Homeಮುಖಪುಟಅಯೋಧ್ಯ ತೀರ್ಪಿನಲ್ಲಿ ಏನೇನಿದೆ?: ಇಲ್ಲಿವೆ ಹೈಲೈಟ್ಸ್

ಅಯೋಧ್ಯ ತೀರ್ಪಿನಲ್ಲಿ ಏನೇನಿದೆ?: ಇಲ್ಲಿವೆ ಹೈಲೈಟ್ಸ್

- Advertisement -
- Advertisement -

ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಯ್ ನೇತೃತ್ವದ ಪಂಚ ಸದಸ್ಯರ ಪೀಠ ಅಯೋಧ್ಯ ಭೂವಿವಾದಕ್ಕೆ ಸಂಬಂಧಿಸಿದ ತೀರ್ಪು ಪ್ರಕಟಿಸಿದೆ. ರಾಮ ಮಂದಿರ ನಿರ್ಮಾಣಕ್ಕೆ ಸಲ್ಲಬೇಕೊ,  ಬಾಬರಿ ಮಸೀದಿಯ ತಾಣವಾಗಿ ಉಳಿಯಬೇಕೊ ಎಂಬ ವಿವಾದಕ್ಕೆ ಕಾರಣವಾಗಿದ್ದ ಜಮೀನಿಗೆ ಸಂಬಂಧಪಟ್ಟಂತೆ 2010ರಲ್ಲಿ ಅಲಹಾಬಾದ್ ಹೈಕೋರ್ಟ್ ಈ  ವಿವಾದಿತ 2.77 ಎಕರೆ ಜಮೀನನ್ನು ಮೂರು ಭಾಗಗಳಾಗಿ ವಿಂಗಡಿಸಿ ಸುನ್ನಿ ವಕ್ಫ್ ಬೋರ್ಡ್, ರಾಮ್ ಲಲ್ಲಾ ಮತ್ತು ನಿರ್ಮೋಹಿ ಅಖಾಡಗಳಿಗೆ ಸಮನಾಗಿ ಹಂಚಿತ್ತು. ಆದರೆ ಅದರ ವಿರುದ್ಧ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈಗ ತೀರ್ಪು ಹೊರಬಿದ್ದಿದೆ.

ಸುಮಾರು 1045 ಪುಟಗಳಿರುವ ತೀರ್ಪಿನ ಪ್ರಮುಖ ಅಂಶಗಳು ಇಲ್ಲಿವೆ….

* ಅಯೋಧ್ಯೆಯ ವಿವಾದಿತ 2.77 ಎಕರೆ ಜಾಗವನ್ನು ಸಂಪೂರ್ಣವಾಗಿ ಮಂದಿರ ನಿರ್ಮಾಣಕ್ಕೆ ಬಿಟ್ಟುಕೊಡಲಾಗಿದೆ.

* ಮಸೀದಿಯನ್ನು ನಿರ್ಮಿಸಲು ಸುನ್ನಿ ವಕ್ಫ್ ಬೋರ್ಡಿಗೆ ಅಯೋಧ್ಯೆಯ ಬೇರೆಡೆ ಪ್ರಮುಖ ಜಾಗದಲ್ಲಿ ಐದು ಎಕರೆ ಜಮೀನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.

* ನಿಗದಿತ ಸ್ಥಳದಲ್ಲಿ ಮಂದಿರವನ್ನು ನಿರ್ಮಿಸುವ ಸಲುವಾಗಿ ಒಂದು ಟ್ರಸ್ಟ್ ಅನ್ನು ರಚಿಸಲು ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಮೂರು ತಿಂಗಳ ಕಾಲಮಿತಿ ನಿಗದಿಪಡಿಸಿದೆ. ವಿವಾದಿತ ಜಾಗವನ್ನು ಟ್ರಸ್ಟ್ ಗೆ ವರ್ಗಾಯಿಸಲಾಗುವುದು. ಟ್ರಸ್ಟ್ ಅಸ್ತಿತ್ವಕ್ಕೆ ಬರುವವರೆಗೂ ಜಾಗ ಕೇಂದ್ರ ಸರ್ಕಾರದ ಒಡೆತನಕ್ಕೆ ಒಳಪಡಲಿದೆ.

* ಹಿಂದೂಗಳ ನಂಬಿಕೆಯ ಪ್ರಕಾರ ರಾಮನು ಅಯೋಧ್ಯೆಯ ವಿವಾದಿತ ಸ್ಥಳದಲ್ಲಿ ಹುಟ್ಟಿದ್ದನ್ನು ನ್ಯಾಯಾಲಯ ಎತ್ತಿ ಹಿಡಿದಿದೆ. ನಂಬಿಕೆಗಳ ನಡುವೆ ನ್ಯಾಯಾಲಯ ಮಧ್ಯ ಪ್ರವೇಶಿಸಲಾಗದು ಎಂದಿದೆ. ಮಸೀದಿಯು ಮುಸ್ಲೀಮರಿಂದ ಪರಿತ್ಯಜಿಸಲ್ಪಟ್ಟಿರಲಿಲ್ಲ ಅಥವಾ ಅನಾಥಗೊಂಡಿರಲಿಲ್ಲ ಎಂಬುದನ್ನೂ ನ್ಯಾಯಾಲಯ ಎತ್ತಿ ಹಿಡಿದಿದೆ.

* “ವಿವಾದಿತ ಸ್ಥಳದಲ್ಲಿರುವ ಕಬ್ಬಿಣದ ಕಂಬಿಗಳನ್ನು 1856-1857ರಲ್ಲೇ ನಿರ್ಮಿಸಲಾಗಿತ್ತು, ಹಿಂದೂಗಳು ಈ ಜಾಗಕ್ಕೆ ಪ್ರಾರ್ಥಿಸಲು ಆಗಲೇ ಬರುತ್ತಿದ್ದರು ಎಂಬುದು ಇದರಿಂದ ಸಾಬೀತಾಗಿದೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

* “ಧ್ವಂಸಗೊಳಿಸಲ್ಪಟ್ಟ ಗುಮ್ಮಟದ ಕೆಳಗೆ ಇನ್ನೊಂದು ರಚನೆಯಿರುವುದನ್ನು ಭಾರತೀಯ ಪ್ರಾಚ್ಯ ಸರ್ವೇಕ್ಷಣಾ ಸಂಸ್ಥೆಯು (ಎ.ಎಸ್.ಐ) ದೃಢಪಡಿಸಿದೆ. ಆದರೆ ಮಸೀದಿಯನ್ನು ನಿರ್ಮಿಸಲು ಧ್ವಂಸಗೊಳಿಸಲಾದ ಮಂದಿರವೇ ಅದು ಎಂಬ ನಿರ್ಧಾರಕ್ಕೆ ಎ.ಎಸ್.ಐ ಬರಲಾಗಿಲ್ಲ” ಎಂದಿರುವ ಸರ್ವೋಚ್ಛ ನ್ಯಾಯಾಲಯ ಪ್ರಾಚ್ಯ ಸರ್ವೇಕ್ಷಣಾ ಪುರಾವೆಗಳನ್ನು ಕೇವಲ ಅಭಿಪ್ರಾಯಗಳಷ್ಟೇ ಎಂದು ಪರಿಗಣಿಸಿಬಿಟ್ಟರೆ ಅದು ಎ.ಎಸ್.ಐ.ಗೆ ದೊಡ್ಡ  ಅಪಚಾರ ಮಾಡಿದಂತೆ ಎಂದಿದೆ.

* ಸುನ್ನಿ ವಕ್ಫ್ ಬೋರ್ಡ್ ಹಕ್ಕು ಮಂಡಿಸಿದ್ದಂತೆ, ಆ ವಿವಾದಿತ ಜಾಗದ ಮೇಲೆ ತನಗೂ ಹಕ್ಕಿದೆ ಎಂದಿದ್ದ ಶಿಯಾ ವಕ್ಫ್ ಮಂಡಳಿಯ ವಾದವನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ.

* ಅಯೋಧ್ಯ ವಿವಾದಿತ ಜಾಗದಲ್ಲಿ ತನ್ನ ಹಕ್ಕನ್ನು ಸಾಬೀತುಪಡಿಸುವ ಪುರಾವೆಗಳನ್ನು ಒದಗಿಸುವಲ್ಲಿ ಉತ್ತರ ಪ್ರದೇಶದ ಸುನ್ನಿ ವಕ್ಫ್ ಬೋರ್ಡ್ ವಿಫಲವಾಗಿದೆ; ವಿವಾದಿತ ಸ್ಥಳದ ಮೇಲೆ ತಮಗೆ ವಿಶೇಷ ಒಡೆತನವಿದೆ ಎಂಬುದನ್ನು ಸಾಬೀತುಪಡಿಸುವ ಸಾಕ್ಷ್ಯಾಧಾರಗಳನ್ನು ಮುಸ್ಲಿಮರು ಒದಗಿಸಿಲ್ಲ” ಎಂದಿದೆ ಸುಪ್ರೀಂ ಕೋರ್ಟ್.

* ಬಾಬರಿ ಮಸೀದಿಯು ಖಾಲಿ ಜಾಗದಲ್ಲಿ ನಿರ್ಮಿಸಿದ ಕಟ್ಟಡವಲ್ಲ. ವಿವಾದಿತ ಕಟ್ಟಡದ ಕೆಳಗಿರುವ ಕಟ್ಟಡದ ರಚನೆಯು ಇಸ್ಲಾಂಮಿಕ್ ರಚನೆಯದ್ದಲ್ಲ” ಎಂದಿರುವ ಸುಪ್ರೀಂ ಕೋರ್ಟ್ “ಬಾಬರಿ ಮಸೀದಿಯನ್ನು ಧ್ವಂಸ ಮಾಡಿದ್ದು ಕೂಡಾ ಕಾನೂನು ಉಲ್ಲಂಘನೆಯಾಗಿದೆ” ಎಂದಿದೆ.

* ನಿರ್ಮೋಹಿ ಅಖಾರ ವಿವಾದಿತ ಸ್ಥಳದಲ್ಲಿ ಪ್ರತಿಷ್ಠಾಪಿಸಲಾಗಿದ್ದ ರಾಮಲಲ್ಲಾದ ಪಾರುಪತ್ಯೆ ಹಕ್ಕು ತನಗೆ ಸಲ್ಲಬೇಕೆಂದು ಮುಂದಿಟ್ಟಿದ್ದ ವಾದವನ್ನು ಕಾಲಮಿತಿ ಮೀರಿದ ವಾದವೆಂದು ನ್ಯಾಯಾಲಯ ತಳ್ಳಿಹಾಕಿದೆ. ಆದರೆ ಮಂದಿರ ನಿರ್ಮಾಣದ ಕುರಿತು ಕೇಂದ್ರ ಸರ್ಕಾರದ ಸ್ಥಾಪಿಸಲಿರುವ ಟ್ರಸ್ಟ್ ನಲ್ಲಿ ಅಖಾರದ ಪ್ರತಿನಿಧಿಗೆ ಅವಕಾಶ ಇರಬೇಕೆಂದು ಹೇಳಿದೆ.

* ಸರ್ವೋಚ್ಛ ನ್ಯಾಯಾಲಯವು `ಪ್ರಾರ್ಥನಾ ಸ್ಥಳಗಳ (ವಿಶೇಷ ಅವಕಾಶಗಳು) ಕಾಯ್ದೆಯನ್ನು ತೀರ್ಪಿನಲ್ಲಿ ಉಲ್ಲೇಖಿಸಿದೆ. ಎಲ್ಲಾ ಧರ್ಮಗಳು ಸಮಾನ ಎಂಬುದನ್ನು ಹೇಳಲು  ಈ ಕಾಯ್ದೆಯು ಯಾವುದೇ ಪ್ರಾರ್ಥನಾ ಸ್ಥಳವನ್ನು ಮಾರ್ಪಡಿಸುವ /ರೂಪಾಂತರಿಸುವುದನ್ನು ನಿಷೇಧಿಸುತ್ತದೆ.

* `ನಮ್ಮ ಸಂವಿಧಾನದ ಆತ್ಮವೇ ಸಮಾನತೆಗೆ ಬದ್ಧರಾಗಿರುವುದು. ನಮ್ಮ ಸಂವಿಧಾನ ಒಬ್ಬರ ನಂಬಿಕೆ, ಮತ್ತೊಬ್ಬರ ನಂಬಿಕೆ ನಡುವೆ ಯಾವುದೇ ಬೇಧ ಮಾಡುವುದಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...