Homeಕರ್ನಾಟಕ‘ತೇಜೋವಧೆ’: ಪವರ್‌‌ ಟಿವಿ ಮುಖ್ಯಸ್ಥನ ವಿರುದ್ದ ಪತ್ರಕರ್ತ ನವೀನ್‌ ಸೂರಿಂಜೆ ದೂರು

‘ತೇಜೋವಧೆ’: ಪವರ್‌‌ ಟಿವಿ ಮುಖ್ಯಸ್ಥನ ವಿರುದ್ದ ಪತ್ರಕರ್ತ ನವೀನ್‌ ಸೂರಿಂಜೆ ದೂರು

- Advertisement -
- Advertisement -

ಹಳೆಯ ಮತ್ತು ಸಂಬಂಧಪಡದ ಆಡಿಯೊಗಳನ್ನು ಎಡಿಟ್‌ ಮಾಡಿ ತಮ್ಮ ಚಾನೆಲ್‌ನಲ್ಲಿ ಪ್ರಸಾರ ಮಾಡಿ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಪತ್ರಕರ್ತ ನವೀನ್‌ ಸೂರಿಂಜೆ ಅವರು ಪವರ್‌ ಟಿವಿಯ ಮುಖ್ಯಸ್ಥ ರಾಕೇಶ್‌ ಶೆಟ್ಟಿ, ಸಂಪಾದಕೀಯ ಸಲಹೆಗಾರ ರವೀಂದ್ರ ರೇಷ್ಮೆ, ಸಹಸಂಪಾದಕ ರಾಘವ ಸೂರ್ಯ ಸೇರಿದಂತೆ ಇನ್ನೂ ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ.

ಬಿಟಿವಿಯ ಮಾಜಿ ಪತ್ರಕರ್ತನೊಬ್ಬ ಇತ್ತೀಚೆಗೆ ಲಂಚ ಪಡೆಯುವ ಸಮಯದಲ್ಲಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಪ್ರಕರಣದ ಹಿನ್ನಲೆಯಲ್ಲಿ ಪವರ್‌ ಟಿವಿ, ಮಾಧ್ಯಮಗಳಲ್ಲಿ ನಡೆಯುವ ಹಣದ ಅವ್ಯವಹಾರಗಳ ಬಗ್ಗೆ ವಿಶೇಷ ಕಾರ್ಯಕ್ರಮ ಮಾಡಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಬಿಟಿವಿ ಸಂಪಾದಕ ನವೀನ್ ಸೂರಿಂಜೆ ಅವರ ಬಗ್ಗೆಯೂ ಭ್ರಷ್ಟಾಚಾರದ ಆರೋಪವನ್ನು ಹೊರಿಸಲಾಗಿತ್ತು. ಜೊತೆಗೆ ಅವರು ಮಾತನಾಡಿದ್ದಾರೆ ಎನ್ನಲಾಗಿರುವ ಆಡಿಯೊವೊಂದನ್ನು ತೋರಿಸಿ, ನವೀನ್ ಸೂರಿಂಜೆ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಬಿಂಬಿಸಲಾಗಿದೆ.

ಇದನ್ನೂ ಓದಿ:ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ಪವರ್‌ ಟಿವಿಯ ಈ ಎಲ್ಲಾ ಆರೋಪಗಳನ್ನು ವಿರೋಧಿಸಿರುವ ನವೀನ್‌‌ ಸೂರಿಂಜೆ, ಪವರ್‌ ಟಿವಿಯ ಮುಖ್ಯಸ್ಥ ರಾಕೇಶ್‌ ಶೆಟ್ಟಿ, ಸಂಪಾದಕೀಯ ಸಲಹೆಗಾರ ರವೀಂದ್ರ ರೇಷ್ಮೆ, ಸಹಸಂಪಾದಕ ರಾಘವ ಸೂರ್ಯ, ಅರುಣ್ ಭಗತ್ ಸಿಂಗ್, ಪ್ರಶಾಂತ್‌‌ ಬಿಸ್ಲೆರಿ ಮತ್ತು ಆಡಿಯೊದಲ್ಲಿ ಇರುವ ವ್ಯಕ್ತಿಯ ವಿರುದ್ದ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಅವರು, ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿಯನ್ನು ಮರಳು ಮಾಫಿಯಾ ಎಂದು ಉಲ್ಲೇಖಿಸಿದ್ದು, ಅವರು ಬಿಟಿವಿ ವಿರುದ್ಧ ಕೆಲವು ದಿನಗಳಿಂದ ಪಿತೂರಿ ಮಾಡುತ್ತಿದ್ದರು ಎಂದು ಹೇಳಿದ್ದಾರೆ. ರಾಕೇಶ್‌ ಶೆಟ್ಟಿ ಮತ್ತು ಇತರರ ವಿರುದ್ದ ಬಿಟಿವಿ ಸಂಪಾದಕನಾಗಿ ತಾನು ದೂರು ನೀಡಿದ್ದು, ಈ ಹಿನ್ನಲೆಯಲ್ಲಿ IPC 419, 420 ಸೇರಿದಂತೆ ಇನ್ನಿತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ನವೀನ್ ಸೂರಿಂಜೆ ಪೊಲೀಸ್‌ ದೂರಿನಲ್ಲಿ ಹೇಳಿದ್ದಾರೆ.

ಇದರಿಂದ ರಾಕೇಶ್‌ ಶೆಟ್ಟಿ ಹತಾಶೆಗೆ ಒಳಗಾಗಿ, ತನ್ನ ವಿರುದ್ದ ವೃತ್ತಿಪರ ಟ್ಯ್ರಾಪ್ ಆರೋಪಿ ಅರುಣ್‌ ಭಗತ್‌ ಸಿಂಗ್‌, ಪತ್ರಕರ್ತ ರವೀಂದ್ರ ರೇಷ್ಮೆ, ಪ್ರಶಾಂತ್‌ ಬಿಸ್ಲೆರಿ ಎಂಬವರು ಸೇರಿಕೊಂಡು ಎಡಿಟೆಡ್‌ ಆಡಿಯೊ ಪ್ರಸಾರ ಮಾಡಿದ್ದಾರೆ ಎಂದು ನವೀನ್‌ ಸೂರಿಂಜೆ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ:ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಪವರ್‌ ಟಿವಿ ಪ್ರಸಾರ ಮಾಡಿರುವ ಆಡಿಯೊ ಬಹುಶಃ ವರ್ಷಗಳ ಹಿಂದೆಯೆ ತಾನು ಮಾತನಾಡಿರುವ ಬಿಡಿ ಬಿಡಿ ಆಡಿಯೊ ಆಗಿರಬಹುದು ಎಂದು ನವೀನ್ ಸೂರಿಂಜೆ ಹೇಳಿದ್ದು, ಅದನ್ನು ಒಟ್ಟು ಸೇರಿಸಿ ಟಿವಿಯಲ್ಲಿ ಪ್ರಸಾರ ಮಾಡಿ ತನ್ನ ಮಾನಹಾನಿ ಮಾಡಲಾಗಿದೆ ಎಂದು ಸೂರಿಂಜೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನವೀನ್ ಸೂರಿಂಜ್, “ನಾನು ಪಾರದರ್ಶಕ ಪತ್ರಿಕೋದ್ಯಮ ಮಾಡುತ್ತಿರುವವನು. ನನ್ನ ಸಂಪಾದನೆ ಎಷ್ಟು ಎಂದು ಮೊದಲ ಬಾರಿಗೆ ವೆಬ್‌ಸೈಟ್‌ನಲ್ಲಿ ಘೋಷಿಸಿದ ಪತ್ರಕರ್ತ. ನಾನು ಈಗಲೂ ಕಚೇರಿಯ ಸಂಬಳವನ್ನಷ್ಟೇ ನೆಚ್ಚಿಕೊಂಡಿದ್ದೇನೆ” ಎಂದು ತಿಳಿಸಿದ್ದಾರೆ.

“ತಾಲೂಕು ವರದಿಗಾರ ಹುದ್ದೆಯಿಂದ ಹಿಡಿದು ಸಂಪಾದಕನ ಹುದ್ದೆಯವರೆಗೆ ಈವರೆಗೂ ಲಂಚ ತೆಗೆದುಕೊಂಡಿಲ್ಲ. ಯಾವ ರಾಜಕಾರಣಿ, ಉದ್ಯಮಿಯ ಮನೆಯಲ್ಲಿ ಊಟ ಮಾಡಿಲ್ಲ, ಪಾರ್ಟಿಗಳಲ್ಲಿ ಭಾಗಿಯಾಗಿಲ್ಲ. ನನ್ನ ವೈಯುಕ್ತಿಕ ವಿಷಯಗಳಿಗೆ ರಾಜಕಾರಣಿಗಳ ಸಹಾಯ ಪಡೆದಿಲ್ಲ. ಯಾವುದೇ ರಾಜಕಾರಣಿ ಮತ್ತು ಉದ್ಯಮಿಗಳನ್ನು ನನ್ನ ಖಾಸಗಿ ಕಾರ್ಯಕ್ರಮಗಳಿಗೆ ಆಹ್ವಾನಿಸಿ ಲಾಭ ಪಡೆದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಪವರ್ ಟಿವಿ ಪ್ರಕರಣ ಎತ್ತುವ ಪ್ರಶ್ನೆಗಳು ಯಾರ ಮನೆ ಬಾಗಿಲೆದುರು ನಿಲ್ಲುತ್ತವೆ?

“ನನ್ನ ಸಂಸ್ಥೆಯ ಸಂಬಂಧದ ಅಧಿಕೃತ ಹಣಕಾಸು ವ್ಯವಹಾರಗಳನ್ನು ಹಲವರ ಜೊತೆ ಹುದ್ದೆಯ ಕಾರಣಕ್ಕಾಗಿ ಅಧಿಕೃತವಾಗಿ ಮಾತನಾಡಿದ್ದೇನೆ. ನಾನು ಕೆಲಸ ಮಾಡುವ ಸಂಸ್ಥೆಯ ಅಧಿಕೃತ ಹಣಕಾಸು ವ್ಯವಹಾರಗಳಲ್ಲಿ ನನ್ನ ಭಾಗಿದಾರಿಕೆಯ ಅಗತ್ಯವಿದ್ದಾಗ ಆ ಕರ್ತವ್ಯ ಮಾಡುವುದು ಅನಿವಾರ್ಯ. ನಾನು ವರ್ಷಗಳ ಹಿಂದೆ ಯಾರ ಜೊತೆಯೋ ಮೂರ್ನಾಲ್ಕು ಬಾರಿ ಮಾತನಾಡಿದ್ದ ಫೋನ್ ಕರೆಯನ್ನು ಎಡಿಟ್ ಮಾಡಿ ಅದನ್ನೆಲ್ಲಾ ಜೋಡಿಸಿ ಒಂದು ಫೋನ್ ಕರೆ ಎಂದು ಬಿಂಬಿಸಿ ನನ್ನ ಆಡಿಯೋವನ್ನು ಪ್ರಸಾರ ಮಾಡಲಾಗಿದೆ” ಎಂದು ನವೀನ್ ಸೂರಿಂಜೆ ಹೇಳಿದ್ದಾರೆ.

“ಈವರೆಗೂ ವೈಯುಕ್ತಿಕವಾಗಿ ಯಾವುದೇ ರೀತಿಯಲ್ಲಿ ನನ್ನ ಸಿದ್ದಾಂತದಲ್ಲಿ ರಾಜಿಯಾಗಿಲ್ಲ. ನನಗೆ ಮತ್ತು ನನ್ನ ಕುಟುಂಬಕ್ಕೆ ಬೇಕಾಗುವಷ್ಟು ಮಾತ್ರವಲ್ಲದೆ ಸಾಕು ಸಾಕಾಗುವಷ್ಟು ವೇತನವನ್ನು ನಾನು ಪಡೆಯುತ್ತಿದ್ದೇನೆ” ಎಂದು ನವೀನ್ ಸೂರಿಂಜೆ ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿ, “ಅವರು ಮಾತನಾಡಿರುವುದು ಸೇರಿದಂತೆ ಎಲ್ಲಾ ದಾಖಲೆಗಳು ನಮ್ಮಲ್ಲಿ ಇವೆ. ನಾವು ಯಾವುದನ್ನೂ ಎಡಿಟ್‌ ಮಾಡಿಲ್ಲ. ಮೂಲ ದಾಖಲೆಗಳನ್ನು ಇಟ್ಟುಕೊಂಡು ನಾವು ಮಾತನಾಡಿದ್ದೇವೆ, ಈ ಬಗ್ಗೆ ಮೂಲ ದಾಖಲೆಗಳನ್ನು ಪೊಲೀಸರು ಕೇಳುತ್ತಾರೆ ಎಂಬ ವಿವೇಚನೆ ನಮಗೂ ಇದೆ. ನಮ್ಮಲ್ಲಿರುವ ಎಲ್ಲಾ ದಾಖಲೆಗಳನ್ನು ಪೊಲೀಸ್ ಠಾಣೆಗೆ ದಾಖಲು ಮಾಡುತ್ತೇವೆ. ಅವರ ಜೊತೆ ನಮಗೆ ಯಾವುದೆ ವೈಯಕ್ತಿಕ ದ್ವೇಷ ಇಲ್ಲ, ನನಗೆ ನವೀನ್‌ ಸೂರಿಂಜೆ ಯಾರು ಎಂದೇ ಗೊತ್ತಿಲ್ಲ. ಅನ್ಯಾಯ ಆದವರು ಬಂದು, ಈ ಬಗ್ಗೆ ದಾಖಲೆ ಕೊಟ್ಟಿದ್ದಾರೆ. ಬೇಕಿದ್ದರೆ ನವೀನ್ ಸೂರಿಂಜೆಗೂ ಈ ಬಗ್ಗೆ ಒಂದು ಪ್ರತಿಯನ್ನು ಕೊಡುವ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...