Homeಮುಖಪುಟ‘ವಾಟ್ಸ್‌ಅಪ್‌‌ ಕಮ್ಯುನಿಟಿ’: ಈ ಹೊಸ ಫೀಚರ್‌‌ ಬಳಸುವುದು ಹೇಗೆ? ಏನಿದರ ವಿಶೇಷ?

‘ವಾಟ್ಸ್‌ಅಪ್‌‌ ಕಮ್ಯುನಿಟಿ’: ಈ ಹೊಸ ಫೀಚರ್‌‌ ಬಳಸುವುದು ಹೇಗೆ? ಏನಿದರ ವಿಶೇಷ?

- Advertisement -
- Advertisement -

ವಾಟ್ಸ್‌ ಅಪ್‌ ಬಳಕೆದಾರರು ಈಗಾಗಲೇ ತಮ್ಮ ಮೊಬೈಲ್‌ನಲ್ಲಿ ‘ವಾಟ್ಸ್‌ಅಪ್‌ ಕಮ್ಯುನಿಟಿ’ ಎಂಬ ಹೊಸ ಫೀಚರ್‌ ಗಮನಿಸಿರಬಹುದು ಅಥವಾ ‘ಅನೌನ್ಸ್‌ಮೆಂಟ್‌’ (ಘೋಷಣೆ) ಮಾಡುತ್ತಿರುವ ಚಿಹ್ನೆಯನ್ನು ಒಳಗೊಂಡ ಗ್ರೂಪೊಂದರಲ್ಲಿ ಯಾರೋ ಒಬ್ಬರು ಸಂದೇಶಗಳನ್ನು ಕಳುಹಿಸುತ್ತಿರುವುದನ್ನು ನೋಡುತ್ತಿರಬಹುದು. ಹೌದು ‘ವಾಟ್ಸ್‌ಅಪ್‌’, ‘ಫೇಸ್‌ಬುಕ್‌’ ಒಡೆತನವನ್ನು ಹೊಂದಿರುವ ‘ಮೆಟಾ’ ಸಂಸ್ಥೆ- ‘ವಾಟ್ಸ್‌ಅಪ್‌ ಕಮ್ಯುನಿಟಿ’ ಎಂಬ ಹೊಸ ಫೀಚರ್‌ಅನ್ನು ಬಳಕೆದಾರರಿಗೆ ಪರಿಚಯಿಸಿದೆ.

‘ವಾಟ್ಸ್‌ಅಪ್‌ ಕಮ್ಯುನಿಟಿ’ ಎಂಬುದು ವಾಟ್ಸ್‌ಅಪ್‌ ರೂಪಿಸಿರುವ ಹೊಸ ಪ್ರಯೋಗವಾಗಿದೆ. ಒಂದು ವಿಚಾರಕ್ಕೆ ಸಂಬಂಧಿಸಿದ ವಾಟ್ಸ್‌ಅಪ್‌ ಗುಂಪುಗಳನ್ನು ಒಗ್ಗೂಡಿಸಲು ಇದು ಸೂಕ್ತವಾಗಬಹುದು. ವಾಟ್ಸ್‌ಅಪ್‌ ಗ್ರೂಪ್‌ಗಳ ಸದಸ್ಯರೊಂದಿಗೆ ಅಡ್ಮಿನ್‌‌ ಸುಲಭವಾಗಿ ಸಂವಹಿಸಲು ಸಾಧ್ಯವಾಗುತ್ತದೆ. 20 ವಾಟ್ಸ್‌ಅಪ್‌ ಗ್ರೂಪ್‌ಗಳನ್ನು ಒಂದೇ ವೇದಿಕೆಯಡಿ ತರಬಹುದಾದ ಅವಕಾಶವೇ ‘ವಾಟ್ಸ್‌ಅಪ್‌ ಕಮ್ಯುನಿಟಿ’.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಂಪುಗಳು ಮತ್ತು ಕಮ್ಯುನಿಟಿ ನಡುವಿನ ಪ್ರಮುಖ ವ್ಯತ್ಯಾಸವೆಂದರೆ ಅವುಗಳ ಗಾತ್ರ. ‘ಬೀಬಮ್‌’ ವೆಬ್‌ಸೈಟ್‌ ಪ್ರಕಾರ, “ಸದ್ಯಕ್ಕೆ ನೀವು ಒಂದು ವಾಟ್ಸ್‌ಅಪ್‌‌ ಗುಂಪಿಗೆ 512 ಮಂದಿಯನ್ನು ಆಹ್ವಾನಿಸಬಹುದು. ಆದಾಗ್ಯೂ ಈ ಮಿತಿಯನ್ನು ಮುಂಬರುವ ದಿನಗಳಲ್ಲಿ 1,024 ಮಂದಿಗೆ ಹೆಚ್ಚಿಸಲು ಸಾಧ್ಯತೆ ಇದೆ. ಮತ್ತೊಂದೆಡೆ, ಒಂದೇ ವಾಟ್ಸ್‌ಅಪ್‌ ಕಮ್ಯುನಿಟಿಯಲ್ಲಿ ಮುಂದಿನ ದಿನಗಳಲ್ಲಿ 21 ಗ್ರೂಪ್‌ಗಳನ್ನು ಸೇರಿಸಬಹುದು. ಲೆಕ್ಕ ಹಾಕಿದರೆ ಒಂದು ಕಮ್ಯುನಿಟಿಯಲ್ಲಿ 21,504 (21 x 1,024) ಬಳಕೆದಾರರು ಇರಲು ಸಾಧ್ಯವಾಗಬಹುದು.”

ಕಮ್ಯುನಿಟಿಯನ್ನು ರಚಿಸುವುದು ಹೇಗೆ?

ವಾಟ್ಸ್‌ಅಪ್‌ ಕಮ್ಯುನಿಟಿಯನ್ನು ರಚಿಸಲು, ಬಳಕೆದಾರರು ‘ಕಮ್ಯುನಿಟಿ’ ಟ್ಯಾಬ್ ಅನ್ನು ಕ್ಲಿಕ್ ಮಾಡಬೇಕು. (ಈ ಟ್ಯಾಬ್‌ ನಿಮ್ಮ ಮೊಬೈಲ್‌ನ ಎಡಭಾಗದ ಮೇಲ್ಭಾಗದಲ್ಲಿ ಇರುತ್ತದೆ.) ‘ನ್ಯೂ ಕಮ್ಯನಿಟಿ’ ಬಟನ್ ಅನ್ನು ಟ್ಯಾಪ್ ಮಾಡಬೇಕು. ನಿಮ್ಮ ಕಮ್ಯುನಿಟಿಯ ಪ್ರೊಫೈಲ್ ಚಿತ್ರ ಹಾಕಬಹುದು. ನಿಮ್ಮ ಕಮ್ಯುನಿಟಿಗೆ ಹೆಸರನ್ನು ನೀಡಬೇಕು. ಕಮ್ಯುನಿಟಿ ಡಿಸ್‌ಕ್ರಿಪ್ಶನ್‌ನಲ್ಲಿ ನೀವು ಮಾಡುತ್ತಿರುವ ಕಮ್ಯುನಿಟಿಯ ಗುರಿ, ಧ್ಯೇಯೋದ್ದೇಶವನ್ನು ಬರೆಯಬೇಕು. ನಂತರ ಬಾಣದ ಗುರುತನ್ನು ಕ್ಲಿಕ್‌ ಮಾಡಬೇಕು. ನಂತರ ಕಮ್ಯನಿಟಿ ವಿಂಡೋ ತೆರೆದುಕೊಳ್ಳುತ್ತದೆ. ಅಲ್ಲಿ ಹೊಸ ಗ್ರೂಪ್‌ಗಳನ್ನು ರಚಿಸಬಹುದು. ಅಥವಾ ಈಗಾಗಲೇ ನೀವು ಅಡ್ಮಿನ್ ಆಗಿರುವ ಗ್ರೂಪ್‌ಗಳನ್ನು ಅದರಲ್ಲಿ ಸೇರಿಸಬಹುದು. ಆನಂತರ ಕೆಳಗಿನ ರೈಟ್‌ ಬಟನ್‌ ಒತ್ತಿದರೆ ನಿಮ್ಮ ಕಮ್ಯುನಿಟಿ ಗ್ರೂಪ್ ರಚನೆಯಾಗುತ್ತದೆ. ಕಮ್ಯನಿಟಿ ಗ್ರೂಪ್ ರಚನೆಯಾದ ಬಳಿಕ ಅಲ್ಲಿ ನಿಮ್ಮ ಸಂದೇಶವನ್ನು ಹಾಕಬಹುದು ಅಂದರೆ ಕಮ್ಯುನಿಟಿ ಅಡ್ಮಿನ್‌ ತಮ್ಮ ಅನೌನ್ಸ್‌ಮೆಂಟ್‌ಗಳನ್ನು (ಘೋಷಣೆಗಳನ್ನು) ಕಳುಹಿಸಬಹುದು.

whatsapp, whatsapp communities, whatsapp tips and tricks,

ಅನೌನ್ಸ್‌ಮೆಂಟ್‌: ಕಮ್ಯುನಿಟಿ ಅಡ್ಮಿನ್‌ ಇಲ್ಲಿನ ಎಲ್ಲಾ ಪ್ರತ್ಯೇಕ ಗುಂಪುಗಳಿಗೆ ಸಂದೇಶ ಕಳುಹಿಸಬಹುದು. ಎಲ್ಲಾ ಗುಂಪಿನಲ್ಲಿರುವ ಎಲ್ಲ ಸದಸ್ಯರಿಗೆ ಏಕಕಾಲದಲ್ಲಿ ಸಂದೇಶ ಕಳುಹಿಸಲು ಸಾಧ್ಯವಾಗುತ್ತದೆ. ಮೀಡಿಯಾ ಫೈಲ್‌ಗಳು, ಡಾಕ್ಯುಮೆಂಟ್‌ಗಳು ಮತ್ತು ಧ್ವನಿ ಸಂದೇಶಗಳನ್ನು ರವಾನಿಸಬಹುದು. ಕಮ್ಯುನಿಟಿ ಗ್ರೂಪ್‌ಗಳು ಒಂದು ರೀತಿಯಲ್ಲಿ ಬ್ರಾಂಡ್‌ಕಾಸ್ಟ್‌ ರೀತಿಯಲ್ಲಿ ಕೆಲಸ ನಿರ್ವಹಿಸುತ್ತವೆ. ಒಬ್ಬ ವ್ಯಕ್ತಿಯು ಒಮ್ಮೆಲೇ ಹತ್ತಾರು ಜನಕ್ಕೆ ಸಂದೇಶ ಕಳುಹಿಸುತ್ತಿದ್ದ ರೀತಿಯಲ್ಲಿಯೇ ಒಬ್ಬ ಅಡ್ಮಿನ್ ಈಗ ಇಪ್ಪತ್ತು ಗ್ರೂಪ್‌ಗಳಲ್ಲಿನ ವಾಟ್ಸ್‌ಅಪ್‌ ಬಳಕೆದಾರರಿಗೆ ಒಮ್ಮೆಲೆ ಪ್ರತ್ಯೇಕ ಸಂದೇಶಗಳನ್ನು ಕಳಹಿಸಬಹುದಾಗಿದೆ. ಆದರೆ ಸಂದೇಶವು ನೀವು ರಚಿಸಿರುವ ಕಮ್ಯುನಿಟಿಯ ಹೆಸರಿನಲ್ಲಿ ರವಾನೆಯಾಗುತ್ತದೆ. ಉದಾಹರಣೆಗೆ- ನೀವು ‘ಸೆಕ್ಯುಲರ್‌’ ಎಂಬ ಕಮ್ಯುನಿಟಿಯನ್ನು ರಚಿಸಿ, ಇದೇ ಆಲೋಚನೆಯ 20 ಗುಂಪುಗಳನ್ನು ಸೇರಿಸಿದ್ದೀರಿ ಎಂದುಕೊಳ್ಳಿ. ಅಡ್ಮಿನ್ ಆದ ನೀವು ‘ಸೆಕ್ಯುಲರ್‌’ ಕಮ್ಯುನಿಟಿಯಲ್ಲಿ ಒಂದು ‘ಅನೌನ್ಸ್‌ಮೆಂಟ್‌’ (ಸಂದೇಶ) ಹಾಕಿದರೆ, ‘ಸೆಕ್ಯುಲರ್‌’ ಕಮ್ಯುನಿಟಿಯಲ್ಲಿರುವ ಪ್ರತಿ ಬಳಕೆದಾರನಿಗೆ ಪ್ರತ್ಯೇಕವಾಗಿ ಸಂದೇಶ ರವಾನೆಯಾಗುತ್ತದೆ. ಆದರೆ ನಿಮ್ಮ ಸಂದೇಶ, ನಿಮ್ಮ ‘ಸೆಕ್ಯುಲರ್‌’ ಕಮ್ಯುನಿಟಿಯಲ್ಲಿನ ಇಪ್ಪತ್ತು ಗ್ರೂಪ್‌ಗಳಿಗೆ ಪ್ರತ್ಯೇಕವಾಗಿ ರವಾನೆಯಾಗುವುದಿಲ್ಲ. ‘ಸೆಕ್ಯುಲರ್‌‌’ ಹೆಸರಿನ ‘ಕಮ್ಯುನಿಟಿ’ ಗ್ರೂಪ್‌ ಮೆಸೇಜ್‌ ಇದಾಗಿರುತ್ತದೆ.

ಸದಸ್ಯರನ್ನು ಆಹ್ವಾನಿಸಹುದು: ಅಡ್ಮಿನ್ ಆದವರು, ಇತರ ಜನರನ್ನು ಕಮ್ಯುನಿಟಿಗೆ ಸೇರಲು ಆಹ್ವಾನಿಸಹುದು. ಅದಕ್ಕಾಗಿ ನೀವು ಕಮ್ಯುನಿಟಿಯ ಲಿಂಕ್ ಅನ್ನು ಸಹ ಹಂಚಿಕೊಳ್ಳಬಹುದು. ಬಳಕೆದಾರರು ನಂತರ ಕಮ್ಯುನಿಟಿಯ ಭಾಗವಾಗಲು ಲಿಂಕ್ ಅನ್ನು ಅನುಸರಿಸಬಹುದು. ಆದರೆ ಕಮ್ಯುನಿಟಿಯಲ್ಲಿರುವ ಗ್ರೂಪ್‌ಗಳಲ್ಲಿ ಒಬ್ಬ ವ್ಯಕ್ತಿ ಸೇರಬೇಕೆಂದರೆ, ಆ ಗ್ರೂಪ್‌ನ ಅಡ್ಮಿನ್‌ಗೆ ರಿಕ್ವೆಸ್ಟ್‌ ಕಳುಹಿಸಬೇಕಾಗುತ್ತದೆ. ಗ್ರೂಪ್‌ಗಳ ಅಡ್ಮಿನ್‌ಗಳು ಅನುಮತಿಸಿದರೆ ಮಾತ್ರ ಗ್ರೂಪ್‌ನೊಳಗೆ ಪ್ರವೇಶಿಸಬಹುದು.

ಇದನ್ನೂ ಓದಿರಿ: ಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

ಕಮ್ಯುನಿಟಿಗೆ ಸಂಬಂಧಪಡದವರು ಯಾರಾದರೂ ಇದ್ದರೆ ಅವರನ್ನು ಸುಲಭವಾಗಿ ರಿಮೂವ್‌ ಮಾಡಬಹುದು. ಕಮ್ಯುನಿಟಿಯಿಂದ ರಿಮೂವ್ ಮಾಡಿದರೂ ನಿರ್ದಿಷ್ಟ ಗ್ರೂಪ್‌ನಲ್ಲಿರುವ ಆ ವ್ಯಕ್ತಿ, ಆ ಗ್ರೂಪ್‌ನಲ್ಲಿ ಸದಸ್ಯನಾಗಿಯೇ ಇರುತ್ತಾನೆ. ಕಮ್ಯುನಿಟಿಯಿಂದ ನಿರ್ದಿಷ್ಟ ಬಳಕೆದಾರರನ್ನು ರಿಮೂವ್ ಮಾಡಲು ಕಮ್ಯುನಿಟಿಯ ಮುಖ್ಯ ಪುಟಕ್ಕೆ ಹೋಗಬೇಕು. ಸದಸ್ಯರ ಪಟ್ಟಿಯನ್ನು ವೀಕ್ಷಿಸಬೇಕು. ನೀವು ಎಲ್ಲಾ ಗುಂಪುಗಳ ಎಲ್ಲಾ ಸದಸ್ಯರ ಪಟ್ಟಿಯನ್ನು ಒಂದೇ ಕಡೆ ನೋಡುತ್ತೀರಿ. ಕಮ್ಯುನಿಟಿಯಿಂದ ನಿರ್ದಿಷ್ಟ ವ್ಯಕ್ತಿಯನ್ನು ತೆಗೆದುಹಾಕಬಹುದು. ಇಷ್ಟವಿಲ್ಲದವರು ಕಮ್ಯುನಿಟಿಯಿಂದ ಲೆಪ್ಟ್ ಕೂಡ ಆಗಲೂ ಅವಕಾಶವಿದೆ.

ವಾಟ್ಸ್‌ಅಪ್‌ನ ಈ ಪ್ರಯೋಗದಿಂದ ಸುಲಭವಾಗಿ ಸಾವಿರಾರು ಜನಕ್ಕೆ ಸಂದೇಶಗಳನ್ನು ಒಮ್ಮೆಲೆ ಕಳುಹಿಸಲು ಅವಕಾಶ ದೊರಕಿದೆ. ಇದನ್ನು ಸದುದ್ದೇಶಕ್ಕೆ ಬಳಸುವವರು ಇರುವಂತೆಯೇ ದುರುದ್ದೇಶಕ್ಕೆ ಬಳಸುವವರೂ ಇರುತ್ತಾರೆ. ಒಮ್ಮೆಲೇ ಫೇಕ್‌ನ್ಯೂಸ್‌ಗಳನ್ನು ಹರಡಲು ಅಥವಾ ಯಾವುದೋ ಒಂದು ಪಕ್ಷ, ಸಿದ್ಧಾಂತರ ಪರ- ವಿರುದ್ಧ ಪ್ರಚಾರ ಮಾಡಲು ಈ ‘ಕಮ್ಯನಿಟಿ’ ಫೀಚರ್‌ ಬಳಕೆಯಾಗುವ ಆತಂಕವಂತೂ ಇದ್ದೇ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...