Homeಮುಖಪುಟವಿಡಿಯೋ ಮಾಡಿದರೆ ತಪ್ಪೇನು..? ರಾಹುಲ್ ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್

ವಿಡಿಯೋ ಮಾಡಿದರೆ ತಪ್ಪೇನು..? ರಾಹುಲ್ ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್

- Advertisement -
- Advertisement -

ಉಪ ರಾಷ್ಟ್ರಪತಿ, ರಾಜ್ಯಸಭೆ ಸಭಾಪತಿ ಜಗದೀಪ್ ಧನ್ಖರ್ ಅವರನ್ನು ಕುರಿತು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮಿಮಿಕ್ರಿ ಮಾಡಿದ್ದನ್ನು ವಿಡಿಯೋ ಮಾಡಿದ್ದ ರಾಹುಲ್ ಗಾಂಧಿ ಅವರನ್ನು ಬಿಜೆಪಿ ನಾಯಕರು ಟೀಕಿಸಿದ್ದರು. ಧನ್ಖರ್ ಅವರೂ ಸಹ ಸದನದಲ್ಲಿ ವಿಡಿಯೋ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.

ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಮತ್ತು ಉಪಾಧ್ಯಕ್ಷ ಜಗದೀಪ್ ಧನ್ಖರ್ ಅವರ ಮಿಮಿಕ್ರಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್, ರಾಹುಲ್ ಗಾಂಧಿ ಅವರ ಬೆಂಬಲಕ್ಕೆ ನಿಂತಿದ್ದಾರೆ.

‘ವಿಡಿಯೋ ಮಾಡುವುದರಲ್ಲಿ ತಪ್ಪೇನು? ಅವರು (ರಾಹುಲ್ ಗಾಂಧಿ) ತಾವು ಚಿತ್ರೀಕರಿಸಿದ್ದ ವೀಡಿಯೊವನ್ನು ಮತ್ತಷ್ಟು ವೈರಲ್ ಮಾಡಲು ಯಾವುದೆ ವೇದಿಕೆಯನ್ನು ಬಳಸಿಕೊಂಡಿಲ್ಲ’ ಎಂದರು.

ತಮ್ಮ ಪಕ್ಷದ ನಾಯಕನನ್ನು ಸಮರ್ಥಿಸಿಕೊಂಡಿರುವ ಸಿಬಲ್, ‘ಆದರೆ ಮಿಮಿಕ್ರಿ ಮಾಡಿದವರು ಅದರ ಬಗ್ಗೆ ಯೋಚಿಸಬೇಕಿತ್ತು’ ಎಂದು ಕಲ್ಯಾಣ್ ಬ್ಯಾನರ್ಜಿ ನಡೆಯನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

‘ಇದು ಕೇವಲ ರಾಜಕೀಯ ವಿಷಯ ಮಾತ್ರಲ್ಲ. ಏಕೆಂದರೆ, ಸಾಂವಿಧಾನಿಕ ಹುದ್ದೆಗಳನ್ನು ಎಷ್ಟರ ಮಟ್ಟಿಗೆ ಅವಮಾನಿಸಲಾಗುತ್ತಿದೆ ಎಂಬುದು ಆತಂಕಕಾರಿಯಾಗಿದೆ’ ಎಂದರು.

ಘಟನೆ ಹಿನ್ನೆಲೆ:

146 ಸಂಸದರ ಅಮಾನತು ವಿರೋಧಿಸಿ ಸಂಸತ್ತಿನ ಆವರಣದಲ್ಲಿ ಕಳೆದ ವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಲ್ಯಾಣ್ ಬ್ಯಾನರ್ಜಿ, ರಾಜ್ಯಸಭೆ ಜಗದೀಪ್ ಧನ್ಖರ್ ಅವರನ್ನು ಮಿಮಿಕ್ರಿ ಮಾಡಿದ್ದರು. ಅದನ್ನು ತಮ್ಮ ಮೊಬೈಲ್‌ನಲ್ಲಿ ರಾಹುಲ್ ಗಾಂಧಿ ಚಿತ್ರೀಕರಿಸಿದ್ದ ವಿಡಿಯೋ ಮಾಧ್ಯಮಗಳಲ್ಲಿ ಭಾರಿ ಸುದ್ದಿಯಾಗಿತ್ತು.
ಘಟನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಧನ್ಖರ್, ತಮ್ಮ ನೋವನ್ನು ವ್ಯಕ್ತಪಡಿಸಿದ್ದರು. ಭಾರತದ ಉಪರಾಷ್ಟ್ರಪತಿಯಾಗಿರುವ ತಮ್ಮ ಸ್ಥಾನವನ್ನು ವಿರೋಧ ಪಕ್ಷದ ಸದಸ್ಯರು ಅವಮಾನಿಸಿದ್ದಾರೆ. ಇದು ಜಾಟ್ ಸಮುದಾಯ ಹಾಗೂ ರೈತರ ಕುಟುಂಬದಿಂದ ಬಂದಿರುವ ನನ್ನ ಹಿನ್ನೆಲೆಗೆ ಮಾಡಿದ ಅವಮಾನವಾಗಿದೆ ಎಂದು ಧನ್ಖರ್ ಹೇಳಿದ್ದಾರೆ.

ತನ್ನ ನಡೆ ಸಮರ್ಥಿಸಿಕೊಂಡ ಬ್ಯಾನರ್ಜಿ:

ಪಶ್ಚಿಮ ಬಂಗಾಳದ ಸೆರಾಂಪೋರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ, ಧನ್ಖರ್ ಅವರನ್ನು ಮಿಮಿಕ್ರಿ ಮಾಡುವುದನ್ನು ಮುಂದುವರಿಸುವುದಾಗಿ ಹೇಳಿದರು. ಮಿಮಿಕ್ರಿ ಮಾಡುವುದು ಒಂದು ಕಲೆ ಎಂದು ಹೇಳಿದ ಅವರು, ಅದನ್ನು ಸ್ವೀಕರಿಸುವ ಹೃದಯ ಇರಬೇಕು’ ಎಂದಿದ್ದಾರೆ.

‘ನಾನು ಮಿಮಿಕ್ರಿ ಮಾಡುತ್ತಲೇ ಇರುತ್ತೇನೆ. ಅದೊಂದು ಕಲಾ ಪ್ರಕಾರ. ಬೇಕಾದರೆ ಸಾವಿರ ಬಾರಿ ಮಾಡುತ್ತೇನೆ. ನನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ನನಗೆ ಎಲ್ಲ ಮೂಲಭೂತ ಹಕ್ಕುಗಳಿವೆ. ನೀವು ನನ್ನನ್ನು ಜೈಲಿಗೆ ಹಾಕಬಹುದು. ನಾನು ಹಿಂದೆ ಸರಿಯುವುದಿಲ್ಲ’ ಎಂದು ಬ್ಯಾನರ್ಜಿ ಸವಾಲು ಹಾಕಿದ್ದಾರೆ.

ಇದನ್ನೂ ಓದಿ; ಮಿಮಿಕ್ರಿ ಒಂದು ಕಲೆ; ಅದನ್ನು ಮೆಚ್ಚುವ ಮನಸ್ಸು ಇಲ್ಲದಿದ್ದರೆ ನಾನೇನು ಮಾಡಲಿ: ಕಲ್ಯಾಣ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...