Homeಮುಖಪುಟವಾಟ್ಸ್‌ಅಪ್‌ ವಂಚನೆ ಜಾಲ: ನಾಲ್ವರು ಖದೀಮರು ಅರೆಸ್ಟ್‌

ವಾಟ್ಸ್‌ಅಪ್‌ ವಂಚನೆ ಜಾಲ: ನಾಲ್ವರು ಖದೀಮರು ಅರೆಸ್ಟ್‌

ಯೂಟ್ಯೂಬ್‌ ವಿಡಿಯೊ ಲೈಕ್ ಮಾಡಿದರೆ ದುಡ್ಡುಕೊಡುತ್ತೇವೆ ಎನ್ನುವ ಸಂದೇಶಗಳ ಕುರಿತು ಎಚ್ಚರವಿರಲಿ!

- Advertisement -
- Advertisement -

ಯೂಟ್ಯೂಬ್ ವಿಡಿಯೋಗಳನ್ನು ಲೈಕ್ ಮಾಡಿದರೆ ದುಡ್ದು ಕೊಡುತ್ತೇವೆ, ಹೂಡಿಕೆ ಮಾಡಿದರೆ ಹೆಚ್ಚಿನ ಆದಾಯ ಸಿಗುತ್ತದೆ ಎಂಬ ಭರವಸೆ ನೀಡಿ ವಾಟ್ಸ್‌ಅಪ್‌ ಮೂಲಕ ದೇಶಾದ್ಯಂತ ಜನರನ್ನು ವಂಚಿಸುತ್ತಿದ್ದ ಗ್ಯಾಂಗ್‌ನ ನಾಲ್ವರನ್ನು ಮುಂಬೈನ ಚುನಭಟ್ಟಿ ಪೊಲೀಸರು ಬಂಧಿಸಿದ್ದಾರೆ.

“ಅರೆಕಾಲಿಕ ಉದ್ಯೋಗದ ಆಫರ್‌ ಬಂದಿತ್ತು, ಯೂಟ್ಯೂಬ್ ವಿಡಿಯೊಗಳನ್ನು ಲೈಕ್‌ ಮಾಡಿದರೆ ಹಣ ಕೊಡುವುದಾಗಿ ಹೇಳಿದ್ದರು” ಎಂದು ಮಾರ್ಚ್‌ನಲ್ಲಿ ದಾಖಲಾದ ದೂರಿನಲ್ಲಿ ಮಹಿಳೆಯೊಬ್ಬರು ವಿವರಿಸಿದ್ದಾರೆ.

ಮೆಸೇಜ್‌ ಕಳಿಸಿದವರು ಈ ಮಹಿಳೆಗೆ ಟೆಲಿಗ್ರಾಮ್‌ ಗ್ರೂಪ್‌ಗೆ ಸೇರಿಕೊಳ್ಳಲು ಸೂಚಿಸಿದ್ದರು. ಜೊತೆಗೆ ಈ ಮಹಿಳೆಗೆ ಲಿಂಕ್‌ ಕಳುಹಿಸಿದ್ದರು. ಸದರಿ ಮಹಿಳೆಯು ಲಿಂಕ್ ಕ್ಲಿಕ್ ಮಾಡಿದಾಗ, ಅದು ಮತ್ತೊಂದು ವೆಬ್‌ಸೈಟ್‌ಗೆ ಕರೆದೊಯ್ಯಿತು. ಬ್ಯಾಂಕ್ ವಿವರಗಳನ್ನು ಮತ್ತು ಖಾತೆಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಯನ್ನು ನೀಡುವಂತೆ ಆ ವೆಬ್‌ಸೈಟ್‌ನಲ್ಲಿ ಸೂಚಿಸಲಾಗಿತ್ತು.

“ಮಹಿಳೆಗೆ ಕಳುಹಿಸಲಾದ ಯೂಟ್ಯೂಬ್ ವೀಡಿಯೊ ಲೈಕ್‌ ಮಾಡಿದ್ದಕ್ಕೆ ಪ್ರತಿ ಲೈಕ್‌ಗೆ 150 ರೂ. ನೀಡಲಾಯಿತು” ಎಂದು ವಲಯ 6ರ ಡಿಸಿಪಿ ಹೇಮರಾಜ್ ರಜಪೂತ್ ಮಾಹಿತಿ ನೀಡಿದ್ದಾರೆ.

“ನೀವು ರೂ. 1,300 ಗಳಿಸಿದ್ದೀರಿ. 7,500 ರೂ. ಹಣವನ್ನು ನಿಮ್ಮ ಬ್ಯಾಂಕ್ ಖಾತೆಗೆ ಡೆಬಿಟ್ ಮಾಡಲಾಗುತ್ತದೆ ಎಂಬ ಸಂದೇಶಗಳನ್ನು ಆರೋಪಿಗಳು ಕಳುಹಿಸಿದ್ದರು. ನಂತರ ಆರೋಪಿಗಳು ರೂ. 12,000 ನಂತರ 25,000 ಮತ್ತು ರೂ. 50,000 ಹೂಡಿಕೆ ಮಾಡಲು ಹೇಳಿದರು. ಹೆಚ್ಚಿನ ಆದಾಯದ ಭರವಸೆ ನೀಡಿದರು, ಆದರೆ ಮಹಿಳೆಯು 4.3 ಲಕ್ಷ ರೂ. ನಷ್ಟ ಅನುಭವಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಹೀಗೆಯೇ ಮೋಸಹೋದ ಇನ್ನು ಮೂವರನ್ನು ಚುನಭಟ್ಟಿ ಪೊಲೀಸ್ ಠಾಣೆಯ ಸೈಬರ್ ಸೆಲ್, ತನಿಖೆಯ ಸಮಯದಲ್ಲಿ ಪತ್ತೆ ಹಚ್ಚಿದೆ. ಘಾಟ್ಕೋಪರ್‌ನ ಪಂತ್ ನಗರ, ಮಾಟುಂಗಾ ಮತ್ತು ಚುನಾಭಟ್ಟಿಯಲ್ಲಿ ಮೋಸಹೋದ ವ್ಯಕ್ತಿಗಳನ್ನು ಗುರುತಿಸಲಾಗಿದೆ.

ಪೋನ್‌ ಕರೆಗಳ ವಿವರ, ಐಪಿ ವಿಳಾಸ ಮತ್ತು ಹಣವನ್ನು ವರ್ಗಾಯಿಸಿದ ಬ್ಯಾಂಕ್ ಖಾತೆಗಳ ವಿವರಗಳನ್ನು ಬೆನ್ನು ಹತ್ತಿದ ಪೊಲೀಸರು, ಪಿಯೂಸ್ ಸೋನಿ, ರಾಜ್‌ಕುಮಾರ್ ಸೋನಿ, ಅರ್ಜುನ್ ಸೋನಿ ಮತ್ತು 17 ವರ್ಷದ ಯುವಕನನ್ನು ರಾಜಸ್ಥಾನದ ಅಲ್ವಾರ್‌ನಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. 30 ಫೋನುಗಳು ಮತ್ತು 30 ಸಿಮ್ ಕಾರ್ಡ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 97 ಲಕ್ಷ ರೂ.ಗಳೊಂದಿಗೆ 24 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ.

ವಾಟ್ಸ್‌ಅಪ್‌ ಮೂಲಕ ಹೇಗೆ ವಂಚಿಸುತ್ತಾರೆ?

ಸಾಮಾಜಿಕ ಮಾಧ್ಯಮಗಳನ್ನು ಬಳಸಿ ವಂಚನೆ ಮಾಡುವವರ ಸಂಖ್ಯೆಗೇನೂ ಕಡಿಮೆಯಿಲ್ಲ. ಈ ವಂಚನೆಯ ಜಾಲಗಳು ಕಾಲಕಾಲಕ್ಕೆ ಹೊಸ ಹೊಸ ರೂಪದಲ್ಲಿ ಬರುತ್ತವೆ. ಈಗ ಯೂಟ್ಯೂಬ್‌ ವಿಡಿಯೊ ಲೈಕ್ ಮಾಡಿದರೆ ಹಣ ನೀಡುತ್ತೇವೆ ಎಂಬ ಆಮಿಷದೊಂದಿಗೆ ವಂಚನೆಯ ಜಾಲ ಹಬ್ಬುತ್ತಿದೆ.

ಉದ್ಯೋಗ ಕಡಿತದಿಂದಲೋ ಅಥವಾ ಉದ್ಯೋಗವಕಾಶಗಳಿಲ್ಲದೆಯೋ ತೊಂದರೆ ಸಿಲುಕಿರುವವರು ಈ ವಂಚನೆಗೆ ಬಲಿಯಾಗುತ್ತಿದ್ದಾರೆ. ಯೂಟ್ಯೂಬ್‌ನಲ್ಲಿ ವಿಡಿಯೊವನ್ನು ಲೈಕ್ ಮಾಡಿದರೆ, ತಲಾ ಒಂದು ಲೈಕ್‌ಗೆ 50 ರೂಪಾಯಿ ನೀಡುತ್ತೇವೆ ಎಂಬ ಆಮಿಷದೊಂದಿಗೆ ಸ್ಕ್ಯಾಮರ್‌ಗಳು (ವಂಚಕರು) ನಿಮ್ಮನ್ನು ಸಂಪರ್ಕಿಸುತ್ತಾರೆ, ಈ ಕುರಿತು ಎಚ್ಚರ ವಹಿಸಬೇಕಿದೆ. ಇಲ್ಲವಾದರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್‌ ಗೋತಾ ಹೊಡೆಯುವ ಸಾಧ್ಯತೆ ಹೆಚ್ಚಿದೆ. ಈ ಕುರಿತು ‘ದಿ ಎಕನಾಮಿಕ್ ಟೈಮ್ಸ್‌’ ವರದಿ ಮಾಡಿದೆ.

ದಿನಕ್ಕೆ ರೂ. 5000ವರೆಗೆ ನೀವು ಗಳಿಸಬಹುದು ಎಂಬ ಆಮಿಷದೊಂದಿಗೆ ವಾಟ್ಸ್‌ಅಪ್‌, ಲಿಂಕ್ಡ್‌ಇನ್‌ ಮತ್ತು ಫೇಸ್‌ಬುಕ್‌ನಂತಹ ಸಾಮಾಜಿಕ ಮಾಧ್ಯಮಗಳ ಮೂಲಕ ವಂಚಕರು ನಿಮ್ಮನ್ನು ಸಂಪರ್ಕಿಸುತ್ತಾರೆ. ಪಾವತಿಯನ್ನು ಮುಂದುವರಿಸಲು, ಅವರು ಆಗಾಗ್ಗೆ ವೈಯಕ್ತಿಕ ಮಾಹಿತಿಯನ್ನು ನೀಡುವಂತೆ ಕೋರುತ್ತಾರೆ. ಸಾಂದರ್ಭಿಕವಾಗಿ ನಿಮ್ಮೊಂದಿಗೆ ವ್ಯವಹರಿಸುತ್ತಾ ಅಸ್ತಿತ್ವದಲ್ಲಿಯೇ ಇಲ್ಲದಿರುವ ಉದ್ಯೋಗಕ್ಕೆ ಪ್ರವೇಶ ಪಡೆಯುವಂತೆ ಅವರು ನಿಮ್ಮನ್ನು ಕಾಡಲಾರಂಭಿಸುತ್ತಾರೆ.

ಈ ವಂಚಕರು ಹೇಗೆ ಕಾರ್ಯನಿರ್ವಹಿಸುತ್ತಾರೆ?

ಕೆಲವೇ ಕೆಲವರಿಗೆ ಉದ್ಯೋಗವಕಾಶಗಳಿವೆ ಎಂಬ ಮಾಹಿತಿಯೊಂದಿಗೆ ವಂಚಕರು ನಿಮಗೆ ಸಂದೇಶ ಕಳುಹಿಸುವ ಮೂಲಕ ಸಂಪರ್ಕ ಸಾಧಿಸುತ್ತಾರೆ. ನಿಮ್ಮ ಉದ್ಯೋಗವನ್ನು ಕಾಯ್ದಿರಿಸಲು ನೀವು ಪ್ರತಿಕ್ರಿಯಿಸಬೇಕಾಗುತ್ತದೆ.

ಬಲಿಪಶುವಾಗಲಿರುವ ವ್ಯಕ್ತಿ, “ಏನು ಕೆಲಸ?” ಎಂದು ಕೇಳಿದಾಗ, “ನೀವು ಇಲ್ಲಿ ಮಾಡಬೇಕಾಗಿರುವ ಕೆಲಸವಿಷ್ಟೇ. ಯೂಟ್ಯೂಬ್‌ನಲ್ಲಿ ವೀಡಿಯೊಗಳನ್ನು ಲೈಕ್ ಮಾಡಬೇಕು. ನೀವು ಲೈಕ್ ಮಾಡಿದ ಪ್ರತಿ ವಿಡಿಯೊಗೆ ರೂ. ಐವತ್ತು ರೂಪಾಯಿ ಪಾವತಿಸುತ್ತೇವೆ” ಎಂದು ವಂಚಕರು ತಿಳಿಸುತ್ತಾರೆ.

ಈ ಮಾದರಿಯಲ್ಲಿ ನಿಮಗೆ ಸಂದೇಶ ಬರುತ್ತವೆ

ನಕಲಿ ಖಾತೆಗಳ ಮೂಲಕ ಬೋಟ್ ಫಾರ್ಮ್‌ಗಳನ್ನು ಬಳಸಿಕೊಂಡು ನಕಲಿ ಯೂಟ್ಯೂಬ್‌ ಲೈಕ್‌ಗಳನ್ನು ಸೃಷ್ಟಿಸುವುದು ಈ ವಂಚಕರ ವ್ಯವಹಾರ ಮಾದರಿಯಾಗಿದೆ. ಆದರೆ, ಈ ಮಾಹಿತಿಯ ಕೊರತೆಯಿಂದ ಜನರು ತೊಂದರೆಗೆ ಸಿಲುಕಿಕೊಳ್ಳುತ್ತಾರೆ.

ಜಾಗತಿಕ ಸಾಮಾಜಿಕ ಮಾಧ್ಯಮ ಅಥವಾ ಇಂಟರ್ನೆಟ್ ಕಂಪನಿಯಲ್ಲಿ ನಮ್ಮ ಕೆಲಸ ನಡೆಯುತ್ತಿದೆ ಎಂದು ನಿಮ್ಮನ್ನು ನಂಬಿಸಲು ಈ ವಂಚಕರು ಪ್ರಯತ್ನಿಸುತ್ತಾರೆ.

ಹೀಗೆ ನಿಮ್ಮನ್ನು ಸಂಪರ್ಕಿಸಿದವರು 150 ರೂಪಾಯಿಯಂತಹ ಸಣ್ಣ ಮೊತ್ತವನ್ನು ಮೊದಲು ನಿಮಗೆ ನೀಡುತ್ತಾರೆ. “ಮೂರು ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿ” ಈ ಹಣವನ್ನು ನಿಮಗೆ ಪಾವತಿಸಿರುತ್ತಾರೆ. ಅವರು ನಿಮಗೆ ಮೂರು ಯೂಟ್ಯೂಬ್‌ ವೀಡಿಯೊಗಳ ಲಿಂಕ್‌ಗಳನ್ನು ಕಳುಹಿಸುತ್ತಾರೆ, ಅವುಗಳನ್ನು ಲೈಕ್‌ ಮಾಡುವಂತೆ ಕೇಳುತ್ತಾರೆ. ನಂತರ ನೀವು ಲೈಕ್‌ ಮಾಡಿರುವ ಸಾಕ್ಷಿಗಾಗಿ ಸ್ಕ್ರೀನ್‌ಶಾಟ್ ಕಳುಹಿಸುವಂತೆ ತಿಳಿಸುತ್ತಾರೆ.

ಈ ಸ್ಕ್ಯಾಮ್‌ ನಂತರದಲ್ಲಿ ಎರಡನೇ ಹಂತಕ್ಕೆ ಹೋಗುತ್ತದೆ. ಇಲ್ಲಿಂದ ನೀವು ತೊಂದರೆ ಸಿಲುಕಿಕೊಳ್ಳಲು ಆರಂಭಿಸುತ್ತೀರಿ. “ನಿಮಗೆ ಹಣ ವರ್ಗಾವಣೆ ಮಾಡಲು ತೊಂದರೆಯಾಗುತ್ತಿದೆ” ಎಂಬ ಉತ್ತರವನ್ನು ಅವರು ನೀಡುತ್ತಾರೆ. ನಿಮಗೆ ಹಣ ವರ್ಗಾಯಿಸಲು ಸುಲಭವಾಗುವಂತೆ ಅಪ್ಲಿಕೇಷನ್‌ ಒಂದನ್ನು ಡೌನ್‌ಲೋಡ್ ಮಾಡಿಕೊಳ್ಳಲು ನಿಮ್ಮಲ್ಲಿ ತಿಳಿಸುತ್ತಾರೆ.

ಈ ಅಪ್ಲಿಕೇಷನ್‌ ಇದೆಯಲ್ಲ- ಅದರ ಮೂಲಕ ನಿಮ್ಮ ಮೊಬೈಲ್‌ ಅಥವಾ ಇನ್ನ್ಯಾವುದೇ ಡಿವೈಸ್‌ ಒಳಗೆ ಈ ವಂಚಕರು ಸುಲಭವಾಗಿ ಪ್ರವೇಶಿಸುತ್ತಾರೆ. ಇದು ಒಂದು ರೀತಿಯಲ್ಲಿ ಮಾಲ್‌ವೇರ್‌ ಸಾಫ್ಟ್‌ವೇರ್‌ ಆಗಿದೆ. ನಿಮಗೆ ಹಣವನ್ನು ಪಾವತಿಸುವ ಕನ್ಫರ್ಮೇಷನ್‌ಗಾಗಿ ಒಂದು ರೂಪಾಯಿ ಕಳಿಹಿಸಲು ಸೂಚಿಸುತ್ತಾರೆ. ಈ ಹಣ ಪಡೆಯುವುದು ಪರಿಶೀಲನೆಗಾಗಿಯಷ್ಟೇ ಎಂದು ನಂಬಿಸುತ್ತಾರೆ. ನೀವಿಷ್ಟು ಮಾಡಿದರೆ ಸಾಕು, ನಿಮ್ಮ ಒಟಿಪಿಗಳಿಗೆ, ಇಮೇಲ್‌ಗೆ, ಬ್ಯಾಂಕ್‌ ಖಾತೆ ಮತ್ತು ಕ್ರೆಡಿಟ್ ಕಾರ್ಡ್‌ಗೆ ಸಂಪೂರ್ಣವಾಗಿ ಪ್ರವೇಶವನ್ನು ಅವರು ಪಡೆಯುತ್ತಾರೆ. ನಿಮ್ಮ ಖಾತೆಯಲ್ಲಿರುವ ಹಣವೆಲ್ಲ ಖೋತಾ ಹೊಡೆಯುತ್ತದೆ.

ಇದನ್ನೂ ಓದಿರಿ: ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...