Homeಕರ್ನಾಟಕ‘ತೇಜೋವಧೆ’: ಪವರ್‌‌ ಟಿವಿ ಮುಖ್ಯಸ್ಥನ ವಿರುದ್ದ ಪತ್ರಕರ್ತ ನವೀನ್‌ ಸೂರಿಂಜೆ ದೂರು

‘ತೇಜೋವಧೆ’: ಪವರ್‌‌ ಟಿವಿ ಮುಖ್ಯಸ್ಥನ ವಿರುದ್ದ ಪತ್ರಕರ್ತ ನವೀನ್‌ ಸೂರಿಂಜೆ ದೂರು

- Advertisement -
- Advertisement -

ಹಳೆಯ ಮತ್ತು ಸಂಬಂಧಪಡದ ಆಡಿಯೊಗಳನ್ನು ಎಡಿಟ್‌ ಮಾಡಿ ತಮ್ಮ ಚಾನೆಲ್‌ನಲ್ಲಿ ಪ್ರಸಾರ ಮಾಡಿ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಪತ್ರಕರ್ತ ನವೀನ್‌ ಸೂರಿಂಜೆ ಅವರು ಪವರ್‌ ಟಿವಿಯ ಮುಖ್ಯಸ್ಥ ರಾಕೇಶ್‌ ಶೆಟ್ಟಿ, ಸಂಪಾದಕೀಯ ಸಲಹೆಗಾರ ರವೀಂದ್ರ ರೇಷ್ಮೆ, ಸಹಸಂಪಾದಕ ರಾಘವ ಸೂರ್ಯ ಸೇರಿದಂತೆ ಇನ್ನೂ ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ.

ಬಿಟಿವಿಯ ಮಾಜಿ ಪತ್ರಕರ್ತನೊಬ್ಬ ಇತ್ತೀಚೆಗೆ ಲಂಚ ಪಡೆಯುವ ಸಮಯದಲ್ಲಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಪ್ರಕರಣದ ಹಿನ್ನಲೆಯಲ್ಲಿ ಪವರ್‌ ಟಿವಿ, ಮಾಧ್ಯಮಗಳಲ್ಲಿ ನಡೆಯುವ ಹಣದ ಅವ್ಯವಹಾರಗಳ ಬಗ್ಗೆ ವಿಶೇಷ ಕಾರ್ಯಕ್ರಮ ಮಾಡಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಬಿಟಿವಿ ಸಂಪಾದಕ ನವೀನ್ ಸೂರಿಂಜೆ ಅವರ ಬಗ್ಗೆಯೂ ಭ್ರಷ್ಟಾಚಾರದ ಆರೋಪವನ್ನು ಹೊರಿಸಲಾಗಿತ್ತು. ಜೊತೆಗೆ ಅವರು ಮಾತನಾಡಿದ್ದಾರೆ ಎನ್ನಲಾಗಿರುವ ಆಡಿಯೊವೊಂದನ್ನು ತೋರಿಸಿ, ನವೀನ್ ಸೂರಿಂಜೆ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಬಿಂಬಿಸಲಾಗಿದೆ.

ಇದನ್ನೂ ಓದಿ:ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ಪವರ್‌ ಟಿವಿಯ ಈ ಎಲ್ಲಾ ಆರೋಪಗಳನ್ನು ವಿರೋಧಿಸಿರುವ ನವೀನ್‌‌ ಸೂರಿಂಜೆ, ಪವರ್‌ ಟಿವಿಯ ಮುಖ್ಯಸ್ಥ ರಾಕೇಶ್‌ ಶೆಟ್ಟಿ, ಸಂಪಾದಕೀಯ ಸಲಹೆಗಾರ ರವೀಂದ್ರ ರೇಷ್ಮೆ, ಸಹಸಂಪಾದಕ ರಾಘವ ಸೂರ್ಯ, ಅರುಣ್ ಭಗತ್ ಸಿಂಗ್, ಪ್ರಶಾಂತ್‌‌ ಬಿಸ್ಲೆರಿ ಮತ್ತು ಆಡಿಯೊದಲ್ಲಿ ಇರುವ ವ್ಯಕ್ತಿಯ ವಿರುದ್ದ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಅವರು, ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿಯನ್ನು ಮರಳು ಮಾಫಿಯಾ ಎಂದು ಉಲ್ಲೇಖಿಸಿದ್ದು, ಅವರು ಬಿಟಿವಿ ವಿರುದ್ಧ ಕೆಲವು ದಿನಗಳಿಂದ ಪಿತೂರಿ ಮಾಡುತ್ತಿದ್ದರು ಎಂದು ಹೇಳಿದ್ದಾರೆ. ರಾಕೇಶ್‌ ಶೆಟ್ಟಿ ಮತ್ತು ಇತರರ ವಿರುದ್ದ ಬಿಟಿವಿ ಸಂಪಾದಕನಾಗಿ ತಾನು ದೂರು ನೀಡಿದ್ದು, ಈ ಹಿನ್ನಲೆಯಲ್ಲಿ IPC 419, 420 ಸೇರಿದಂತೆ ಇನ್ನಿತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ನವೀನ್ ಸೂರಿಂಜೆ ಪೊಲೀಸ್‌ ದೂರಿನಲ್ಲಿ ಹೇಳಿದ್ದಾರೆ.

ಇದರಿಂದ ರಾಕೇಶ್‌ ಶೆಟ್ಟಿ ಹತಾಶೆಗೆ ಒಳಗಾಗಿ, ತನ್ನ ವಿರುದ್ದ ವೃತ್ತಿಪರ ಟ್ಯ್ರಾಪ್ ಆರೋಪಿ ಅರುಣ್‌ ಭಗತ್‌ ಸಿಂಗ್‌, ಪತ್ರಕರ್ತ ರವೀಂದ್ರ ರೇಷ್ಮೆ, ಪ್ರಶಾಂತ್‌ ಬಿಸ್ಲೆರಿ ಎಂಬವರು ಸೇರಿಕೊಂಡು ಎಡಿಟೆಡ್‌ ಆಡಿಯೊ ಪ್ರಸಾರ ಮಾಡಿದ್ದಾರೆ ಎಂದು ನವೀನ್‌ ಸೂರಿಂಜೆ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ:ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಪವರ್‌ ಟಿವಿ ಪ್ರಸಾರ ಮಾಡಿರುವ ಆಡಿಯೊ ಬಹುಶಃ ವರ್ಷಗಳ ಹಿಂದೆಯೆ ತಾನು ಮಾತನಾಡಿರುವ ಬಿಡಿ ಬಿಡಿ ಆಡಿಯೊ ಆಗಿರಬಹುದು ಎಂದು ನವೀನ್ ಸೂರಿಂಜೆ ಹೇಳಿದ್ದು, ಅದನ್ನು ಒಟ್ಟು ಸೇರಿಸಿ ಟಿವಿಯಲ್ಲಿ ಪ್ರಸಾರ ಮಾಡಿ ತನ್ನ ಮಾನಹಾನಿ ಮಾಡಲಾಗಿದೆ ಎಂದು ಸೂರಿಂಜೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನವೀನ್ ಸೂರಿಂಜ್, “ನಾನು ಪಾರದರ್ಶಕ ಪತ್ರಿಕೋದ್ಯಮ ಮಾಡುತ್ತಿರುವವನು. ನನ್ನ ಸಂಪಾದನೆ ಎಷ್ಟು ಎಂದು ಮೊದಲ ಬಾರಿಗೆ ವೆಬ್‌ಸೈಟ್‌ನಲ್ಲಿ ಘೋಷಿಸಿದ ಪತ್ರಕರ್ತ. ನಾನು ಈಗಲೂ ಕಚೇರಿಯ ಸಂಬಳವನ್ನಷ್ಟೇ ನೆಚ್ಚಿಕೊಂಡಿದ್ದೇನೆ” ಎಂದು ತಿಳಿಸಿದ್ದಾರೆ.

“ತಾಲೂಕು ವರದಿಗಾರ ಹುದ್ದೆಯಿಂದ ಹಿಡಿದು ಸಂಪಾದಕನ ಹುದ್ದೆಯವರೆಗೆ ಈವರೆಗೂ ಲಂಚ ತೆಗೆದುಕೊಂಡಿಲ್ಲ. ಯಾವ ರಾಜಕಾರಣಿ, ಉದ್ಯಮಿಯ ಮನೆಯಲ್ಲಿ ಊಟ ಮಾಡಿಲ್ಲ, ಪಾರ್ಟಿಗಳಲ್ಲಿ ಭಾಗಿಯಾಗಿಲ್ಲ. ನನ್ನ ವೈಯುಕ್ತಿಕ ವಿಷಯಗಳಿಗೆ ರಾಜಕಾರಣಿಗಳ ಸಹಾಯ ಪಡೆದಿಲ್ಲ. ಯಾವುದೇ ರಾಜಕಾರಣಿ ಮತ್ತು ಉದ್ಯಮಿಗಳನ್ನು ನನ್ನ ಖಾಸಗಿ ಕಾರ್ಯಕ್ರಮಗಳಿಗೆ ಆಹ್ವಾನಿಸಿ ಲಾಭ ಪಡೆದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಪವರ್ ಟಿವಿ ಪ್ರಕರಣ ಎತ್ತುವ ಪ್ರಶ್ನೆಗಳು ಯಾರ ಮನೆ ಬಾಗಿಲೆದುರು ನಿಲ್ಲುತ್ತವೆ?

“ನನ್ನ ಸಂಸ್ಥೆಯ ಸಂಬಂಧದ ಅಧಿಕೃತ ಹಣಕಾಸು ವ್ಯವಹಾರಗಳನ್ನು ಹಲವರ ಜೊತೆ ಹುದ್ದೆಯ ಕಾರಣಕ್ಕಾಗಿ ಅಧಿಕೃತವಾಗಿ ಮಾತನಾಡಿದ್ದೇನೆ. ನಾನು ಕೆಲಸ ಮಾಡುವ ಸಂಸ್ಥೆಯ ಅಧಿಕೃತ ಹಣಕಾಸು ವ್ಯವಹಾರಗಳಲ್ಲಿ ನನ್ನ ಭಾಗಿದಾರಿಕೆಯ ಅಗತ್ಯವಿದ್ದಾಗ ಆ ಕರ್ತವ್ಯ ಮಾಡುವುದು ಅನಿವಾರ್ಯ. ನಾನು ವರ್ಷಗಳ ಹಿಂದೆ ಯಾರ ಜೊತೆಯೋ ಮೂರ್ನಾಲ್ಕು ಬಾರಿ ಮಾತನಾಡಿದ್ದ ಫೋನ್ ಕರೆಯನ್ನು ಎಡಿಟ್ ಮಾಡಿ ಅದನ್ನೆಲ್ಲಾ ಜೋಡಿಸಿ ಒಂದು ಫೋನ್ ಕರೆ ಎಂದು ಬಿಂಬಿಸಿ ನನ್ನ ಆಡಿಯೋವನ್ನು ಪ್ರಸಾರ ಮಾಡಲಾಗಿದೆ” ಎಂದು ನವೀನ್ ಸೂರಿಂಜೆ ಹೇಳಿದ್ದಾರೆ.

“ಈವರೆಗೂ ವೈಯುಕ್ತಿಕವಾಗಿ ಯಾವುದೇ ರೀತಿಯಲ್ಲಿ ನನ್ನ ಸಿದ್ದಾಂತದಲ್ಲಿ ರಾಜಿಯಾಗಿಲ್ಲ. ನನಗೆ ಮತ್ತು ನನ್ನ ಕುಟುಂಬಕ್ಕೆ ಬೇಕಾಗುವಷ್ಟು ಮಾತ್ರವಲ್ಲದೆ ಸಾಕು ಸಾಕಾಗುವಷ್ಟು ವೇತನವನ್ನು ನಾನು ಪಡೆಯುತ್ತಿದ್ದೇನೆ” ಎಂದು ನವೀನ್ ಸೂರಿಂಜೆ ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿ, “ಅವರು ಮಾತನಾಡಿರುವುದು ಸೇರಿದಂತೆ ಎಲ್ಲಾ ದಾಖಲೆಗಳು ನಮ್ಮಲ್ಲಿ ಇವೆ. ನಾವು ಯಾವುದನ್ನೂ ಎಡಿಟ್‌ ಮಾಡಿಲ್ಲ. ಮೂಲ ದಾಖಲೆಗಳನ್ನು ಇಟ್ಟುಕೊಂಡು ನಾವು ಮಾತನಾಡಿದ್ದೇವೆ, ಈ ಬಗ್ಗೆ ಮೂಲ ದಾಖಲೆಗಳನ್ನು ಪೊಲೀಸರು ಕೇಳುತ್ತಾರೆ ಎಂಬ ವಿವೇಚನೆ ನಮಗೂ ಇದೆ. ನಮ್ಮಲ್ಲಿರುವ ಎಲ್ಲಾ ದಾಖಲೆಗಳನ್ನು ಪೊಲೀಸ್ ಠಾಣೆಗೆ ದಾಖಲು ಮಾಡುತ್ತೇವೆ. ಅವರ ಜೊತೆ ನಮಗೆ ಯಾವುದೆ ವೈಯಕ್ತಿಕ ದ್ವೇಷ ಇಲ್ಲ, ನನಗೆ ನವೀನ್‌ ಸೂರಿಂಜೆ ಯಾರು ಎಂದೇ ಗೊತ್ತಿಲ್ಲ. ಅನ್ಯಾಯ ಆದವರು ಬಂದು, ಈ ಬಗ್ಗೆ ದಾಖಲೆ ಕೊಟ್ಟಿದ್ದಾರೆ. ಬೇಕಿದ್ದರೆ ನವೀನ್ ಸೂರಿಂಜೆಗೂ ಈ ಬಗ್ಗೆ ಒಂದು ಪ್ರತಿಯನ್ನು ಕೊಡುವ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...