Homeಮುಖಪುಟ‘ವಾಟ್ಸ್‌ಅಪ್‌‌ ಕಮ್ಯುನಿಟಿ’: ಈ ಹೊಸ ಫೀಚರ್‌‌ ಬಳಸುವುದು ಹೇಗೆ? ಏನಿದರ ವಿಶೇಷ?

‘ವಾಟ್ಸ್‌ಅಪ್‌‌ ಕಮ್ಯುನಿಟಿ’: ಈ ಹೊಸ ಫೀಚರ್‌‌ ಬಳಸುವುದು ಹೇಗೆ? ಏನಿದರ ವಿಶೇಷ?

- Advertisement -
- Advertisement -

ವಾಟ್ಸ್‌ ಅಪ್‌ ಬಳಕೆದಾರರು ಈಗಾಗಲೇ ತಮ್ಮ ಮೊಬೈಲ್‌ನಲ್ಲಿ ‘ವಾಟ್ಸ್‌ಅಪ್‌ ಕಮ್ಯುನಿಟಿ’ ಎಂಬ ಹೊಸ ಫೀಚರ್‌ ಗಮನಿಸಿರಬಹುದು ಅಥವಾ ‘ಅನೌನ್ಸ್‌ಮೆಂಟ್‌’ (ಘೋಷಣೆ) ಮಾಡುತ್ತಿರುವ ಚಿಹ್ನೆಯನ್ನು ಒಳಗೊಂಡ ಗ್ರೂಪೊಂದರಲ್ಲಿ ಯಾರೋ ಒಬ್ಬರು ಸಂದೇಶಗಳನ್ನು ಕಳುಹಿಸುತ್ತಿರುವುದನ್ನು ನೋಡುತ್ತಿರಬಹುದು. ಹೌದು ‘ವಾಟ್ಸ್‌ಅಪ್‌’, ‘ಫೇಸ್‌ಬುಕ್‌’ ಒಡೆತನವನ್ನು ಹೊಂದಿರುವ ‘ಮೆಟಾ’ ಸಂಸ್ಥೆ- ‘ವಾಟ್ಸ್‌ಅಪ್‌ ಕಮ್ಯುನಿಟಿ’ ಎಂಬ ಹೊಸ ಫೀಚರ್‌ಅನ್ನು ಬಳಕೆದಾರರಿಗೆ ಪರಿಚಯಿಸಿದೆ.

‘ವಾಟ್ಸ್‌ಅಪ್‌ ಕಮ್ಯುನಿಟಿ’ ಎಂಬುದು ವಾಟ್ಸ್‌ಅಪ್‌ ರೂಪಿಸಿರುವ ಹೊಸ ಪ್ರಯೋಗವಾಗಿದೆ. ಒಂದು ವಿಚಾರಕ್ಕೆ ಸಂಬಂಧಿಸಿದ ವಾಟ್ಸ್‌ಅಪ್‌ ಗುಂಪುಗಳನ್ನು ಒಗ್ಗೂಡಿಸಲು ಇದು ಸೂಕ್ತವಾಗಬಹುದು. ವಾಟ್ಸ್‌ಅಪ್‌ ಗ್ರೂಪ್‌ಗಳ ಸದಸ್ಯರೊಂದಿಗೆ ಅಡ್ಮಿನ್‌‌ ಸುಲಭವಾಗಿ ಸಂವಹಿಸಲು ಸಾಧ್ಯವಾಗುತ್ತದೆ. 20 ವಾಟ್ಸ್‌ಅಪ್‌ ಗ್ರೂಪ್‌ಗಳನ್ನು ಒಂದೇ ವೇದಿಕೆಯಡಿ ತರಬಹುದಾದ ಅವಕಾಶವೇ ‘ವಾಟ್ಸ್‌ಅಪ್‌ ಕಮ್ಯುನಿಟಿ’.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಂಪುಗಳು ಮತ್ತು ಕಮ್ಯುನಿಟಿ ನಡುವಿನ ಪ್ರಮುಖ ವ್ಯತ್ಯಾಸವೆಂದರೆ ಅವುಗಳ ಗಾತ್ರ. ‘ಬೀಬಮ್‌’ ವೆಬ್‌ಸೈಟ್‌ ಪ್ರಕಾರ, “ಸದ್ಯಕ್ಕೆ ನೀವು ಒಂದು ವಾಟ್ಸ್‌ಅಪ್‌‌ ಗುಂಪಿಗೆ 512 ಮಂದಿಯನ್ನು ಆಹ್ವಾನಿಸಬಹುದು. ಆದಾಗ್ಯೂ ಈ ಮಿತಿಯನ್ನು ಮುಂಬರುವ ದಿನಗಳಲ್ಲಿ 1,024 ಮಂದಿಗೆ ಹೆಚ್ಚಿಸಲು ಸಾಧ್ಯತೆ ಇದೆ. ಮತ್ತೊಂದೆಡೆ, ಒಂದೇ ವಾಟ್ಸ್‌ಅಪ್‌ ಕಮ್ಯುನಿಟಿಯಲ್ಲಿ ಮುಂದಿನ ದಿನಗಳಲ್ಲಿ 21 ಗ್ರೂಪ್‌ಗಳನ್ನು ಸೇರಿಸಬಹುದು. ಲೆಕ್ಕ ಹಾಕಿದರೆ ಒಂದು ಕಮ್ಯುನಿಟಿಯಲ್ಲಿ 21,504 (21 x 1,024) ಬಳಕೆದಾರರು ಇರಲು ಸಾಧ್ಯವಾಗಬಹುದು.”

ಕಮ್ಯುನಿಟಿಯನ್ನು ರಚಿಸುವುದು ಹೇಗೆ?

ವಾಟ್ಸ್‌ಅಪ್‌ ಕಮ್ಯುನಿಟಿಯನ್ನು ರಚಿಸಲು, ಬಳಕೆದಾರರು ‘ಕಮ್ಯುನಿಟಿ’ ಟ್ಯಾಬ್ ಅನ್ನು ಕ್ಲಿಕ್ ಮಾಡಬೇಕು. (ಈ ಟ್ಯಾಬ್‌ ನಿಮ್ಮ ಮೊಬೈಲ್‌ನ ಎಡಭಾಗದ ಮೇಲ್ಭಾಗದಲ್ಲಿ ಇರುತ್ತದೆ.) ‘ನ್ಯೂ ಕಮ್ಯನಿಟಿ’ ಬಟನ್ ಅನ್ನು ಟ್ಯಾಪ್ ಮಾಡಬೇಕು. ನಿಮ್ಮ ಕಮ್ಯುನಿಟಿಯ ಪ್ರೊಫೈಲ್ ಚಿತ್ರ ಹಾಕಬಹುದು. ನಿಮ್ಮ ಕಮ್ಯುನಿಟಿಗೆ ಹೆಸರನ್ನು ನೀಡಬೇಕು. ಕಮ್ಯುನಿಟಿ ಡಿಸ್‌ಕ್ರಿಪ್ಶನ್‌ನಲ್ಲಿ ನೀವು ಮಾಡುತ್ತಿರುವ ಕಮ್ಯುನಿಟಿಯ ಗುರಿ, ಧ್ಯೇಯೋದ್ದೇಶವನ್ನು ಬರೆಯಬೇಕು. ನಂತರ ಬಾಣದ ಗುರುತನ್ನು ಕ್ಲಿಕ್‌ ಮಾಡಬೇಕು. ನಂತರ ಕಮ್ಯನಿಟಿ ವಿಂಡೋ ತೆರೆದುಕೊಳ್ಳುತ್ತದೆ. ಅಲ್ಲಿ ಹೊಸ ಗ್ರೂಪ್‌ಗಳನ್ನು ರಚಿಸಬಹುದು. ಅಥವಾ ಈಗಾಗಲೇ ನೀವು ಅಡ್ಮಿನ್ ಆಗಿರುವ ಗ್ರೂಪ್‌ಗಳನ್ನು ಅದರಲ್ಲಿ ಸೇರಿಸಬಹುದು. ಆನಂತರ ಕೆಳಗಿನ ರೈಟ್‌ ಬಟನ್‌ ಒತ್ತಿದರೆ ನಿಮ್ಮ ಕಮ್ಯುನಿಟಿ ಗ್ರೂಪ್ ರಚನೆಯಾಗುತ್ತದೆ. ಕಮ್ಯನಿಟಿ ಗ್ರೂಪ್ ರಚನೆಯಾದ ಬಳಿಕ ಅಲ್ಲಿ ನಿಮ್ಮ ಸಂದೇಶವನ್ನು ಹಾಕಬಹುದು ಅಂದರೆ ಕಮ್ಯುನಿಟಿ ಅಡ್ಮಿನ್‌ ತಮ್ಮ ಅನೌನ್ಸ್‌ಮೆಂಟ್‌ಗಳನ್ನು (ಘೋಷಣೆಗಳನ್ನು) ಕಳುಹಿಸಬಹುದು.

whatsapp, whatsapp communities, whatsapp tips and tricks,

ಅನೌನ್ಸ್‌ಮೆಂಟ್‌: ಕಮ್ಯುನಿಟಿ ಅಡ್ಮಿನ್‌ ಇಲ್ಲಿನ ಎಲ್ಲಾ ಪ್ರತ್ಯೇಕ ಗುಂಪುಗಳಿಗೆ ಸಂದೇಶ ಕಳುಹಿಸಬಹುದು. ಎಲ್ಲಾ ಗುಂಪಿನಲ್ಲಿರುವ ಎಲ್ಲ ಸದಸ್ಯರಿಗೆ ಏಕಕಾಲದಲ್ಲಿ ಸಂದೇಶ ಕಳುಹಿಸಲು ಸಾಧ್ಯವಾಗುತ್ತದೆ. ಮೀಡಿಯಾ ಫೈಲ್‌ಗಳು, ಡಾಕ್ಯುಮೆಂಟ್‌ಗಳು ಮತ್ತು ಧ್ವನಿ ಸಂದೇಶಗಳನ್ನು ರವಾನಿಸಬಹುದು. ಕಮ್ಯುನಿಟಿ ಗ್ರೂಪ್‌ಗಳು ಒಂದು ರೀತಿಯಲ್ಲಿ ಬ್ರಾಂಡ್‌ಕಾಸ್ಟ್‌ ರೀತಿಯಲ್ಲಿ ಕೆಲಸ ನಿರ್ವಹಿಸುತ್ತವೆ. ಒಬ್ಬ ವ್ಯಕ್ತಿಯು ಒಮ್ಮೆಲೇ ಹತ್ತಾರು ಜನಕ್ಕೆ ಸಂದೇಶ ಕಳುಹಿಸುತ್ತಿದ್ದ ರೀತಿಯಲ್ಲಿಯೇ ಒಬ್ಬ ಅಡ್ಮಿನ್ ಈಗ ಇಪ್ಪತ್ತು ಗ್ರೂಪ್‌ಗಳಲ್ಲಿನ ವಾಟ್ಸ್‌ಅಪ್‌ ಬಳಕೆದಾರರಿಗೆ ಒಮ್ಮೆಲೆ ಪ್ರತ್ಯೇಕ ಸಂದೇಶಗಳನ್ನು ಕಳಹಿಸಬಹುದಾಗಿದೆ. ಆದರೆ ಸಂದೇಶವು ನೀವು ರಚಿಸಿರುವ ಕಮ್ಯುನಿಟಿಯ ಹೆಸರಿನಲ್ಲಿ ರವಾನೆಯಾಗುತ್ತದೆ. ಉದಾಹರಣೆಗೆ- ನೀವು ‘ಸೆಕ್ಯುಲರ್‌’ ಎಂಬ ಕಮ್ಯುನಿಟಿಯನ್ನು ರಚಿಸಿ, ಇದೇ ಆಲೋಚನೆಯ 20 ಗುಂಪುಗಳನ್ನು ಸೇರಿಸಿದ್ದೀರಿ ಎಂದುಕೊಳ್ಳಿ. ಅಡ್ಮಿನ್ ಆದ ನೀವು ‘ಸೆಕ್ಯುಲರ್‌’ ಕಮ್ಯುನಿಟಿಯಲ್ಲಿ ಒಂದು ‘ಅನೌನ್ಸ್‌ಮೆಂಟ್‌’ (ಸಂದೇಶ) ಹಾಕಿದರೆ, ‘ಸೆಕ್ಯುಲರ್‌’ ಕಮ್ಯುನಿಟಿಯಲ್ಲಿರುವ ಪ್ರತಿ ಬಳಕೆದಾರನಿಗೆ ಪ್ರತ್ಯೇಕವಾಗಿ ಸಂದೇಶ ರವಾನೆಯಾಗುತ್ತದೆ. ಆದರೆ ನಿಮ್ಮ ಸಂದೇಶ, ನಿಮ್ಮ ‘ಸೆಕ್ಯುಲರ್‌’ ಕಮ್ಯುನಿಟಿಯಲ್ಲಿನ ಇಪ್ಪತ್ತು ಗ್ರೂಪ್‌ಗಳಿಗೆ ಪ್ರತ್ಯೇಕವಾಗಿ ರವಾನೆಯಾಗುವುದಿಲ್ಲ. ‘ಸೆಕ್ಯುಲರ್‌‌’ ಹೆಸರಿನ ‘ಕಮ್ಯುನಿಟಿ’ ಗ್ರೂಪ್‌ ಮೆಸೇಜ್‌ ಇದಾಗಿರುತ್ತದೆ.

ಸದಸ್ಯರನ್ನು ಆಹ್ವಾನಿಸಹುದು: ಅಡ್ಮಿನ್ ಆದವರು, ಇತರ ಜನರನ್ನು ಕಮ್ಯುನಿಟಿಗೆ ಸೇರಲು ಆಹ್ವಾನಿಸಹುದು. ಅದಕ್ಕಾಗಿ ನೀವು ಕಮ್ಯುನಿಟಿಯ ಲಿಂಕ್ ಅನ್ನು ಸಹ ಹಂಚಿಕೊಳ್ಳಬಹುದು. ಬಳಕೆದಾರರು ನಂತರ ಕಮ್ಯುನಿಟಿಯ ಭಾಗವಾಗಲು ಲಿಂಕ್ ಅನ್ನು ಅನುಸರಿಸಬಹುದು. ಆದರೆ ಕಮ್ಯುನಿಟಿಯಲ್ಲಿರುವ ಗ್ರೂಪ್‌ಗಳಲ್ಲಿ ಒಬ್ಬ ವ್ಯಕ್ತಿ ಸೇರಬೇಕೆಂದರೆ, ಆ ಗ್ರೂಪ್‌ನ ಅಡ್ಮಿನ್‌ಗೆ ರಿಕ್ವೆಸ್ಟ್‌ ಕಳುಹಿಸಬೇಕಾಗುತ್ತದೆ. ಗ್ರೂಪ್‌ಗಳ ಅಡ್ಮಿನ್‌ಗಳು ಅನುಮತಿಸಿದರೆ ಮಾತ್ರ ಗ್ರೂಪ್‌ನೊಳಗೆ ಪ್ರವೇಶಿಸಬಹುದು.

ಇದನ್ನೂ ಓದಿರಿ: ಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

ಕಮ್ಯುನಿಟಿಗೆ ಸಂಬಂಧಪಡದವರು ಯಾರಾದರೂ ಇದ್ದರೆ ಅವರನ್ನು ಸುಲಭವಾಗಿ ರಿಮೂವ್‌ ಮಾಡಬಹುದು. ಕಮ್ಯುನಿಟಿಯಿಂದ ರಿಮೂವ್ ಮಾಡಿದರೂ ನಿರ್ದಿಷ್ಟ ಗ್ರೂಪ್‌ನಲ್ಲಿರುವ ಆ ವ್ಯಕ್ತಿ, ಆ ಗ್ರೂಪ್‌ನಲ್ಲಿ ಸದಸ್ಯನಾಗಿಯೇ ಇರುತ್ತಾನೆ. ಕಮ್ಯುನಿಟಿಯಿಂದ ನಿರ್ದಿಷ್ಟ ಬಳಕೆದಾರರನ್ನು ರಿಮೂವ್ ಮಾಡಲು ಕಮ್ಯುನಿಟಿಯ ಮುಖ್ಯ ಪುಟಕ್ಕೆ ಹೋಗಬೇಕು. ಸದಸ್ಯರ ಪಟ್ಟಿಯನ್ನು ವೀಕ್ಷಿಸಬೇಕು. ನೀವು ಎಲ್ಲಾ ಗುಂಪುಗಳ ಎಲ್ಲಾ ಸದಸ್ಯರ ಪಟ್ಟಿಯನ್ನು ಒಂದೇ ಕಡೆ ನೋಡುತ್ತೀರಿ. ಕಮ್ಯುನಿಟಿಯಿಂದ ನಿರ್ದಿಷ್ಟ ವ್ಯಕ್ತಿಯನ್ನು ತೆಗೆದುಹಾಕಬಹುದು. ಇಷ್ಟವಿಲ್ಲದವರು ಕಮ್ಯುನಿಟಿಯಿಂದ ಲೆಪ್ಟ್ ಕೂಡ ಆಗಲೂ ಅವಕಾಶವಿದೆ.

ವಾಟ್ಸ್‌ಅಪ್‌ನ ಈ ಪ್ರಯೋಗದಿಂದ ಸುಲಭವಾಗಿ ಸಾವಿರಾರು ಜನಕ್ಕೆ ಸಂದೇಶಗಳನ್ನು ಒಮ್ಮೆಲೆ ಕಳುಹಿಸಲು ಅವಕಾಶ ದೊರಕಿದೆ. ಇದನ್ನು ಸದುದ್ದೇಶಕ್ಕೆ ಬಳಸುವವರು ಇರುವಂತೆಯೇ ದುರುದ್ದೇಶಕ್ಕೆ ಬಳಸುವವರೂ ಇರುತ್ತಾರೆ. ಒಮ್ಮೆಲೇ ಫೇಕ್‌ನ್ಯೂಸ್‌ಗಳನ್ನು ಹರಡಲು ಅಥವಾ ಯಾವುದೋ ಒಂದು ಪಕ್ಷ, ಸಿದ್ಧಾಂತರ ಪರ- ವಿರುದ್ಧ ಪ್ರಚಾರ ಮಾಡಲು ಈ ‘ಕಮ್ಯನಿಟಿ’ ಫೀಚರ್‌ ಬಳಕೆಯಾಗುವ ಆತಂಕವಂತೂ ಇದ್ದೇ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...