Homeಕರ್ನಾಟಕ‘ತೇಜೋವಧೆ’: ಪವರ್‌‌ ಟಿವಿ ಮುಖ್ಯಸ್ಥನ ವಿರುದ್ದ ಪತ್ರಕರ್ತ ನವೀನ್‌ ಸೂರಿಂಜೆ ದೂರು

‘ತೇಜೋವಧೆ’: ಪವರ್‌‌ ಟಿವಿ ಮುಖ್ಯಸ್ಥನ ವಿರುದ್ದ ಪತ್ರಕರ್ತ ನವೀನ್‌ ಸೂರಿಂಜೆ ದೂರು

- Advertisement -
- Advertisement -

ಹಳೆಯ ಮತ್ತು ಸಂಬಂಧಪಡದ ಆಡಿಯೊಗಳನ್ನು ಎಡಿಟ್‌ ಮಾಡಿ ತಮ್ಮ ಚಾನೆಲ್‌ನಲ್ಲಿ ಪ್ರಸಾರ ಮಾಡಿ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಪತ್ರಕರ್ತ ನವೀನ್‌ ಸೂರಿಂಜೆ ಅವರು ಪವರ್‌ ಟಿವಿಯ ಮುಖ್ಯಸ್ಥ ರಾಕೇಶ್‌ ಶೆಟ್ಟಿ, ಸಂಪಾದಕೀಯ ಸಲಹೆಗಾರ ರವೀಂದ್ರ ರೇಷ್ಮೆ, ಸಹಸಂಪಾದಕ ರಾಘವ ಸೂರ್ಯ ಸೇರಿದಂತೆ ಇನ್ನೂ ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ.

ಬಿಟಿವಿಯ ಮಾಜಿ ಪತ್ರಕರ್ತನೊಬ್ಬ ಇತ್ತೀಚೆಗೆ ಲಂಚ ಪಡೆಯುವ ಸಮಯದಲ್ಲಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಪ್ರಕರಣದ ಹಿನ್ನಲೆಯಲ್ಲಿ ಪವರ್‌ ಟಿವಿ, ಮಾಧ್ಯಮಗಳಲ್ಲಿ ನಡೆಯುವ ಹಣದ ಅವ್ಯವಹಾರಗಳ ಬಗ್ಗೆ ವಿಶೇಷ ಕಾರ್ಯಕ್ರಮ ಮಾಡಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಬಿಟಿವಿ ಸಂಪಾದಕ ನವೀನ್ ಸೂರಿಂಜೆ ಅವರ ಬಗ್ಗೆಯೂ ಭ್ರಷ್ಟಾಚಾರದ ಆರೋಪವನ್ನು ಹೊರಿಸಲಾಗಿತ್ತು. ಜೊತೆಗೆ ಅವರು ಮಾತನಾಡಿದ್ದಾರೆ ಎನ್ನಲಾಗಿರುವ ಆಡಿಯೊವೊಂದನ್ನು ತೋರಿಸಿ, ನವೀನ್ ಸೂರಿಂಜೆ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಬಿಂಬಿಸಲಾಗಿದೆ.

ಇದನ್ನೂ ಓದಿ:ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ಪವರ್‌ ಟಿವಿಯ ಈ ಎಲ್ಲಾ ಆರೋಪಗಳನ್ನು ವಿರೋಧಿಸಿರುವ ನವೀನ್‌‌ ಸೂರಿಂಜೆ, ಪವರ್‌ ಟಿವಿಯ ಮುಖ್ಯಸ್ಥ ರಾಕೇಶ್‌ ಶೆಟ್ಟಿ, ಸಂಪಾದಕೀಯ ಸಲಹೆಗಾರ ರವೀಂದ್ರ ರೇಷ್ಮೆ, ಸಹಸಂಪಾದಕ ರಾಘವ ಸೂರ್ಯ, ಅರುಣ್ ಭಗತ್ ಸಿಂಗ್, ಪ್ರಶಾಂತ್‌‌ ಬಿಸ್ಲೆರಿ ಮತ್ತು ಆಡಿಯೊದಲ್ಲಿ ಇರುವ ವ್ಯಕ್ತಿಯ ವಿರುದ್ದ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಅವರು, ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿಯನ್ನು ಮರಳು ಮಾಫಿಯಾ ಎಂದು ಉಲ್ಲೇಖಿಸಿದ್ದು, ಅವರು ಬಿಟಿವಿ ವಿರುದ್ಧ ಕೆಲವು ದಿನಗಳಿಂದ ಪಿತೂರಿ ಮಾಡುತ್ತಿದ್ದರು ಎಂದು ಹೇಳಿದ್ದಾರೆ. ರಾಕೇಶ್‌ ಶೆಟ್ಟಿ ಮತ್ತು ಇತರರ ವಿರುದ್ದ ಬಿಟಿವಿ ಸಂಪಾದಕನಾಗಿ ತಾನು ದೂರು ನೀಡಿದ್ದು, ಈ ಹಿನ್ನಲೆಯಲ್ಲಿ IPC 419, 420 ಸೇರಿದಂತೆ ಇನ್ನಿತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ನವೀನ್ ಸೂರಿಂಜೆ ಪೊಲೀಸ್‌ ದೂರಿನಲ್ಲಿ ಹೇಳಿದ್ದಾರೆ.

ಇದರಿಂದ ರಾಕೇಶ್‌ ಶೆಟ್ಟಿ ಹತಾಶೆಗೆ ಒಳಗಾಗಿ, ತನ್ನ ವಿರುದ್ದ ವೃತ್ತಿಪರ ಟ್ಯ್ರಾಪ್ ಆರೋಪಿ ಅರುಣ್‌ ಭಗತ್‌ ಸಿಂಗ್‌, ಪತ್ರಕರ್ತ ರವೀಂದ್ರ ರೇಷ್ಮೆ, ಪ್ರಶಾಂತ್‌ ಬಿಸ್ಲೆರಿ ಎಂಬವರು ಸೇರಿಕೊಂಡು ಎಡಿಟೆಡ್‌ ಆಡಿಯೊ ಪ್ರಸಾರ ಮಾಡಿದ್ದಾರೆ ಎಂದು ನವೀನ್‌ ಸೂರಿಂಜೆ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ:ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಪವರ್‌ ಟಿವಿ ಪ್ರಸಾರ ಮಾಡಿರುವ ಆಡಿಯೊ ಬಹುಶಃ ವರ್ಷಗಳ ಹಿಂದೆಯೆ ತಾನು ಮಾತನಾಡಿರುವ ಬಿಡಿ ಬಿಡಿ ಆಡಿಯೊ ಆಗಿರಬಹುದು ಎಂದು ನವೀನ್ ಸೂರಿಂಜೆ ಹೇಳಿದ್ದು, ಅದನ್ನು ಒಟ್ಟು ಸೇರಿಸಿ ಟಿವಿಯಲ್ಲಿ ಪ್ರಸಾರ ಮಾಡಿ ತನ್ನ ಮಾನಹಾನಿ ಮಾಡಲಾಗಿದೆ ಎಂದು ಸೂರಿಂಜೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನವೀನ್ ಸೂರಿಂಜ್, “ನಾನು ಪಾರದರ್ಶಕ ಪತ್ರಿಕೋದ್ಯಮ ಮಾಡುತ್ತಿರುವವನು. ನನ್ನ ಸಂಪಾದನೆ ಎಷ್ಟು ಎಂದು ಮೊದಲ ಬಾರಿಗೆ ವೆಬ್‌ಸೈಟ್‌ನಲ್ಲಿ ಘೋಷಿಸಿದ ಪತ್ರಕರ್ತ. ನಾನು ಈಗಲೂ ಕಚೇರಿಯ ಸಂಬಳವನ್ನಷ್ಟೇ ನೆಚ್ಚಿಕೊಂಡಿದ್ದೇನೆ” ಎಂದು ತಿಳಿಸಿದ್ದಾರೆ.

“ತಾಲೂಕು ವರದಿಗಾರ ಹುದ್ದೆಯಿಂದ ಹಿಡಿದು ಸಂಪಾದಕನ ಹುದ್ದೆಯವರೆಗೆ ಈವರೆಗೂ ಲಂಚ ತೆಗೆದುಕೊಂಡಿಲ್ಲ. ಯಾವ ರಾಜಕಾರಣಿ, ಉದ್ಯಮಿಯ ಮನೆಯಲ್ಲಿ ಊಟ ಮಾಡಿಲ್ಲ, ಪಾರ್ಟಿಗಳಲ್ಲಿ ಭಾಗಿಯಾಗಿಲ್ಲ. ನನ್ನ ವೈಯುಕ್ತಿಕ ವಿಷಯಗಳಿಗೆ ರಾಜಕಾರಣಿಗಳ ಸಹಾಯ ಪಡೆದಿಲ್ಲ. ಯಾವುದೇ ರಾಜಕಾರಣಿ ಮತ್ತು ಉದ್ಯಮಿಗಳನ್ನು ನನ್ನ ಖಾಸಗಿ ಕಾರ್ಯಕ್ರಮಗಳಿಗೆ ಆಹ್ವಾನಿಸಿ ಲಾಭ ಪಡೆದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಪವರ್ ಟಿವಿ ಪ್ರಕರಣ ಎತ್ತುವ ಪ್ರಶ್ನೆಗಳು ಯಾರ ಮನೆ ಬಾಗಿಲೆದುರು ನಿಲ್ಲುತ್ತವೆ?

“ನನ್ನ ಸಂಸ್ಥೆಯ ಸಂಬಂಧದ ಅಧಿಕೃತ ಹಣಕಾಸು ವ್ಯವಹಾರಗಳನ್ನು ಹಲವರ ಜೊತೆ ಹುದ್ದೆಯ ಕಾರಣಕ್ಕಾಗಿ ಅಧಿಕೃತವಾಗಿ ಮಾತನಾಡಿದ್ದೇನೆ. ನಾನು ಕೆಲಸ ಮಾಡುವ ಸಂಸ್ಥೆಯ ಅಧಿಕೃತ ಹಣಕಾಸು ವ್ಯವಹಾರಗಳಲ್ಲಿ ನನ್ನ ಭಾಗಿದಾರಿಕೆಯ ಅಗತ್ಯವಿದ್ದಾಗ ಆ ಕರ್ತವ್ಯ ಮಾಡುವುದು ಅನಿವಾರ್ಯ. ನಾನು ವರ್ಷಗಳ ಹಿಂದೆ ಯಾರ ಜೊತೆಯೋ ಮೂರ್ನಾಲ್ಕು ಬಾರಿ ಮಾತನಾಡಿದ್ದ ಫೋನ್ ಕರೆಯನ್ನು ಎಡಿಟ್ ಮಾಡಿ ಅದನ್ನೆಲ್ಲಾ ಜೋಡಿಸಿ ಒಂದು ಫೋನ್ ಕರೆ ಎಂದು ಬಿಂಬಿಸಿ ನನ್ನ ಆಡಿಯೋವನ್ನು ಪ್ರಸಾರ ಮಾಡಲಾಗಿದೆ” ಎಂದು ನವೀನ್ ಸೂರಿಂಜೆ ಹೇಳಿದ್ದಾರೆ.

“ಈವರೆಗೂ ವೈಯುಕ್ತಿಕವಾಗಿ ಯಾವುದೇ ರೀತಿಯಲ್ಲಿ ನನ್ನ ಸಿದ್ದಾಂತದಲ್ಲಿ ರಾಜಿಯಾಗಿಲ್ಲ. ನನಗೆ ಮತ್ತು ನನ್ನ ಕುಟುಂಬಕ್ಕೆ ಬೇಕಾಗುವಷ್ಟು ಮಾತ್ರವಲ್ಲದೆ ಸಾಕು ಸಾಕಾಗುವಷ್ಟು ವೇತನವನ್ನು ನಾನು ಪಡೆಯುತ್ತಿದ್ದೇನೆ” ಎಂದು ನವೀನ್ ಸೂರಿಂಜೆ ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿ, “ಅವರು ಮಾತನಾಡಿರುವುದು ಸೇರಿದಂತೆ ಎಲ್ಲಾ ದಾಖಲೆಗಳು ನಮ್ಮಲ್ಲಿ ಇವೆ. ನಾವು ಯಾವುದನ್ನೂ ಎಡಿಟ್‌ ಮಾಡಿಲ್ಲ. ಮೂಲ ದಾಖಲೆಗಳನ್ನು ಇಟ್ಟುಕೊಂಡು ನಾವು ಮಾತನಾಡಿದ್ದೇವೆ, ಈ ಬಗ್ಗೆ ಮೂಲ ದಾಖಲೆಗಳನ್ನು ಪೊಲೀಸರು ಕೇಳುತ್ತಾರೆ ಎಂಬ ವಿವೇಚನೆ ನಮಗೂ ಇದೆ. ನಮ್ಮಲ್ಲಿರುವ ಎಲ್ಲಾ ದಾಖಲೆಗಳನ್ನು ಪೊಲೀಸ್ ಠಾಣೆಗೆ ದಾಖಲು ಮಾಡುತ್ತೇವೆ. ಅವರ ಜೊತೆ ನಮಗೆ ಯಾವುದೆ ವೈಯಕ್ತಿಕ ದ್ವೇಷ ಇಲ್ಲ, ನನಗೆ ನವೀನ್‌ ಸೂರಿಂಜೆ ಯಾರು ಎಂದೇ ಗೊತ್ತಿಲ್ಲ. ಅನ್ಯಾಯ ಆದವರು ಬಂದು, ಈ ಬಗ್ಗೆ ದಾಖಲೆ ಕೊಟ್ಟಿದ್ದಾರೆ. ಬೇಕಿದ್ದರೆ ನವೀನ್ ಸೂರಿಂಜೆಗೂ ಈ ಬಗ್ಗೆ ಒಂದು ಪ್ರತಿಯನ್ನು ಕೊಡುವ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...