Homeಮುಖಪುಟವಿಡಿಯೋ ಮಾಡಿದರೆ ತಪ್ಪೇನು..? ರಾಹುಲ್ ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್

ವಿಡಿಯೋ ಮಾಡಿದರೆ ತಪ್ಪೇನು..? ರಾಹುಲ್ ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್

- Advertisement -
- Advertisement -

ಉಪ ರಾಷ್ಟ್ರಪತಿ, ರಾಜ್ಯಸಭೆ ಸಭಾಪತಿ ಜಗದೀಪ್ ಧನ್ಖರ್ ಅವರನ್ನು ಕುರಿತು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮಿಮಿಕ್ರಿ ಮಾಡಿದ್ದನ್ನು ವಿಡಿಯೋ ಮಾಡಿದ್ದ ರಾಹುಲ್ ಗಾಂಧಿ ಅವರನ್ನು ಬಿಜೆಪಿ ನಾಯಕರು ಟೀಕಿಸಿದ್ದರು. ಧನ್ಖರ್ ಅವರೂ ಸಹ ಸದನದಲ್ಲಿ ವಿಡಿಯೋ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.

ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಮತ್ತು ಉಪಾಧ್ಯಕ್ಷ ಜಗದೀಪ್ ಧನ್ಖರ್ ಅವರ ಮಿಮಿಕ್ರಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್, ರಾಹುಲ್ ಗಾಂಧಿ ಅವರ ಬೆಂಬಲಕ್ಕೆ ನಿಂತಿದ್ದಾರೆ.

‘ವಿಡಿಯೋ ಮಾಡುವುದರಲ್ಲಿ ತಪ್ಪೇನು? ಅವರು (ರಾಹುಲ್ ಗಾಂಧಿ) ತಾವು ಚಿತ್ರೀಕರಿಸಿದ್ದ ವೀಡಿಯೊವನ್ನು ಮತ್ತಷ್ಟು ವೈರಲ್ ಮಾಡಲು ಯಾವುದೆ ವೇದಿಕೆಯನ್ನು ಬಳಸಿಕೊಂಡಿಲ್ಲ’ ಎಂದರು.

ತಮ್ಮ ಪಕ್ಷದ ನಾಯಕನನ್ನು ಸಮರ್ಥಿಸಿಕೊಂಡಿರುವ ಸಿಬಲ್, ‘ಆದರೆ ಮಿಮಿಕ್ರಿ ಮಾಡಿದವರು ಅದರ ಬಗ್ಗೆ ಯೋಚಿಸಬೇಕಿತ್ತು’ ಎಂದು ಕಲ್ಯಾಣ್ ಬ್ಯಾನರ್ಜಿ ನಡೆಯನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

‘ಇದು ಕೇವಲ ರಾಜಕೀಯ ವಿಷಯ ಮಾತ್ರಲ್ಲ. ಏಕೆಂದರೆ, ಸಾಂವಿಧಾನಿಕ ಹುದ್ದೆಗಳನ್ನು ಎಷ್ಟರ ಮಟ್ಟಿಗೆ ಅವಮಾನಿಸಲಾಗುತ್ತಿದೆ ಎಂಬುದು ಆತಂಕಕಾರಿಯಾಗಿದೆ’ ಎಂದರು.

ಘಟನೆ ಹಿನ್ನೆಲೆ:

146 ಸಂಸದರ ಅಮಾನತು ವಿರೋಧಿಸಿ ಸಂಸತ್ತಿನ ಆವರಣದಲ್ಲಿ ಕಳೆದ ವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಲ್ಯಾಣ್ ಬ್ಯಾನರ್ಜಿ, ರಾಜ್ಯಸಭೆ ಜಗದೀಪ್ ಧನ್ಖರ್ ಅವರನ್ನು ಮಿಮಿಕ್ರಿ ಮಾಡಿದ್ದರು. ಅದನ್ನು ತಮ್ಮ ಮೊಬೈಲ್‌ನಲ್ಲಿ ರಾಹುಲ್ ಗಾಂಧಿ ಚಿತ್ರೀಕರಿಸಿದ್ದ ವಿಡಿಯೋ ಮಾಧ್ಯಮಗಳಲ್ಲಿ ಭಾರಿ ಸುದ್ದಿಯಾಗಿತ್ತು.
ಘಟನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಧನ್ಖರ್, ತಮ್ಮ ನೋವನ್ನು ವ್ಯಕ್ತಪಡಿಸಿದ್ದರು. ಭಾರತದ ಉಪರಾಷ್ಟ್ರಪತಿಯಾಗಿರುವ ತಮ್ಮ ಸ್ಥಾನವನ್ನು ವಿರೋಧ ಪಕ್ಷದ ಸದಸ್ಯರು ಅವಮಾನಿಸಿದ್ದಾರೆ. ಇದು ಜಾಟ್ ಸಮುದಾಯ ಹಾಗೂ ರೈತರ ಕುಟುಂಬದಿಂದ ಬಂದಿರುವ ನನ್ನ ಹಿನ್ನೆಲೆಗೆ ಮಾಡಿದ ಅವಮಾನವಾಗಿದೆ ಎಂದು ಧನ್ಖರ್ ಹೇಳಿದ್ದಾರೆ.

ತನ್ನ ನಡೆ ಸಮರ್ಥಿಸಿಕೊಂಡ ಬ್ಯಾನರ್ಜಿ:

ಪಶ್ಚಿಮ ಬಂಗಾಳದ ಸೆರಾಂಪೋರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ, ಧನ್ಖರ್ ಅವರನ್ನು ಮಿಮಿಕ್ರಿ ಮಾಡುವುದನ್ನು ಮುಂದುವರಿಸುವುದಾಗಿ ಹೇಳಿದರು. ಮಿಮಿಕ್ರಿ ಮಾಡುವುದು ಒಂದು ಕಲೆ ಎಂದು ಹೇಳಿದ ಅವರು, ಅದನ್ನು ಸ್ವೀಕರಿಸುವ ಹೃದಯ ಇರಬೇಕು’ ಎಂದಿದ್ದಾರೆ.

‘ನಾನು ಮಿಮಿಕ್ರಿ ಮಾಡುತ್ತಲೇ ಇರುತ್ತೇನೆ. ಅದೊಂದು ಕಲಾ ಪ್ರಕಾರ. ಬೇಕಾದರೆ ಸಾವಿರ ಬಾರಿ ಮಾಡುತ್ತೇನೆ. ನನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ನನಗೆ ಎಲ್ಲ ಮೂಲಭೂತ ಹಕ್ಕುಗಳಿವೆ. ನೀವು ನನ್ನನ್ನು ಜೈಲಿಗೆ ಹಾಕಬಹುದು. ನಾನು ಹಿಂದೆ ಸರಿಯುವುದಿಲ್ಲ’ ಎಂದು ಬ್ಯಾನರ್ಜಿ ಸವಾಲು ಹಾಕಿದ್ದಾರೆ.

ಇದನ್ನೂ ಓದಿ; ಮಿಮಿಕ್ರಿ ಒಂದು ಕಲೆ; ಅದನ್ನು ಮೆಚ್ಚುವ ಮನಸ್ಸು ಇಲ್ಲದಿದ್ದರೆ ನಾನೇನು ಮಾಡಲಿ: ಕಲ್ಯಾಣ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...