Homeಮುಖಪುಟಅಯೋಧ್ಯ ತೀರ್ಪಿನಲ್ಲಿ ಏನೇನಿದೆ?: ಇಲ್ಲಿವೆ ಹೈಲೈಟ್ಸ್

ಅಯೋಧ್ಯ ತೀರ್ಪಿನಲ್ಲಿ ಏನೇನಿದೆ?: ಇಲ್ಲಿವೆ ಹೈಲೈಟ್ಸ್

- Advertisement -
- Advertisement -

ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಯ್ ನೇತೃತ್ವದ ಪಂಚ ಸದಸ್ಯರ ಪೀಠ ಅಯೋಧ್ಯ ಭೂವಿವಾದಕ್ಕೆ ಸಂಬಂಧಿಸಿದ ತೀರ್ಪು ಪ್ರಕಟಿಸಿದೆ. ರಾಮ ಮಂದಿರ ನಿರ್ಮಾಣಕ್ಕೆ ಸಲ್ಲಬೇಕೊ,  ಬಾಬರಿ ಮಸೀದಿಯ ತಾಣವಾಗಿ ಉಳಿಯಬೇಕೊ ಎಂಬ ವಿವಾದಕ್ಕೆ ಕಾರಣವಾಗಿದ್ದ ಜಮೀನಿಗೆ ಸಂಬಂಧಪಟ್ಟಂತೆ 2010ರಲ್ಲಿ ಅಲಹಾಬಾದ್ ಹೈಕೋರ್ಟ್ ಈ  ವಿವಾದಿತ 2.77 ಎಕರೆ ಜಮೀನನ್ನು ಮೂರು ಭಾಗಗಳಾಗಿ ವಿಂಗಡಿಸಿ ಸುನ್ನಿ ವಕ್ಫ್ ಬೋರ್ಡ್, ರಾಮ್ ಲಲ್ಲಾ ಮತ್ತು ನಿರ್ಮೋಹಿ ಅಖಾಡಗಳಿಗೆ ಸಮನಾಗಿ ಹಂಚಿತ್ತು. ಆದರೆ ಅದರ ವಿರುದ್ಧ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈಗ ತೀರ್ಪು ಹೊರಬಿದ್ದಿದೆ.

ಸುಮಾರು 1045 ಪುಟಗಳಿರುವ ತೀರ್ಪಿನ ಪ್ರಮುಖ ಅಂಶಗಳು ಇಲ್ಲಿವೆ….

* ಅಯೋಧ್ಯೆಯ ವಿವಾದಿತ 2.77 ಎಕರೆ ಜಾಗವನ್ನು ಸಂಪೂರ್ಣವಾಗಿ ಮಂದಿರ ನಿರ್ಮಾಣಕ್ಕೆ ಬಿಟ್ಟುಕೊಡಲಾಗಿದೆ.

* ಮಸೀದಿಯನ್ನು ನಿರ್ಮಿಸಲು ಸುನ್ನಿ ವಕ್ಫ್ ಬೋರ್ಡಿಗೆ ಅಯೋಧ್ಯೆಯ ಬೇರೆಡೆ ಪ್ರಮುಖ ಜಾಗದಲ್ಲಿ ಐದು ಎಕರೆ ಜಮೀನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.

* ನಿಗದಿತ ಸ್ಥಳದಲ್ಲಿ ಮಂದಿರವನ್ನು ನಿರ್ಮಿಸುವ ಸಲುವಾಗಿ ಒಂದು ಟ್ರಸ್ಟ್ ಅನ್ನು ರಚಿಸಲು ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಮೂರು ತಿಂಗಳ ಕಾಲಮಿತಿ ನಿಗದಿಪಡಿಸಿದೆ. ವಿವಾದಿತ ಜಾಗವನ್ನು ಟ್ರಸ್ಟ್ ಗೆ ವರ್ಗಾಯಿಸಲಾಗುವುದು. ಟ್ರಸ್ಟ್ ಅಸ್ತಿತ್ವಕ್ಕೆ ಬರುವವರೆಗೂ ಜಾಗ ಕೇಂದ್ರ ಸರ್ಕಾರದ ಒಡೆತನಕ್ಕೆ ಒಳಪಡಲಿದೆ.

* ಹಿಂದೂಗಳ ನಂಬಿಕೆಯ ಪ್ರಕಾರ ರಾಮನು ಅಯೋಧ್ಯೆಯ ವಿವಾದಿತ ಸ್ಥಳದಲ್ಲಿ ಹುಟ್ಟಿದ್ದನ್ನು ನ್ಯಾಯಾಲಯ ಎತ್ತಿ ಹಿಡಿದಿದೆ. ನಂಬಿಕೆಗಳ ನಡುವೆ ನ್ಯಾಯಾಲಯ ಮಧ್ಯ ಪ್ರವೇಶಿಸಲಾಗದು ಎಂದಿದೆ. ಮಸೀದಿಯು ಮುಸ್ಲೀಮರಿಂದ ಪರಿತ್ಯಜಿಸಲ್ಪಟ್ಟಿರಲಿಲ್ಲ ಅಥವಾ ಅನಾಥಗೊಂಡಿರಲಿಲ್ಲ ಎಂಬುದನ್ನೂ ನ್ಯಾಯಾಲಯ ಎತ್ತಿ ಹಿಡಿದಿದೆ.

* “ವಿವಾದಿತ ಸ್ಥಳದಲ್ಲಿರುವ ಕಬ್ಬಿಣದ ಕಂಬಿಗಳನ್ನು 1856-1857ರಲ್ಲೇ ನಿರ್ಮಿಸಲಾಗಿತ್ತು, ಹಿಂದೂಗಳು ಈ ಜಾಗಕ್ಕೆ ಪ್ರಾರ್ಥಿಸಲು ಆಗಲೇ ಬರುತ್ತಿದ್ದರು ಎಂಬುದು ಇದರಿಂದ ಸಾಬೀತಾಗಿದೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

* “ಧ್ವಂಸಗೊಳಿಸಲ್ಪಟ್ಟ ಗುಮ್ಮಟದ ಕೆಳಗೆ ಇನ್ನೊಂದು ರಚನೆಯಿರುವುದನ್ನು ಭಾರತೀಯ ಪ್ರಾಚ್ಯ ಸರ್ವೇಕ್ಷಣಾ ಸಂಸ್ಥೆಯು (ಎ.ಎಸ್.ಐ) ದೃಢಪಡಿಸಿದೆ. ಆದರೆ ಮಸೀದಿಯನ್ನು ನಿರ್ಮಿಸಲು ಧ್ವಂಸಗೊಳಿಸಲಾದ ಮಂದಿರವೇ ಅದು ಎಂಬ ನಿರ್ಧಾರಕ್ಕೆ ಎ.ಎಸ್.ಐ ಬರಲಾಗಿಲ್ಲ” ಎಂದಿರುವ ಸರ್ವೋಚ್ಛ ನ್ಯಾಯಾಲಯ ಪ್ರಾಚ್ಯ ಸರ್ವೇಕ್ಷಣಾ ಪುರಾವೆಗಳನ್ನು ಕೇವಲ ಅಭಿಪ್ರಾಯಗಳಷ್ಟೇ ಎಂದು ಪರಿಗಣಿಸಿಬಿಟ್ಟರೆ ಅದು ಎ.ಎಸ್.ಐ.ಗೆ ದೊಡ್ಡ  ಅಪಚಾರ ಮಾಡಿದಂತೆ ಎಂದಿದೆ.

* ಸುನ್ನಿ ವಕ್ಫ್ ಬೋರ್ಡ್ ಹಕ್ಕು ಮಂಡಿಸಿದ್ದಂತೆ, ಆ ವಿವಾದಿತ ಜಾಗದ ಮೇಲೆ ತನಗೂ ಹಕ್ಕಿದೆ ಎಂದಿದ್ದ ಶಿಯಾ ವಕ್ಫ್ ಮಂಡಳಿಯ ವಾದವನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ.

* ಅಯೋಧ್ಯ ವಿವಾದಿತ ಜಾಗದಲ್ಲಿ ತನ್ನ ಹಕ್ಕನ್ನು ಸಾಬೀತುಪಡಿಸುವ ಪುರಾವೆಗಳನ್ನು ಒದಗಿಸುವಲ್ಲಿ ಉತ್ತರ ಪ್ರದೇಶದ ಸುನ್ನಿ ವಕ್ಫ್ ಬೋರ್ಡ್ ವಿಫಲವಾಗಿದೆ; ವಿವಾದಿತ ಸ್ಥಳದ ಮೇಲೆ ತಮಗೆ ವಿಶೇಷ ಒಡೆತನವಿದೆ ಎಂಬುದನ್ನು ಸಾಬೀತುಪಡಿಸುವ ಸಾಕ್ಷ್ಯಾಧಾರಗಳನ್ನು ಮುಸ್ಲಿಮರು ಒದಗಿಸಿಲ್ಲ” ಎಂದಿದೆ ಸುಪ್ರೀಂ ಕೋರ್ಟ್.

* ಬಾಬರಿ ಮಸೀದಿಯು ಖಾಲಿ ಜಾಗದಲ್ಲಿ ನಿರ್ಮಿಸಿದ ಕಟ್ಟಡವಲ್ಲ. ವಿವಾದಿತ ಕಟ್ಟಡದ ಕೆಳಗಿರುವ ಕಟ್ಟಡದ ರಚನೆಯು ಇಸ್ಲಾಂಮಿಕ್ ರಚನೆಯದ್ದಲ್ಲ” ಎಂದಿರುವ ಸುಪ್ರೀಂ ಕೋರ್ಟ್ “ಬಾಬರಿ ಮಸೀದಿಯನ್ನು ಧ್ವಂಸ ಮಾಡಿದ್ದು ಕೂಡಾ ಕಾನೂನು ಉಲ್ಲಂಘನೆಯಾಗಿದೆ” ಎಂದಿದೆ.

* ನಿರ್ಮೋಹಿ ಅಖಾರ ವಿವಾದಿತ ಸ್ಥಳದಲ್ಲಿ ಪ್ರತಿಷ್ಠಾಪಿಸಲಾಗಿದ್ದ ರಾಮಲಲ್ಲಾದ ಪಾರುಪತ್ಯೆ ಹಕ್ಕು ತನಗೆ ಸಲ್ಲಬೇಕೆಂದು ಮುಂದಿಟ್ಟಿದ್ದ ವಾದವನ್ನು ಕಾಲಮಿತಿ ಮೀರಿದ ವಾದವೆಂದು ನ್ಯಾಯಾಲಯ ತಳ್ಳಿಹಾಕಿದೆ. ಆದರೆ ಮಂದಿರ ನಿರ್ಮಾಣದ ಕುರಿತು ಕೇಂದ್ರ ಸರ್ಕಾರದ ಸ್ಥಾಪಿಸಲಿರುವ ಟ್ರಸ್ಟ್ ನಲ್ಲಿ ಅಖಾರದ ಪ್ರತಿನಿಧಿಗೆ ಅವಕಾಶ ಇರಬೇಕೆಂದು ಹೇಳಿದೆ.

* ಸರ್ವೋಚ್ಛ ನ್ಯಾಯಾಲಯವು `ಪ್ರಾರ್ಥನಾ ಸ್ಥಳಗಳ (ವಿಶೇಷ ಅವಕಾಶಗಳು) ಕಾಯ್ದೆಯನ್ನು ತೀರ್ಪಿನಲ್ಲಿ ಉಲ್ಲೇಖಿಸಿದೆ. ಎಲ್ಲಾ ಧರ್ಮಗಳು ಸಮಾನ ಎಂಬುದನ್ನು ಹೇಳಲು  ಈ ಕಾಯ್ದೆಯು ಯಾವುದೇ ಪ್ರಾರ್ಥನಾ ಸ್ಥಳವನ್ನು ಮಾರ್ಪಡಿಸುವ /ರೂಪಾಂತರಿಸುವುದನ್ನು ನಿಷೇಧಿಸುತ್ತದೆ.

* `ನಮ್ಮ ಸಂವಿಧಾನದ ಆತ್ಮವೇ ಸಮಾನತೆಗೆ ಬದ್ಧರಾಗಿರುವುದು. ನಮ್ಮ ಸಂವಿಧಾನ ಒಬ್ಬರ ನಂಬಿಕೆ, ಮತ್ತೊಬ್ಬರ ನಂಬಿಕೆ ನಡುವೆ ಯಾವುದೇ ಬೇಧ ಮಾಡುವುದಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...