೆ. ರಾಮ ಮಂದಿರ ನಿರ್ಮಾಣಕ್ಕೆ ಸಲ್ಲಬೇಕೊ,  ಬಾಬರಿ ಮಸೀದಿಯ ತಾಣವಾಗಿ ಉಳಿಯಬೇಕೊ ಎಂಬ ವಿವಾದಕ್ಕೆ ಕಾರಣವಾಗಿದ್ದ ಜಮೀನಿಗೆ ಸಂಬಂಧಪಟ್ಟಂತೆ 2010ರಲ್ಲಿ ಅಲಹಾಬಾದ್ ಹೈಕೋರ್ಟ್ ಈ  ವಿವಾದಿತ 2.77 ಎಕರೆ ಜಮೀನನ್ನು ಮೂರು ಭಾಗಗಳಾಗಿ ವಿಂಗಡಿಸಿ ಸುನ್ನಿ ವಕ್ಫ್ ಬೋರ್ಡ್, ರಾಮ್ ಲಲ್ಲಾ ಮತ್ತು ನಿರ್ಮೋಹಿ ಅಖಾಡಗಳಿಗೆ ಸಮನಾಗಿ ಹಂಚಿತ್ತು. ಆದರೆ ಅದರ ವಿರುದ್ಧ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈಗ ತೀರ್ಪು ಹೊರಬಿದ್ದಿದೆ.

ಸುಮಾರು 1045 ಪುಟಗಳಿರುವ ತೀರ್ಪಿನ ಪ್ರಮುಖ ಅಂಶಗಳು ಇಲ್ಲಿವೆ….

* ಅಯೋಧ್ಯೆಯ ವಿವಾದಿತ 2.77 ಎಕರೆ ಜಾಗವನ್ನು ಸಂಪೂರ್ಣವಾಗಿ ಮಂದಿರ ನಿರ್ಮಾಣಕ್ಕೆ ಬಿಟ್ಟುಕೊಡಲಾಗಿದೆ.

* ಮಸೀದಿಯನ್ನು ನಿರ್ಮಿಸಲು ಸುನ್ನಿ ವಕ್ಫ್ ಬೋರ್ಡಿಗೆ ಅಯೋಧ್ಯೆಯ ಬೇರೆಡೆ ಪ್ರಮುಖ ಜಾಗದಲ್ಲಿ ಐದು ಎಕರೆ ಜಮೀನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.

* ನಿಗದಿತ ಸ್ಥಳದಲ್ಲಿ ಮಂದಿರವನ್ನು ನಿರ್ಮಿಸುವ ಸಲುವಾಗಿ ಒಂದು ಟ್ರಸ್ಟ್ ಅನ್ನು ರಚಿಸಲು ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಮೂರು ತಿಂಗಳ ಕಾಲಮಿತಿ ನಿಗದಿಪಡಿಸಿದೆ. ವಿವಾದಿತ ಜಾಗವನ್ನು ಟ್ರಸ್ಟ್ ಗೆ ವರ್ಗಾಯಿಸಲಾಗುವುದು. ಟ್ರಸ್ಟ್ ಅಸ್ತಿತ್ವಕ್ಕೆ ಬರುವವರೆಗೂ ಜಾಗ ಕೇಂದ್ರ ಸರ್ಕಾರದ ಒಡೆತನಕ್ಕೆ ಒಳಪಡಲಿದೆ.

* ಹಿಂದೂಗಳ ನಂಬಿಕೆಯ ಪ್ರಕಾರ ರಾಮನು ಅಯೋಧ್ಯೆಯ ವಿವಾದಿತ ಸ್ಥಳದಲ್ಲಿ ಹುಟ್ಟಿದ್ದನ್ನು ನ್ಯಾಯಾಲಯ ಎತ್ತಿ ಹಿಡಿದಿದೆ. ನಂಬಿಕೆಗಳ ನಡುವೆ ನ್ಯಾಯಾಲಯ ಮಧ್ಯ ಪ್ರವೇಶಿಸಲಾಗದು ಎಂದಿದೆ. ಮಸೀದಿಯು ಮುಸ್ಲೀಮರಿಂದ ಪರಿತ್ಯಜಿಸಲ್ಪಟ್ಟಿರಲಿಲ್ಲ ಅಥವಾ ಅನಾಥಗೊಂಡಿರಲಿಲ್ಲ ಎಂಬುದನ್ನೂ ನ್ಯಾಯಾಲಯ ಎತ್ತಿ ಹಿಡಿದಿದೆ.

* “ವಿವಾದಿತ ಸ್ಥಳದಲ್ಲಿರುವ ಕಬ್ಬಿಣದ ಕಂಬಿಗಳನ್ನು 1856-1857ರಲ್ಲೇ ನಿರ್ಮಿಸಲಾಗಿತ್ತು, ಹಿಂದೂಗಳು ಈ ಜಾಗಕ್ಕೆ ಪ್ರಾರ್ಥಿಸಲು ಆಗಲೇ ಬರುತ್ತಿದ್ದರು ಎಂಬುದು ಇದರಿಂದ ಸಾಬೀತಾಗಿದೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

* “ಧ್ವಂಸಗೊಳಿಸಲ್ಪಟ್ಟ ಗುಮ್ಮಟದ ಕೆಳಗೆ ಇನ್ನೊಂದು ರಚನೆಯಿರುವುದನ್ನು ಭಾರತೀಯ ಪ್ರಾಚ್ಯ ಸರ್ವೇಕ್ಷಣಾ ಸಂಸ್ಥೆಯು (ಎ.ಎಸ್.ಐ) ದೃಢಪಡಿಸಿದೆ. ಆದರೆ ಮಸೀದಿಯನ್ನು ನಿರ್ಮಿಸಲು ಧ್ವಂಸಗೊಳಿಸಲಾದ ಮಂದಿರವೇ ಅದು ಎಂಬ ನಿರ್ಧಾರಕ್ಕೆ ಎ.ಎಸ್.ಐ ಬರಲಾಗಿಲ್ಲ” ಎಂದಿರುವ ಸರ್ವೋಚ್ಛ ನ್ಯಾಯಾಲಯ ಪ್ರಾಚ್ಯ ಸರ್ವೇಕ್ಷಣಾ ಪುರಾವೆಗಳನ್ನು ಕೇವಲ ಅಭಿಪ್ರಾಯಗಳಷ್ಟೇ ಎಂದು ಪರಿಗಣಿಸಿಬಿಟ್ಟರೆ ಅದು ಎ.ಎಸ್.ಐ.ಗೆ ದೊಡ್ಡ  ಅಪಚಾರ ಮಾಡಿದಂತೆ ಎಂದಿದೆ.

* ಸುನ್ನಿ ವಕ್ಫ್ ಬೋರ್ಡ್ ಹಕ್ಕು ಮಂಡಿಸಿದ್ದಂತೆ, ಆ ವಿವಾದಿತ ಜಾಗದ ಮೇಲೆ ತನಗೂ ಹಕ್ಕಿದೆ ಎಂದಿದ್ದ ಶಿಯಾ ವಕ್ಫ್ ಮಂಡಳಿಯ ವಾದವನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ.

* ಅಯೋಧ್ಯ ವಿವಾದಿತ ಜಾಗದಲ್ಲಿ ತನ್ನ ಹಕ್ಕನ್ನು ಸಾಬೀತುಪಡಿಸುವ ಪುರಾವೆಗಳನ್ನು ಒದಗಿಸುವಲ್ಲಿ ಉತ್ತರ ಪ್ರದೇಶದ ಸುನ್ನಿ ವಕ್ಫ್ ಬೋರ್ಡ್ ವಿಫಲವಾಗಿದೆ; ವಿವಾದಿತ ಸ್ಥಳದ ಮೇಲೆ ತಮಗೆ ವಿಶೇಷ ಒಡೆತನವಿದೆ ಎಂಬುದನ್ನು ಸಾಬೀತುಪಡಿಸುವ ಸಾಕ್ಷ್ಯಾಧಾರಗಳನ್ನು ಮುಸ್ಲಿಮರು ಒದಗಿಸಿಲ್ಲ” ಎಂದಿದೆ ಸುಪ್ರೀಂ ಕೋರ್ಟ್.

* ಬಾಬರಿ ಮಸೀದಿಯು ಖಾಲಿ ಜಾಗದಲ್ಲಿ ನಿರ್ಮಿಸಿದ ಕಟ್ಟಡವಲ್ಲ. ವಿವಾದಿತ ಕಟ್ಟಡದ ಕೆಳಗಿರುವ ಕಟ್ಟಡದ ರಚನೆಯು ಇಸ್ಲಾಂಮಿಕ್ ರಚನೆಯದ್ದಲ್ಲ” ಎಂದಿರುವ ಸುಪ್ರೀಂ ಕೋರ್ಟ್ “ಬಾಬರಿ ಮಸೀದಿಯನ್ನು ಧ್ವಂಸ ಮಾಡಿದ್ದು ಕೂಡಾ ಕಾನೂನು ಉಲ್ಲಂಘನೆಯಾಗಿದೆ” ಎಂದಿದೆ.

* ನಿರ್ಮೋಹಿ ಅಖಾರ ವಿವಾದಿತ ಸ್ಥಳದಲ್ಲಿ ಪ್ರತಿಷ್ಠಾಪಿಸಲಾಗಿದ್ದ ರಾಮಲಲ್ಲಾದ ಪಾರುಪತ್ಯೆ ಹಕ್ಕು ತನಗೆ ಸಲ್ಲಬೇಕೆಂದು ಮುಂದಿಟ್ಟಿದ್ದ ವಾದವನ್ನು ಕಾಲಮಿತಿ ಮೀರಿದ ವಾದವೆಂದು ನ್ಯಾಯಾಲಯ ತಳ್ಳಿಹಾಕಿದೆ. ಆದರೆ ಮಂದಿರ ನಿರ್ಮಾಣದ ಕುರಿತು ಕೇಂದ್ರ ಸರ್ಕಾರದ ಸ್ಥಾಪಿಸಲಿರುವ ಟ್ರಸ್ಟ್ ನಲ್ಲಿ ಅಖಾರದ ಪ್ರತಿನಿಧಿಗೆ ಅವಕಾಶ ಇರಬೇಕೆಂದು ಹೇಳಿದೆ.

* ಸರ್ವೋಚ್ಛ ನ್ಯಾಯಾಲಯವು `ಪ್ರಾರ್ಥನಾ ಸ್ಥಳಗಳ (ವಿಶೇಷ ಅವಕಾಶಗಳು) ಕಾಯ್ದೆಯನ್ನು ತೀರ್ಪಿನಲ್ಲಿ ಉಲ್ಲೇಖಿಸಿದೆ. ಎಲ್ಲಾ ಧರ್ಮಗಳು ಸಮಾನ ಎಂಬುದನ್ನು ಹೇಳಲು  ಈ ಕಾಯ್ದೆಯು ಯಾವುದೇ ಪ್ರಾರ್ಥನಾ ಸ್ಥಳವನ್ನು ಮಾರ್ಪಡಿಸುವ /ರೂಪಾಂತರಿಸುವುದನ್ನು ನಿಷೇಧಿಸುತ್ತದೆ.

* `ನಮ್ಮ ಸಂವಿಧಾನದ ಆತ್ಮವೇ ಸಮಾನತೆಗೆ ಬದ್ಧರಾಗಿರುವುದು. ನಮ್ಮ ಸಂವಿಧಾನ ಒಬ್ಬರ ನಂಬಿಕೆ, ಮತ್ತೊಬ್ಬರ ನಂಬಿಕೆ ನಡುವೆ ಯಾವುದೇ ಬೇಧ ಮಾಡುವುದಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...