Homeಮುಖಪುಟವಾಟ್ಸ್‌ಅಪ್‌ ವಂಚನೆ ಜಾಲ: ನಾಲ್ವರು ಖದೀಮರು ಅರೆಸ್ಟ್‌

ವಾಟ್ಸ್‌ಅಪ್‌ ವಂಚನೆ ಜಾಲ: ನಾಲ್ವರು ಖದೀಮರು ಅರೆಸ್ಟ್‌

ಯೂಟ್ಯೂಬ್‌ ವಿಡಿಯೊ ಲೈಕ್ ಮಾಡಿದರೆ ದುಡ್ಡುಕೊಡುತ್ತೇವೆ ಎನ್ನುವ ಸಂದೇಶಗಳ ಕುರಿತು ಎಚ್ಚರವಿರಲಿ!

- Advertisement -
- Advertisement -

ಯೂಟ್ಯೂಬ್ ವಿಡಿಯೋಗಳನ್ನು ಲೈಕ್ ಮಾಡಿದರೆ ದುಡ್ದು ಕೊಡುತ್ತೇವೆ, ಹೂಡಿಕೆ ಮಾಡಿದರೆ ಹೆಚ್ಚಿನ ಆದಾಯ ಸಿಗುತ್ತದೆ ಎಂಬ ಭರವಸೆ ನೀಡಿ ವಾಟ್ಸ್‌ಅಪ್‌ ಮೂಲಕ ದೇಶಾದ್ಯಂತ ಜನರನ್ನು ವಂಚಿಸುತ್ತಿದ್ದ ಗ್ಯಾಂಗ್‌ನ ನಾಲ್ವರನ್ನು ಮುಂಬೈನ ಚುನಭಟ್ಟಿ ಪೊಲೀಸರು ಬಂಧಿಸಿದ್ದಾರೆ.

“ಅರೆಕಾಲಿಕ ಉದ್ಯೋಗದ ಆಫರ್‌ ಬಂದಿತ್ತು, ಯೂಟ್ಯೂಬ್ ವಿಡಿಯೊಗಳನ್ನು ಲೈಕ್‌ ಮಾಡಿದರೆ ಹಣ ಕೊಡುವುದಾಗಿ ಹೇಳಿದ್ದರು” ಎಂದು ಮಾರ್ಚ್‌ನಲ್ಲಿ ದಾಖಲಾದ ದೂರಿನಲ್ಲಿ ಮಹಿಳೆಯೊಬ್ಬರು ವಿವರಿಸಿದ್ದಾರೆ.

ಮೆಸೇಜ್‌ ಕಳಿಸಿದವರು ಈ ಮಹಿಳೆಗೆ ಟೆಲಿಗ್ರಾಮ್‌ ಗ್ರೂಪ್‌ಗೆ ಸೇರಿಕೊಳ್ಳಲು ಸೂಚಿಸಿದ್ದರು. ಜೊತೆಗೆ ಈ ಮಹಿಳೆಗೆ ಲಿಂಕ್‌ ಕಳುಹಿಸಿದ್ದರು. ಸದರಿ ಮಹಿಳೆಯು ಲಿಂಕ್ ಕ್ಲಿಕ್ ಮಾಡಿದಾಗ, ಅದು ಮತ್ತೊಂದು ವೆಬ್‌ಸೈಟ್‌ಗೆ ಕರೆದೊಯ್ಯಿತು. ಬ್ಯಾಂಕ್ ವಿವರಗಳನ್ನು ಮತ್ತು ಖಾತೆಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಯನ್ನು ನೀಡುವಂತೆ ಆ ವೆಬ್‌ಸೈಟ್‌ನಲ್ಲಿ ಸೂಚಿಸಲಾಗಿತ್ತು.

“ಮಹಿಳೆಗೆ ಕಳುಹಿಸಲಾದ ಯೂಟ್ಯೂಬ್ ವೀಡಿಯೊ ಲೈಕ್‌ ಮಾಡಿದ್ದಕ್ಕೆ ಪ್ರತಿ ಲೈಕ್‌ಗೆ 150 ರೂ. ನೀಡಲಾಯಿತು” ಎಂದು ವಲಯ 6ರ ಡಿಸಿಪಿ ಹೇಮರಾಜ್ ರಜಪೂತ್ ಮಾಹಿತಿ ನೀಡಿದ್ದಾರೆ.

“ನೀವು ರೂ. 1,300 ಗಳಿಸಿದ್ದೀರಿ. 7,500 ರೂ. ಹಣವನ್ನು ನಿಮ್ಮ ಬ್ಯಾಂಕ್ ಖಾತೆಗೆ ಡೆಬಿಟ್ ಮಾಡಲಾಗುತ್ತದೆ ಎಂಬ ಸಂದೇಶಗಳನ್ನು ಆರೋಪಿಗಳು ಕಳುಹಿಸಿದ್ದರು. ನಂತರ ಆರೋಪಿಗಳು ರೂ. 12,000 ನಂತರ 25,000 ಮತ್ತು ರೂ. 50,000 ಹೂಡಿಕೆ ಮಾಡಲು ಹೇಳಿದರು. ಹೆಚ್ಚಿನ ಆದಾಯದ ಭರವಸೆ ನೀಡಿದರು, ಆದರೆ ಮಹಿಳೆಯು 4.3 ಲಕ್ಷ ರೂ. ನಷ್ಟ ಅನುಭವಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಹೀಗೆಯೇ ಮೋಸಹೋದ ಇನ್ನು ಮೂವರನ್ನು ಚುನಭಟ್ಟಿ ಪೊಲೀಸ್ ಠಾಣೆಯ ಸೈಬರ್ ಸೆಲ್, ತನಿಖೆಯ ಸಮಯದಲ್ಲಿ ಪತ್ತೆ ಹಚ್ಚಿದೆ. ಘಾಟ್ಕೋಪರ್‌ನ ಪಂತ್ ನಗರ, ಮಾಟುಂಗಾ ಮತ್ತು ಚುನಾಭಟ್ಟಿಯಲ್ಲಿ ಮೋಸಹೋದ ವ್ಯಕ್ತಿಗಳನ್ನು ಗುರುತಿಸಲಾಗಿದೆ.

ಪೋನ್‌ ಕರೆಗಳ ವಿವರ, ಐಪಿ ವಿಳಾಸ ಮತ್ತು ಹಣವನ್ನು ವರ್ಗಾಯಿಸಿದ ಬ್ಯಾಂಕ್ ಖಾತೆಗಳ ವಿವರಗಳನ್ನು ಬೆನ್ನು ಹತ್ತಿದ ಪೊಲೀಸರು, ಪಿಯೂಸ್ ಸೋನಿ, ರಾಜ್‌ಕುಮಾರ್ ಸೋನಿ, ಅರ್ಜುನ್ ಸೋನಿ ಮತ್ತು 17 ವರ್ಷದ ಯುವಕನನ್ನು ರಾಜಸ್ಥಾನದ ಅಲ್ವಾರ್‌ನಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. 30 ಫೋನುಗಳು ಮತ್ತು 30 ಸಿಮ್ ಕಾರ್ಡ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 97 ಲಕ್ಷ ರೂ.ಗಳೊಂದಿಗೆ 24 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ.

ವಾಟ್ಸ್‌ಅಪ್‌ ಮೂಲಕ ಹೇಗೆ ವಂಚಿಸುತ್ತಾರೆ?

ಸಾಮಾಜಿಕ ಮಾಧ್ಯಮಗಳನ್ನು ಬಳಸಿ ವಂಚನೆ ಮಾಡುವವರ ಸಂಖ್ಯೆಗೇನೂ ಕಡಿಮೆಯಿಲ್ಲ. ಈ ವಂಚನೆಯ ಜಾಲಗಳು ಕಾಲಕಾಲಕ್ಕೆ ಹೊಸ ಹೊಸ ರೂಪದಲ್ಲಿ ಬರುತ್ತವೆ. ಈಗ ಯೂಟ್ಯೂಬ್‌ ವಿಡಿಯೊ ಲೈಕ್ ಮಾಡಿದರೆ ಹಣ ನೀಡುತ್ತೇವೆ ಎಂಬ ಆಮಿಷದೊಂದಿಗೆ ವಂಚನೆಯ ಜಾಲ ಹಬ್ಬುತ್ತಿದೆ.

ಉದ್ಯೋಗ ಕಡಿತದಿಂದಲೋ ಅಥವಾ ಉದ್ಯೋಗವಕಾಶಗಳಿಲ್ಲದೆಯೋ ತೊಂದರೆ ಸಿಲುಕಿರುವವರು ಈ ವಂಚನೆಗೆ ಬಲಿಯಾಗುತ್ತಿದ್ದಾರೆ. ಯೂಟ್ಯೂಬ್‌ನಲ್ಲಿ ವಿಡಿಯೊವನ್ನು ಲೈಕ್ ಮಾಡಿದರೆ, ತಲಾ ಒಂದು ಲೈಕ್‌ಗೆ 50 ರೂಪಾಯಿ ನೀಡುತ್ತೇವೆ ಎಂಬ ಆಮಿಷದೊಂದಿಗೆ ಸ್ಕ್ಯಾಮರ್‌ಗಳು (ವಂಚಕರು) ನಿಮ್ಮನ್ನು ಸಂಪರ್ಕಿಸುತ್ತಾರೆ, ಈ ಕುರಿತು ಎಚ್ಚರ ವಹಿಸಬೇಕಿದೆ. ಇಲ್ಲವಾದರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್‌ ಗೋತಾ ಹೊಡೆಯುವ ಸಾಧ್ಯತೆ ಹೆಚ್ಚಿದೆ. ಈ ಕುರಿತು ‘ದಿ ಎಕನಾಮಿಕ್ ಟೈಮ್ಸ್‌’ ವರದಿ ಮಾಡಿದೆ.

ದಿನಕ್ಕೆ ರೂ. 5000ವರೆಗೆ ನೀವು ಗಳಿಸಬಹುದು ಎಂಬ ಆಮಿಷದೊಂದಿಗೆ ವಾಟ್ಸ್‌ಅಪ್‌, ಲಿಂಕ್ಡ್‌ಇನ್‌ ಮತ್ತು ಫೇಸ್‌ಬುಕ್‌ನಂತಹ ಸಾಮಾಜಿಕ ಮಾಧ್ಯಮಗಳ ಮೂಲಕ ವಂಚಕರು ನಿಮ್ಮನ್ನು ಸಂಪರ್ಕಿಸುತ್ತಾರೆ. ಪಾವತಿಯನ್ನು ಮುಂದುವರಿಸಲು, ಅವರು ಆಗಾಗ್ಗೆ ವೈಯಕ್ತಿಕ ಮಾಹಿತಿಯನ್ನು ನೀಡುವಂತೆ ಕೋರುತ್ತಾರೆ. ಸಾಂದರ್ಭಿಕವಾಗಿ ನಿಮ್ಮೊಂದಿಗೆ ವ್ಯವಹರಿಸುತ್ತಾ ಅಸ್ತಿತ್ವದಲ್ಲಿಯೇ ಇಲ್ಲದಿರುವ ಉದ್ಯೋಗಕ್ಕೆ ಪ್ರವೇಶ ಪಡೆಯುವಂತೆ ಅವರು ನಿಮ್ಮನ್ನು ಕಾಡಲಾರಂಭಿಸುತ್ತಾರೆ.

ಈ ವಂಚಕರು ಹೇಗೆ ಕಾರ್ಯನಿರ್ವಹಿಸುತ್ತಾರೆ?

ಕೆಲವೇ ಕೆಲವರಿಗೆ ಉದ್ಯೋಗವಕಾಶಗಳಿವೆ ಎಂಬ ಮಾಹಿತಿಯೊಂದಿಗೆ ವಂಚಕರು ನಿಮಗೆ ಸಂದೇಶ ಕಳುಹಿಸುವ ಮೂಲಕ ಸಂಪರ್ಕ ಸಾಧಿಸುತ್ತಾರೆ. ನಿಮ್ಮ ಉದ್ಯೋಗವನ್ನು ಕಾಯ್ದಿರಿಸಲು ನೀವು ಪ್ರತಿಕ್ರಿಯಿಸಬೇಕಾಗುತ್ತದೆ.

ಬಲಿಪಶುವಾಗಲಿರುವ ವ್ಯಕ್ತಿ, “ಏನು ಕೆಲಸ?” ಎಂದು ಕೇಳಿದಾಗ, “ನೀವು ಇಲ್ಲಿ ಮಾಡಬೇಕಾಗಿರುವ ಕೆಲಸವಿಷ್ಟೇ. ಯೂಟ್ಯೂಬ್‌ನಲ್ಲಿ ವೀಡಿಯೊಗಳನ್ನು ಲೈಕ್ ಮಾಡಬೇಕು. ನೀವು ಲೈಕ್ ಮಾಡಿದ ಪ್ರತಿ ವಿಡಿಯೊಗೆ ರೂ. ಐವತ್ತು ರೂಪಾಯಿ ಪಾವತಿಸುತ್ತೇವೆ” ಎಂದು ವಂಚಕರು ತಿಳಿಸುತ್ತಾರೆ.

ಈ ಮಾದರಿಯಲ್ಲಿ ನಿಮಗೆ ಸಂದೇಶ ಬರುತ್ತವೆ

ನಕಲಿ ಖಾತೆಗಳ ಮೂಲಕ ಬೋಟ್ ಫಾರ್ಮ್‌ಗಳನ್ನು ಬಳಸಿಕೊಂಡು ನಕಲಿ ಯೂಟ್ಯೂಬ್‌ ಲೈಕ್‌ಗಳನ್ನು ಸೃಷ್ಟಿಸುವುದು ಈ ವಂಚಕರ ವ್ಯವಹಾರ ಮಾದರಿಯಾಗಿದೆ. ಆದರೆ, ಈ ಮಾಹಿತಿಯ ಕೊರತೆಯಿಂದ ಜನರು ತೊಂದರೆಗೆ ಸಿಲುಕಿಕೊಳ್ಳುತ್ತಾರೆ.

ಜಾಗತಿಕ ಸಾಮಾಜಿಕ ಮಾಧ್ಯಮ ಅಥವಾ ಇಂಟರ್ನೆಟ್ ಕಂಪನಿಯಲ್ಲಿ ನಮ್ಮ ಕೆಲಸ ನಡೆಯುತ್ತಿದೆ ಎಂದು ನಿಮ್ಮನ್ನು ನಂಬಿಸಲು ಈ ವಂಚಕರು ಪ್ರಯತ್ನಿಸುತ್ತಾರೆ.

ಹೀಗೆ ನಿಮ್ಮನ್ನು ಸಂಪರ್ಕಿಸಿದವರು 150 ರೂಪಾಯಿಯಂತಹ ಸಣ್ಣ ಮೊತ್ತವನ್ನು ಮೊದಲು ನಿಮಗೆ ನೀಡುತ್ತಾರೆ. “ಮೂರು ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿ” ಈ ಹಣವನ್ನು ನಿಮಗೆ ಪಾವತಿಸಿರುತ್ತಾರೆ. ಅವರು ನಿಮಗೆ ಮೂರು ಯೂಟ್ಯೂಬ್‌ ವೀಡಿಯೊಗಳ ಲಿಂಕ್‌ಗಳನ್ನು ಕಳುಹಿಸುತ್ತಾರೆ, ಅವುಗಳನ್ನು ಲೈಕ್‌ ಮಾಡುವಂತೆ ಕೇಳುತ್ತಾರೆ. ನಂತರ ನೀವು ಲೈಕ್‌ ಮಾಡಿರುವ ಸಾಕ್ಷಿಗಾಗಿ ಸ್ಕ್ರೀನ್‌ಶಾಟ್ ಕಳುಹಿಸುವಂತೆ ತಿಳಿಸುತ್ತಾರೆ.

ಈ ಸ್ಕ್ಯಾಮ್‌ ನಂತರದಲ್ಲಿ ಎರಡನೇ ಹಂತಕ್ಕೆ ಹೋಗುತ್ತದೆ. ಇಲ್ಲಿಂದ ನೀವು ತೊಂದರೆ ಸಿಲುಕಿಕೊಳ್ಳಲು ಆರಂಭಿಸುತ್ತೀರಿ. “ನಿಮಗೆ ಹಣ ವರ್ಗಾವಣೆ ಮಾಡಲು ತೊಂದರೆಯಾಗುತ್ತಿದೆ” ಎಂಬ ಉತ್ತರವನ್ನು ಅವರು ನೀಡುತ್ತಾರೆ. ನಿಮಗೆ ಹಣ ವರ್ಗಾಯಿಸಲು ಸುಲಭವಾಗುವಂತೆ ಅಪ್ಲಿಕೇಷನ್‌ ಒಂದನ್ನು ಡೌನ್‌ಲೋಡ್ ಮಾಡಿಕೊಳ್ಳಲು ನಿಮ್ಮಲ್ಲಿ ತಿಳಿಸುತ್ತಾರೆ.

ಈ ಅಪ್ಲಿಕೇಷನ್‌ ಇದೆಯಲ್ಲ- ಅದರ ಮೂಲಕ ನಿಮ್ಮ ಮೊಬೈಲ್‌ ಅಥವಾ ಇನ್ನ್ಯಾವುದೇ ಡಿವೈಸ್‌ ಒಳಗೆ ಈ ವಂಚಕರು ಸುಲಭವಾಗಿ ಪ್ರವೇಶಿಸುತ್ತಾರೆ. ಇದು ಒಂದು ರೀತಿಯಲ್ಲಿ ಮಾಲ್‌ವೇರ್‌ ಸಾಫ್ಟ್‌ವೇರ್‌ ಆಗಿದೆ. ನಿಮಗೆ ಹಣವನ್ನು ಪಾವತಿಸುವ ಕನ್ಫರ್ಮೇಷನ್‌ಗಾಗಿ ಒಂದು ರೂಪಾಯಿ ಕಳಿಹಿಸಲು ಸೂಚಿಸುತ್ತಾರೆ. ಈ ಹಣ ಪಡೆಯುವುದು ಪರಿಶೀಲನೆಗಾಗಿಯಷ್ಟೇ ಎಂದು ನಂಬಿಸುತ್ತಾರೆ. ನೀವಿಷ್ಟು ಮಾಡಿದರೆ ಸಾಕು, ನಿಮ್ಮ ಒಟಿಪಿಗಳಿಗೆ, ಇಮೇಲ್‌ಗೆ, ಬ್ಯಾಂಕ್‌ ಖಾತೆ ಮತ್ತು ಕ್ರೆಡಿಟ್ ಕಾರ್ಡ್‌ಗೆ ಸಂಪೂರ್ಣವಾಗಿ ಪ್ರವೇಶವನ್ನು ಅವರು ಪಡೆಯುತ್ತಾರೆ. ನಿಮ್ಮ ಖಾತೆಯಲ್ಲಿರುವ ಹಣವೆಲ್ಲ ಖೋತಾ ಹೊಡೆಯುತ್ತದೆ.

ಇದನ್ನೂ ಓದಿರಿ: ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...