Homeಮುಖಪುಟವಾಟ್ಸ್‌ಅಪ್‌ ವಂಚನೆ ಜಾಲ: ನಾಲ್ವರು ಖದೀಮರು ಅರೆಸ್ಟ್‌

ವಾಟ್ಸ್‌ಅಪ್‌ ವಂಚನೆ ಜಾಲ: ನಾಲ್ವರು ಖದೀಮರು ಅರೆಸ್ಟ್‌

ಯೂಟ್ಯೂಬ್‌ ವಿಡಿಯೊ ಲೈಕ್ ಮಾಡಿದರೆ ದುಡ್ಡುಕೊಡುತ್ತೇವೆ ಎನ್ನುವ ಸಂದೇಶಗಳ ಕುರಿತು ಎಚ್ಚರವಿರಲಿ!

- Advertisement -
- Advertisement -

ಯೂಟ್ಯೂಬ್ ವಿಡಿಯೋಗಳನ್ನು ಲೈಕ್ ಮಾಡಿದರೆ ದುಡ್ದು ಕೊಡುತ್ತೇವೆ, ಹೂಡಿಕೆ ಮಾಡಿದರೆ ಹೆಚ್ಚಿನ ಆದಾಯ ಸಿಗುತ್ತದೆ ಎಂಬ ಭರವಸೆ ನೀಡಿ ವಾಟ್ಸ್‌ಅಪ್‌ ಮೂಲಕ ದೇಶಾದ್ಯಂತ ಜನರನ್ನು ವಂಚಿಸುತ್ತಿದ್ದ ಗ್ಯಾಂಗ್‌ನ ನಾಲ್ವರನ್ನು ಮುಂಬೈನ ಚುನಭಟ್ಟಿ ಪೊಲೀಸರು ಬಂಧಿಸಿದ್ದಾರೆ.

“ಅರೆಕಾಲಿಕ ಉದ್ಯೋಗದ ಆಫರ್‌ ಬಂದಿತ್ತು, ಯೂಟ್ಯೂಬ್ ವಿಡಿಯೊಗಳನ್ನು ಲೈಕ್‌ ಮಾಡಿದರೆ ಹಣ ಕೊಡುವುದಾಗಿ ಹೇಳಿದ್ದರು” ಎಂದು ಮಾರ್ಚ್‌ನಲ್ಲಿ ದಾಖಲಾದ ದೂರಿನಲ್ಲಿ ಮಹಿಳೆಯೊಬ್ಬರು ವಿವರಿಸಿದ್ದಾರೆ.

ಮೆಸೇಜ್‌ ಕಳಿಸಿದವರು ಈ ಮಹಿಳೆಗೆ ಟೆಲಿಗ್ರಾಮ್‌ ಗ್ರೂಪ್‌ಗೆ ಸೇರಿಕೊಳ್ಳಲು ಸೂಚಿಸಿದ್ದರು. ಜೊತೆಗೆ ಈ ಮಹಿಳೆಗೆ ಲಿಂಕ್‌ ಕಳುಹಿಸಿದ್ದರು. ಸದರಿ ಮಹಿಳೆಯು ಲಿಂಕ್ ಕ್ಲಿಕ್ ಮಾಡಿದಾಗ, ಅದು ಮತ್ತೊಂದು ವೆಬ್‌ಸೈಟ್‌ಗೆ ಕರೆದೊಯ್ಯಿತು. ಬ್ಯಾಂಕ್ ವಿವರಗಳನ್ನು ಮತ್ತು ಖಾತೆಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಯನ್ನು ನೀಡುವಂತೆ ಆ ವೆಬ್‌ಸೈಟ್‌ನಲ್ಲಿ ಸೂಚಿಸಲಾಗಿತ್ತು.

“ಮಹಿಳೆಗೆ ಕಳುಹಿಸಲಾದ ಯೂಟ್ಯೂಬ್ ವೀಡಿಯೊ ಲೈಕ್‌ ಮಾಡಿದ್ದಕ್ಕೆ ಪ್ರತಿ ಲೈಕ್‌ಗೆ 150 ರೂ. ನೀಡಲಾಯಿತು” ಎಂದು ವಲಯ 6ರ ಡಿಸಿಪಿ ಹೇಮರಾಜ್ ರಜಪೂತ್ ಮಾಹಿತಿ ನೀಡಿದ್ದಾರೆ.

“ನೀವು ರೂ. 1,300 ಗಳಿಸಿದ್ದೀರಿ. 7,500 ರೂ. ಹಣವನ್ನು ನಿಮ್ಮ ಬ್ಯಾಂಕ್ ಖಾತೆಗೆ ಡೆಬಿಟ್ ಮಾಡಲಾಗುತ್ತದೆ ಎಂಬ ಸಂದೇಶಗಳನ್ನು ಆರೋಪಿಗಳು ಕಳುಹಿಸಿದ್ದರು. ನಂತರ ಆರೋಪಿಗಳು ರೂ. 12,000 ನಂತರ 25,000 ಮತ್ತು ರೂ. 50,000 ಹೂಡಿಕೆ ಮಾಡಲು ಹೇಳಿದರು. ಹೆಚ್ಚಿನ ಆದಾಯದ ಭರವಸೆ ನೀಡಿದರು, ಆದರೆ ಮಹಿಳೆಯು 4.3 ಲಕ್ಷ ರೂ. ನಷ್ಟ ಅನುಭವಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಹೀಗೆಯೇ ಮೋಸಹೋದ ಇನ್ನು ಮೂವರನ್ನು ಚುನಭಟ್ಟಿ ಪೊಲೀಸ್ ಠಾಣೆಯ ಸೈಬರ್ ಸೆಲ್, ತನಿಖೆಯ ಸಮಯದಲ್ಲಿ ಪತ್ತೆ ಹಚ್ಚಿದೆ. ಘಾಟ್ಕೋಪರ್‌ನ ಪಂತ್ ನಗರ, ಮಾಟುಂಗಾ ಮತ್ತು ಚುನಾಭಟ್ಟಿಯಲ್ಲಿ ಮೋಸಹೋದ ವ್ಯಕ್ತಿಗಳನ್ನು ಗುರುತಿಸಲಾಗಿದೆ.

ಪೋನ್‌ ಕರೆಗಳ ವಿವರ, ಐಪಿ ವಿಳಾಸ ಮತ್ತು ಹಣವನ್ನು ವರ್ಗಾಯಿಸಿದ ಬ್ಯಾಂಕ್ ಖಾತೆಗಳ ವಿವರಗಳನ್ನು ಬೆನ್ನು ಹತ್ತಿದ ಪೊಲೀಸರು, ಪಿಯೂಸ್ ಸೋನಿ, ರಾಜ್‌ಕುಮಾರ್ ಸೋನಿ, ಅರ್ಜುನ್ ಸೋನಿ ಮತ್ತು 17 ವರ್ಷದ ಯುವಕನನ್ನು ರಾಜಸ್ಥಾನದ ಅಲ್ವಾರ್‌ನಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. 30 ಫೋನುಗಳು ಮತ್ತು 30 ಸಿಮ್ ಕಾರ್ಡ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 97 ಲಕ್ಷ ರೂ.ಗಳೊಂದಿಗೆ 24 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ.

ವಾಟ್ಸ್‌ಅಪ್‌ ಮೂಲಕ ಹೇಗೆ ವಂಚಿಸುತ್ತಾರೆ?

ಸಾಮಾಜಿಕ ಮಾಧ್ಯಮಗಳನ್ನು ಬಳಸಿ ವಂಚನೆ ಮಾಡುವವರ ಸಂಖ್ಯೆಗೇನೂ ಕಡಿಮೆಯಿಲ್ಲ. ಈ ವಂಚನೆಯ ಜಾಲಗಳು ಕಾಲಕಾಲಕ್ಕೆ ಹೊಸ ಹೊಸ ರೂಪದಲ್ಲಿ ಬರುತ್ತವೆ. ಈಗ ಯೂಟ್ಯೂಬ್‌ ವಿಡಿಯೊ ಲೈಕ್ ಮಾಡಿದರೆ ಹಣ ನೀಡುತ್ತೇವೆ ಎಂಬ ಆಮಿಷದೊಂದಿಗೆ ವಂಚನೆಯ ಜಾಲ ಹಬ್ಬುತ್ತಿದೆ.

ಉದ್ಯೋಗ ಕಡಿತದಿಂದಲೋ ಅಥವಾ ಉದ್ಯೋಗವಕಾಶಗಳಿಲ್ಲದೆಯೋ ತೊಂದರೆ ಸಿಲುಕಿರುವವರು ಈ ವಂಚನೆಗೆ ಬಲಿಯಾಗುತ್ತಿದ್ದಾರೆ. ಯೂಟ್ಯೂಬ್‌ನಲ್ಲಿ ವಿಡಿಯೊವನ್ನು ಲೈಕ್ ಮಾಡಿದರೆ, ತಲಾ ಒಂದು ಲೈಕ್‌ಗೆ 50 ರೂಪಾಯಿ ನೀಡುತ್ತೇವೆ ಎಂಬ ಆಮಿಷದೊಂದಿಗೆ ಸ್ಕ್ಯಾಮರ್‌ಗಳು (ವಂಚಕರು) ನಿಮ್ಮನ್ನು ಸಂಪರ್ಕಿಸುತ್ತಾರೆ, ಈ ಕುರಿತು ಎಚ್ಚರ ವಹಿಸಬೇಕಿದೆ. ಇಲ್ಲವಾದರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್‌ ಗೋತಾ ಹೊಡೆಯುವ ಸಾಧ್ಯತೆ ಹೆಚ್ಚಿದೆ. ಈ ಕುರಿತು ‘ದಿ ಎಕನಾಮಿಕ್ ಟೈಮ್ಸ್‌’ ವರದಿ ಮಾಡಿದೆ.

ದಿನಕ್ಕೆ ರೂ. 5000ವರೆಗೆ ನೀವು ಗಳಿಸಬಹುದು ಎಂಬ ಆಮಿಷದೊಂದಿಗೆ ವಾಟ್ಸ್‌ಅಪ್‌, ಲಿಂಕ್ಡ್‌ಇನ್‌ ಮತ್ತು ಫೇಸ್‌ಬುಕ್‌ನಂತಹ ಸಾಮಾಜಿಕ ಮಾಧ್ಯಮಗಳ ಮೂಲಕ ವಂಚಕರು ನಿಮ್ಮನ್ನು ಸಂಪರ್ಕಿಸುತ್ತಾರೆ. ಪಾವತಿಯನ್ನು ಮುಂದುವರಿಸಲು, ಅವರು ಆಗಾಗ್ಗೆ ವೈಯಕ್ತಿಕ ಮಾಹಿತಿಯನ್ನು ನೀಡುವಂತೆ ಕೋರುತ್ತಾರೆ. ಸಾಂದರ್ಭಿಕವಾಗಿ ನಿಮ್ಮೊಂದಿಗೆ ವ್ಯವಹರಿಸುತ್ತಾ ಅಸ್ತಿತ್ವದಲ್ಲಿಯೇ ಇಲ್ಲದಿರುವ ಉದ್ಯೋಗಕ್ಕೆ ಪ್ರವೇಶ ಪಡೆಯುವಂತೆ ಅವರು ನಿಮ್ಮನ್ನು ಕಾಡಲಾರಂಭಿಸುತ್ತಾರೆ.

ಈ ವಂಚಕರು ಹೇಗೆ ಕಾರ್ಯನಿರ್ವಹಿಸುತ್ತಾರೆ?

ಕೆಲವೇ ಕೆಲವರಿಗೆ ಉದ್ಯೋಗವಕಾಶಗಳಿವೆ ಎಂಬ ಮಾಹಿತಿಯೊಂದಿಗೆ ವಂಚಕರು ನಿಮಗೆ ಸಂದೇಶ ಕಳುಹಿಸುವ ಮೂಲಕ ಸಂಪರ್ಕ ಸಾಧಿಸುತ್ತಾರೆ. ನಿಮ್ಮ ಉದ್ಯೋಗವನ್ನು ಕಾಯ್ದಿರಿಸಲು ನೀವು ಪ್ರತಿಕ್ರಿಯಿಸಬೇಕಾಗುತ್ತದೆ.

ಬಲಿಪಶುವಾಗಲಿರುವ ವ್ಯಕ್ತಿ, “ಏನು ಕೆಲಸ?” ಎಂದು ಕೇಳಿದಾಗ, “ನೀವು ಇಲ್ಲಿ ಮಾಡಬೇಕಾಗಿರುವ ಕೆಲಸವಿಷ್ಟೇ. ಯೂಟ್ಯೂಬ್‌ನಲ್ಲಿ ವೀಡಿಯೊಗಳನ್ನು ಲೈಕ್ ಮಾಡಬೇಕು. ನೀವು ಲೈಕ್ ಮಾಡಿದ ಪ್ರತಿ ವಿಡಿಯೊಗೆ ರೂ. ಐವತ್ತು ರೂಪಾಯಿ ಪಾವತಿಸುತ್ತೇವೆ” ಎಂದು ವಂಚಕರು ತಿಳಿಸುತ್ತಾರೆ.

ಈ ಮಾದರಿಯಲ್ಲಿ ನಿಮಗೆ ಸಂದೇಶ ಬರುತ್ತವೆ

ನಕಲಿ ಖಾತೆಗಳ ಮೂಲಕ ಬೋಟ್ ಫಾರ್ಮ್‌ಗಳನ್ನು ಬಳಸಿಕೊಂಡು ನಕಲಿ ಯೂಟ್ಯೂಬ್‌ ಲೈಕ್‌ಗಳನ್ನು ಸೃಷ್ಟಿಸುವುದು ಈ ವಂಚಕರ ವ್ಯವಹಾರ ಮಾದರಿಯಾಗಿದೆ. ಆದರೆ, ಈ ಮಾಹಿತಿಯ ಕೊರತೆಯಿಂದ ಜನರು ತೊಂದರೆಗೆ ಸಿಲುಕಿಕೊಳ್ಳುತ್ತಾರೆ.

ಜಾಗತಿಕ ಸಾಮಾಜಿಕ ಮಾಧ್ಯಮ ಅಥವಾ ಇಂಟರ್ನೆಟ್ ಕಂಪನಿಯಲ್ಲಿ ನಮ್ಮ ಕೆಲಸ ನಡೆಯುತ್ತಿದೆ ಎಂದು ನಿಮ್ಮನ್ನು ನಂಬಿಸಲು ಈ ವಂಚಕರು ಪ್ರಯತ್ನಿಸುತ್ತಾರೆ.

ಹೀಗೆ ನಿಮ್ಮನ್ನು ಸಂಪರ್ಕಿಸಿದವರು 150 ರೂಪಾಯಿಯಂತಹ ಸಣ್ಣ ಮೊತ್ತವನ್ನು ಮೊದಲು ನಿಮಗೆ ನೀಡುತ್ತಾರೆ. “ಮೂರು ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿ” ಈ ಹಣವನ್ನು ನಿಮಗೆ ಪಾವತಿಸಿರುತ್ತಾರೆ. ಅವರು ನಿಮಗೆ ಮೂರು ಯೂಟ್ಯೂಬ್‌ ವೀಡಿಯೊಗಳ ಲಿಂಕ್‌ಗಳನ್ನು ಕಳುಹಿಸುತ್ತಾರೆ, ಅವುಗಳನ್ನು ಲೈಕ್‌ ಮಾಡುವಂತೆ ಕೇಳುತ್ತಾರೆ. ನಂತರ ನೀವು ಲೈಕ್‌ ಮಾಡಿರುವ ಸಾಕ್ಷಿಗಾಗಿ ಸ್ಕ್ರೀನ್‌ಶಾಟ್ ಕಳುಹಿಸುವಂತೆ ತಿಳಿಸುತ್ತಾರೆ.

ಈ ಸ್ಕ್ಯಾಮ್‌ ನಂತರದಲ್ಲಿ ಎರಡನೇ ಹಂತಕ್ಕೆ ಹೋಗುತ್ತದೆ. ಇಲ್ಲಿಂದ ನೀವು ತೊಂದರೆ ಸಿಲುಕಿಕೊಳ್ಳಲು ಆರಂಭಿಸುತ್ತೀರಿ. “ನಿಮಗೆ ಹಣ ವರ್ಗಾವಣೆ ಮಾಡಲು ತೊಂದರೆಯಾಗುತ್ತಿದೆ” ಎಂಬ ಉತ್ತರವನ್ನು ಅವರು ನೀಡುತ್ತಾರೆ. ನಿಮಗೆ ಹಣ ವರ್ಗಾಯಿಸಲು ಸುಲಭವಾಗುವಂತೆ ಅಪ್ಲಿಕೇಷನ್‌ ಒಂದನ್ನು ಡೌನ್‌ಲೋಡ್ ಮಾಡಿಕೊಳ್ಳಲು ನಿಮ್ಮಲ್ಲಿ ತಿಳಿಸುತ್ತಾರೆ.

ಈ ಅಪ್ಲಿಕೇಷನ್‌ ಇದೆಯಲ್ಲ- ಅದರ ಮೂಲಕ ನಿಮ್ಮ ಮೊಬೈಲ್‌ ಅಥವಾ ಇನ್ನ್ಯಾವುದೇ ಡಿವೈಸ್‌ ಒಳಗೆ ಈ ವಂಚಕರು ಸುಲಭವಾಗಿ ಪ್ರವೇಶಿಸುತ್ತಾರೆ. ಇದು ಒಂದು ರೀತಿಯಲ್ಲಿ ಮಾಲ್‌ವೇರ್‌ ಸಾಫ್ಟ್‌ವೇರ್‌ ಆಗಿದೆ. ನಿಮಗೆ ಹಣವನ್ನು ಪಾವತಿಸುವ ಕನ್ಫರ್ಮೇಷನ್‌ಗಾಗಿ ಒಂದು ರೂಪಾಯಿ ಕಳಿಹಿಸಲು ಸೂಚಿಸುತ್ತಾರೆ. ಈ ಹಣ ಪಡೆಯುವುದು ಪರಿಶೀಲನೆಗಾಗಿಯಷ್ಟೇ ಎಂದು ನಂಬಿಸುತ್ತಾರೆ. ನೀವಿಷ್ಟು ಮಾಡಿದರೆ ಸಾಕು, ನಿಮ್ಮ ಒಟಿಪಿಗಳಿಗೆ, ಇಮೇಲ್‌ಗೆ, ಬ್ಯಾಂಕ್‌ ಖಾತೆ ಮತ್ತು ಕ್ರೆಡಿಟ್ ಕಾರ್ಡ್‌ಗೆ ಸಂಪೂರ್ಣವಾಗಿ ಪ್ರವೇಶವನ್ನು ಅವರು ಪಡೆಯುತ್ತಾರೆ. ನಿಮ್ಮ ಖಾತೆಯಲ್ಲಿರುವ ಹಣವೆಲ್ಲ ಖೋತಾ ಹೊಡೆಯುತ್ತದೆ.

ಇದನ್ನೂ ಓದಿರಿ: ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....