Homeಮುಖಪುಟ‘ವಾಟ್ಸ್‌ಅಪ್‌‌ ಕಮ್ಯುನಿಟಿ’: ಈ ಹೊಸ ಫೀಚರ್‌‌ ಬಳಸುವುದು ಹೇಗೆ? ಏನಿದರ ವಿಶೇಷ?

‘ವಾಟ್ಸ್‌ಅಪ್‌‌ ಕಮ್ಯುನಿಟಿ’: ಈ ಹೊಸ ಫೀಚರ್‌‌ ಬಳಸುವುದು ಹೇಗೆ? ಏನಿದರ ವಿಶೇಷ?

- Advertisement -
- Advertisement -

ವಾಟ್ಸ್‌ ಅಪ್‌ ಬಳಕೆದಾರರು ಈಗಾಗಲೇ ತಮ್ಮ ಮೊಬೈಲ್‌ನಲ್ಲಿ ‘ವಾಟ್ಸ್‌ಅಪ್‌ ಕಮ್ಯುನಿಟಿ’ ಎಂಬ ಹೊಸ ಫೀಚರ್‌ ಗಮನಿಸಿರಬಹುದು ಅಥವಾ ‘ಅನೌನ್ಸ್‌ಮೆಂಟ್‌’ (ಘೋಷಣೆ) ಮಾಡುತ್ತಿರುವ ಚಿಹ್ನೆಯನ್ನು ಒಳಗೊಂಡ ಗ್ರೂಪೊಂದರಲ್ಲಿ ಯಾರೋ ಒಬ್ಬರು ಸಂದೇಶಗಳನ್ನು ಕಳುಹಿಸುತ್ತಿರುವುದನ್ನು ನೋಡುತ್ತಿರಬಹುದು. ಹೌದು ‘ವಾಟ್ಸ್‌ಅಪ್‌’, ‘ಫೇಸ್‌ಬುಕ್‌’ ಒಡೆತನವನ್ನು ಹೊಂದಿರುವ ‘ಮೆಟಾ’ ಸಂಸ್ಥೆ- ‘ವಾಟ್ಸ್‌ಅಪ್‌ ಕಮ್ಯುನಿಟಿ’ ಎಂಬ ಹೊಸ ಫೀಚರ್‌ಅನ್ನು ಬಳಕೆದಾರರಿಗೆ ಪರಿಚಯಿಸಿದೆ.

‘ವಾಟ್ಸ್‌ಅಪ್‌ ಕಮ್ಯುನಿಟಿ’ ಎಂಬುದು ವಾಟ್ಸ್‌ಅಪ್‌ ರೂಪಿಸಿರುವ ಹೊಸ ಪ್ರಯೋಗವಾಗಿದೆ. ಒಂದು ವಿಚಾರಕ್ಕೆ ಸಂಬಂಧಿಸಿದ ವಾಟ್ಸ್‌ಅಪ್‌ ಗುಂಪುಗಳನ್ನು ಒಗ್ಗೂಡಿಸಲು ಇದು ಸೂಕ್ತವಾಗಬಹುದು. ವಾಟ್ಸ್‌ಅಪ್‌ ಗ್ರೂಪ್‌ಗಳ ಸದಸ್ಯರೊಂದಿಗೆ ಅಡ್ಮಿನ್‌‌ ಸುಲಭವಾಗಿ ಸಂವಹಿಸಲು ಸಾಧ್ಯವಾಗುತ್ತದೆ. 20 ವಾಟ್ಸ್‌ಅಪ್‌ ಗ್ರೂಪ್‌ಗಳನ್ನು ಒಂದೇ ವೇದಿಕೆಯಡಿ ತರಬಹುದಾದ ಅವಕಾಶವೇ ‘ವಾಟ್ಸ್‌ಅಪ್‌ ಕಮ್ಯುನಿಟಿ’.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಂಪುಗಳು ಮತ್ತು ಕಮ್ಯುನಿಟಿ ನಡುವಿನ ಪ್ರಮುಖ ವ್ಯತ್ಯಾಸವೆಂದರೆ ಅವುಗಳ ಗಾತ್ರ. ‘ಬೀಬಮ್‌’ ವೆಬ್‌ಸೈಟ್‌ ಪ್ರಕಾರ, “ಸದ್ಯಕ್ಕೆ ನೀವು ಒಂದು ವಾಟ್ಸ್‌ಅಪ್‌‌ ಗುಂಪಿಗೆ 512 ಮಂದಿಯನ್ನು ಆಹ್ವಾನಿಸಬಹುದು. ಆದಾಗ್ಯೂ ಈ ಮಿತಿಯನ್ನು ಮುಂಬರುವ ದಿನಗಳಲ್ಲಿ 1,024 ಮಂದಿಗೆ ಹೆಚ್ಚಿಸಲು ಸಾಧ್ಯತೆ ಇದೆ. ಮತ್ತೊಂದೆಡೆ, ಒಂದೇ ವಾಟ್ಸ್‌ಅಪ್‌ ಕಮ್ಯುನಿಟಿಯಲ್ಲಿ ಮುಂದಿನ ದಿನಗಳಲ್ಲಿ 21 ಗ್ರೂಪ್‌ಗಳನ್ನು ಸೇರಿಸಬಹುದು. ಲೆಕ್ಕ ಹಾಕಿದರೆ ಒಂದು ಕಮ್ಯುನಿಟಿಯಲ್ಲಿ 21,504 (21 x 1,024) ಬಳಕೆದಾರರು ಇರಲು ಸಾಧ್ಯವಾಗಬಹುದು.”

ಕಮ್ಯುನಿಟಿಯನ್ನು ರಚಿಸುವುದು ಹೇಗೆ?

ವಾಟ್ಸ್‌ಅಪ್‌ ಕಮ್ಯುನಿಟಿಯನ್ನು ರಚಿಸಲು, ಬಳಕೆದಾರರು ‘ಕಮ್ಯುನಿಟಿ’ ಟ್ಯಾಬ್ ಅನ್ನು ಕ್ಲಿಕ್ ಮಾಡಬೇಕು. (ಈ ಟ್ಯಾಬ್‌ ನಿಮ್ಮ ಮೊಬೈಲ್‌ನ ಎಡಭಾಗದ ಮೇಲ್ಭಾಗದಲ್ಲಿ ಇರುತ್ತದೆ.) ‘ನ್ಯೂ ಕಮ್ಯನಿಟಿ’ ಬಟನ್ ಅನ್ನು ಟ್ಯಾಪ್ ಮಾಡಬೇಕು. ನಿಮ್ಮ ಕಮ್ಯುನಿಟಿಯ ಪ್ರೊಫೈಲ್ ಚಿತ್ರ ಹಾಕಬಹುದು. ನಿಮ್ಮ ಕಮ್ಯುನಿಟಿಗೆ ಹೆಸರನ್ನು ನೀಡಬೇಕು. ಕಮ್ಯುನಿಟಿ ಡಿಸ್‌ಕ್ರಿಪ್ಶನ್‌ನಲ್ಲಿ ನೀವು ಮಾಡುತ್ತಿರುವ ಕಮ್ಯುನಿಟಿಯ ಗುರಿ, ಧ್ಯೇಯೋದ್ದೇಶವನ್ನು ಬರೆಯಬೇಕು. ನಂತರ ಬಾಣದ ಗುರುತನ್ನು ಕ್ಲಿಕ್‌ ಮಾಡಬೇಕು. ನಂತರ ಕಮ್ಯನಿಟಿ ವಿಂಡೋ ತೆರೆದುಕೊಳ್ಳುತ್ತದೆ. ಅಲ್ಲಿ ಹೊಸ ಗ್ರೂಪ್‌ಗಳನ್ನು ರಚಿಸಬಹುದು. ಅಥವಾ ಈಗಾಗಲೇ ನೀವು ಅಡ್ಮಿನ್ ಆಗಿರುವ ಗ್ರೂಪ್‌ಗಳನ್ನು ಅದರಲ್ಲಿ ಸೇರಿಸಬಹುದು. ಆನಂತರ ಕೆಳಗಿನ ರೈಟ್‌ ಬಟನ್‌ ಒತ್ತಿದರೆ ನಿಮ್ಮ ಕಮ್ಯುನಿಟಿ ಗ್ರೂಪ್ ರಚನೆಯಾಗುತ್ತದೆ. ಕಮ್ಯನಿಟಿ ಗ್ರೂಪ್ ರಚನೆಯಾದ ಬಳಿಕ ಅಲ್ಲಿ ನಿಮ್ಮ ಸಂದೇಶವನ್ನು ಹಾಕಬಹುದು ಅಂದರೆ ಕಮ್ಯುನಿಟಿ ಅಡ್ಮಿನ್‌ ತಮ್ಮ ಅನೌನ್ಸ್‌ಮೆಂಟ್‌ಗಳನ್ನು (ಘೋಷಣೆಗಳನ್ನು) ಕಳುಹಿಸಬಹುದು.

whatsapp, whatsapp communities, whatsapp tips and tricks,

ಅನೌನ್ಸ್‌ಮೆಂಟ್‌: ಕಮ್ಯುನಿಟಿ ಅಡ್ಮಿನ್‌ ಇಲ್ಲಿನ ಎಲ್ಲಾ ಪ್ರತ್ಯೇಕ ಗುಂಪುಗಳಿಗೆ ಸಂದೇಶ ಕಳುಹಿಸಬಹುದು. ಎಲ್ಲಾ ಗುಂಪಿನಲ್ಲಿರುವ ಎಲ್ಲ ಸದಸ್ಯರಿಗೆ ಏಕಕಾಲದಲ್ಲಿ ಸಂದೇಶ ಕಳುಹಿಸಲು ಸಾಧ್ಯವಾಗುತ್ತದೆ. ಮೀಡಿಯಾ ಫೈಲ್‌ಗಳು, ಡಾಕ್ಯುಮೆಂಟ್‌ಗಳು ಮತ್ತು ಧ್ವನಿ ಸಂದೇಶಗಳನ್ನು ರವಾನಿಸಬಹುದು. ಕಮ್ಯುನಿಟಿ ಗ್ರೂಪ್‌ಗಳು ಒಂದು ರೀತಿಯಲ್ಲಿ ಬ್ರಾಂಡ್‌ಕಾಸ್ಟ್‌ ರೀತಿಯಲ್ಲಿ ಕೆಲಸ ನಿರ್ವಹಿಸುತ್ತವೆ. ಒಬ್ಬ ವ್ಯಕ್ತಿಯು ಒಮ್ಮೆಲೇ ಹತ್ತಾರು ಜನಕ್ಕೆ ಸಂದೇಶ ಕಳುಹಿಸುತ್ತಿದ್ದ ರೀತಿಯಲ್ಲಿಯೇ ಒಬ್ಬ ಅಡ್ಮಿನ್ ಈಗ ಇಪ್ಪತ್ತು ಗ್ರೂಪ್‌ಗಳಲ್ಲಿನ ವಾಟ್ಸ್‌ಅಪ್‌ ಬಳಕೆದಾರರಿಗೆ ಒಮ್ಮೆಲೆ ಪ್ರತ್ಯೇಕ ಸಂದೇಶಗಳನ್ನು ಕಳಹಿಸಬಹುದಾಗಿದೆ. ಆದರೆ ಸಂದೇಶವು ನೀವು ರಚಿಸಿರುವ ಕಮ್ಯುನಿಟಿಯ ಹೆಸರಿನಲ್ಲಿ ರವಾನೆಯಾಗುತ್ತದೆ. ಉದಾಹರಣೆಗೆ- ನೀವು ‘ಸೆಕ್ಯುಲರ್‌’ ಎಂಬ ಕಮ್ಯುನಿಟಿಯನ್ನು ರಚಿಸಿ, ಇದೇ ಆಲೋಚನೆಯ 20 ಗುಂಪುಗಳನ್ನು ಸೇರಿಸಿದ್ದೀರಿ ಎಂದುಕೊಳ್ಳಿ. ಅಡ್ಮಿನ್ ಆದ ನೀವು ‘ಸೆಕ್ಯುಲರ್‌’ ಕಮ್ಯುನಿಟಿಯಲ್ಲಿ ಒಂದು ‘ಅನೌನ್ಸ್‌ಮೆಂಟ್‌’ (ಸಂದೇಶ) ಹಾಕಿದರೆ, ‘ಸೆಕ್ಯುಲರ್‌’ ಕಮ್ಯುನಿಟಿಯಲ್ಲಿರುವ ಪ್ರತಿ ಬಳಕೆದಾರನಿಗೆ ಪ್ರತ್ಯೇಕವಾಗಿ ಸಂದೇಶ ರವಾನೆಯಾಗುತ್ತದೆ. ಆದರೆ ನಿಮ್ಮ ಸಂದೇಶ, ನಿಮ್ಮ ‘ಸೆಕ್ಯುಲರ್‌’ ಕಮ್ಯುನಿಟಿಯಲ್ಲಿನ ಇಪ್ಪತ್ತು ಗ್ರೂಪ್‌ಗಳಿಗೆ ಪ್ರತ್ಯೇಕವಾಗಿ ರವಾನೆಯಾಗುವುದಿಲ್ಲ. ‘ಸೆಕ್ಯುಲರ್‌‌’ ಹೆಸರಿನ ‘ಕಮ್ಯುನಿಟಿ’ ಗ್ರೂಪ್‌ ಮೆಸೇಜ್‌ ಇದಾಗಿರುತ್ತದೆ.

ಸದಸ್ಯರನ್ನು ಆಹ್ವಾನಿಸಹುದು: ಅಡ್ಮಿನ್ ಆದವರು, ಇತರ ಜನರನ್ನು ಕಮ್ಯುನಿಟಿಗೆ ಸೇರಲು ಆಹ್ವಾನಿಸಹುದು. ಅದಕ್ಕಾಗಿ ನೀವು ಕಮ್ಯುನಿಟಿಯ ಲಿಂಕ್ ಅನ್ನು ಸಹ ಹಂಚಿಕೊಳ್ಳಬಹುದು. ಬಳಕೆದಾರರು ನಂತರ ಕಮ್ಯುನಿಟಿಯ ಭಾಗವಾಗಲು ಲಿಂಕ್ ಅನ್ನು ಅನುಸರಿಸಬಹುದು. ಆದರೆ ಕಮ್ಯುನಿಟಿಯಲ್ಲಿರುವ ಗ್ರೂಪ್‌ಗಳಲ್ಲಿ ಒಬ್ಬ ವ್ಯಕ್ತಿ ಸೇರಬೇಕೆಂದರೆ, ಆ ಗ್ರೂಪ್‌ನ ಅಡ್ಮಿನ್‌ಗೆ ರಿಕ್ವೆಸ್ಟ್‌ ಕಳುಹಿಸಬೇಕಾಗುತ್ತದೆ. ಗ್ರೂಪ್‌ಗಳ ಅಡ್ಮಿನ್‌ಗಳು ಅನುಮತಿಸಿದರೆ ಮಾತ್ರ ಗ್ರೂಪ್‌ನೊಳಗೆ ಪ್ರವೇಶಿಸಬಹುದು.

ಇದನ್ನೂ ಓದಿರಿ: ಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

ಕಮ್ಯುನಿಟಿಗೆ ಸಂಬಂಧಪಡದವರು ಯಾರಾದರೂ ಇದ್ದರೆ ಅವರನ್ನು ಸುಲಭವಾಗಿ ರಿಮೂವ್‌ ಮಾಡಬಹುದು. ಕಮ್ಯುನಿಟಿಯಿಂದ ರಿಮೂವ್ ಮಾಡಿದರೂ ನಿರ್ದಿಷ್ಟ ಗ್ರೂಪ್‌ನಲ್ಲಿರುವ ಆ ವ್ಯಕ್ತಿ, ಆ ಗ್ರೂಪ್‌ನಲ್ಲಿ ಸದಸ್ಯನಾಗಿಯೇ ಇರುತ್ತಾನೆ. ಕಮ್ಯುನಿಟಿಯಿಂದ ನಿರ್ದಿಷ್ಟ ಬಳಕೆದಾರರನ್ನು ರಿಮೂವ್ ಮಾಡಲು ಕಮ್ಯುನಿಟಿಯ ಮುಖ್ಯ ಪುಟಕ್ಕೆ ಹೋಗಬೇಕು. ಸದಸ್ಯರ ಪಟ್ಟಿಯನ್ನು ವೀಕ್ಷಿಸಬೇಕು. ನೀವು ಎಲ್ಲಾ ಗುಂಪುಗಳ ಎಲ್ಲಾ ಸದಸ್ಯರ ಪಟ್ಟಿಯನ್ನು ಒಂದೇ ಕಡೆ ನೋಡುತ್ತೀರಿ. ಕಮ್ಯುನಿಟಿಯಿಂದ ನಿರ್ದಿಷ್ಟ ವ್ಯಕ್ತಿಯನ್ನು ತೆಗೆದುಹಾಕಬಹುದು. ಇಷ್ಟವಿಲ್ಲದವರು ಕಮ್ಯುನಿಟಿಯಿಂದ ಲೆಪ್ಟ್ ಕೂಡ ಆಗಲೂ ಅವಕಾಶವಿದೆ.

ವಾಟ್ಸ್‌ಅಪ್‌ನ ಈ ಪ್ರಯೋಗದಿಂದ ಸುಲಭವಾಗಿ ಸಾವಿರಾರು ಜನಕ್ಕೆ ಸಂದೇಶಗಳನ್ನು ಒಮ್ಮೆಲೆ ಕಳುಹಿಸಲು ಅವಕಾಶ ದೊರಕಿದೆ. ಇದನ್ನು ಸದುದ್ದೇಶಕ್ಕೆ ಬಳಸುವವರು ಇರುವಂತೆಯೇ ದುರುದ್ದೇಶಕ್ಕೆ ಬಳಸುವವರೂ ಇರುತ್ತಾರೆ. ಒಮ್ಮೆಲೇ ಫೇಕ್‌ನ್ಯೂಸ್‌ಗಳನ್ನು ಹರಡಲು ಅಥವಾ ಯಾವುದೋ ಒಂದು ಪಕ್ಷ, ಸಿದ್ಧಾಂತರ ಪರ- ವಿರುದ್ಧ ಪ್ರಚಾರ ಮಾಡಲು ಈ ‘ಕಮ್ಯನಿಟಿ’ ಫೀಚರ್‌ ಬಳಕೆಯಾಗುವ ಆತಂಕವಂತೂ ಇದ್ದೇ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...