Homeಮುಖಪುಟಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ರಿಪಬ್ಲಿಕ್ ಟಿವಿಯ ಟಿಆರ್‌ಪಿಗಾಗಿ ಒಂದು ಕಡೆ ತನ್ನ ಪ್ರೈಮ್ ಡಿಬೇಟ್‌ಗಳಲ್ಲಿ ಕಂಗನಾರನ್ನು ಕೂರಿಸಿಕೊಂಡು ಗಂಟೆಗಟ್ಟಲೆ ಚರ್ಚಿಸುವ, ಆಕೆಯನ್ನು ವೈಭವೀಕರಿಸುವ ಅರ್ನಾಬ್, ತನ್ನ ಮನಸ್ಸಿನಲ್ಲಿ ಆಕೆಯ ಬಗ್ಗೆ ಕೆಟ್ಟ ಭಾವನೆ ಹೊಂದಿದ್ದಾರೆ.

- Advertisement -
- Advertisement -

ಟಿಆರ್‌ಪಿ ಹಗರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಮತ್ತು BARC ಮಾಜಿ ಸಿಇಒ ಪಾರ್ಥೋ ದಾಸ್ ಗುಪ್ತಾ ನಡುವಿನ ವಾಟ್ಸಾಪ್‌ ಚಾಟ್‌ಗಳ ಸುಮಾರು 500 ಪುಟಗಳನ್ನು ಬಹಿರಂಗಗೊಳಿಸಿದ್ದಾರೆ ಎಂಬುದರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಅದರಲ್ಲಿ ಅರ್ನಾಬ್ ಗೋಸ್ವಾಮಿ ಬಾಲಿವುಡ್ ನಟಿ ಕಂಗನಾ ರಾಣಾವತ್ ಕುರಿತು ಅಶ್ಲೀಲವಾಗಿ ಮಾತನಾಡಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಒಬ್ಬ ಮಹಿಳೆಗೆ ತನ್ನದೇ ಖಾಸಗಿತನ ಹಕ್ಕಿದೆ, ತನಗನಿಸಿದ್ದನ್ನು ಮಾಡುವ ಅಧಿಕಾರವಿದೆ ಎಂಬುದನ್ನು ಮರೆತು ಅರ್ನಾಬ್ ಗೋಸ್ವಾಮಿ ಕೊಳಕಾಗಿ ಕಂಗನಾ ಕುರಿತು ಮಾತನಾಡಿದ್ದಾರೆ. ಒಂದು ಕಡೆ ತನ್ನ ಚಾನೆಲ್‌ಗೆ ಆಕೆಯನ್ನು ಕರೆಸಿ ದೇಶಪ್ರೇಮ, ರಾಷ್ಟ್ರಭಕ್ತಿಯ ಕುರಿತು ಉದ್ರೇಕಕಾರಿಯಾಗಿ ಮಾತನಾಡಿಸುವ ಅರ್ನಾಬ್ ಅದೇ ಸಮಯದಲ್ಲಿ ಆಕೆಯ ಕುರಿತು ಬಾರ್ಕ್ ಸಿಇಒ ಜೊತೆ ಅಶ್ಲೀಲವಾಗಿ ಮಾತನಾಡಿರುವುದು ನೆಟ್ಟಿಗರಲ್ಲಿ ಆಕ್ರೋಶ ಹುಟ್ಟಿಸಿದೆ.

BARC ಮಾಜಿ ಸಿಇಒ ಪಾರ್ಥೋ ದಾಸ್ ಗುಪ್ತಾ ಕಂಗಾನ ಕುರಿತು ಸಂಭಾಷಣೆ ಆರಂಭಿಸಿದ್ದು, ಆಕೆ ಬಾಲಿವುಡ್ ನಟ ಹೃತಿಕ್ ರೋಷನ್ ಕಡೆ ಆಕರ್ಷಿತಳಾಗುತ್ತಿದ್ದಾಳೆ ಎಂದರೆ ಅದಕ್ಕೆ ಹೌದೆಂದಿರುವ ಅರ್ನಾಬ್ ಅಶ್ಲೀಲವಾಗಿ ಮಾತಾಡಿದ್ದಾರೆ. ಮುಂದುವರೆದು ‘ಎಲ್ಲಾ ಮುಗಿದಿದೆ, ನನ್ನ ಪ್ರಕಾರ ಆಕೆ ಕೊನೆಯಾಗುತ್ತಾಳೆ’ ಎಂದು ದಾಸ್ ಗುಪ್ತಾ ಹೇಳಿದರೆ, ‘ಆಕೆ ತನ್ನ ಮಿತಿ ಮೀರಿ ತನ್ನ ಗೆರೆ ದಾಟುತ್ತಿದ್ದಾಳೆ’ ಎಂದು ಅರ್ನಾಬ್ ಹೇಳುತ್ತಾರೆ!. ‘ಜನಕ್ಕೆ ಆಕೆಯನ್ನು ಕಂಡರೆ ಭಯ’ ಎಂದು ದಾಸ್ ಗುಪ್ತಾ ಹೇಳಿದರೆ ‘ಆಕೆಯನ್ನು ಜನ ಬಾಯ್ಕಾಟ್ ಮಾಡುತ್ತಾರೆ’ ಎಂದು ಅರ್ನಾಬ್ ಹೇಳಿದ್ದಾರೆ!.

ರಿಪಬ್ಲಿಕ್ ಟಿವಿಯ ಟಿಆರ್‌ಪಿಗಾಗಿ ಒಂದು ಕಡೆ ತನ್ನ ಪ್ರೈಮ್ ಡಿಬೇಟ್‌ಗಳಲ್ಲಿ ಕಂಗನಾರನ್ನು ಕೂರಿಸಿಕೊಂಡು ಗಂಟೆಗಟ್ಟಲೆ ಚರ್ಚಿಸುವ, ಆಕೆಯನ್ನು ವೈಭವೀಕರಿಸುವ ಅರ್ನಾಬ್, ತನ್ನ ಮನಸ್ಸಿನಲ್ಲಿ ಆಕೆಯ ಬಗ್ಗೆ ಕೆಟ್ಟ ಭಾವನೆ ಹೊಂದಿದ್ದಾರೆ. ಅಷ್ಟು ಮಾತ್ರವಲ್ಲ ಆಕೆಯನ್ನು ಜನ ಮುಗಿಸುತ್ತಾರೆ, ಬಾಯ್ಕಾಟ್ ಮಾಡುತ್ತಾರೆ ಎನ್ನುವ ಮೂಲಕ ಆಕೆ ತುಳಿತಕ್ಕೊಳಕ್ಕಾದರೆ ತನಗೇನು ತೊಂದರೆಯಿಲ್ಲ ಎನ್ನುವಂತೆ ವರ್ತಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಮತ್ತು ವ್ಯಂಗ್ಯ ವ್ಯಕ್ತವಾಗಿದೆ.

ಅಲ್ಲದೆ 2019ರ ಫೆಬ್ರವರಿ ತಿಂಗಳಿನಲ್ಲಿ ಕಾಶ್ಮೀರದ ಪುಲ್ವಾಮ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯನ್ನು ಪತ್ರಕರ್ತ ಅರ್ನಾಬ್ ಗೋಸ್ವಾಮಿ ಸಂಭ್ರಮಿಸಿದ್ದ ಎಂಬ ಆಘಾತಕಾರಿ ಸಂಗತಿ ಹೊರಬಿದ್ದಿದೆ. ಆ ದಾಳಿಯಲ್ಲಿ 40ಕ್ಕೂ ಹೆಚ್ಚು ಭಾರತೀಯ ಯೋಧರು ಹುತಾತ್ಮರಾಗಿದ್ದರು. ಅಲ್ಲದೇ ತದನಂತರ ಭಾರತದ ಸೈನಿಕರು ನಡೆಸಿದ ಬಾಲಾಕೋಟ್ ದಾಳಿಯ ಬಗ್ಗೆಯೂ ಮೂರು ದಿನಗಳ ಮೊದಲೇ ಅರ್ನಾಬ್‌ಗೆ ಗೊತ್ತಿತ್ತು ಎಂಬ ವಿಷಯ ಲೀಕ್ ಆಗಿರುವ ವಾಟ್ಸಾಪ್ ಚಾಟ್‌ಗಳಿಂದ ತಿಳಿದುಬಂದಿದೆ.


ಇದನ್ನೂ ಓದಿ: ಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...