Homeಮುಖಪುಟಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ರಿಪಬ್ಲಿಕ್ ಟಿವಿಯ ಟಿಆರ್‌ಪಿಗಾಗಿ ಒಂದು ಕಡೆ ತನ್ನ ಪ್ರೈಮ್ ಡಿಬೇಟ್‌ಗಳಲ್ಲಿ ಕಂಗನಾರನ್ನು ಕೂರಿಸಿಕೊಂಡು ಗಂಟೆಗಟ್ಟಲೆ ಚರ್ಚಿಸುವ, ಆಕೆಯನ್ನು ವೈಭವೀಕರಿಸುವ ಅರ್ನಾಬ್, ತನ್ನ ಮನಸ್ಸಿನಲ್ಲಿ ಆಕೆಯ ಬಗ್ಗೆ ಕೆಟ್ಟ ಭಾವನೆ ಹೊಂದಿದ್ದಾರೆ.

- Advertisement -
- Advertisement -

ಟಿಆರ್‌ಪಿ ಹಗರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಮತ್ತು BARC ಮಾಜಿ ಸಿಇಒ ಪಾರ್ಥೋ ದಾಸ್ ಗುಪ್ತಾ ನಡುವಿನ ವಾಟ್ಸಾಪ್‌ ಚಾಟ್‌ಗಳ ಸುಮಾರು 500 ಪುಟಗಳನ್ನು ಬಹಿರಂಗಗೊಳಿಸಿದ್ದಾರೆ ಎಂಬುದರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಅದರಲ್ಲಿ ಅರ್ನಾಬ್ ಗೋಸ್ವಾಮಿ ಬಾಲಿವುಡ್ ನಟಿ ಕಂಗನಾ ರಾಣಾವತ್ ಕುರಿತು ಅಶ್ಲೀಲವಾಗಿ ಮಾತನಾಡಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಒಬ್ಬ ಮಹಿಳೆಗೆ ತನ್ನದೇ ಖಾಸಗಿತನ ಹಕ್ಕಿದೆ, ತನಗನಿಸಿದ್ದನ್ನು ಮಾಡುವ ಅಧಿಕಾರವಿದೆ ಎಂಬುದನ್ನು ಮರೆತು ಅರ್ನಾಬ್ ಗೋಸ್ವಾಮಿ ಕೊಳಕಾಗಿ ಕಂಗನಾ ಕುರಿತು ಮಾತನಾಡಿದ್ದಾರೆ. ಒಂದು ಕಡೆ ತನ್ನ ಚಾನೆಲ್‌ಗೆ ಆಕೆಯನ್ನು ಕರೆಸಿ ದೇಶಪ್ರೇಮ, ರಾಷ್ಟ್ರಭಕ್ತಿಯ ಕುರಿತು ಉದ್ರೇಕಕಾರಿಯಾಗಿ ಮಾತನಾಡಿಸುವ ಅರ್ನಾಬ್ ಅದೇ ಸಮಯದಲ್ಲಿ ಆಕೆಯ ಕುರಿತು ಬಾರ್ಕ್ ಸಿಇಒ ಜೊತೆ ಅಶ್ಲೀಲವಾಗಿ ಮಾತನಾಡಿರುವುದು ನೆಟ್ಟಿಗರಲ್ಲಿ ಆಕ್ರೋಶ ಹುಟ್ಟಿಸಿದೆ.

BARC ಮಾಜಿ ಸಿಇಒ ಪಾರ್ಥೋ ದಾಸ್ ಗುಪ್ತಾ ಕಂಗಾನ ಕುರಿತು ಸಂಭಾಷಣೆ ಆರಂಭಿಸಿದ್ದು, ಆಕೆ ಬಾಲಿವುಡ್ ನಟ ಹೃತಿಕ್ ರೋಷನ್ ಕಡೆ ಆಕರ್ಷಿತಳಾಗುತ್ತಿದ್ದಾಳೆ ಎಂದರೆ ಅದಕ್ಕೆ ಹೌದೆಂದಿರುವ ಅರ್ನಾಬ್ ಅಶ್ಲೀಲವಾಗಿ ಮಾತಾಡಿದ್ದಾರೆ. ಮುಂದುವರೆದು ‘ಎಲ್ಲಾ ಮುಗಿದಿದೆ, ನನ್ನ ಪ್ರಕಾರ ಆಕೆ ಕೊನೆಯಾಗುತ್ತಾಳೆ’ ಎಂದು ದಾಸ್ ಗುಪ್ತಾ ಹೇಳಿದರೆ, ‘ಆಕೆ ತನ್ನ ಮಿತಿ ಮೀರಿ ತನ್ನ ಗೆರೆ ದಾಟುತ್ತಿದ್ದಾಳೆ’ ಎಂದು ಅರ್ನಾಬ್ ಹೇಳುತ್ತಾರೆ!. ‘ಜನಕ್ಕೆ ಆಕೆಯನ್ನು ಕಂಡರೆ ಭಯ’ ಎಂದು ದಾಸ್ ಗುಪ್ತಾ ಹೇಳಿದರೆ ‘ಆಕೆಯನ್ನು ಜನ ಬಾಯ್ಕಾಟ್ ಮಾಡುತ್ತಾರೆ’ ಎಂದು ಅರ್ನಾಬ್ ಹೇಳಿದ್ದಾರೆ!.

ರಿಪಬ್ಲಿಕ್ ಟಿವಿಯ ಟಿಆರ್‌ಪಿಗಾಗಿ ಒಂದು ಕಡೆ ತನ್ನ ಪ್ರೈಮ್ ಡಿಬೇಟ್‌ಗಳಲ್ಲಿ ಕಂಗನಾರನ್ನು ಕೂರಿಸಿಕೊಂಡು ಗಂಟೆಗಟ್ಟಲೆ ಚರ್ಚಿಸುವ, ಆಕೆಯನ್ನು ವೈಭವೀಕರಿಸುವ ಅರ್ನಾಬ್, ತನ್ನ ಮನಸ್ಸಿನಲ್ಲಿ ಆಕೆಯ ಬಗ್ಗೆ ಕೆಟ್ಟ ಭಾವನೆ ಹೊಂದಿದ್ದಾರೆ. ಅಷ್ಟು ಮಾತ್ರವಲ್ಲ ಆಕೆಯನ್ನು ಜನ ಮುಗಿಸುತ್ತಾರೆ, ಬಾಯ್ಕಾಟ್ ಮಾಡುತ್ತಾರೆ ಎನ್ನುವ ಮೂಲಕ ಆಕೆ ತುಳಿತಕ್ಕೊಳಕ್ಕಾದರೆ ತನಗೇನು ತೊಂದರೆಯಿಲ್ಲ ಎನ್ನುವಂತೆ ವರ್ತಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಮತ್ತು ವ್ಯಂಗ್ಯ ವ್ಯಕ್ತವಾಗಿದೆ.

ಅಲ್ಲದೆ 2019ರ ಫೆಬ್ರವರಿ ತಿಂಗಳಿನಲ್ಲಿ ಕಾಶ್ಮೀರದ ಪುಲ್ವಾಮ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯನ್ನು ಪತ್ರಕರ್ತ ಅರ್ನಾಬ್ ಗೋಸ್ವಾಮಿ ಸಂಭ್ರಮಿಸಿದ್ದ ಎಂಬ ಆಘಾತಕಾರಿ ಸಂಗತಿ ಹೊರಬಿದ್ದಿದೆ. ಆ ದಾಳಿಯಲ್ಲಿ 40ಕ್ಕೂ ಹೆಚ್ಚು ಭಾರತೀಯ ಯೋಧರು ಹುತಾತ್ಮರಾಗಿದ್ದರು. ಅಲ್ಲದೇ ತದನಂತರ ಭಾರತದ ಸೈನಿಕರು ನಡೆಸಿದ ಬಾಲಾಕೋಟ್ ದಾಳಿಯ ಬಗ್ಗೆಯೂ ಮೂರು ದಿನಗಳ ಮೊದಲೇ ಅರ್ನಾಬ್‌ಗೆ ಗೊತ್ತಿತ್ತು ಎಂಬ ವಿಷಯ ಲೀಕ್ ಆಗಿರುವ ವಾಟ್ಸಾಪ್ ಚಾಟ್‌ಗಳಿಂದ ತಿಳಿದುಬಂದಿದೆ.


ಇದನ್ನೂ ಓದಿ: ಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...