Homeಮುಖಪುಟಅಯೋಧ್ಯ ತೀರ್ಪಿನಲ್ಲಿ ಏನೇನಿದೆ?: ಇಲ್ಲಿವೆ ಹೈಲೈಟ್ಸ್

ಅಯೋಧ್ಯ ತೀರ್ಪಿನಲ್ಲಿ ಏನೇನಿದೆ?: ಇಲ್ಲಿವೆ ಹೈಲೈಟ್ಸ್

- Advertisement -
- Advertisement -

ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಯ್ ನೇತೃತ್ವದ ಪಂಚ ಸದಸ್ಯರ ಪೀಠ ಅಯೋಧ್ಯ ಭೂವಿವಾದಕ್ಕೆ ಸಂಬಂಧಿಸಿದ ತೀರ್ಪು ಪ್ರಕಟಿಸಿದೆ. ರಾಮ ಮಂದಿರ ನಿರ್ಮಾಣಕ್ಕೆ ಸಲ್ಲಬೇಕೊ,  ಬಾಬರಿ ಮಸೀದಿಯ ತಾಣವಾಗಿ ಉಳಿಯಬೇಕೊ ಎಂಬ ವಿವಾದಕ್ಕೆ ಕಾರಣವಾಗಿದ್ದ ಜಮೀನಿಗೆ ಸಂಬಂಧಪಟ್ಟಂತೆ 2010ರಲ್ಲಿ ಅಲಹಾಬಾದ್ ಹೈಕೋರ್ಟ್ ಈ  ವಿವಾದಿತ 2.77 ಎಕರೆ ಜಮೀನನ್ನು ಮೂರು ಭಾಗಗಳಾಗಿ ವಿಂಗಡಿಸಿ ಸುನ್ನಿ ವಕ್ಫ್ ಬೋರ್ಡ್, ರಾಮ್ ಲಲ್ಲಾ ಮತ್ತು ನಿರ್ಮೋಹಿ ಅಖಾಡಗಳಿಗೆ ಸಮನಾಗಿ ಹಂಚಿತ್ತು. ಆದರೆ ಅದರ ವಿರುದ್ಧ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈಗ ತೀರ್ಪು ಹೊರಬಿದ್ದಿದೆ.

ಸುಮಾರು 1045 ಪುಟಗಳಿರುವ ತೀರ್ಪಿನ ಪ್ರಮುಖ ಅಂಶಗಳು ಇಲ್ಲಿವೆ….

* ಅಯೋಧ್ಯೆಯ ವಿವಾದಿತ 2.77 ಎಕರೆ ಜಾಗವನ್ನು ಸಂಪೂರ್ಣವಾಗಿ ಮಂದಿರ ನಿರ್ಮಾಣಕ್ಕೆ ಬಿಟ್ಟುಕೊಡಲಾಗಿದೆ.

* ಮಸೀದಿಯನ್ನು ನಿರ್ಮಿಸಲು ಸುನ್ನಿ ವಕ್ಫ್ ಬೋರ್ಡಿಗೆ ಅಯೋಧ್ಯೆಯ ಬೇರೆಡೆ ಪ್ರಮುಖ ಜಾಗದಲ್ಲಿ ಐದು ಎಕರೆ ಜಮೀನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.

* ನಿಗದಿತ ಸ್ಥಳದಲ್ಲಿ ಮಂದಿರವನ್ನು ನಿರ್ಮಿಸುವ ಸಲುವಾಗಿ ಒಂದು ಟ್ರಸ್ಟ್ ಅನ್ನು ರಚಿಸಲು ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಮೂರು ತಿಂಗಳ ಕಾಲಮಿತಿ ನಿಗದಿಪಡಿಸಿದೆ. ವಿವಾದಿತ ಜಾಗವನ್ನು ಟ್ರಸ್ಟ್ ಗೆ ವರ್ಗಾಯಿಸಲಾಗುವುದು. ಟ್ರಸ್ಟ್ ಅಸ್ತಿತ್ವಕ್ಕೆ ಬರುವವರೆಗೂ ಜಾಗ ಕೇಂದ್ರ ಸರ್ಕಾರದ ಒಡೆತನಕ್ಕೆ ಒಳಪಡಲಿದೆ.

* ಹಿಂದೂಗಳ ನಂಬಿಕೆಯ ಪ್ರಕಾರ ರಾಮನು ಅಯೋಧ್ಯೆಯ ವಿವಾದಿತ ಸ್ಥಳದಲ್ಲಿ ಹುಟ್ಟಿದ್ದನ್ನು ನ್ಯಾಯಾಲಯ ಎತ್ತಿ ಹಿಡಿದಿದೆ. ನಂಬಿಕೆಗಳ ನಡುವೆ ನ್ಯಾಯಾಲಯ ಮಧ್ಯ ಪ್ರವೇಶಿಸಲಾಗದು ಎಂದಿದೆ. ಮಸೀದಿಯು ಮುಸ್ಲೀಮರಿಂದ ಪರಿತ್ಯಜಿಸಲ್ಪಟ್ಟಿರಲಿಲ್ಲ ಅಥವಾ ಅನಾಥಗೊಂಡಿರಲಿಲ್ಲ ಎಂಬುದನ್ನೂ ನ್ಯಾಯಾಲಯ ಎತ್ತಿ ಹಿಡಿದಿದೆ.

* “ವಿವಾದಿತ ಸ್ಥಳದಲ್ಲಿರುವ ಕಬ್ಬಿಣದ ಕಂಬಿಗಳನ್ನು 1856-1857ರಲ್ಲೇ ನಿರ್ಮಿಸಲಾಗಿತ್ತು, ಹಿಂದೂಗಳು ಈ ಜಾಗಕ್ಕೆ ಪ್ರಾರ್ಥಿಸಲು ಆಗಲೇ ಬರುತ್ತಿದ್ದರು ಎಂಬುದು ಇದರಿಂದ ಸಾಬೀತಾಗಿದೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

* “ಧ್ವಂಸಗೊಳಿಸಲ್ಪಟ್ಟ ಗುಮ್ಮಟದ ಕೆಳಗೆ ಇನ್ನೊಂದು ರಚನೆಯಿರುವುದನ್ನು ಭಾರತೀಯ ಪ್ರಾಚ್ಯ ಸರ್ವೇಕ್ಷಣಾ ಸಂಸ್ಥೆಯು (ಎ.ಎಸ್.ಐ) ದೃಢಪಡಿಸಿದೆ. ಆದರೆ ಮಸೀದಿಯನ್ನು ನಿರ್ಮಿಸಲು ಧ್ವಂಸಗೊಳಿಸಲಾದ ಮಂದಿರವೇ ಅದು ಎಂಬ ನಿರ್ಧಾರಕ್ಕೆ ಎ.ಎಸ್.ಐ ಬರಲಾಗಿಲ್ಲ” ಎಂದಿರುವ ಸರ್ವೋಚ್ಛ ನ್ಯಾಯಾಲಯ ಪ್ರಾಚ್ಯ ಸರ್ವೇಕ್ಷಣಾ ಪುರಾವೆಗಳನ್ನು ಕೇವಲ ಅಭಿಪ್ರಾಯಗಳಷ್ಟೇ ಎಂದು ಪರಿಗಣಿಸಿಬಿಟ್ಟರೆ ಅದು ಎ.ಎಸ್.ಐ.ಗೆ ದೊಡ್ಡ  ಅಪಚಾರ ಮಾಡಿದಂತೆ ಎಂದಿದೆ.

* ಸುನ್ನಿ ವಕ್ಫ್ ಬೋರ್ಡ್ ಹಕ್ಕು ಮಂಡಿಸಿದ್ದಂತೆ, ಆ ವಿವಾದಿತ ಜಾಗದ ಮೇಲೆ ತನಗೂ ಹಕ್ಕಿದೆ ಎಂದಿದ್ದ ಶಿಯಾ ವಕ್ಫ್ ಮಂಡಳಿಯ ವಾದವನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ.

* ಅಯೋಧ್ಯ ವಿವಾದಿತ ಜಾಗದಲ್ಲಿ ತನ್ನ ಹಕ್ಕನ್ನು ಸಾಬೀತುಪಡಿಸುವ ಪುರಾವೆಗಳನ್ನು ಒದಗಿಸುವಲ್ಲಿ ಉತ್ತರ ಪ್ರದೇಶದ ಸುನ್ನಿ ವಕ್ಫ್ ಬೋರ್ಡ್ ವಿಫಲವಾಗಿದೆ; ವಿವಾದಿತ ಸ್ಥಳದ ಮೇಲೆ ತಮಗೆ ವಿಶೇಷ ಒಡೆತನವಿದೆ ಎಂಬುದನ್ನು ಸಾಬೀತುಪಡಿಸುವ ಸಾಕ್ಷ್ಯಾಧಾರಗಳನ್ನು ಮುಸ್ಲಿಮರು ಒದಗಿಸಿಲ್ಲ” ಎಂದಿದೆ ಸುಪ್ರೀಂ ಕೋರ್ಟ್.

* ಬಾಬರಿ ಮಸೀದಿಯು ಖಾಲಿ ಜಾಗದಲ್ಲಿ ನಿರ್ಮಿಸಿದ ಕಟ್ಟಡವಲ್ಲ. ವಿವಾದಿತ ಕಟ್ಟಡದ ಕೆಳಗಿರುವ ಕಟ್ಟಡದ ರಚನೆಯು ಇಸ್ಲಾಂಮಿಕ್ ರಚನೆಯದ್ದಲ್ಲ” ಎಂದಿರುವ ಸುಪ್ರೀಂ ಕೋರ್ಟ್ “ಬಾಬರಿ ಮಸೀದಿಯನ್ನು ಧ್ವಂಸ ಮಾಡಿದ್ದು ಕೂಡಾ ಕಾನೂನು ಉಲ್ಲಂಘನೆಯಾಗಿದೆ” ಎಂದಿದೆ.

* ನಿರ್ಮೋಹಿ ಅಖಾರ ವಿವಾದಿತ ಸ್ಥಳದಲ್ಲಿ ಪ್ರತಿಷ್ಠಾಪಿಸಲಾಗಿದ್ದ ರಾಮಲಲ್ಲಾದ ಪಾರುಪತ್ಯೆ ಹಕ್ಕು ತನಗೆ ಸಲ್ಲಬೇಕೆಂದು ಮುಂದಿಟ್ಟಿದ್ದ ವಾದವನ್ನು ಕಾಲಮಿತಿ ಮೀರಿದ ವಾದವೆಂದು ನ್ಯಾಯಾಲಯ ತಳ್ಳಿಹಾಕಿದೆ. ಆದರೆ ಮಂದಿರ ನಿರ್ಮಾಣದ ಕುರಿತು ಕೇಂದ್ರ ಸರ್ಕಾರದ ಸ್ಥಾಪಿಸಲಿರುವ ಟ್ರಸ್ಟ್ ನಲ್ಲಿ ಅಖಾರದ ಪ್ರತಿನಿಧಿಗೆ ಅವಕಾಶ ಇರಬೇಕೆಂದು ಹೇಳಿದೆ.

* ಸರ್ವೋಚ್ಛ ನ್ಯಾಯಾಲಯವು `ಪ್ರಾರ್ಥನಾ ಸ್ಥಳಗಳ (ವಿಶೇಷ ಅವಕಾಶಗಳು) ಕಾಯ್ದೆಯನ್ನು ತೀರ್ಪಿನಲ್ಲಿ ಉಲ್ಲೇಖಿಸಿದೆ. ಎಲ್ಲಾ ಧರ್ಮಗಳು ಸಮಾನ ಎಂಬುದನ್ನು ಹೇಳಲು  ಈ ಕಾಯ್ದೆಯು ಯಾವುದೇ ಪ್ರಾರ್ಥನಾ ಸ್ಥಳವನ್ನು ಮಾರ್ಪಡಿಸುವ /ರೂಪಾಂತರಿಸುವುದನ್ನು ನಿಷೇಧಿಸುತ್ತದೆ.

* `ನಮ್ಮ ಸಂವಿಧಾನದ ಆತ್ಮವೇ ಸಮಾನತೆಗೆ ಬದ್ಧರಾಗಿರುವುದು. ನಮ್ಮ ಸಂವಿಧಾನ ಒಬ್ಬರ ನಂಬಿಕೆ, ಮತ್ತೊಬ್ಬರ ನಂಬಿಕೆ ನಡುವೆ ಯಾವುದೇ ಬೇಧ ಮಾಡುವುದಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...