Homeಮುಖಪುಟಅಯೋಧ್ಯ ತೀರ್ಪಿನಲ್ಲಿ ಏನೇನಿದೆ?: ಇಲ್ಲಿವೆ ಹೈಲೈಟ್ಸ್

ಅಯೋಧ್ಯ ತೀರ್ಪಿನಲ್ಲಿ ಏನೇನಿದೆ?: ಇಲ್ಲಿವೆ ಹೈಲೈಟ್ಸ್

- Advertisement -
- Advertisement -

ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಯ್ ನೇತೃತ್ವದ ಪಂಚ ಸದಸ್ಯರ ಪೀಠ ಅಯೋಧ್ಯ ಭೂವಿವಾದಕ್ಕೆ ಸಂಬಂಧಿಸಿದ ತೀರ್ಪು ಪ್ರಕಟಿಸಿದೆ. ರಾಮ ಮಂದಿರ ನಿರ್ಮಾಣಕ್ಕೆ ಸಲ್ಲಬೇಕೊ,  ಬಾಬರಿ ಮಸೀದಿಯ ತಾಣವಾಗಿ ಉಳಿಯಬೇಕೊ ಎಂಬ ವಿವಾದಕ್ಕೆ ಕಾರಣವಾಗಿದ್ದ ಜಮೀನಿಗೆ ಸಂಬಂಧಪಟ್ಟಂತೆ 2010ರಲ್ಲಿ ಅಲಹಾಬಾದ್ ಹೈಕೋರ್ಟ್ ಈ  ವಿವಾದಿತ 2.77 ಎಕರೆ ಜಮೀನನ್ನು ಮೂರು ಭಾಗಗಳಾಗಿ ವಿಂಗಡಿಸಿ ಸುನ್ನಿ ವಕ್ಫ್ ಬೋರ್ಡ್, ರಾಮ್ ಲಲ್ಲಾ ಮತ್ತು ನಿರ್ಮೋಹಿ ಅಖಾಡಗಳಿಗೆ ಸಮನಾಗಿ ಹಂಚಿತ್ತು. ಆದರೆ ಅದರ ವಿರುದ್ಧ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈಗ ತೀರ್ಪು ಹೊರಬಿದ್ದಿದೆ.

ಸುಮಾರು 1045 ಪುಟಗಳಿರುವ ತೀರ್ಪಿನ ಪ್ರಮುಖ ಅಂಶಗಳು ಇಲ್ಲಿವೆ….

* ಅಯೋಧ್ಯೆಯ ವಿವಾದಿತ 2.77 ಎಕರೆ ಜಾಗವನ್ನು ಸಂಪೂರ್ಣವಾಗಿ ಮಂದಿರ ನಿರ್ಮಾಣಕ್ಕೆ ಬಿಟ್ಟುಕೊಡಲಾಗಿದೆ.

* ಮಸೀದಿಯನ್ನು ನಿರ್ಮಿಸಲು ಸುನ್ನಿ ವಕ್ಫ್ ಬೋರ್ಡಿಗೆ ಅಯೋಧ್ಯೆಯ ಬೇರೆಡೆ ಪ್ರಮುಖ ಜಾಗದಲ್ಲಿ ಐದು ಎಕರೆ ಜಮೀನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.

* ನಿಗದಿತ ಸ್ಥಳದಲ್ಲಿ ಮಂದಿರವನ್ನು ನಿರ್ಮಿಸುವ ಸಲುವಾಗಿ ಒಂದು ಟ್ರಸ್ಟ್ ಅನ್ನು ರಚಿಸಲು ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಮೂರು ತಿಂಗಳ ಕಾಲಮಿತಿ ನಿಗದಿಪಡಿಸಿದೆ. ವಿವಾದಿತ ಜಾಗವನ್ನು ಟ್ರಸ್ಟ್ ಗೆ ವರ್ಗಾಯಿಸಲಾಗುವುದು. ಟ್ರಸ್ಟ್ ಅಸ್ತಿತ್ವಕ್ಕೆ ಬರುವವರೆಗೂ ಜಾಗ ಕೇಂದ್ರ ಸರ್ಕಾರದ ಒಡೆತನಕ್ಕೆ ಒಳಪಡಲಿದೆ.

* ಹಿಂದೂಗಳ ನಂಬಿಕೆಯ ಪ್ರಕಾರ ರಾಮನು ಅಯೋಧ್ಯೆಯ ವಿವಾದಿತ ಸ್ಥಳದಲ್ಲಿ ಹುಟ್ಟಿದ್ದನ್ನು ನ್ಯಾಯಾಲಯ ಎತ್ತಿ ಹಿಡಿದಿದೆ. ನಂಬಿಕೆಗಳ ನಡುವೆ ನ್ಯಾಯಾಲಯ ಮಧ್ಯ ಪ್ರವೇಶಿಸಲಾಗದು ಎಂದಿದೆ. ಮಸೀದಿಯು ಮುಸ್ಲೀಮರಿಂದ ಪರಿತ್ಯಜಿಸಲ್ಪಟ್ಟಿರಲಿಲ್ಲ ಅಥವಾ ಅನಾಥಗೊಂಡಿರಲಿಲ್ಲ ಎಂಬುದನ್ನೂ ನ್ಯಾಯಾಲಯ ಎತ್ತಿ ಹಿಡಿದಿದೆ.

* “ವಿವಾದಿತ ಸ್ಥಳದಲ್ಲಿರುವ ಕಬ್ಬಿಣದ ಕಂಬಿಗಳನ್ನು 1856-1857ರಲ್ಲೇ ನಿರ್ಮಿಸಲಾಗಿತ್ತು, ಹಿಂದೂಗಳು ಈ ಜಾಗಕ್ಕೆ ಪ್ರಾರ್ಥಿಸಲು ಆಗಲೇ ಬರುತ್ತಿದ್ದರು ಎಂಬುದು ಇದರಿಂದ ಸಾಬೀತಾಗಿದೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

* “ಧ್ವಂಸಗೊಳಿಸಲ್ಪಟ್ಟ ಗುಮ್ಮಟದ ಕೆಳಗೆ ಇನ್ನೊಂದು ರಚನೆಯಿರುವುದನ್ನು ಭಾರತೀಯ ಪ್ರಾಚ್ಯ ಸರ್ವೇಕ್ಷಣಾ ಸಂಸ್ಥೆಯು (ಎ.ಎಸ್.ಐ) ದೃಢಪಡಿಸಿದೆ. ಆದರೆ ಮಸೀದಿಯನ್ನು ನಿರ್ಮಿಸಲು ಧ್ವಂಸಗೊಳಿಸಲಾದ ಮಂದಿರವೇ ಅದು ಎಂಬ ನಿರ್ಧಾರಕ್ಕೆ ಎ.ಎಸ್.ಐ ಬರಲಾಗಿಲ್ಲ” ಎಂದಿರುವ ಸರ್ವೋಚ್ಛ ನ್ಯಾಯಾಲಯ ಪ್ರಾಚ್ಯ ಸರ್ವೇಕ್ಷಣಾ ಪುರಾವೆಗಳನ್ನು ಕೇವಲ ಅಭಿಪ್ರಾಯಗಳಷ್ಟೇ ಎಂದು ಪರಿಗಣಿಸಿಬಿಟ್ಟರೆ ಅದು ಎ.ಎಸ್.ಐ.ಗೆ ದೊಡ್ಡ  ಅಪಚಾರ ಮಾಡಿದಂತೆ ಎಂದಿದೆ.

* ಸುನ್ನಿ ವಕ್ಫ್ ಬೋರ್ಡ್ ಹಕ್ಕು ಮಂಡಿಸಿದ್ದಂತೆ, ಆ ವಿವಾದಿತ ಜಾಗದ ಮೇಲೆ ತನಗೂ ಹಕ್ಕಿದೆ ಎಂದಿದ್ದ ಶಿಯಾ ವಕ್ಫ್ ಮಂಡಳಿಯ ವಾದವನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ.

* ಅಯೋಧ್ಯ ವಿವಾದಿತ ಜಾಗದಲ್ಲಿ ತನ್ನ ಹಕ್ಕನ್ನು ಸಾಬೀತುಪಡಿಸುವ ಪುರಾವೆಗಳನ್ನು ಒದಗಿಸುವಲ್ಲಿ ಉತ್ತರ ಪ್ರದೇಶದ ಸುನ್ನಿ ವಕ್ಫ್ ಬೋರ್ಡ್ ವಿಫಲವಾಗಿದೆ; ವಿವಾದಿತ ಸ್ಥಳದ ಮೇಲೆ ತಮಗೆ ವಿಶೇಷ ಒಡೆತನವಿದೆ ಎಂಬುದನ್ನು ಸಾಬೀತುಪಡಿಸುವ ಸಾಕ್ಷ್ಯಾಧಾರಗಳನ್ನು ಮುಸ್ಲಿಮರು ಒದಗಿಸಿಲ್ಲ” ಎಂದಿದೆ ಸುಪ್ರೀಂ ಕೋರ್ಟ್.

* ಬಾಬರಿ ಮಸೀದಿಯು ಖಾಲಿ ಜಾಗದಲ್ಲಿ ನಿರ್ಮಿಸಿದ ಕಟ್ಟಡವಲ್ಲ. ವಿವಾದಿತ ಕಟ್ಟಡದ ಕೆಳಗಿರುವ ಕಟ್ಟಡದ ರಚನೆಯು ಇಸ್ಲಾಂಮಿಕ್ ರಚನೆಯದ್ದಲ್ಲ” ಎಂದಿರುವ ಸುಪ್ರೀಂ ಕೋರ್ಟ್ “ಬಾಬರಿ ಮಸೀದಿಯನ್ನು ಧ್ವಂಸ ಮಾಡಿದ್ದು ಕೂಡಾ ಕಾನೂನು ಉಲ್ಲಂಘನೆಯಾಗಿದೆ” ಎಂದಿದೆ.

* ನಿರ್ಮೋಹಿ ಅಖಾರ ವಿವಾದಿತ ಸ್ಥಳದಲ್ಲಿ ಪ್ರತಿಷ್ಠಾಪಿಸಲಾಗಿದ್ದ ರಾಮಲಲ್ಲಾದ ಪಾರುಪತ್ಯೆ ಹಕ್ಕು ತನಗೆ ಸಲ್ಲಬೇಕೆಂದು ಮುಂದಿಟ್ಟಿದ್ದ ವಾದವನ್ನು ಕಾಲಮಿತಿ ಮೀರಿದ ವಾದವೆಂದು ನ್ಯಾಯಾಲಯ ತಳ್ಳಿಹಾಕಿದೆ. ಆದರೆ ಮಂದಿರ ನಿರ್ಮಾಣದ ಕುರಿತು ಕೇಂದ್ರ ಸರ್ಕಾರದ ಸ್ಥಾಪಿಸಲಿರುವ ಟ್ರಸ್ಟ್ ನಲ್ಲಿ ಅಖಾರದ ಪ್ರತಿನಿಧಿಗೆ ಅವಕಾಶ ಇರಬೇಕೆಂದು ಹೇಳಿದೆ.

* ಸರ್ವೋಚ್ಛ ನ್ಯಾಯಾಲಯವು `ಪ್ರಾರ್ಥನಾ ಸ್ಥಳಗಳ (ವಿಶೇಷ ಅವಕಾಶಗಳು) ಕಾಯ್ದೆಯನ್ನು ತೀರ್ಪಿನಲ್ಲಿ ಉಲ್ಲೇಖಿಸಿದೆ. ಎಲ್ಲಾ ಧರ್ಮಗಳು ಸಮಾನ ಎಂಬುದನ್ನು ಹೇಳಲು  ಈ ಕಾಯ್ದೆಯು ಯಾವುದೇ ಪ್ರಾರ್ಥನಾ ಸ್ಥಳವನ್ನು ಮಾರ್ಪಡಿಸುವ /ರೂಪಾಂತರಿಸುವುದನ್ನು ನಿಷೇಧಿಸುತ್ತದೆ.

* `ನಮ್ಮ ಸಂವಿಧಾನದ ಆತ್ಮವೇ ಸಮಾನತೆಗೆ ಬದ್ಧರಾಗಿರುವುದು. ನಮ್ಮ ಸಂವಿಧಾನ ಒಬ್ಬರ ನಂಬಿಕೆ, ಮತ್ತೊಬ್ಬರ ನಂಬಿಕೆ ನಡುವೆ ಯಾವುದೇ ಬೇಧ ಮಾಡುವುದಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...