Homeಕರ್ನಾಟಕ‘ತೇಜೋವಧೆ’: ಪವರ್‌‌ ಟಿವಿ ಮುಖ್ಯಸ್ಥನ ವಿರುದ್ದ ಪತ್ರಕರ್ತ ನವೀನ್‌ ಸೂರಿಂಜೆ ದೂರು

‘ತೇಜೋವಧೆ’: ಪವರ್‌‌ ಟಿವಿ ಮುಖ್ಯಸ್ಥನ ವಿರುದ್ದ ಪತ್ರಕರ್ತ ನವೀನ್‌ ಸೂರಿಂಜೆ ದೂರು

- Advertisement -
- Advertisement -

ಹಳೆಯ ಮತ್ತು ಸಂಬಂಧಪಡದ ಆಡಿಯೊಗಳನ್ನು ಎಡಿಟ್‌ ಮಾಡಿ ತಮ್ಮ ಚಾನೆಲ್‌ನಲ್ಲಿ ಪ್ರಸಾರ ಮಾಡಿ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಪತ್ರಕರ್ತ ನವೀನ್‌ ಸೂರಿಂಜೆ ಅವರು ಪವರ್‌ ಟಿವಿಯ ಮುಖ್ಯಸ್ಥ ರಾಕೇಶ್‌ ಶೆಟ್ಟಿ, ಸಂಪಾದಕೀಯ ಸಲಹೆಗಾರ ರವೀಂದ್ರ ರೇಷ್ಮೆ, ಸಹಸಂಪಾದಕ ರಾಘವ ಸೂರ್ಯ ಸೇರಿದಂತೆ ಇನ್ನೂ ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ.

ಬಿಟಿವಿಯ ಮಾಜಿ ಪತ್ರಕರ್ತನೊಬ್ಬ ಇತ್ತೀಚೆಗೆ ಲಂಚ ಪಡೆಯುವ ಸಮಯದಲ್ಲಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಪ್ರಕರಣದ ಹಿನ್ನಲೆಯಲ್ಲಿ ಪವರ್‌ ಟಿವಿ, ಮಾಧ್ಯಮಗಳಲ್ಲಿ ನಡೆಯುವ ಹಣದ ಅವ್ಯವಹಾರಗಳ ಬಗ್ಗೆ ವಿಶೇಷ ಕಾರ್ಯಕ್ರಮ ಮಾಡಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಬಿಟಿವಿ ಸಂಪಾದಕ ನವೀನ್ ಸೂರಿಂಜೆ ಅವರ ಬಗ್ಗೆಯೂ ಭ್ರಷ್ಟಾಚಾರದ ಆರೋಪವನ್ನು ಹೊರಿಸಲಾಗಿತ್ತು. ಜೊತೆಗೆ ಅವರು ಮಾತನಾಡಿದ್ದಾರೆ ಎನ್ನಲಾಗಿರುವ ಆಡಿಯೊವೊಂದನ್ನು ತೋರಿಸಿ, ನವೀನ್ ಸೂರಿಂಜೆ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಬಿಂಬಿಸಲಾಗಿದೆ.

ಇದನ್ನೂ ಓದಿ:ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ಪವರ್‌ ಟಿವಿಯ ಈ ಎಲ್ಲಾ ಆರೋಪಗಳನ್ನು ವಿರೋಧಿಸಿರುವ ನವೀನ್‌‌ ಸೂರಿಂಜೆ, ಪವರ್‌ ಟಿವಿಯ ಮುಖ್ಯಸ್ಥ ರಾಕೇಶ್‌ ಶೆಟ್ಟಿ, ಸಂಪಾದಕೀಯ ಸಲಹೆಗಾರ ರವೀಂದ್ರ ರೇಷ್ಮೆ, ಸಹಸಂಪಾದಕ ರಾಘವ ಸೂರ್ಯ, ಅರುಣ್ ಭಗತ್ ಸಿಂಗ್, ಪ್ರಶಾಂತ್‌‌ ಬಿಸ್ಲೆರಿ ಮತ್ತು ಆಡಿಯೊದಲ್ಲಿ ಇರುವ ವ್ಯಕ್ತಿಯ ವಿರುದ್ದ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಅವರು, ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿಯನ್ನು ಮರಳು ಮಾಫಿಯಾ ಎಂದು ಉಲ್ಲೇಖಿಸಿದ್ದು, ಅವರು ಬಿಟಿವಿ ವಿರುದ್ಧ ಕೆಲವು ದಿನಗಳಿಂದ ಪಿತೂರಿ ಮಾಡುತ್ತಿದ್ದರು ಎಂದು ಹೇಳಿದ್ದಾರೆ. ರಾಕೇಶ್‌ ಶೆಟ್ಟಿ ಮತ್ತು ಇತರರ ವಿರುದ್ದ ಬಿಟಿವಿ ಸಂಪಾದಕನಾಗಿ ತಾನು ದೂರು ನೀಡಿದ್ದು, ಈ ಹಿನ್ನಲೆಯಲ್ಲಿ IPC 419, 420 ಸೇರಿದಂತೆ ಇನ್ನಿತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ನವೀನ್ ಸೂರಿಂಜೆ ಪೊಲೀಸ್‌ ದೂರಿನಲ್ಲಿ ಹೇಳಿದ್ದಾರೆ.

ಇದರಿಂದ ರಾಕೇಶ್‌ ಶೆಟ್ಟಿ ಹತಾಶೆಗೆ ಒಳಗಾಗಿ, ತನ್ನ ವಿರುದ್ದ ವೃತ್ತಿಪರ ಟ್ಯ್ರಾಪ್ ಆರೋಪಿ ಅರುಣ್‌ ಭಗತ್‌ ಸಿಂಗ್‌, ಪತ್ರಕರ್ತ ರವೀಂದ್ರ ರೇಷ್ಮೆ, ಪ್ರಶಾಂತ್‌ ಬಿಸ್ಲೆರಿ ಎಂಬವರು ಸೇರಿಕೊಂಡು ಎಡಿಟೆಡ್‌ ಆಡಿಯೊ ಪ್ರಸಾರ ಮಾಡಿದ್ದಾರೆ ಎಂದು ನವೀನ್‌ ಸೂರಿಂಜೆ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ:ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಪವರ್‌ ಟಿವಿ ಪ್ರಸಾರ ಮಾಡಿರುವ ಆಡಿಯೊ ಬಹುಶಃ ವರ್ಷಗಳ ಹಿಂದೆಯೆ ತಾನು ಮಾತನಾಡಿರುವ ಬಿಡಿ ಬಿಡಿ ಆಡಿಯೊ ಆಗಿರಬಹುದು ಎಂದು ನವೀನ್ ಸೂರಿಂಜೆ ಹೇಳಿದ್ದು, ಅದನ್ನು ಒಟ್ಟು ಸೇರಿಸಿ ಟಿವಿಯಲ್ಲಿ ಪ್ರಸಾರ ಮಾಡಿ ತನ್ನ ಮಾನಹಾನಿ ಮಾಡಲಾಗಿದೆ ಎಂದು ಸೂರಿಂಜೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನವೀನ್ ಸೂರಿಂಜ್, “ನಾನು ಪಾರದರ್ಶಕ ಪತ್ರಿಕೋದ್ಯಮ ಮಾಡುತ್ತಿರುವವನು. ನನ್ನ ಸಂಪಾದನೆ ಎಷ್ಟು ಎಂದು ಮೊದಲ ಬಾರಿಗೆ ವೆಬ್‌ಸೈಟ್‌ನಲ್ಲಿ ಘೋಷಿಸಿದ ಪತ್ರಕರ್ತ. ನಾನು ಈಗಲೂ ಕಚೇರಿಯ ಸಂಬಳವನ್ನಷ್ಟೇ ನೆಚ್ಚಿಕೊಂಡಿದ್ದೇನೆ” ಎಂದು ತಿಳಿಸಿದ್ದಾರೆ.

“ತಾಲೂಕು ವರದಿಗಾರ ಹುದ್ದೆಯಿಂದ ಹಿಡಿದು ಸಂಪಾದಕನ ಹುದ್ದೆಯವರೆಗೆ ಈವರೆಗೂ ಲಂಚ ತೆಗೆದುಕೊಂಡಿಲ್ಲ. ಯಾವ ರಾಜಕಾರಣಿ, ಉದ್ಯಮಿಯ ಮನೆಯಲ್ಲಿ ಊಟ ಮಾಡಿಲ್ಲ, ಪಾರ್ಟಿಗಳಲ್ಲಿ ಭಾಗಿಯಾಗಿಲ್ಲ. ನನ್ನ ವೈಯುಕ್ತಿಕ ವಿಷಯಗಳಿಗೆ ರಾಜಕಾರಣಿಗಳ ಸಹಾಯ ಪಡೆದಿಲ್ಲ. ಯಾವುದೇ ರಾಜಕಾರಣಿ ಮತ್ತು ಉದ್ಯಮಿಗಳನ್ನು ನನ್ನ ಖಾಸಗಿ ಕಾರ್ಯಕ್ರಮಗಳಿಗೆ ಆಹ್ವಾನಿಸಿ ಲಾಭ ಪಡೆದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಪವರ್ ಟಿವಿ ಪ್ರಕರಣ ಎತ್ತುವ ಪ್ರಶ್ನೆಗಳು ಯಾರ ಮನೆ ಬಾಗಿಲೆದುರು ನಿಲ್ಲುತ್ತವೆ?

“ನನ್ನ ಸಂಸ್ಥೆಯ ಸಂಬಂಧದ ಅಧಿಕೃತ ಹಣಕಾಸು ವ್ಯವಹಾರಗಳನ್ನು ಹಲವರ ಜೊತೆ ಹುದ್ದೆಯ ಕಾರಣಕ್ಕಾಗಿ ಅಧಿಕೃತವಾಗಿ ಮಾತನಾಡಿದ್ದೇನೆ. ನಾನು ಕೆಲಸ ಮಾಡುವ ಸಂಸ್ಥೆಯ ಅಧಿಕೃತ ಹಣಕಾಸು ವ್ಯವಹಾರಗಳಲ್ಲಿ ನನ್ನ ಭಾಗಿದಾರಿಕೆಯ ಅಗತ್ಯವಿದ್ದಾಗ ಆ ಕರ್ತವ್ಯ ಮಾಡುವುದು ಅನಿವಾರ್ಯ. ನಾನು ವರ್ಷಗಳ ಹಿಂದೆ ಯಾರ ಜೊತೆಯೋ ಮೂರ್ನಾಲ್ಕು ಬಾರಿ ಮಾತನಾಡಿದ್ದ ಫೋನ್ ಕರೆಯನ್ನು ಎಡಿಟ್ ಮಾಡಿ ಅದನ್ನೆಲ್ಲಾ ಜೋಡಿಸಿ ಒಂದು ಫೋನ್ ಕರೆ ಎಂದು ಬಿಂಬಿಸಿ ನನ್ನ ಆಡಿಯೋವನ್ನು ಪ್ರಸಾರ ಮಾಡಲಾಗಿದೆ” ಎಂದು ನವೀನ್ ಸೂರಿಂಜೆ ಹೇಳಿದ್ದಾರೆ.

“ಈವರೆಗೂ ವೈಯುಕ್ತಿಕವಾಗಿ ಯಾವುದೇ ರೀತಿಯಲ್ಲಿ ನನ್ನ ಸಿದ್ದಾಂತದಲ್ಲಿ ರಾಜಿಯಾಗಿಲ್ಲ. ನನಗೆ ಮತ್ತು ನನ್ನ ಕುಟುಂಬಕ್ಕೆ ಬೇಕಾಗುವಷ್ಟು ಮಾತ್ರವಲ್ಲದೆ ಸಾಕು ಸಾಕಾಗುವಷ್ಟು ವೇತನವನ್ನು ನಾನು ಪಡೆಯುತ್ತಿದ್ದೇನೆ” ಎಂದು ನವೀನ್ ಸೂರಿಂಜೆ ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿ, “ಅವರು ಮಾತನಾಡಿರುವುದು ಸೇರಿದಂತೆ ಎಲ್ಲಾ ದಾಖಲೆಗಳು ನಮ್ಮಲ್ಲಿ ಇವೆ. ನಾವು ಯಾವುದನ್ನೂ ಎಡಿಟ್‌ ಮಾಡಿಲ್ಲ. ಮೂಲ ದಾಖಲೆಗಳನ್ನು ಇಟ್ಟುಕೊಂಡು ನಾವು ಮಾತನಾಡಿದ್ದೇವೆ, ಈ ಬಗ್ಗೆ ಮೂಲ ದಾಖಲೆಗಳನ್ನು ಪೊಲೀಸರು ಕೇಳುತ್ತಾರೆ ಎಂಬ ವಿವೇಚನೆ ನಮಗೂ ಇದೆ. ನಮ್ಮಲ್ಲಿರುವ ಎಲ್ಲಾ ದಾಖಲೆಗಳನ್ನು ಪೊಲೀಸ್ ಠಾಣೆಗೆ ದಾಖಲು ಮಾಡುತ್ತೇವೆ. ಅವರ ಜೊತೆ ನಮಗೆ ಯಾವುದೆ ವೈಯಕ್ತಿಕ ದ್ವೇಷ ಇಲ್ಲ, ನನಗೆ ನವೀನ್‌ ಸೂರಿಂಜೆ ಯಾರು ಎಂದೇ ಗೊತ್ತಿಲ್ಲ. ಅನ್ಯಾಯ ಆದವರು ಬಂದು, ಈ ಬಗ್ಗೆ ದಾಖಲೆ ಕೊಟ್ಟಿದ್ದಾರೆ. ಬೇಕಿದ್ದರೆ ನವೀನ್ ಸೂರಿಂಜೆಗೂ ಈ ಬಗ್ಗೆ ಒಂದು ಪ್ರತಿಯನ್ನು ಕೊಡುವ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....