Homeಮುಖಪುಟ‘ವಾಟ್ಸ್‌ಅಪ್‌‌ ಕಮ್ಯುನಿಟಿ’: ಈ ಹೊಸ ಫೀಚರ್‌‌ ಬಳಸುವುದು ಹೇಗೆ? ಏನಿದರ ವಿಶೇಷ?

‘ವಾಟ್ಸ್‌ಅಪ್‌‌ ಕಮ್ಯುನಿಟಿ’: ಈ ಹೊಸ ಫೀಚರ್‌‌ ಬಳಸುವುದು ಹೇಗೆ? ಏನಿದರ ವಿಶೇಷ?

- Advertisement -
- Advertisement -

ವಾಟ್ಸ್‌ ಅಪ್‌ ಬಳಕೆದಾರರು ಈಗಾಗಲೇ ತಮ್ಮ ಮೊಬೈಲ್‌ನಲ್ಲಿ ‘ವಾಟ್ಸ್‌ಅಪ್‌ ಕಮ್ಯುನಿಟಿ’ ಎಂಬ ಹೊಸ ಫೀಚರ್‌ ಗಮನಿಸಿರಬಹುದು ಅಥವಾ ‘ಅನೌನ್ಸ್‌ಮೆಂಟ್‌’ (ಘೋಷಣೆ) ಮಾಡುತ್ತಿರುವ ಚಿಹ್ನೆಯನ್ನು ಒಳಗೊಂಡ ಗ್ರೂಪೊಂದರಲ್ಲಿ ಯಾರೋ ಒಬ್ಬರು ಸಂದೇಶಗಳನ್ನು ಕಳುಹಿಸುತ್ತಿರುವುದನ್ನು ನೋಡುತ್ತಿರಬಹುದು. ಹೌದು ‘ವಾಟ್ಸ್‌ಅಪ್‌’, ‘ಫೇಸ್‌ಬುಕ್‌’ ಒಡೆತನವನ್ನು ಹೊಂದಿರುವ ‘ಮೆಟಾ’ ಸಂಸ್ಥೆ- ‘ವಾಟ್ಸ್‌ಅಪ್‌ ಕಮ್ಯುನಿಟಿ’ ಎಂಬ ಹೊಸ ಫೀಚರ್‌ಅನ್ನು ಬಳಕೆದಾರರಿಗೆ ಪರಿಚಯಿಸಿದೆ.

‘ವಾಟ್ಸ್‌ಅಪ್‌ ಕಮ್ಯುನಿಟಿ’ ಎಂಬುದು ವಾಟ್ಸ್‌ಅಪ್‌ ರೂಪಿಸಿರುವ ಹೊಸ ಪ್ರಯೋಗವಾಗಿದೆ. ಒಂದು ವಿಚಾರಕ್ಕೆ ಸಂಬಂಧಿಸಿದ ವಾಟ್ಸ್‌ಅಪ್‌ ಗುಂಪುಗಳನ್ನು ಒಗ್ಗೂಡಿಸಲು ಇದು ಸೂಕ್ತವಾಗಬಹುದು. ವಾಟ್ಸ್‌ಅಪ್‌ ಗ್ರೂಪ್‌ಗಳ ಸದಸ್ಯರೊಂದಿಗೆ ಅಡ್ಮಿನ್‌‌ ಸುಲಭವಾಗಿ ಸಂವಹಿಸಲು ಸಾಧ್ಯವಾಗುತ್ತದೆ. 20 ವಾಟ್ಸ್‌ಅಪ್‌ ಗ್ರೂಪ್‌ಗಳನ್ನು ಒಂದೇ ವೇದಿಕೆಯಡಿ ತರಬಹುದಾದ ಅವಕಾಶವೇ ‘ವಾಟ್ಸ್‌ಅಪ್‌ ಕಮ್ಯುನಿಟಿ’.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಂಪುಗಳು ಮತ್ತು ಕಮ್ಯುನಿಟಿ ನಡುವಿನ ಪ್ರಮುಖ ವ್ಯತ್ಯಾಸವೆಂದರೆ ಅವುಗಳ ಗಾತ್ರ. ‘ಬೀಬಮ್‌’ ವೆಬ್‌ಸೈಟ್‌ ಪ್ರಕಾರ, “ಸದ್ಯಕ್ಕೆ ನೀವು ಒಂದು ವಾಟ್ಸ್‌ಅಪ್‌‌ ಗುಂಪಿಗೆ 512 ಮಂದಿಯನ್ನು ಆಹ್ವಾನಿಸಬಹುದು. ಆದಾಗ್ಯೂ ಈ ಮಿತಿಯನ್ನು ಮುಂಬರುವ ದಿನಗಳಲ್ಲಿ 1,024 ಮಂದಿಗೆ ಹೆಚ್ಚಿಸಲು ಸಾಧ್ಯತೆ ಇದೆ. ಮತ್ತೊಂದೆಡೆ, ಒಂದೇ ವಾಟ್ಸ್‌ಅಪ್‌ ಕಮ್ಯುನಿಟಿಯಲ್ಲಿ ಮುಂದಿನ ದಿನಗಳಲ್ಲಿ 21 ಗ್ರೂಪ್‌ಗಳನ್ನು ಸೇರಿಸಬಹುದು. ಲೆಕ್ಕ ಹಾಕಿದರೆ ಒಂದು ಕಮ್ಯುನಿಟಿಯಲ್ಲಿ 21,504 (21 x 1,024) ಬಳಕೆದಾರರು ಇರಲು ಸಾಧ್ಯವಾಗಬಹುದು.”

ಕಮ್ಯುನಿಟಿಯನ್ನು ರಚಿಸುವುದು ಹೇಗೆ?

ವಾಟ್ಸ್‌ಅಪ್‌ ಕಮ್ಯುನಿಟಿಯನ್ನು ರಚಿಸಲು, ಬಳಕೆದಾರರು ‘ಕಮ್ಯುನಿಟಿ’ ಟ್ಯಾಬ್ ಅನ್ನು ಕ್ಲಿಕ್ ಮಾಡಬೇಕು. (ಈ ಟ್ಯಾಬ್‌ ನಿಮ್ಮ ಮೊಬೈಲ್‌ನ ಎಡಭಾಗದ ಮೇಲ್ಭಾಗದಲ್ಲಿ ಇರುತ್ತದೆ.) ‘ನ್ಯೂ ಕಮ್ಯನಿಟಿ’ ಬಟನ್ ಅನ್ನು ಟ್ಯಾಪ್ ಮಾಡಬೇಕು. ನಿಮ್ಮ ಕಮ್ಯುನಿಟಿಯ ಪ್ರೊಫೈಲ್ ಚಿತ್ರ ಹಾಕಬಹುದು. ನಿಮ್ಮ ಕಮ್ಯುನಿಟಿಗೆ ಹೆಸರನ್ನು ನೀಡಬೇಕು. ಕಮ್ಯುನಿಟಿ ಡಿಸ್‌ಕ್ರಿಪ್ಶನ್‌ನಲ್ಲಿ ನೀವು ಮಾಡುತ್ತಿರುವ ಕಮ್ಯುನಿಟಿಯ ಗುರಿ, ಧ್ಯೇಯೋದ್ದೇಶವನ್ನು ಬರೆಯಬೇಕು. ನಂತರ ಬಾಣದ ಗುರುತನ್ನು ಕ್ಲಿಕ್‌ ಮಾಡಬೇಕು. ನಂತರ ಕಮ್ಯನಿಟಿ ವಿಂಡೋ ತೆರೆದುಕೊಳ್ಳುತ್ತದೆ. ಅಲ್ಲಿ ಹೊಸ ಗ್ರೂಪ್‌ಗಳನ್ನು ರಚಿಸಬಹುದು. ಅಥವಾ ಈಗಾಗಲೇ ನೀವು ಅಡ್ಮಿನ್ ಆಗಿರುವ ಗ್ರೂಪ್‌ಗಳನ್ನು ಅದರಲ್ಲಿ ಸೇರಿಸಬಹುದು. ಆನಂತರ ಕೆಳಗಿನ ರೈಟ್‌ ಬಟನ್‌ ಒತ್ತಿದರೆ ನಿಮ್ಮ ಕಮ್ಯುನಿಟಿ ಗ್ರೂಪ್ ರಚನೆಯಾಗುತ್ತದೆ. ಕಮ್ಯನಿಟಿ ಗ್ರೂಪ್ ರಚನೆಯಾದ ಬಳಿಕ ಅಲ್ಲಿ ನಿಮ್ಮ ಸಂದೇಶವನ್ನು ಹಾಕಬಹುದು ಅಂದರೆ ಕಮ್ಯುನಿಟಿ ಅಡ್ಮಿನ್‌ ತಮ್ಮ ಅನೌನ್ಸ್‌ಮೆಂಟ್‌ಗಳನ್ನು (ಘೋಷಣೆಗಳನ್ನು) ಕಳುಹಿಸಬಹುದು.

whatsapp, whatsapp communities, whatsapp tips and tricks,

ಅನೌನ್ಸ್‌ಮೆಂಟ್‌: ಕಮ್ಯುನಿಟಿ ಅಡ್ಮಿನ್‌ ಇಲ್ಲಿನ ಎಲ್ಲಾ ಪ್ರತ್ಯೇಕ ಗುಂಪುಗಳಿಗೆ ಸಂದೇಶ ಕಳುಹಿಸಬಹುದು. ಎಲ್ಲಾ ಗುಂಪಿನಲ್ಲಿರುವ ಎಲ್ಲ ಸದಸ್ಯರಿಗೆ ಏಕಕಾಲದಲ್ಲಿ ಸಂದೇಶ ಕಳುಹಿಸಲು ಸಾಧ್ಯವಾಗುತ್ತದೆ. ಮೀಡಿಯಾ ಫೈಲ್‌ಗಳು, ಡಾಕ್ಯುಮೆಂಟ್‌ಗಳು ಮತ್ತು ಧ್ವನಿ ಸಂದೇಶಗಳನ್ನು ರವಾನಿಸಬಹುದು. ಕಮ್ಯುನಿಟಿ ಗ್ರೂಪ್‌ಗಳು ಒಂದು ರೀತಿಯಲ್ಲಿ ಬ್ರಾಂಡ್‌ಕಾಸ್ಟ್‌ ರೀತಿಯಲ್ಲಿ ಕೆಲಸ ನಿರ್ವಹಿಸುತ್ತವೆ. ಒಬ್ಬ ವ್ಯಕ್ತಿಯು ಒಮ್ಮೆಲೇ ಹತ್ತಾರು ಜನಕ್ಕೆ ಸಂದೇಶ ಕಳುಹಿಸುತ್ತಿದ್ದ ರೀತಿಯಲ್ಲಿಯೇ ಒಬ್ಬ ಅಡ್ಮಿನ್ ಈಗ ಇಪ್ಪತ್ತು ಗ್ರೂಪ್‌ಗಳಲ್ಲಿನ ವಾಟ್ಸ್‌ಅಪ್‌ ಬಳಕೆದಾರರಿಗೆ ಒಮ್ಮೆಲೆ ಪ್ರತ್ಯೇಕ ಸಂದೇಶಗಳನ್ನು ಕಳಹಿಸಬಹುದಾಗಿದೆ. ಆದರೆ ಸಂದೇಶವು ನೀವು ರಚಿಸಿರುವ ಕಮ್ಯುನಿಟಿಯ ಹೆಸರಿನಲ್ಲಿ ರವಾನೆಯಾಗುತ್ತದೆ. ಉದಾಹರಣೆಗೆ- ನೀವು ‘ಸೆಕ್ಯುಲರ್‌’ ಎಂಬ ಕಮ್ಯುನಿಟಿಯನ್ನು ರಚಿಸಿ, ಇದೇ ಆಲೋಚನೆಯ 20 ಗುಂಪುಗಳನ್ನು ಸೇರಿಸಿದ್ದೀರಿ ಎಂದುಕೊಳ್ಳಿ. ಅಡ್ಮಿನ್ ಆದ ನೀವು ‘ಸೆಕ್ಯುಲರ್‌’ ಕಮ್ಯುನಿಟಿಯಲ್ಲಿ ಒಂದು ‘ಅನೌನ್ಸ್‌ಮೆಂಟ್‌’ (ಸಂದೇಶ) ಹಾಕಿದರೆ, ‘ಸೆಕ್ಯುಲರ್‌’ ಕಮ್ಯುನಿಟಿಯಲ್ಲಿರುವ ಪ್ರತಿ ಬಳಕೆದಾರನಿಗೆ ಪ್ರತ್ಯೇಕವಾಗಿ ಸಂದೇಶ ರವಾನೆಯಾಗುತ್ತದೆ. ಆದರೆ ನಿಮ್ಮ ಸಂದೇಶ, ನಿಮ್ಮ ‘ಸೆಕ್ಯುಲರ್‌’ ಕಮ್ಯುನಿಟಿಯಲ್ಲಿನ ಇಪ್ಪತ್ತು ಗ್ರೂಪ್‌ಗಳಿಗೆ ಪ್ರತ್ಯೇಕವಾಗಿ ರವಾನೆಯಾಗುವುದಿಲ್ಲ. ‘ಸೆಕ್ಯುಲರ್‌‌’ ಹೆಸರಿನ ‘ಕಮ್ಯುನಿಟಿ’ ಗ್ರೂಪ್‌ ಮೆಸೇಜ್‌ ಇದಾಗಿರುತ್ತದೆ.

ಸದಸ್ಯರನ್ನು ಆಹ್ವಾನಿಸಹುದು: ಅಡ್ಮಿನ್ ಆದವರು, ಇತರ ಜನರನ್ನು ಕಮ್ಯುನಿಟಿಗೆ ಸೇರಲು ಆಹ್ವಾನಿಸಹುದು. ಅದಕ್ಕಾಗಿ ನೀವು ಕಮ್ಯುನಿಟಿಯ ಲಿಂಕ್ ಅನ್ನು ಸಹ ಹಂಚಿಕೊಳ್ಳಬಹುದು. ಬಳಕೆದಾರರು ನಂತರ ಕಮ್ಯುನಿಟಿಯ ಭಾಗವಾಗಲು ಲಿಂಕ್ ಅನ್ನು ಅನುಸರಿಸಬಹುದು. ಆದರೆ ಕಮ್ಯುನಿಟಿಯಲ್ಲಿರುವ ಗ್ರೂಪ್‌ಗಳಲ್ಲಿ ಒಬ್ಬ ವ್ಯಕ್ತಿ ಸೇರಬೇಕೆಂದರೆ, ಆ ಗ್ರೂಪ್‌ನ ಅಡ್ಮಿನ್‌ಗೆ ರಿಕ್ವೆಸ್ಟ್‌ ಕಳುಹಿಸಬೇಕಾಗುತ್ತದೆ. ಗ್ರೂಪ್‌ಗಳ ಅಡ್ಮಿನ್‌ಗಳು ಅನುಮತಿಸಿದರೆ ಮಾತ್ರ ಗ್ರೂಪ್‌ನೊಳಗೆ ಪ್ರವೇಶಿಸಬಹುದು.

ಇದನ್ನೂ ಓದಿರಿ: ಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

ಕಮ್ಯುನಿಟಿಗೆ ಸಂಬಂಧಪಡದವರು ಯಾರಾದರೂ ಇದ್ದರೆ ಅವರನ್ನು ಸುಲಭವಾಗಿ ರಿಮೂವ್‌ ಮಾಡಬಹುದು. ಕಮ್ಯುನಿಟಿಯಿಂದ ರಿಮೂವ್ ಮಾಡಿದರೂ ನಿರ್ದಿಷ್ಟ ಗ್ರೂಪ್‌ನಲ್ಲಿರುವ ಆ ವ್ಯಕ್ತಿ, ಆ ಗ್ರೂಪ್‌ನಲ್ಲಿ ಸದಸ್ಯನಾಗಿಯೇ ಇರುತ್ತಾನೆ. ಕಮ್ಯುನಿಟಿಯಿಂದ ನಿರ್ದಿಷ್ಟ ಬಳಕೆದಾರರನ್ನು ರಿಮೂವ್ ಮಾಡಲು ಕಮ್ಯುನಿಟಿಯ ಮುಖ್ಯ ಪುಟಕ್ಕೆ ಹೋಗಬೇಕು. ಸದಸ್ಯರ ಪಟ್ಟಿಯನ್ನು ವೀಕ್ಷಿಸಬೇಕು. ನೀವು ಎಲ್ಲಾ ಗುಂಪುಗಳ ಎಲ್ಲಾ ಸದಸ್ಯರ ಪಟ್ಟಿಯನ್ನು ಒಂದೇ ಕಡೆ ನೋಡುತ್ತೀರಿ. ಕಮ್ಯುನಿಟಿಯಿಂದ ನಿರ್ದಿಷ್ಟ ವ್ಯಕ್ತಿಯನ್ನು ತೆಗೆದುಹಾಕಬಹುದು. ಇಷ್ಟವಿಲ್ಲದವರು ಕಮ್ಯುನಿಟಿಯಿಂದ ಲೆಪ್ಟ್ ಕೂಡ ಆಗಲೂ ಅವಕಾಶವಿದೆ.

ವಾಟ್ಸ್‌ಅಪ್‌ನ ಈ ಪ್ರಯೋಗದಿಂದ ಸುಲಭವಾಗಿ ಸಾವಿರಾರು ಜನಕ್ಕೆ ಸಂದೇಶಗಳನ್ನು ಒಮ್ಮೆಲೆ ಕಳುಹಿಸಲು ಅವಕಾಶ ದೊರಕಿದೆ. ಇದನ್ನು ಸದುದ್ದೇಶಕ್ಕೆ ಬಳಸುವವರು ಇರುವಂತೆಯೇ ದುರುದ್ದೇಶಕ್ಕೆ ಬಳಸುವವರೂ ಇರುತ್ತಾರೆ. ಒಮ್ಮೆಲೇ ಫೇಕ್‌ನ್ಯೂಸ್‌ಗಳನ್ನು ಹರಡಲು ಅಥವಾ ಯಾವುದೋ ಒಂದು ಪಕ್ಷ, ಸಿದ್ಧಾಂತರ ಪರ- ವಿರುದ್ಧ ಪ್ರಚಾರ ಮಾಡಲು ಈ ‘ಕಮ್ಯನಿಟಿ’ ಫೀಚರ್‌ ಬಳಕೆಯಾಗುವ ಆತಂಕವಂತೂ ಇದ್ದೇ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....