Homeಮುಖಪುಟವಾಟ್ಸಾಪ್ ಗುಂಪಲ್ಲಿರುವುದು ಅಪರಾಧವಲ್ಲ: ದೆಹಲಿ ಹೈಕೋರ್ಟ್‌ಗೆ ಉಮರ್ ಖಾಲಿದ್

ವಾಟ್ಸಾಪ್ ಗುಂಪಲ್ಲಿರುವುದು ಅಪರಾಧವಲ್ಲ: ದೆಹಲಿ ಹೈಕೋರ್ಟ್‌ಗೆ ಉಮರ್ ಖಾಲಿದ್

- Advertisement -
- Advertisement -

ಕೇವಲ ವಾಟ್ಸಾಪ್ ಗುಂಪಿನಲ್ಲಿ ಇದ್ದೇನೆ ಎಂದ ಮಾತ್ರಕ್ಕೆ ಅದನ್ನು ತಪ್ಪಿನ ಪುರಾವೆಯಾಗಿ ಪರಿಗಣಿಸಬಾರದು ಎಂದು 2020 ರ ದೆಹಲಿ ಗಲಭೆ ಪ್ರಕರಣದಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಗುರುವಾರ ಹೈಕೋರ್ಟ್‌ಗೆ ತಿಳಿಸಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ವಾಟ್ಸಾಪ್ ಗುಂಪಲ್ಲಿರುವುದು

“ಒಂದು ಗುಂಪಿನಲ್ಲಿದ್ದ ಮಾತ್ರಕ್ಗೆಕ ತಪ್ಪು ಮಾಡಿರುವುದರ ಸೂಚನೆಯಲ್ಲ. ಅಲ್ಲಿ ನಾನು ಏನನ್ನೂ ಹೇಳಿಲ್ಲ. ಯಾರೊ ಒಬ್ಬರು ಪ್ರತಿಭಟನಾ ಸ್ಥಳದ ಬಗ್ಗೆ ಕೇಳಿದಾಗ ನಾನು ಅಲ್ಲಿನ ಲೊಕೇಶನ್ ಮಾತ್ರ ಹಂಚಿಕೊಂಡಿದ್ದೇನೆ. ಯಾರೋ ಒಬ್ಬರು ನನಗೆ ಮೆಸೇಜ್ ಮಾಡಿದರು, ನಾನು ಅದರನ್ನು ತಿಳಿಸಿದೆ. ಅಷ್ಟಕ್ಕೂ ಅದು ತಪ್ಪಲ್ಲ, ನಾನು ಹಾಕಿದ್ದ ಸಂದೇಶದಲ್ಲಿ ಯಾವುದೇ ಅಪರಾಧವಿಲ್ಲ.” ಎಂದು ಉಮರ್ ಖಾಲಿದ್ ಅವರ ಪರ ವಕೀಲರು ಹೇಳಿದ್ದಾರೆ.

ವಾಟ್ಸಾಪ್ ಗುಂಪಿನಲ್ಲಿ ಉಮರ್ ಖಾಲಿದ್ ಇದ್ದಾರೆ ಎಂಬ ಕಾರಣಕ್ಕೆ ಅದನ್ನು ಕ್ರಿಮಿನಲ್ ಪಿತೂರಿಯ ಪುರಾವೆಯಾಗಿ ದೆಹಲಿ ಪೊಲೀಸರು ಉಲ್ಲೇಖಿಸಿದ್ದಕ್ಕೆ ವಕೀಲ ತ್ರಿದೀಪ್ ಪೈಸ್ ನ್ಯಾಯಾಲಯದಲ್ಲಿ ಪ್ರತಿಕ್ರಿಯಿಸುತ್ತಿದ್ದರು. ವಾಟ್ಸಾಪ್ ಗುಂಪಲ್ಲಿರುವುದು

ಪೊಲೀಸರು ಸಲ್ಲಿಸಿದ್ದ ಆರೋಪಪಟ್ಟಿಯಲ್ಲಿ, ಉಮರ್ ಖಾಲಿದ್ ಪ್ರಸ್ತುತ ಸರ್ಕಾರಿ ವಿರೋಧಿಗಳ ಒಕ್ಕೂಟವನ್ನು ಒಟ್ಟುಗೂಡಿಸಿದ್ದು ವಾಟ್ಸಾಪ್‌ನಲ್ಲಿ ದೆಹಲಿಯ ಪ್ರತಿಭಟನೆ ಬೆಂಬಲಿಗರ ಗುಂಪು ರಚನೆಗೆ ಕಾರಣವಾಯಿತು ಎಂದು ಆರೋಪಿಸಿದ್ದರು.

ಅಲ್ಲದೆ, ”ಜೆಎನ್‌ಯು [ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ]ದ ಮುಸ್ಲಿಂ ವಿದ್ಯಾರ್ಥಿಗಳು” ಎಂಬ ವಿದ್ಯಾರ್ಥಿಗಳ ಗುಂಪಿಗೆ ಮತ್ತೊಬ್ಬ ಹೋರಾಟಗಾರ ಶಾರ್ಜೀಲ್ ಇಮಾಮ್ ಸಹಾಯದಿಂದ ಉಮರ್ ಖಾಲಿದ್ ಮಾರ್ಗದರ್ಶನ ನೀಡಿದ ಕಾರಣಕ್ಕೆ ಈ ವಾಟ್ಸಾಪ್ ಗುಂಪನ್ನು ರಚಿಸಲಾಗಿದೆ ಎಂದು ಪೊಲೀಸರು ಆರೋಪಿಸಿದ್ದರು.

ದೆಹಲಿ ಕಾಂಗ್ರೆಸ್‌ನ ಮಾಜಿ ಕೌನ್ಸಿಲರ್ ಇಶ್ರತ್ ಜಹಾನ್ ಮತ್ತು ಹೋರಾಟಗಾರ್ತಿ ದೇವಾಂಗನಾ ಕಲಿತಾ ಅವರಂತಹ ಇತರರು “ನನಗಿಂತ ಹೆಚ್ಚಿನ ಪಾತ್ರಗಳನ್ನು ಹೊಂದಿದ್ದಾರೆ”, ಆದರೆ ಅವರು ಇನ್ನೂ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ಪೈಸ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಬಲಿಗರು ಮತ್ತು ಅದನ್ನು ವಿರೋಧಿಸುವವರ ನಡುವೆ 2020 ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 2020 ರಲ್ಲಿ ಖಾಲಿದ್ ಅವರನ್ನು ಬಂಧಿಸಲಾಯಿತು. ಈ ಗಲಭೆಯಲ್ಲಿ 53 ಜನರು ಸಾವನ್ನಪ್ಪಿದರು. ಕೊಲ್ಲಲ್ಪಟ್ಟವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದಾರೆ.

ಉಮರ್ ಖಾಲಿದ್ ಮತ್ತು ಇತರ ಹಲವಾರು ಹೋರಾಟಗಾರರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ, ಭಾರತೀಯ ದಂಡ ಸಂಹಿತೆ, ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಅಪರಾಧಗಳಿಗಾಗಿ ಪ್ರಕರಣ ದಾಖಲಿಸಲಾಗಿದೆ.

ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರವು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಮಸಿ ಬಳಿಯುವ ದೊಡ್ಡ ಪಿತೂರಿಯ ಭಾಗವಾಗಿ ನಡೆಸಲಾಗಿದ್ದು, ತಿದ್ದುಪಡಿ ಮಾಡಿದ ಪೌರತ್ವ ಕಾಯ್ದೆಯ ವಿರುದ್ಧ ಪ್ರತಿಭಟನೆಗಳನ್ನು ಆಯೋಜಿಸಿದವರು ಹಾಗೂ ಉಮರ್‌ ಖಾಲಿದ್ ಸೇರಿದಂತೆ ಇತರರು ಇದನ್ನು ಯೋಜಿಸಿದ್ದರು ಎಂದು ದೆಹಲಿ ಪೊಲೀಸರು ಹೇಳಿಕೊಂಡಿದ್ದಾರೆ.

ಪ್ರತಿಭಟನಾಕಾರರು ಪ್ರತ್ಯೇಕತಾವಾದಿ ಉದ್ದೇಶಗಳನ್ನು ಹೊಂದಿದ್ದು, ಸರ್ಕಾರವನ್ನು ಅಸ್ಥಿರಗೊಳಿಸಲು “ನಾಗರಿಕ ಅಸಹಕಾರದ ಮುಖಭಾವ” ವನ್ನು ಬಳಸುತ್ತಿದ್ದರು ಎಂದು ಪೊಲೀಸರು ಹೇಳಿಕೊಂಡಿದ್ದಾರೆ.

ನವೆಂಬರ್ 2020 ರಲ್ಲಿ ಸಲ್ಲಿಸಲಾದ 200 ಪುಟಗಳ ಆರೋಪಪಟ್ಟಿಯಲ್ಲಿ, ಉಮರ್ ಖಾಲಿದ್ ದೆಹಲಿ ಗಲಭೆಯನ್ನು “ಕೂತಲ್ಲಿಂದಲೆ ನಿಯಂತ್ರಿಸಿದರು” ಎಂದು ಪೊಲೀಸರು ನಿರ್ದಿಷ್ಟವಾಗಿ ಆರೋಪಿಸಿದ್ದಾರೆ. ಈ ಗಲಭೆ ವೇಳೆ ಉಮರ್ ಖಾಲಿದ್ ಅರು “ರಹಸ್ಯ ಸಭೆ” ನಡೆಸಿದ್ದಾರೆ, ಅಲ್ಲಿ ಅವರು ಗಲಭೆ ನಡೆಸಲು ವಿವರಗಳನ್ನು ವಿವರಿಸಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ. ಮಾರ್ಚ್ 4 ರಂದು ಹೈಕೋರ್ಟ್ ಈ ಪ್ರಕರಣದ ಮುಂದಿನ ವಿಚಾರಣೆ ನಡೆಸಲಿದೆ.

ಇದನ್ನೂಓದಿ:  ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಪೋಸ್ಟರ್‌ಗಳ ಪ್ರದರ್ಶಿಸಿ ವಿಜಯೋತ್ಸವ ಆಚರಿಸಿದ ಬಿಜೆಪಿ

ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಪೋಸ್ಟರ್‌ಗಳ ಪ್ರದರ್ಶಿಸಿ ವಿಜಯೋತ್ಸವ ಆಚರಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...