Homeಕರ್ನಾಟಕ‘ತೇಜೋವಧೆ’: ಪವರ್‌‌ ಟಿವಿ ಮುಖ್ಯಸ್ಥನ ವಿರುದ್ದ ಪತ್ರಕರ್ತ ನವೀನ್‌ ಸೂರಿಂಜೆ ದೂರು

‘ತೇಜೋವಧೆ’: ಪವರ್‌‌ ಟಿವಿ ಮುಖ್ಯಸ್ಥನ ವಿರುದ್ದ ಪತ್ರಕರ್ತ ನವೀನ್‌ ಸೂರಿಂಜೆ ದೂರು

- Advertisement -
- Advertisement -

ಹಳೆಯ ಮತ್ತು ಸಂಬಂಧಪಡದ ಆಡಿಯೊಗಳನ್ನು ಎಡಿಟ್‌ ಮಾಡಿ ತಮ್ಮ ಚಾನೆಲ್‌ನಲ್ಲಿ ಪ್ರಸಾರ ಮಾಡಿ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಪತ್ರಕರ್ತ ನವೀನ್‌ ಸೂರಿಂಜೆ ಅವರು ಪವರ್‌ ಟಿವಿಯ ಮುಖ್ಯಸ್ಥ ರಾಕೇಶ್‌ ಶೆಟ್ಟಿ, ಸಂಪಾದಕೀಯ ಸಲಹೆಗಾರ ರವೀಂದ್ರ ರೇಷ್ಮೆ, ಸಹಸಂಪಾದಕ ರಾಘವ ಸೂರ್ಯ ಸೇರಿದಂತೆ ಇನ್ನೂ ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ.

ಬಿಟಿವಿಯ ಮಾಜಿ ಪತ್ರಕರ್ತನೊಬ್ಬ ಇತ್ತೀಚೆಗೆ ಲಂಚ ಪಡೆಯುವ ಸಮಯದಲ್ಲಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಪ್ರಕರಣದ ಹಿನ್ನಲೆಯಲ್ಲಿ ಪವರ್‌ ಟಿವಿ, ಮಾಧ್ಯಮಗಳಲ್ಲಿ ನಡೆಯುವ ಹಣದ ಅವ್ಯವಹಾರಗಳ ಬಗ್ಗೆ ವಿಶೇಷ ಕಾರ್ಯಕ್ರಮ ಮಾಡಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಬಿಟಿವಿ ಸಂಪಾದಕ ನವೀನ್ ಸೂರಿಂಜೆ ಅವರ ಬಗ್ಗೆಯೂ ಭ್ರಷ್ಟಾಚಾರದ ಆರೋಪವನ್ನು ಹೊರಿಸಲಾಗಿತ್ತು. ಜೊತೆಗೆ ಅವರು ಮಾತನಾಡಿದ್ದಾರೆ ಎನ್ನಲಾಗಿರುವ ಆಡಿಯೊವೊಂದನ್ನು ತೋರಿಸಿ, ನವೀನ್ ಸೂರಿಂಜೆ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಬಿಂಬಿಸಲಾಗಿದೆ.

ಇದನ್ನೂ ಓದಿ:ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ಪವರ್‌ ಟಿವಿಯ ಈ ಎಲ್ಲಾ ಆರೋಪಗಳನ್ನು ವಿರೋಧಿಸಿರುವ ನವೀನ್‌‌ ಸೂರಿಂಜೆ, ಪವರ್‌ ಟಿವಿಯ ಮುಖ್ಯಸ್ಥ ರಾಕೇಶ್‌ ಶೆಟ್ಟಿ, ಸಂಪಾದಕೀಯ ಸಲಹೆಗಾರ ರವೀಂದ್ರ ರೇಷ್ಮೆ, ಸಹಸಂಪಾದಕ ರಾಘವ ಸೂರ್ಯ, ಅರುಣ್ ಭಗತ್ ಸಿಂಗ್, ಪ್ರಶಾಂತ್‌‌ ಬಿಸ್ಲೆರಿ ಮತ್ತು ಆಡಿಯೊದಲ್ಲಿ ಇರುವ ವ್ಯಕ್ತಿಯ ವಿರುದ್ದ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಅವರು, ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿಯನ್ನು ಮರಳು ಮಾಫಿಯಾ ಎಂದು ಉಲ್ಲೇಖಿಸಿದ್ದು, ಅವರು ಬಿಟಿವಿ ವಿರುದ್ಧ ಕೆಲವು ದಿನಗಳಿಂದ ಪಿತೂರಿ ಮಾಡುತ್ತಿದ್ದರು ಎಂದು ಹೇಳಿದ್ದಾರೆ. ರಾಕೇಶ್‌ ಶೆಟ್ಟಿ ಮತ್ತು ಇತರರ ವಿರುದ್ದ ಬಿಟಿವಿ ಸಂಪಾದಕನಾಗಿ ತಾನು ದೂರು ನೀಡಿದ್ದು, ಈ ಹಿನ್ನಲೆಯಲ್ಲಿ IPC 419, 420 ಸೇರಿದಂತೆ ಇನ್ನಿತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ನವೀನ್ ಸೂರಿಂಜೆ ಪೊಲೀಸ್‌ ದೂರಿನಲ್ಲಿ ಹೇಳಿದ್ದಾರೆ.

ಇದರಿಂದ ರಾಕೇಶ್‌ ಶೆಟ್ಟಿ ಹತಾಶೆಗೆ ಒಳಗಾಗಿ, ತನ್ನ ವಿರುದ್ದ ವೃತ್ತಿಪರ ಟ್ಯ್ರಾಪ್ ಆರೋಪಿ ಅರುಣ್‌ ಭಗತ್‌ ಸಿಂಗ್‌, ಪತ್ರಕರ್ತ ರವೀಂದ್ರ ರೇಷ್ಮೆ, ಪ್ರಶಾಂತ್‌ ಬಿಸ್ಲೆರಿ ಎಂಬವರು ಸೇರಿಕೊಂಡು ಎಡಿಟೆಡ್‌ ಆಡಿಯೊ ಪ್ರಸಾರ ಮಾಡಿದ್ದಾರೆ ಎಂದು ನವೀನ್‌ ಸೂರಿಂಜೆ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ:ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಪವರ್‌ ಟಿವಿ ಪ್ರಸಾರ ಮಾಡಿರುವ ಆಡಿಯೊ ಬಹುಶಃ ವರ್ಷಗಳ ಹಿಂದೆಯೆ ತಾನು ಮಾತನಾಡಿರುವ ಬಿಡಿ ಬಿಡಿ ಆಡಿಯೊ ಆಗಿರಬಹುದು ಎಂದು ನವೀನ್ ಸೂರಿಂಜೆ ಹೇಳಿದ್ದು, ಅದನ್ನು ಒಟ್ಟು ಸೇರಿಸಿ ಟಿವಿಯಲ್ಲಿ ಪ್ರಸಾರ ಮಾಡಿ ತನ್ನ ಮಾನಹಾನಿ ಮಾಡಲಾಗಿದೆ ಎಂದು ಸೂರಿಂಜೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನವೀನ್ ಸೂರಿಂಜ್, “ನಾನು ಪಾರದರ್ಶಕ ಪತ್ರಿಕೋದ್ಯಮ ಮಾಡುತ್ತಿರುವವನು. ನನ್ನ ಸಂಪಾದನೆ ಎಷ್ಟು ಎಂದು ಮೊದಲ ಬಾರಿಗೆ ವೆಬ್‌ಸೈಟ್‌ನಲ್ಲಿ ಘೋಷಿಸಿದ ಪತ್ರಕರ್ತ. ನಾನು ಈಗಲೂ ಕಚೇರಿಯ ಸಂಬಳವನ್ನಷ್ಟೇ ನೆಚ್ಚಿಕೊಂಡಿದ್ದೇನೆ” ಎಂದು ತಿಳಿಸಿದ್ದಾರೆ.

“ತಾಲೂಕು ವರದಿಗಾರ ಹುದ್ದೆಯಿಂದ ಹಿಡಿದು ಸಂಪಾದಕನ ಹುದ್ದೆಯವರೆಗೆ ಈವರೆಗೂ ಲಂಚ ತೆಗೆದುಕೊಂಡಿಲ್ಲ. ಯಾವ ರಾಜಕಾರಣಿ, ಉದ್ಯಮಿಯ ಮನೆಯಲ್ಲಿ ಊಟ ಮಾಡಿಲ್ಲ, ಪಾರ್ಟಿಗಳಲ್ಲಿ ಭಾಗಿಯಾಗಿಲ್ಲ. ನನ್ನ ವೈಯುಕ್ತಿಕ ವಿಷಯಗಳಿಗೆ ರಾಜಕಾರಣಿಗಳ ಸಹಾಯ ಪಡೆದಿಲ್ಲ. ಯಾವುದೇ ರಾಜಕಾರಣಿ ಮತ್ತು ಉದ್ಯಮಿಗಳನ್ನು ನನ್ನ ಖಾಸಗಿ ಕಾರ್ಯಕ್ರಮಗಳಿಗೆ ಆಹ್ವಾನಿಸಿ ಲಾಭ ಪಡೆದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಪವರ್ ಟಿವಿ ಪ್ರಕರಣ ಎತ್ತುವ ಪ್ರಶ್ನೆಗಳು ಯಾರ ಮನೆ ಬಾಗಿಲೆದುರು ನಿಲ್ಲುತ್ತವೆ?

“ನನ್ನ ಸಂಸ್ಥೆಯ ಸಂಬಂಧದ ಅಧಿಕೃತ ಹಣಕಾಸು ವ್ಯವಹಾರಗಳನ್ನು ಹಲವರ ಜೊತೆ ಹುದ್ದೆಯ ಕಾರಣಕ್ಕಾಗಿ ಅಧಿಕೃತವಾಗಿ ಮಾತನಾಡಿದ್ದೇನೆ. ನಾನು ಕೆಲಸ ಮಾಡುವ ಸಂಸ್ಥೆಯ ಅಧಿಕೃತ ಹಣಕಾಸು ವ್ಯವಹಾರಗಳಲ್ಲಿ ನನ್ನ ಭಾಗಿದಾರಿಕೆಯ ಅಗತ್ಯವಿದ್ದಾಗ ಆ ಕರ್ತವ್ಯ ಮಾಡುವುದು ಅನಿವಾರ್ಯ. ನಾನು ವರ್ಷಗಳ ಹಿಂದೆ ಯಾರ ಜೊತೆಯೋ ಮೂರ್ನಾಲ್ಕು ಬಾರಿ ಮಾತನಾಡಿದ್ದ ಫೋನ್ ಕರೆಯನ್ನು ಎಡಿಟ್ ಮಾಡಿ ಅದನ್ನೆಲ್ಲಾ ಜೋಡಿಸಿ ಒಂದು ಫೋನ್ ಕರೆ ಎಂದು ಬಿಂಬಿಸಿ ನನ್ನ ಆಡಿಯೋವನ್ನು ಪ್ರಸಾರ ಮಾಡಲಾಗಿದೆ” ಎಂದು ನವೀನ್ ಸೂರಿಂಜೆ ಹೇಳಿದ್ದಾರೆ.

“ಈವರೆಗೂ ವೈಯುಕ್ತಿಕವಾಗಿ ಯಾವುದೇ ರೀತಿಯಲ್ಲಿ ನನ್ನ ಸಿದ್ದಾಂತದಲ್ಲಿ ರಾಜಿಯಾಗಿಲ್ಲ. ನನಗೆ ಮತ್ತು ನನ್ನ ಕುಟುಂಬಕ್ಕೆ ಬೇಕಾಗುವಷ್ಟು ಮಾತ್ರವಲ್ಲದೆ ಸಾಕು ಸಾಕಾಗುವಷ್ಟು ವೇತನವನ್ನು ನಾನು ಪಡೆಯುತ್ತಿದ್ದೇನೆ” ಎಂದು ನವೀನ್ ಸೂರಿಂಜೆ ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿ, “ಅವರು ಮಾತನಾಡಿರುವುದು ಸೇರಿದಂತೆ ಎಲ್ಲಾ ದಾಖಲೆಗಳು ನಮ್ಮಲ್ಲಿ ಇವೆ. ನಾವು ಯಾವುದನ್ನೂ ಎಡಿಟ್‌ ಮಾಡಿಲ್ಲ. ಮೂಲ ದಾಖಲೆಗಳನ್ನು ಇಟ್ಟುಕೊಂಡು ನಾವು ಮಾತನಾಡಿದ್ದೇವೆ, ಈ ಬಗ್ಗೆ ಮೂಲ ದಾಖಲೆಗಳನ್ನು ಪೊಲೀಸರು ಕೇಳುತ್ತಾರೆ ಎಂಬ ವಿವೇಚನೆ ನಮಗೂ ಇದೆ. ನಮ್ಮಲ್ಲಿರುವ ಎಲ್ಲಾ ದಾಖಲೆಗಳನ್ನು ಪೊಲೀಸ್ ಠಾಣೆಗೆ ದಾಖಲು ಮಾಡುತ್ತೇವೆ. ಅವರ ಜೊತೆ ನಮಗೆ ಯಾವುದೆ ವೈಯಕ್ತಿಕ ದ್ವೇಷ ಇಲ್ಲ, ನನಗೆ ನವೀನ್‌ ಸೂರಿಂಜೆ ಯಾರು ಎಂದೇ ಗೊತ್ತಿಲ್ಲ. ಅನ್ಯಾಯ ಆದವರು ಬಂದು, ಈ ಬಗ್ಗೆ ದಾಖಲೆ ಕೊಟ್ಟಿದ್ದಾರೆ. ಬೇಕಿದ್ದರೆ ನವೀನ್ ಸೂರಿಂಜೆಗೂ ಈ ಬಗ್ಗೆ ಒಂದು ಪ್ರತಿಯನ್ನು ಕೊಡುವ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...