Homeಮುಖಪುಟಅಯೋಧ್ಯ ತೀರ್ಪಿನಲ್ಲಿ ಏನೇನಿದೆ?: ಇಲ್ಲಿವೆ ಹೈಲೈಟ್ಸ್

ಅಯೋಧ್ಯ ತೀರ್ಪಿನಲ್ಲಿ ಏನೇನಿದೆ?: ಇಲ್ಲಿವೆ ಹೈಲೈಟ್ಸ್

- Advertisement -
- Advertisement -

ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಯ್ ನೇತೃತ್ವದ ಪಂಚ ಸದಸ್ಯರ ಪೀಠ ಅಯೋಧ್ಯ ಭೂವಿವಾದಕ್ಕೆ ಸಂಬಂಧಿಸಿದ ತೀರ್ಪು ಪ್ರಕಟಿಸಿದೆ. ರಾಮ ಮಂದಿರ ನಿರ್ಮಾಣಕ್ಕೆ ಸಲ್ಲಬೇಕೊ,  ಬಾಬರಿ ಮಸೀದಿಯ ತಾಣವಾಗಿ ಉಳಿಯಬೇಕೊ ಎಂಬ ವಿವಾದಕ್ಕೆ ಕಾರಣವಾಗಿದ್ದ ಜಮೀನಿಗೆ ಸಂಬಂಧಪಟ್ಟಂತೆ 2010ರಲ್ಲಿ ಅಲಹಾಬಾದ್ ಹೈಕೋರ್ಟ್ ಈ  ವಿವಾದಿತ 2.77 ಎಕರೆ ಜಮೀನನ್ನು ಮೂರು ಭಾಗಗಳಾಗಿ ವಿಂಗಡಿಸಿ ಸುನ್ನಿ ವಕ್ಫ್ ಬೋರ್ಡ್, ರಾಮ್ ಲಲ್ಲಾ ಮತ್ತು ನಿರ್ಮೋಹಿ ಅಖಾಡಗಳಿಗೆ ಸಮನಾಗಿ ಹಂಚಿತ್ತು. ಆದರೆ ಅದರ ವಿರುದ್ಧ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈಗ ತೀರ್ಪು ಹೊರಬಿದ್ದಿದೆ.

ಸುಮಾರು 1045 ಪುಟಗಳಿರುವ ತೀರ್ಪಿನ ಪ್ರಮುಖ ಅಂಶಗಳು ಇಲ್ಲಿವೆ….

* ಅಯೋಧ್ಯೆಯ ವಿವಾದಿತ 2.77 ಎಕರೆ ಜಾಗವನ್ನು ಸಂಪೂರ್ಣವಾಗಿ ಮಂದಿರ ನಿರ್ಮಾಣಕ್ಕೆ ಬಿಟ್ಟುಕೊಡಲಾಗಿದೆ.

* ಮಸೀದಿಯನ್ನು ನಿರ್ಮಿಸಲು ಸುನ್ನಿ ವಕ್ಫ್ ಬೋರ್ಡಿಗೆ ಅಯೋಧ್ಯೆಯ ಬೇರೆಡೆ ಪ್ರಮುಖ ಜಾಗದಲ್ಲಿ ಐದು ಎಕರೆ ಜಮೀನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.

* ನಿಗದಿತ ಸ್ಥಳದಲ್ಲಿ ಮಂದಿರವನ್ನು ನಿರ್ಮಿಸುವ ಸಲುವಾಗಿ ಒಂದು ಟ್ರಸ್ಟ್ ಅನ್ನು ರಚಿಸಲು ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಮೂರು ತಿಂಗಳ ಕಾಲಮಿತಿ ನಿಗದಿಪಡಿಸಿದೆ. ವಿವಾದಿತ ಜಾಗವನ್ನು ಟ್ರಸ್ಟ್ ಗೆ ವರ್ಗಾಯಿಸಲಾಗುವುದು. ಟ್ರಸ್ಟ್ ಅಸ್ತಿತ್ವಕ್ಕೆ ಬರುವವರೆಗೂ ಜಾಗ ಕೇಂದ್ರ ಸರ್ಕಾರದ ಒಡೆತನಕ್ಕೆ ಒಳಪಡಲಿದೆ.

* ಹಿಂದೂಗಳ ನಂಬಿಕೆಯ ಪ್ರಕಾರ ರಾಮನು ಅಯೋಧ್ಯೆಯ ವಿವಾದಿತ ಸ್ಥಳದಲ್ಲಿ ಹುಟ್ಟಿದ್ದನ್ನು ನ್ಯಾಯಾಲಯ ಎತ್ತಿ ಹಿಡಿದಿದೆ. ನಂಬಿಕೆಗಳ ನಡುವೆ ನ್ಯಾಯಾಲಯ ಮಧ್ಯ ಪ್ರವೇಶಿಸಲಾಗದು ಎಂದಿದೆ. ಮಸೀದಿಯು ಮುಸ್ಲೀಮರಿಂದ ಪರಿತ್ಯಜಿಸಲ್ಪಟ್ಟಿರಲಿಲ್ಲ ಅಥವಾ ಅನಾಥಗೊಂಡಿರಲಿಲ್ಲ ಎಂಬುದನ್ನೂ ನ್ಯಾಯಾಲಯ ಎತ್ತಿ ಹಿಡಿದಿದೆ.

* “ವಿವಾದಿತ ಸ್ಥಳದಲ್ಲಿರುವ ಕಬ್ಬಿಣದ ಕಂಬಿಗಳನ್ನು 1856-1857ರಲ್ಲೇ ನಿರ್ಮಿಸಲಾಗಿತ್ತು, ಹಿಂದೂಗಳು ಈ ಜಾಗಕ್ಕೆ ಪ್ರಾರ್ಥಿಸಲು ಆಗಲೇ ಬರುತ್ತಿದ್ದರು ಎಂಬುದು ಇದರಿಂದ ಸಾಬೀತಾಗಿದೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

* “ಧ್ವಂಸಗೊಳಿಸಲ್ಪಟ್ಟ ಗುಮ್ಮಟದ ಕೆಳಗೆ ಇನ್ನೊಂದು ರಚನೆಯಿರುವುದನ್ನು ಭಾರತೀಯ ಪ್ರಾಚ್ಯ ಸರ್ವೇಕ್ಷಣಾ ಸಂಸ್ಥೆಯು (ಎ.ಎಸ್.ಐ) ದೃಢಪಡಿಸಿದೆ. ಆದರೆ ಮಸೀದಿಯನ್ನು ನಿರ್ಮಿಸಲು ಧ್ವಂಸಗೊಳಿಸಲಾದ ಮಂದಿರವೇ ಅದು ಎಂಬ ನಿರ್ಧಾರಕ್ಕೆ ಎ.ಎಸ್.ಐ ಬರಲಾಗಿಲ್ಲ” ಎಂದಿರುವ ಸರ್ವೋಚ್ಛ ನ್ಯಾಯಾಲಯ ಪ್ರಾಚ್ಯ ಸರ್ವೇಕ್ಷಣಾ ಪುರಾವೆಗಳನ್ನು ಕೇವಲ ಅಭಿಪ್ರಾಯಗಳಷ್ಟೇ ಎಂದು ಪರಿಗಣಿಸಿಬಿಟ್ಟರೆ ಅದು ಎ.ಎಸ್.ಐ.ಗೆ ದೊಡ್ಡ  ಅಪಚಾರ ಮಾಡಿದಂತೆ ಎಂದಿದೆ.

* ಸುನ್ನಿ ವಕ್ಫ್ ಬೋರ್ಡ್ ಹಕ್ಕು ಮಂಡಿಸಿದ್ದಂತೆ, ಆ ವಿವಾದಿತ ಜಾಗದ ಮೇಲೆ ತನಗೂ ಹಕ್ಕಿದೆ ಎಂದಿದ್ದ ಶಿಯಾ ವಕ್ಫ್ ಮಂಡಳಿಯ ವಾದವನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ.

* ಅಯೋಧ್ಯ ವಿವಾದಿತ ಜಾಗದಲ್ಲಿ ತನ್ನ ಹಕ್ಕನ್ನು ಸಾಬೀತುಪಡಿಸುವ ಪುರಾವೆಗಳನ್ನು ಒದಗಿಸುವಲ್ಲಿ ಉತ್ತರ ಪ್ರದೇಶದ ಸುನ್ನಿ ವಕ್ಫ್ ಬೋರ್ಡ್ ವಿಫಲವಾಗಿದೆ; ವಿವಾದಿತ ಸ್ಥಳದ ಮೇಲೆ ತಮಗೆ ವಿಶೇಷ ಒಡೆತನವಿದೆ ಎಂಬುದನ್ನು ಸಾಬೀತುಪಡಿಸುವ ಸಾಕ್ಷ್ಯಾಧಾರಗಳನ್ನು ಮುಸ್ಲಿಮರು ಒದಗಿಸಿಲ್ಲ” ಎಂದಿದೆ ಸುಪ್ರೀಂ ಕೋರ್ಟ್.

* ಬಾಬರಿ ಮಸೀದಿಯು ಖಾಲಿ ಜಾಗದಲ್ಲಿ ನಿರ್ಮಿಸಿದ ಕಟ್ಟಡವಲ್ಲ. ವಿವಾದಿತ ಕಟ್ಟಡದ ಕೆಳಗಿರುವ ಕಟ್ಟಡದ ರಚನೆಯು ಇಸ್ಲಾಂಮಿಕ್ ರಚನೆಯದ್ದಲ್ಲ” ಎಂದಿರುವ ಸುಪ್ರೀಂ ಕೋರ್ಟ್ “ಬಾಬರಿ ಮಸೀದಿಯನ್ನು ಧ್ವಂಸ ಮಾಡಿದ್ದು ಕೂಡಾ ಕಾನೂನು ಉಲ್ಲಂಘನೆಯಾಗಿದೆ” ಎಂದಿದೆ.

* ನಿರ್ಮೋಹಿ ಅಖಾರ ವಿವಾದಿತ ಸ್ಥಳದಲ್ಲಿ ಪ್ರತಿಷ್ಠಾಪಿಸಲಾಗಿದ್ದ ರಾಮಲಲ್ಲಾದ ಪಾರುಪತ್ಯೆ ಹಕ್ಕು ತನಗೆ ಸಲ್ಲಬೇಕೆಂದು ಮುಂದಿಟ್ಟಿದ್ದ ವಾದವನ್ನು ಕಾಲಮಿತಿ ಮೀರಿದ ವಾದವೆಂದು ನ್ಯಾಯಾಲಯ ತಳ್ಳಿಹಾಕಿದೆ. ಆದರೆ ಮಂದಿರ ನಿರ್ಮಾಣದ ಕುರಿತು ಕೇಂದ್ರ ಸರ್ಕಾರದ ಸ್ಥಾಪಿಸಲಿರುವ ಟ್ರಸ್ಟ್ ನಲ್ಲಿ ಅಖಾರದ ಪ್ರತಿನಿಧಿಗೆ ಅವಕಾಶ ಇರಬೇಕೆಂದು ಹೇಳಿದೆ.

* ಸರ್ವೋಚ್ಛ ನ್ಯಾಯಾಲಯವು `ಪ್ರಾರ್ಥನಾ ಸ್ಥಳಗಳ (ವಿಶೇಷ ಅವಕಾಶಗಳು) ಕಾಯ್ದೆಯನ್ನು ತೀರ್ಪಿನಲ್ಲಿ ಉಲ್ಲೇಖಿಸಿದೆ. ಎಲ್ಲಾ ಧರ್ಮಗಳು ಸಮಾನ ಎಂಬುದನ್ನು ಹೇಳಲು  ಈ ಕಾಯ್ದೆಯು ಯಾವುದೇ ಪ್ರಾರ್ಥನಾ ಸ್ಥಳವನ್ನು ಮಾರ್ಪಡಿಸುವ /ರೂಪಾಂತರಿಸುವುದನ್ನು ನಿಷೇಧಿಸುತ್ತದೆ.

* `ನಮ್ಮ ಸಂವಿಧಾನದ ಆತ್ಮವೇ ಸಮಾನತೆಗೆ ಬದ್ಧರಾಗಿರುವುದು. ನಮ್ಮ ಸಂವಿಧಾನ ಒಬ್ಬರ ನಂಬಿಕೆ, ಮತ್ತೊಬ್ಬರ ನಂಬಿಕೆ ನಡುವೆ ಯಾವುದೇ ಬೇಧ ಮಾಡುವುದಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...