Homeಮುಖಪುಟ‘ವಾಟ್ಸ್‌ಅಪ್‌‌ ಕಮ್ಯುನಿಟಿ’: ಈ ಹೊಸ ಫೀಚರ್‌‌ ಬಳಸುವುದು ಹೇಗೆ? ಏನಿದರ ವಿಶೇಷ?

‘ವಾಟ್ಸ್‌ಅಪ್‌‌ ಕಮ್ಯುನಿಟಿ’: ಈ ಹೊಸ ಫೀಚರ್‌‌ ಬಳಸುವುದು ಹೇಗೆ? ಏನಿದರ ವಿಶೇಷ?

- Advertisement -
- Advertisement -

ವಾಟ್ಸ್‌ ಅಪ್‌ ಬಳಕೆದಾರರು ಈಗಾಗಲೇ ತಮ್ಮ ಮೊಬೈಲ್‌ನಲ್ಲಿ ‘ವಾಟ್ಸ್‌ಅಪ್‌ ಕಮ್ಯುನಿಟಿ’ ಎಂಬ ಹೊಸ ಫೀಚರ್‌ ಗಮನಿಸಿರಬಹುದು ಅಥವಾ ‘ಅನೌನ್ಸ್‌ಮೆಂಟ್‌’ (ಘೋಷಣೆ) ಮಾಡುತ್ತಿರುವ ಚಿಹ್ನೆಯನ್ನು ಒಳಗೊಂಡ ಗ್ರೂಪೊಂದರಲ್ಲಿ ಯಾರೋ ಒಬ್ಬರು ಸಂದೇಶಗಳನ್ನು ಕಳುಹಿಸುತ್ತಿರುವುದನ್ನು ನೋಡುತ್ತಿರಬಹುದು. ಹೌದು ‘ವಾಟ್ಸ್‌ಅಪ್‌’, ‘ಫೇಸ್‌ಬುಕ್‌’ ಒಡೆತನವನ್ನು ಹೊಂದಿರುವ ‘ಮೆಟಾ’ ಸಂಸ್ಥೆ- ‘ವಾಟ್ಸ್‌ಅಪ್‌ ಕಮ್ಯುನಿಟಿ’ ಎಂಬ ಹೊಸ ಫೀಚರ್‌ಅನ್ನು ಬಳಕೆದಾರರಿಗೆ ಪರಿಚಯಿಸಿದೆ.

‘ವಾಟ್ಸ್‌ಅಪ್‌ ಕಮ್ಯುನಿಟಿ’ ಎಂಬುದು ವಾಟ್ಸ್‌ಅಪ್‌ ರೂಪಿಸಿರುವ ಹೊಸ ಪ್ರಯೋಗವಾಗಿದೆ. ಒಂದು ವಿಚಾರಕ್ಕೆ ಸಂಬಂಧಿಸಿದ ವಾಟ್ಸ್‌ಅಪ್‌ ಗುಂಪುಗಳನ್ನು ಒಗ್ಗೂಡಿಸಲು ಇದು ಸೂಕ್ತವಾಗಬಹುದು. ವಾಟ್ಸ್‌ಅಪ್‌ ಗ್ರೂಪ್‌ಗಳ ಸದಸ್ಯರೊಂದಿಗೆ ಅಡ್ಮಿನ್‌‌ ಸುಲಭವಾಗಿ ಸಂವಹಿಸಲು ಸಾಧ್ಯವಾಗುತ್ತದೆ. 20 ವಾಟ್ಸ್‌ಅಪ್‌ ಗ್ರೂಪ್‌ಗಳನ್ನು ಒಂದೇ ವೇದಿಕೆಯಡಿ ತರಬಹುದಾದ ಅವಕಾಶವೇ ‘ವಾಟ್ಸ್‌ಅಪ್‌ ಕಮ್ಯುನಿಟಿ’.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಂಪುಗಳು ಮತ್ತು ಕಮ್ಯುನಿಟಿ ನಡುವಿನ ಪ್ರಮುಖ ವ್ಯತ್ಯಾಸವೆಂದರೆ ಅವುಗಳ ಗಾತ್ರ. ‘ಬೀಬಮ್‌’ ವೆಬ್‌ಸೈಟ್‌ ಪ್ರಕಾರ, “ಸದ್ಯಕ್ಕೆ ನೀವು ಒಂದು ವಾಟ್ಸ್‌ಅಪ್‌‌ ಗುಂಪಿಗೆ 512 ಮಂದಿಯನ್ನು ಆಹ್ವಾನಿಸಬಹುದು. ಆದಾಗ್ಯೂ ಈ ಮಿತಿಯನ್ನು ಮುಂಬರುವ ದಿನಗಳಲ್ಲಿ 1,024 ಮಂದಿಗೆ ಹೆಚ್ಚಿಸಲು ಸಾಧ್ಯತೆ ಇದೆ. ಮತ್ತೊಂದೆಡೆ, ಒಂದೇ ವಾಟ್ಸ್‌ಅಪ್‌ ಕಮ್ಯುನಿಟಿಯಲ್ಲಿ ಮುಂದಿನ ದಿನಗಳಲ್ಲಿ 21 ಗ್ರೂಪ್‌ಗಳನ್ನು ಸೇರಿಸಬಹುದು. ಲೆಕ್ಕ ಹಾಕಿದರೆ ಒಂದು ಕಮ್ಯುನಿಟಿಯಲ್ಲಿ 21,504 (21 x 1,024) ಬಳಕೆದಾರರು ಇರಲು ಸಾಧ್ಯವಾಗಬಹುದು.”

ಕಮ್ಯುನಿಟಿಯನ್ನು ರಚಿಸುವುದು ಹೇಗೆ?

ವಾಟ್ಸ್‌ಅಪ್‌ ಕಮ್ಯುನಿಟಿಯನ್ನು ರಚಿಸಲು, ಬಳಕೆದಾರರು ‘ಕಮ್ಯುನಿಟಿ’ ಟ್ಯಾಬ್ ಅನ್ನು ಕ್ಲಿಕ್ ಮಾಡಬೇಕು. (ಈ ಟ್ಯಾಬ್‌ ನಿಮ್ಮ ಮೊಬೈಲ್‌ನ ಎಡಭಾಗದ ಮೇಲ್ಭಾಗದಲ್ಲಿ ಇರುತ್ತದೆ.) ‘ನ್ಯೂ ಕಮ್ಯನಿಟಿ’ ಬಟನ್ ಅನ್ನು ಟ್ಯಾಪ್ ಮಾಡಬೇಕು. ನಿಮ್ಮ ಕಮ್ಯುನಿಟಿಯ ಪ್ರೊಫೈಲ್ ಚಿತ್ರ ಹಾಕಬಹುದು. ನಿಮ್ಮ ಕಮ್ಯುನಿಟಿಗೆ ಹೆಸರನ್ನು ನೀಡಬೇಕು. ಕಮ್ಯುನಿಟಿ ಡಿಸ್‌ಕ್ರಿಪ್ಶನ್‌ನಲ್ಲಿ ನೀವು ಮಾಡುತ್ತಿರುವ ಕಮ್ಯುನಿಟಿಯ ಗುರಿ, ಧ್ಯೇಯೋದ್ದೇಶವನ್ನು ಬರೆಯಬೇಕು. ನಂತರ ಬಾಣದ ಗುರುತನ್ನು ಕ್ಲಿಕ್‌ ಮಾಡಬೇಕು. ನಂತರ ಕಮ್ಯನಿಟಿ ವಿಂಡೋ ತೆರೆದುಕೊಳ್ಳುತ್ತದೆ. ಅಲ್ಲಿ ಹೊಸ ಗ್ರೂಪ್‌ಗಳನ್ನು ರಚಿಸಬಹುದು. ಅಥವಾ ಈಗಾಗಲೇ ನೀವು ಅಡ್ಮಿನ್ ಆಗಿರುವ ಗ್ರೂಪ್‌ಗಳನ್ನು ಅದರಲ್ಲಿ ಸೇರಿಸಬಹುದು. ಆನಂತರ ಕೆಳಗಿನ ರೈಟ್‌ ಬಟನ್‌ ಒತ್ತಿದರೆ ನಿಮ್ಮ ಕಮ್ಯುನಿಟಿ ಗ್ರೂಪ್ ರಚನೆಯಾಗುತ್ತದೆ. ಕಮ್ಯನಿಟಿ ಗ್ರೂಪ್ ರಚನೆಯಾದ ಬಳಿಕ ಅಲ್ಲಿ ನಿಮ್ಮ ಸಂದೇಶವನ್ನು ಹಾಕಬಹುದು ಅಂದರೆ ಕಮ್ಯುನಿಟಿ ಅಡ್ಮಿನ್‌ ತಮ್ಮ ಅನೌನ್ಸ್‌ಮೆಂಟ್‌ಗಳನ್ನು (ಘೋಷಣೆಗಳನ್ನು) ಕಳುಹಿಸಬಹುದು.

whatsapp, whatsapp communities, whatsapp tips and tricks,

ಅನೌನ್ಸ್‌ಮೆಂಟ್‌: ಕಮ್ಯುನಿಟಿ ಅಡ್ಮಿನ್‌ ಇಲ್ಲಿನ ಎಲ್ಲಾ ಪ್ರತ್ಯೇಕ ಗುಂಪುಗಳಿಗೆ ಸಂದೇಶ ಕಳುಹಿಸಬಹುದು. ಎಲ್ಲಾ ಗುಂಪಿನಲ್ಲಿರುವ ಎಲ್ಲ ಸದಸ್ಯರಿಗೆ ಏಕಕಾಲದಲ್ಲಿ ಸಂದೇಶ ಕಳುಹಿಸಲು ಸಾಧ್ಯವಾಗುತ್ತದೆ. ಮೀಡಿಯಾ ಫೈಲ್‌ಗಳು, ಡಾಕ್ಯುಮೆಂಟ್‌ಗಳು ಮತ್ತು ಧ್ವನಿ ಸಂದೇಶಗಳನ್ನು ರವಾನಿಸಬಹುದು. ಕಮ್ಯುನಿಟಿ ಗ್ರೂಪ್‌ಗಳು ಒಂದು ರೀತಿಯಲ್ಲಿ ಬ್ರಾಂಡ್‌ಕಾಸ್ಟ್‌ ರೀತಿಯಲ್ಲಿ ಕೆಲಸ ನಿರ್ವಹಿಸುತ್ತವೆ. ಒಬ್ಬ ವ್ಯಕ್ತಿಯು ಒಮ್ಮೆಲೇ ಹತ್ತಾರು ಜನಕ್ಕೆ ಸಂದೇಶ ಕಳುಹಿಸುತ್ತಿದ್ದ ರೀತಿಯಲ್ಲಿಯೇ ಒಬ್ಬ ಅಡ್ಮಿನ್ ಈಗ ಇಪ್ಪತ್ತು ಗ್ರೂಪ್‌ಗಳಲ್ಲಿನ ವಾಟ್ಸ್‌ಅಪ್‌ ಬಳಕೆದಾರರಿಗೆ ಒಮ್ಮೆಲೆ ಪ್ರತ್ಯೇಕ ಸಂದೇಶಗಳನ್ನು ಕಳಹಿಸಬಹುದಾಗಿದೆ. ಆದರೆ ಸಂದೇಶವು ನೀವು ರಚಿಸಿರುವ ಕಮ್ಯುನಿಟಿಯ ಹೆಸರಿನಲ್ಲಿ ರವಾನೆಯಾಗುತ್ತದೆ. ಉದಾಹರಣೆಗೆ- ನೀವು ‘ಸೆಕ್ಯುಲರ್‌’ ಎಂಬ ಕಮ್ಯುನಿಟಿಯನ್ನು ರಚಿಸಿ, ಇದೇ ಆಲೋಚನೆಯ 20 ಗುಂಪುಗಳನ್ನು ಸೇರಿಸಿದ್ದೀರಿ ಎಂದುಕೊಳ್ಳಿ. ಅಡ್ಮಿನ್ ಆದ ನೀವು ‘ಸೆಕ್ಯುಲರ್‌’ ಕಮ್ಯುನಿಟಿಯಲ್ಲಿ ಒಂದು ‘ಅನೌನ್ಸ್‌ಮೆಂಟ್‌’ (ಸಂದೇಶ) ಹಾಕಿದರೆ, ‘ಸೆಕ್ಯುಲರ್‌’ ಕಮ್ಯುನಿಟಿಯಲ್ಲಿರುವ ಪ್ರತಿ ಬಳಕೆದಾರನಿಗೆ ಪ್ರತ್ಯೇಕವಾಗಿ ಸಂದೇಶ ರವಾನೆಯಾಗುತ್ತದೆ. ಆದರೆ ನಿಮ್ಮ ಸಂದೇಶ, ನಿಮ್ಮ ‘ಸೆಕ್ಯುಲರ್‌’ ಕಮ್ಯುನಿಟಿಯಲ್ಲಿನ ಇಪ್ಪತ್ತು ಗ್ರೂಪ್‌ಗಳಿಗೆ ಪ್ರತ್ಯೇಕವಾಗಿ ರವಾನೆಯಾಗುವುದಿಲ್ಲ. ‘ಸೆಕ್ಯುಲರ್‌‌’ ಹೆಸರಿನ ‘ಕಮ್ಯುನಿಟಿ’ ಗ್ರೂಪ್‌ ಮೆಸೇಜ್‌ ಇದಾಗಿರುತ್ತದೆ.

ಸದಸ್ಯರನ್ನು ಆಹ್ವಾನಿಸಹುದು: ಅಡ್ಮಿನ್ ಆದವರು, ಇತರ ಜನರನ್ನು ಕಮ್ಯುನಿಟಿಗೆ ಸೇರಲು ಆಹ್ವಾನಿಸಹುದು. ಅದಕ್ಕಾಗಿ ನೀವು ಕಮ್ಯುನಿಟಿಯ ಲಿಂಕ್ ಅನ್ನು ಸಹ ಹಂಚಿಕೊಳ್ಳಬಹುದು. ಬಳಕೆದಾರರು ನಂತರ ಕಮ್ಯುನಿಟಿಯ ಭಾಗವಾಗಲು ಲಿಂಕ್ ಅನ್ನು ಅನುಸರಿಸಬಹುದು. ಆದರೆ ಕಮ್ಯುನಿಟಿಯಲ್ಲಿರುವ ಗ್ರೂಪ್‌ಗಳಲ್ಲಿ ಒಬ್ಬ ವ್ಯಕ್ತಿ ಸೇರಬೇಕೆಂದರೆ, ಆ ಗ್ರೂಪ್‌ನ ಅಡ್ಮಿನ್‌ಗೆ ರಿಕ್ವೆಸ್ಟ್‌ ಕಳುಹಿಸಬೇಕಾಗುತ್ತದೆ. ಗ್ರೂಪ್‌ಗಳ ಅಡ್ಮಿನ್‌ಗಳು ಅನುಮತಿಸಿದರೆ ಮಾತ್ರ ಗ್ರೂಪ್‌ನೊಳಗೆ ಪ್ರವೇಶಿಸಬಹುದು.

ಇದನ್ನೂ ಓದಿರಿ: ಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

ಕಮ್ಯುನಿಟಿಗೆ ಸಂಬಂಧಪಡದವರು ಯಾರಾದರೂ ಇದ್ದರೆ ಅವರನ್ನು ಸುಲಭವಾಗಿ ರಿಮೂವ್‌ ಮಾಡಬಹುದು. ಕಮ್ಯುನಿಟಿಯಿಂದ ರಿಮೂವ್ ಮಾಡಿದರೂ ನಿರ್ದಿಷ್ಟ ಗ್ರೂಪ್‌ನಲ್ಲಿರುವ ಆ ವ್ಯಕ್ತಿ, ಆ ಗ್ರೂಪ್‌ನಲ್ಲಿ ಸದಸ್ಯನಾಗಿಯೇ ಇರುತ್ತಾನೆ. ಕಮ್ಯುನಿಟಿಯಿಂದ ನಿರ್ದಿಷ್ಟ ಬಳಕೆದಾರರನ್ನು ರಿಮೂವ್ ಮಾಡಲು ಕಮ್ಯುನಿಟಿಯ ಮುಖ್ಯ ಪುಟಕ್ಕೆ ಹೋಗಬೇಕು. ಸದಸ್ಯರ ಪಟ್ಟಿಯನ್ನು ವೀಕ್ಷಿಸಬೇಕು. ನೀವು ಎಲ್ಲಾ ಗುಂಪುಗಳ ಎಲ್ಲಾ ಸದಸ್ಯರ ಪಟ್ಟಿಯನ್ನು ಒಂದೇ ಕಡೆ ನೋಡುತ್ತೀರಿ. ಕಮ್ಯುನಿಟಿಯಿಂದ ನಿರ್ದಿಷ್ಟ ವ್ಯಕ್ತಿಯನ್ನು ತೆಗೆದುಹಾಕಬಹುದು. ಇಷ್ಟವಿಲ್ಲದವರು ಕಮ್ಯುನಿಟಿಯಿಂದ ಲೆಪ್ಟ್ ಕೂಡ ಆಗಲೂ ಅವಕಾಶವಿದೆ.

ವಾಟ್ಸ್‌ಅಪ್‌ನ ಈ ಪ್ರಯೋಗದಿಂದ ಸುಲಭವಾಗಿ ಸಾವಿರಾರು ಜನಕ್ಕೆ ಸಂದೇಶಗಳನ್ನು ಒಮ್ಮೆಲೆ ಕಳುಹಿಸಲು ಅವಕಾಶ ದೊರಕಿದೆ. ಇದನ್ನು ಸದುದ್ದೇಶಕ್ಕೆ ಬಳಸುವವರು ಇರುವಂತೆಯೇ ದುರುದ್ದೇಶಕ್ಕೆ ಬಳಸುವವರೂ ಇರುತ್ತಾರೆ. ಒಮ್ಮೆಲೇ ಫೇಕ್‌ನ್ಯೂಸ್‌ಗಳನ್ನು ಹರಡಲು ಅಥವಾ ಯಾವುದೋ ಒಂದು ಪಕ್ಷ, ಸಿದ್ಧಾಂತರ ಪರ- ವಿರುದ್ಧ ಪ್ರಚಾರ ಮಾಡಲು ಈ ‘ಕಮ್ಯನಿಟಿ’ ಫೀಚರ್‌ ಬಳಕೆಯಾಗುವ ಆತಂಕವಂತೂ ಇದ್ದೇ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...