Homeಕರ್ನಾಟಕ‘ತೇಜೋವಧೆ’: ಪವರ್‌‌ ಟಿವಿ ಮುಖ್ಯಸ್ಥನ ವಿರುದ್ದ ಪತ್ರಕರ್ತ ನವೀನ್‌ ಸೂರಿಂಜೆ ದೂರು

‘ತೇಜೋವಧೆ’: ಪವರ್‌‌ ಟಿವಿ ಮುಖ್ಯಸ್ಥನ ವಿರುದ್ದ ಪತ್ರಕರ್ತ ನವೀನ್‌ ಸೂರಿಂಜೆ ದೂರು

- Advertisement -
- Advertisement -

ಹಳೆಯ ಮತ್ತು ಸಂಬಂಧಪಡದ ಆಡಿಯೊಗಳನ್ನು ಎಡಿಟ್‌ ಮಾಡಿ ತಮ್ಮ ಚಾನೆಲ್‌ನಲ್ಲಿ ಪ್ರಸಾರ ಮಾಡಿ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಪತ್ರಕರ್ತ ನವೀನ್‌ ಸೂರಿಂಜೆ ಅವರು ಪವರ್‌ ಟಿವಿಯ ಮುಖ್ಯಸ್ಥ ರಾಕೇಶ್‌ ಶೆಟ್ಟಿ, ಸಂಪಾದಕೀಯ ಸಲಹೆಗಾರ ರವೀಂದ್ರ ರೇಷ್ಮೆ, ಸಹಸಂಪಾದಕ ರಾಘವ ಸೂರ್ಯ ಸೇರಿದಂತೆ ಇನ್ನೂ ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ.

ಬಿಟಿವಿಯ ಮಾಜಿ ಪತ್ರಕರ್ತನೊಬ್ಬ ಇತ್ತೀಚೆಗೆ ಲಂಚ ಪಡೆಯುವ ಸಮಯದಲ್ಲಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಪ್ರಕರಣದ ಹಿನ್ನಲೆಯಲ್ಲಿ ಪವರ್‌ ಟಿವಿ, ಮಾಧ್ಯಮಗಳಲ್ಲಿ ನಡೆಯುವ ಹಣದ ಅವ್ಯವಹಾರಗಳ ಬಗ್ಗೆ ವಿಶೇಷ ಕಾರ್ಯಕ್ರಮ ಮಾಡಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಬಿಟಿವಿ ಸಂಪಾದಕ ನವೀನ್ ಸೂರಿಂಜೆ ಅವರ ಬಗ್ಗೆಯೂ ಭ್ರಷ್ಟಾಚಾರದ ಆರೋಪವನ್ನು ಹೊರಿಸಲಾಗಿತ್ತು. ಜೊತೆಗೆ ಅವರು ಮಾತನಾಡಿದ್ದಾರೆ ಎನ್ನಲಾಗಿರುವ ಆಡಿಯೊವೊಂದನ್ನು ತೋರಿಸಿ, ನವೀನ್ ಸೂರಿಂಜೆ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಬಿಂಬಿಸಲಾಗಿದೆ.

ಇದನ್ನೂ ಓದಿ:ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ಪವರ್‌ ಟಿವಿಯ ಈ ಎಲ್ಲಾ ಆರೋಪಗಳನ್ನು ವಿರೋಧಿಸಿರುವ ನವೀನ್‌‌ ಸೂರಿಂಜೆ, ಪವರ್‌ ಟಿವಿಯ ಮುಖ್ಯಸ್ಥ ರಾಕೇಶ್‌ ಶೆಟ್ಟಿ, ಸಂಪಾದಕೀಯ ಸಲಹೆಗಾರ ರವೀಂದ್ರ ರೇಷ್ಮೆ, ಸಹಸಂಪಾದಕ ರಾಘವ ಸೂರ್ಯ, ಅರುಣ್ ಭಗತ್ ಸಿಂಗ್, ಪ್ರಶಾಂತ್‌‌ ಬಿಸ್ಲೆರಿ ಮತ್ತು ಆಡಿಯೊದಲ್ಲಿ ಇರುವ ವ್ಯಕ್ತಿಯ ವಿರುದ್ದ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಅವರು, ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿಯನ್ನು ಮರಳು ಮಾಫಿಯಾ ಎಂದು ಉಲ್ಲೇಖಿಸಿದ್ದು, ಅವರು ಬಿಟಿವಿ ವಿರುದ್ಧ ಕೆಲವು ದಿನಗಳಿಂದ ಪಿತೂರಿ ಮಾಡುತ್ತಿದ್ದರು ಎಂದು ಹೇಳಿದ್ದಾರೆ. ರಾಕೇಶ್‌ ಶೆಟ್ಟಿ ಮತ್ತು ಇತರರ ವಿರುದ್ದ ಬಿಟಿವಿ ಸಂಪಾದಕನಾಗಿ ತಾನು ದೂರು ನೀಡಿದ್ದು, ಈ ಹಿನ್ನಲೆಯಲ್ಲಿ IPC 419, 420 ಸೇರಿದಂತೆ ಇನ್ನಿತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ನವೀನ್ ಸೂರಿಂಜೆ ಪೊಲೀಸ್‌ ದೂರಿನಲ್ಲಿ ಹೇಳಿದ್ದಾರೆ.

ಇದರಿಂದ ರಾಕೇಶ್‌ ಶೆಟ್ಟಿ ಹತಾಶೆಗೆ ಒಳಗಾಗಿ, ತನ್ನ ವಿರುದ್ದ ವೃತ್ತಿಪರ ಟ್ಯ್ರಾಪ್ ಆರೋಪಿ ಅರುಣ್‌ ಭಗತ್‌ ಸಿಂಗ್‌, ಪತ್ರಕರ್ತ ರವೀಂದ್ರ ರೇಷ್ಮೆ, ಪ್ರಶಾಂತ್‌ ಬಿಸ್ಲೆರಿ ಎಂಬವರು ಸೇರಿಕೊಂಡು ಎಡಿಟೆಡ್‌ ಆಡಿಯೊ ಪ್ರಸಾರ ಮಾಡಿದ್ದಾರೆ ಎಂದು ನವೀನ್‌ ಸೂರಿಂಜೆ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ:ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಪವರ್‌ ಟಿವಿ ಪ್ರಸಾರ ಮಾಡಿರುವ ಆಡಿಯೊ ಬಹುಶಃ ವರ್ಷಗಳ ಹಿಂದೆಯೆ ತಾನು ಮಾತನಾಡಿರುವ ಬಿಡಿ ಬಿಡಿ ಆಡಿಯೊ ಆಗಿರಬಹುದು ಎಂದು ನವೀನ್ ಸೂರಿಂಜೆ ಹೇಳಿದ್ದು, ಅದನ್ನು ಒಟ್ಟು ಸೇರಿಸಿ ಟಿವಿಯಲ್ಲಿ ಪ್ರಸಾರ ಮಾಡಿ ತನ್ನ ಮಾನಹಾನಿ ಮಾಡಲಾಗಿದೆ ಎಂದು ಸೂರಿಂಜೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನವೀನ್ ಸೂರಿಂಜ್, “ನಾನು ಪಾರದರ್ಶಕ ಪತ್ರಿಕೋದ್ಯಮ ಮಾಡುತ್ತಿರುವವನು. ನನ್ನ ಸಂಪಾದನೆ ಎಷ್ಟು ಎಂದು ಮೊದಲ ಬಾರಿಗೆ ವೆಬ್‌ಸೈಟ್‌ನಲ್ಲಿ ಘೋಷಿಸಿದ ಪತ್ರಕರ್ತ. ನಾನು ಈಗಲೂ ಕಚೇರಿಯ ಸಂಬಳವನ್ನಷ್ಟೇ ನೆಚ್ಚಿಕೊಂಡಿದ್ದೇನೆ” ಎಂದು ತಿಳಿಸಿದ್ದಾರೆ.

“ತಾಲೂಕು ವರದಿಗಾರ ಹುದ್ದೆಯಿಂದ ಹಿಡಿದು ಸಂಪಾದಕನ ಹುದ್ದೆಯವರೆಗೆ ಈವರೆಗೂ ಲಂಚ ತೆಗೆದುಕೊಂಡಿಲ್ಲ. ಯಾವ ರಾಜಕಾರಣಿ, ಉದ್ಯಮಿಯ ಮನೆಯಲ್ಲಿ ಊಟ ಮಾಡಿಲ್ಲ, ಪಾರ್ಟಿಗಳಲ್ಲಿ ಭಾಗಿಯಾಗಿಲ್ಲ. ನನ್ನ ವೈಯುಕ್ತಿಕ ವಿಷಯಗಳಿಗೆ ರಾಜಕಾರಣಿಗಳ ಸಹಾಯ ಪಡೆದಿಲ್ಲ. ಯಾವುದೇ ರಾಜಕಾರಣಿ ಮತ್ತು ಉದ್ಯಮಿಗಳನ್ನು ನನ್ನ ಖಾಸಗಿ ಕಾರ್ಯಕ್ರಮಗಳಿಗೆ ಆಹ್ವಾನಿಸಿ ಲಾಭ ಪಡೆದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಪವರ್ ಟಿವಿ ಪ್ರಕರಣ ಎತ್ತುವ ಪ್ರಶ್ನೆಗಳು ಯಾರ ಮನೆ ಬಾಗಿಲೆದುರು ನಿಲ್ಲುತ್ತವೆ?

“ನನ್ನ ಸಂಸ್ಥೆಯ ಸಂಬಂಧದ ಅಧಿಕೃತ ಹಣಕಾಸು ವ್ಯವಹಾರಗಳನ್ನು ಹಲವರ ಜೊತೆ ಹುದ್ದೆಯ ಕಾರಣಕ್ಕಾಗಿ ಅಧಿಕೃತವಾಗಿ ಮಾತನಾಡಿದ್ದೇನೆ. ನಾನು ಕೆಲಸ ಮಾಡುವ ಸಂಸ್ಥೆಯ ಅಧಿಕೃತ ಹಣಕಾಸು ವ್ಯವಹಾರಗಳಲ್ಲಿ ನನ್ನ ಭಾಗಿದಾರಿಕೆಯ ಅಗತ್ಯವಿದ್ದಾಗ ಆ ಕರ್ತವ್ಯ ಮಾಡುವುದು ಅನಿವಾರ್ಯ. ನಾನು ವರ್ಷಗಳ ಹಿಂದೆ ಯಾರ ಜೊತೆಯೋ ಮೂರ್ನಾಲ್ಕು ಬಾರಿ ಮಾತನಾಡಿದ್ದ ಫೋನ್ ಕರೆಯನ್ನು ಎಡಿಟ್ ಮಾಡಿ ಅದನ್ನೆಲ್ಲಾ ಜೋಡಿಸಿ ಒಂದು ಫೋನ್ ಕರೆ ಎಂದು ಬಿಂಬಿಸಿ ನನ್ನ ಆಡಿಯೋವನ್ನು ಪ್ರಸಾರ ಮಾಡಲಾಗಿದೆ” ಎಂದು ನವೀನ್ ಸೂರಿಂಜೆ ಹೇಳಿದ್ದಾರೆ.

“ಈವರೆಗೂ ವೈಯುಕ್ತಿಕವಾಗಿ ಯಾವುದೇ ರೀತಿಯಲ್ಲಿ ನನ್ನ ಸಿದ್ದಾಂತದಲ್ಲಿ ರಾಜಿಯಾಗಿಲ್ಲ. ನನಗೆ ಮತ್ತು ನನ್ನ ಕುಟುಂಬಕ್ಕೆ ಬೇಕಾಗುವಷ್ಟು ಮಾತ್ರವಲ್ಲದೆ ಸಾಕು ಸಾಕಾಗುವಷ್ಟು ವೇತನವನ್ನು ನಾನು ಪಡೆಯುತ್ತಿದ್ದೇನೆ” ಎಂದು ನವೀನ್ ಸೂರಿಂಜೆ ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿ, “ಅವರು ಮಾತನಾಡಿರುವುದು ಸೇರಿದಂತೆ ಎಲ್ಲಾ ದಾಖಲೆಗಳು ನಮ್ಮಲ್ಲಿ ಇವೆ. ನಾವು ಯಾವುದನ್ನೂ ಎಡಿಟ್‌ ಮಾಡಿಲ್ಲ. ಮೂಲ ದಾಖಲೆಗಳನ್ನು ಇಟ್ಟುಕೊಂಡು ನಾವು ಮಾತನಾಡಿದ್ದೇವೆ, ಈ ಬಗ್ಗೆ ಮೂಲ ದಾಖಲೆಗಳನ್ನು ಪೊಲೀಸರು ಕೇಳುತ್ತಾರೆ ಎಂಬ ವಿವೇಚನೆ ನಮಗೂ ಇದೆ. ನಮ್ಮಲ್ಲಿರುವ ಎಲ್ಲಾ ದಾಖಲೆಗಳನ್ನು ಪೊಲೀಸ್ ಠಾಣೆಗೆ ದಾಖಲು ಮಾಡುತ್ತೇವೆ. ಅವರ ಜೊತೆ ನಮಗೆ ಯಾವುದೆ ವೈಯಕ್ತಿಕ ದ್ವೇಷ ಇಲ್ಲ, ನನಗೆ ನವೀನ್‌ ಸೂರಿಂಜೆ ಯಾರು ಎಂದೇ ಗೊತ್ತಿಲ್ಲ. ಅನ್ಯಾಯ ಆದವರು ಬಂದು, ಈ ಬಗ್ಗೆ ದಾಖಲೆ ಕೊಟ್ಟಿದ್ದಾರೆ. ಬೇಕಿದ್ದರೆ ನವೀನ್ ಸೂರಿಂಜೆಗೂ ಈ ಬಗ್ಗೆ ಒಂದು ಪ್ರತಿಯನ್ನು ಕೊಡುವ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...