Homeಕರ್ನಾಟಕ‘ತೇಜೋವಧೆ’: ಪವರ್‌‌ ಟಿವಿ ಮುಖ್ಯಸ್ಥನ ವಿರುದ್ದ ಪತ್ರಕರ್ತ ನವೀನ್‌ ಸೂರಿಂಜೆ ದೂರು

‘ತೇಜೋವಧೆ’: ಪವರ್‌‌ ಟಿವಿ ಮುಖ್ಯಸ್ಥನ ವಿರುದ್ದ ಪತ್ರಕರ್ತ ನವೀನ್‌ ಸೂರಿಂಜೆ ದೂರು

- Advertisement -
- Advertisement -

ಹಳೆಯ ಮತ್ತು ಸಂಬಂಧಪಡದ ಆಡಿಯೊಗಳನ್ನು ಎಡಿಟ್‌ ಮಾಡಿ ತಮ್ಮ ಚಾನೆಲ್‌ನಲ್ಲಿ ಪ್ರಸಾರ ಮಾಡಿ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಪತ್ರಕರ್ತ ನವೀನ್‌ ಸೂರಿಂಜೆ ಅವರು ಪವರ್‌ ಟಿವಿಯ ಮುಖ್ಯಸ್ಥ ರಾಕೇಶ್‌ ಶೆಟ್ಟಿ, ಸಂಪಾದಕೀಯ ಸಲಹೆಗಾರ ರವೀಂದ್ರ ರೇಷ್ಮೆ, ಸಹಸಂಪಾದಕ ರಾಘವ ಸೂರ್ಯ ಸೇರಿದಂತೆ ಇನ್ನೂ ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ.

ಬಿಟಿವಿಯ ಮಾಜಿ ಪತ್ರಕರ್ತನೊಬ್ಬ ಇತ್ತೀಚೆಗೆ ಲಂಚ ಪಡೆಯುವ ಸಮಯದಲ್ಲಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಪ್ರಕರಣದ ಹಿನ್ನಲೆಯಲ್ಲಿ ಪವರ್‌ ಟಿವಿ, ಮಾಧ್ಯಮಗಳಲ್ಲಿ ನಡೆಯುವ ಹಣದ ಅವ್ಯವಹಾರಗಳ ಬಗ್ಗೆ ವಿಶೇಷ ಕಾರ್ಯಕ್ರಮ ಮಾಡಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಬಿಟಿವಿ ಸಂಪಾದಕ ನವೀನ್ ಸೂರಿಂಜೆ ಅವರ ಬಗ್ಗೆಯೂ ಭ್ರಷ್ಟಾಚಾರದ ಆರೋಪವನ್ನು ಹೊರಿಸಲಾಗಿತ್ತು. ಜೊತೆಗೆ ಅವರು ಮಾತನಾಡಿದ್ದಾರೆ ಎನ್ನಲಾಗಿರುವ ಆಡಿಯೊವೊಂದನ್ನು ತೋರಿಸಿ, ನವೀನ್ ಸೂರಿಂಜೆ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಬಿಂಬಿಸಲಾಗಿದೆ.

ಇದನ್ನೂ ಓದಿ:ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ಪವರ್‌ ಟಿವಿಯ ಈ ಎಲ್ಲಾ ಆರೋಪಗಳನ್ನು ವಿರೋಧಿಸಿರುವ ನವೀನ್‌‌ ಸೂರಿಂಜೆ, ಪವರ್‌ ಟಿವಿಯ ಮುಖ್ಯಸ್ಥ ರಾಕೇಶ್‌ ಶೆಟ್ಟಿ, ಸಂಪಾದಕೀಯ ಸಲಹೆಗಾರ ರವೀಂದ್ರ ರೇಷ್ಮೆ, ಸಹಸಂಪಾದಕ ರಾಘವ ಸೂರ್ಯ, ಅರುಣ್ ಭಗತ್ ಸಿಂಗ್, ಪ್ರಶಾಂತ್‌‌ ಬಿಸ್ಲೆರಿ ಮತ್ತು ಆಡಿಯೊದಲ್ಲಿ ಇರುವ ವ್ಯಕ್ತಿಯ ವಿರುದ್ದ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಅವರು, ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿಯನ್ನು ಮರಳು ಮಾಫಿಯಾ ಎಂದು ಉಲ್ಲೇಖಿಸಿದ್ದು, ಅವರು ಬಿಟಿವಿ ವಿರುದ್ಧ ಕೆಲವು ದಿನಗಳಿಂದ ಪಿತೂರಿ ಮಾಡುತ್ತಿದ್ದರು ಎಂದು ಹೇಳಿದ್ದಾರೆ. ರಾಕೇಶ್‌ ಶೆಟ್ಟಿ ಮತ್ತು ಇತರರ ವಿರುದ್ದ ಬಿಟಿವಿ ಸಂಪಾದಕನಾಗಿ ತಾನು ದೂರು ನೀಡಿದ್ದು, ಈ ಹಿನ್ನಲೆಯಲ್ಲಿ IPC 419, 420 ಸೇರಿದಂತೆ ಇನ್ನಿತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ನವೀನ್ ಸೂರಿಂಜೆ ಪೊಲೀಸ್‌ ದೂರಿನಲ್ಲಿ ಹೇಳಿದ್ದಾರೆ.

ಇದರಿಂದ ರಾಕೇಶ್‌ ಶೆಟ್ಟಿ ಹತಾಶೆಗೆ ಒಳಗಾಗಿ, ತನ್ನ ವಿರುದ್ದ ವೃತ್ತಿಪರ ಟ್ಯ್ರಾಪ್ ಆರೋಪಿ ಅರುಣ್‌ ಭಗತ್‌ ಸಿಂಗ್‌, ಪತ್ರಕರ್ತ ರವೀಂದ್ರ ರೇಷ್ಮೆ, ಪ್ರಶಾಂತ್‌ ಬಿಸ್ಲೆರಿ ಎಂಬವರು ಸೇರಿಕೊಂಡು ಎಡಿಟೆಡ್‌ ಆಡಿಯೊ ಪ್ರಸಾರ ಮಾಡಿದ್ದಾರೆ ಎಂದು ನವೀನ್‌ ಸೂರಿಂಜೆ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ:ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಪವರ್‌ ಟಿವಿ ಪ್ರಸಾರ ಮಾಡಿರುವ ಆಡಿಯೊ ಬಹುಶಃ ವರ್ಷಗಳ ಹಿಂದೆಯೆ ತಾನು ಮಾತನಾಡಿರುವ ಬಿಡಿ ಬಿಡಿ ಆಡಿಯೊ ಆಗಿರಬಹುದು ಎಂದು ನವೀನ್ ಸೂರಿಂಜೆ ಹೇಳಿದ್ದು, ಅದನ್ನು ಒಟ್ಟು ಸೇರಿಸಿ ಟಿವಿಯಲ್ಲಿ ಪ್ರಸಾರ ಮಾಡಿ ತನ್ನ ಮಾನಹಾನಿ ಮಾಡಲಾಗಿದೆ ಎಂದು ಸೂರಿಂಜೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನವೀನ್ ಸೂರಿಂಜ್, “ನಾನು ಪಾರದರ್ಶಕ ಪತ್ರಿಕೋದ್ಯಮ ಮಾಡುತ್ತಿರುವವನು. ನನ್ನ ಸಂಪಾದನೆ ಎಷ್ಟು ಎಂದು ಮೊದಲ ಬಾರಿಗೆ ವೆಬ್‌ಸೈಟ್‌ನಲ್ಲಿ ಘೋಷಿಸಿದ ಪತ್ರಕರ್ತ. ನಾನು ಈಗಲೂ ಕಚೇರಿಯ ಸಂಬಳವನ್ನಷ್ಟೇ ನೆಚ್ಚಿಕೊಂಡಿದ್ದೇನೆ” ಎಂದು ತಿಳಿಸಿದ್ದಾರೆ.

“ತಾಲೂಕು ವರದಿಗಾರ ಹುದ್ದೆಯಿಂದ ಹಿಡಿದು ಸಂಪಾದಕನ ಹುದ್ದೆಯವರೆಗೆ ಈವರೆಗೂ ಲಂಚ ತೆಗೆದುಕೊಂಡಿಲ್ಲ. ಯಾವ ರಾಜಕಾರಣಿ, ಉದ್ಯಮಿಯ ಮನೆಯಲ್ಲಿ ಊಟ ಮಾಡಿಲ್ಲ, ಪಾರ್ಟಿಗಳಲ್ಲಿ ಭಾಗಿಯಾಗಿಲ್ಲ. ನನ್ನ ವೈಯುಕ್ತಿಕ ವಿಷಯಗಳಿಗೆ ರಾಜಕಾರಣಿಗಳ ಸಹಾಯ ಪಡೆದಿಲ್ಲ. ಯಾವುದೇ ರಾಜಕಾರಣಿ ಮತ್ತು ಉದ್ಯಮಿಗಳನ್ನು ನನ್ನ ಖಾಸಗಿ ಕಾರ್ಯಕ್ರಮಗಳಿಗೆ ಆಹ್ವಾನಿಸಿ ಲಾಭ ಪಡೆದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಪವರ್ ಟಿವಿ ಪ್ರಕರಣ ಎತ್ತುವ ಪ್ರಶ್ನೆಗಳು ಯಾರ ಮನೆ ಬಾಗಿಲೆದುರು ನಿಲ್ಲುತ್ತವೆ?

“ನನ್ನ ಸಂಸ್ಥೆಯ ಸಂಬಂಧದ ಅಧಿಕೃತ ಹಣಕಾಸು ವ್ಯವಹಾರಗಳನ್ನು ಹಲವರ ಜೊತೆ ಹುದ್ದೆಯ ಕಾರಣಕ್ಕಾಗಿ ಅಧಿಕೃತವಾಗಿ ಮಾತನಾಡಿದ್ದೇನೆ. ನಾನು ಕೆಲಸ ಮಾಡುವ ಸಂಸ್ಥೆಯ ಅಧಿಕೃತ ಹಣಕಾಸು ವ್ಯವಹಾರಗಳಲ್ಲಿ ನನ್ನ ಭಾಗಿದಾರಿಕೆಯ ಅಗತ್ಯವಿದ್ದಾಗ ಆ ಕರ್ತವ್ಯ ಮಾಡುವುದು ಅನಿವಾರ್ಯ. ನಾನು ವರ್ಷಗಳ ಹಿಂದೆ ಯಾರ ಜೊತೆಯೋ ಮೂರ್ನಾಲ್ಕು ಬಾರಿ ಮಾತನಾಡಿದ್ದ ಫೋನ್ ಕರೆಯನ್ನು ಎಡಿಟ್ ಮಾಡಿ ಅದನ್ನೆಲ್ಲಾ ಜೋಡಿಸಿ ಒಂದು ಫೋನ್ ಕರೆ ಎಂದು ಬಿಂಬಿಸಿ ನನ್ನ ಆಡಿಯೋವನ್ನು ಪ್ರಸಾರ ಮಾಡಲಾಗಿದೆ” ಎಂದು ನವೀನ್ ಸೂರಿಂಜೆ ಹೇಳಿದ್ದಾರೆ.

“ಈವರೆಗೂ ವೈಯುಕ್ತಿಕವಾಗಿ ಯಾವುದೇ ರೀತಿಯಲ್ಲಿ ನನ್ನ ಸಿದ್ದಾಂತದಲ್ಲಿ ರಾಜಿಯಾಗಿಲ್ಲ. ನನಗೆ ಮತ್ತು ನನ್ನ ಕುಟುಂಬಕ್ಕೆ ಬೇಕಾಗುವಷ್ಟು ಮಾತ್ರವಲ್ಲದೆ ಸಾಕು ಸಾಕಾಗುವಷ್ಟು ವೇತನವನ್ನು ನಾನು ಪಡೆಯುತ್ತಿದ್ದೇನೆ” ಎಂದು ನವೀನ್ ಸೂರಿಂಜೆ ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿ, “ಅವರು ಮಾತನಾಡಿರುವುದು ಸೇರಿದಂತೆ ಎಲ್ಲಾ ದಾಖಲೆಗಳು ನಮ್ಮಲ್ಲಿ ಇವೆ. ನಾವು ಯಾವುದನ್ನೂ ಎಡಿಟ್‌ ಮಾಡಿಲ್ಲ. ಮೂಲ ದಾಖಲೆಗಳನ್ನು ಇಟ್ಟುಕೊಂಡು ನಾವು ಮಾತನಾಡಿದ್ದೇವೆ, ಈ ಬಗ್ಗೆ ಮೂಲ ದಾಖಲೆಗಳನ್ನು ಪೊಲೀಸರು ಕೇಳುತ್ತಾರೆ ಎಂಬ ವಿವೇಚನೆ ನಮಗೂ ಇದೆ. ನಮ್ಮಲ್ಲಿರುವ ಎಲ್ಲಾ ದಾಖಲೆಗಳನ್ನು ಪೊಲೀಸ್ ಠಾಣೆಗೆ ದಾಖಲು ಮಾಡುತ್ತೇವೆ. ಅವರ ಜೊತೆ ನಮಗೆ ಯಾವುದೆ ವೈಯಕ್ತಿಕ ದ್ವೇಷ ಇಲ್ಲ, ನನಗೆ ನವೀನ್‌ ಸೂರಿಂಜೆ ಯಾರು ಎಂದೇ ಗೊತ್ತಿಲ್ಲ. ಅನ್ಯಾಯ ಆದವರು ಬಂದು, ಈ ಬಗ್ಗೆ ದಾಖಲೆ ಕೊಟ್ಟಿದ್ದಾರೆ. ಬೇಕಿದ್ದರೆ ನವೀನ್ ಸೂರಿಂಜೆಗೂ ಈ ಬಗ್ಗೆ ಒಂದು ಪ್ರತಿಯನ್ನು ಕೊಡುವ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಶಾಲೆಗಳ ಮೇಲೆ ಇಸ್ರೇಲ್ ದಾಳಿ : ಮಕ್ಕಳು ಸೇರಿ 100ಕ್ಕೂ ಹೆಚ್ಚು ಜನರು ಸಾವು

ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದ ಮಿನಾಬ್ ನಗರದ ಪ್ರಾಥಮಿಕ ಬಾಲಕಿಯರ ಶಾಲೆಯ ಮೇಲೆ ಶನಿವಾರ (ಫೆ.28) ಇಸ್ರೇಲ್ ನಡೆಸಿದ ದಾಳಿಯಲ್ಲಿ 108 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ. ಮಿನಾಬ್‌ನಲ್ಲಿರುವ ಶಜರೆಹ್...

ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಸಾವು : ದೃಢಪಡಿಸಿದ ಇರಾನ್

ಇಸ್ರೇಲ್- ಅಮೆರಿಕ ಶನಿವಾರ (ಫೆ.28) ಇರಾನ್‌ ಮೇಲೆ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಆಯಾತುಲ್ಲಾ ಅಲಿ ಖಮೇನಿ ಸಾವಿಗೀಡಾಗಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮ ದೃಢಪಡಿಸಿರುವುದಾಗಿ Al Jazeera...

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....