Homeಮುಖಪುಟವಿಡಿಯೋ ಮಾಡಿದರೆ ತಪ್ಪೇನು..? ರಾಹುಲ್ ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್

ವಿಡಿಯೋ ಮಾಡಿದರೆ ತಪ್ಪೇನು..? ರಾಹುಲ್ ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್

- Advertisement -
- Advertisement -

ಉಪ ರಾಷ್ಟ್ರಪತಿ, ರಾಜ್ಯಸಭೆ ಸಭಾಪತಿ ಜಗದೀಪ್ ಧನ್ಖರ್ ಅವರನ್ನು ಕುರಿತು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮಿಮಿಕ್ರಿ ಮಾಡಿದ್ದನ್ನು ವಿಡಿಯೋ ಮಾಡಿದ್ದ ರಾಹುಲ್ ಗಾಂಧಿ ಅವರನ್ನು ಬಿಜೆಪಿ ನಾಯಕರು ಟೀಕಿಸಿದ್ದರು. ಧನ್ಖರ್ ಅವರೂ ಸಹ ಸದನದಲ್ಲಿ ವಿಡಿಯೋ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.

ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಮತ್ತು ಉಪಾಧ್ಯಕ್ಷ ಜಗದೀಪ್ ಧನ್ಖರ್ ಅವರ ಮಿಮಿಕ್ರಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್, ರಾಹುಲ್ ಗಾಂಧಿ ಅವರ ಬೆಂಬಲಕ್ಕೆ ನಿಂತಿದ್ದಾರೆ.

‘ವಿಡಿಯೋ ಮಾಡುವುದರಲ್ಲಿ ತಪ್ಪೇನು? ಅವರು (ರಾಹುಲ್ ಗಾಂಧಿ) ತಾವು ಚಿತ್ರೀಕರಿಸಿದ್ದ ವೀಡಿಯೊವನ್ನು ಮತ್ತಷ್ಟು ವೈರಲ್ ಮಾಡಲು ಯಾವುದೆ ವೇದಿಕೆಯನ್ನು ಬಳಸಿಕೊಂಡಿಲ್ಲ’ ಎಂದರು.

ತಮ್ಮ ಪಕ್ಷದ ನಾಯಕನನ್ನು ಸಮರ್ಥಿಸಿಕೊಂಡಿರುವ ಸಿಬಲ್, ‘ಆದರೆ ಮಿಮಿಕ್ರಿ ಮಾಡಿದವರು ಅದರ ಬಗ್ಗೆ ಯೋಚಿಸಬೇಕಿತ್ತು’ ಎಂದು ಕಲ್ಯಾಣ್ ಬ್ಯಾನರ್ಜಿ ನಡೆಯನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

‘ಇದು ಕೇವಲ ರಾಜಕೀಯ ವಿಷಯ ಮಾತ್ರಲ್ಲ. ಏಕೆಂದರೆ, ಸಾಂವಿಧಾನಿಕ ಹುದ್ದೆಗಳನ್ನು ಎಷ್ಟರ ಮಟ್ಟಿಗೆ ಅವಮಾನಿಸಲಾಗುತ್ತಿದೆ ಎಂಬುದು ಆತಂಕಕಾರಿಯಾಗಿದೆ’ ಎಂದರು.

ಘಟನೆ ಹಿನ್ನೆಲೆ:

146 ಸಂಸದರ ಅಮಾನತು ವಿರೋಧಿಸಿ ಸಂಸತ್ತಿನ ಆವರಣದಲ್ಲಿ ಕಳೆದ ವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಲ್ಯಾಣ್ ಬ್ಯಾನರ್ಜಿ, ರಾಜ್ಯಸಭೆ ಜಗದೀಪ್ ಧನ್ಖರ್ ಅವರನ್ನು ಮಿಮಿಕ್ರಿ ಮಾಡಿದ್ದರು. ಅದನ್ನು ತಮ್ಮ ಮೊಬೈಲ್‌ನಲ್ಲಿ ರಾಹುಲ್ ಗಾಂಧಿ ಚಿತ್ರೀಕರಿಸಿದ್ದ ವಿಡಿಯೋ ಮಾಧ್ಯಮಗಳಲ್ಲಿ ಭಾರಿ ಸುದ್ದಿಯಾಗಿತ್ತು.
ಘಟನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಧನ್ಖರ್, ತಮ್ಮ ನೋವನ್ನು ವ್ಯಕ್ತಪಡಿಸಿದ್ದರು. ಭಾರತದ ಉಪರಾಷ್ಟ್ರಪತಿಯಾಗಿರುವ ತಮ್ಮ ಸ್ಥಾನವನ್ನು ವಿರೋಧ ಪಕ್ಷದ ಸದಸ್ಯರು ಅವಮಾನಿಸಿದ್ದಾರೆ. ಇದು ಜಾಟ್ ಸಮುದಾಯ ಹಾಗೂ ರೈತರ ಕುಟುಂಬದಿಂದ ಬಂದಿರುವ ನನ್ನ ಹಿನ್ನೆಲೆಗೆ ಮಾಡಿದ ಅವಮಾನವಾಗಿದೆ ಎಂದು ಧನ್ಖರ್ ಹೇಳಿದ್ದಾರೆ.

ತನ್ನ ನಡೆ ಸಮರ್ಥಿಸಿಕೊಂಡ ಬ್ಯಾನರ್ಜಿ:

ಪಶ್ಚಿಮ ಬಂಗಾಳದ ಸೆರಾಂಪೋರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ, ಧನ್ಖರ್ ಅವರನ್ನು ಮಿಮಿಕ್ರಿ ಮಾಡುವುದನ್ನು ಮುಂದುವರಿಸುವುದಾಗಿ ಹೇಳಿದರು. ಮಿಮಿಕ್ರಿ ಮಾಡುವುದು ಒಂದು ಕಲೆ ಎಂದು ಹೇಳಿದ ಅವರು, ಅದನ್ನು ಸ್ವೀಕರಿಸುವ ಹೃದಯ ಇರಬೇಕು’ ಎಂದಿದ್ದಾರೆ.

‘ನಾನು ಮಿಮಿಕ್ರಿ ಮಾಡುತ್ತಲೇ ಇರುತ್ತೇನೆ. ಅದೊಂದು ಕಲಾ ಪ್ರಕಾರ. ಬೇಕಾದರೆ ಸಾವಿರ ಬಾರಿ ಮಾಡುತ್ತೇನೆ. ನನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ನನಗೆ ಎಲ್ಲ ಮೂಲಭೂತ ಹಕ್ಕುಗಳಿವೆ. ನೀವು ನನ್ನನ್ನು ಜೈಲಿಗೆ ಹಾಕಬಹುದು. ನಾನು ಹಿಂದೆ ಸರಿಯುವುದಿಲ್ಲ’ ಎಂದು ಬ್ಯಾನರ್ಜಿ ಸವಾಲು ಹಾಕಿದ್ದಾರೆ.

ಇದನ್ನೂ ಓದಿ; ಮಿಮಿಕ್ರಿ ಒಂದು ಕಲೆ; ಅದನ್ನು ಮೆಚ್ಚುವ ಮನಸ್ಸು ಇಲ್ಲದಿದ್ದರೆ ನಾನೇನು ಮಾಡಲಿ: ಕಲ್ಯಾಣ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....