Homeಮುಖಪುಟವಾಟ್ಸಾಪ್ ಗುಂಪಲ್ಲಿರುವುದು ಅಪರಾಧವಲ್ಲ: ದೆಹಲಿ ಹೈಕೋರ್ಟ್‌ಗೆ ಉಮರ್ ಖಾಲಿದ್

ವಾಟ್ಸಾಪ್ ಗುಂಪಲ್ಲಿರುವುದು ಅಪರಾಧವಲ್ಲ: ದೆಹಲಿ ಹೈಕೋರ್ಟ್‌ಗೆ ಉಮರ್ ಖಾಲಿದ್

- Advertisement -
- Advertisement -

ಕೇವಲ ವಾಟ್ಸಾಪ್ ಗುಂಪಿನಲ್ಲಿ ಇದ್ದೇನೆ ಎಂದ ಮಾತ್ರಕ್ಕೆ ಅದನ್ನು ತಪ್ಪಿನ ಪುರಾವೆಯಾಗಿ ಪರಿಗಣಿಸಬಾರದು ಎಂದು 2020 ರ ದೆಹಲಿ ಗಲಭೆ ಪ್ರಕರಣದಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಗುರುವಾರ ಹೈಕೋರ್ಟ್‌ಗೆ ತಿಳಿಸಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ವಾಟ್ಸಾಪ್ ಗುಂಪಲ್ಲಿರುವುದು

“ಒಂದು ಗುಂಪಿನಲ್ಲಿದ್ದ ಮಾತ್ರಕ್ಗೆಕ ತಪ್ಪು ಮಾಡಿರುವುದರ ಸೂಚನೆಯಲ್ಲ. ಅಲ್ಲಿ ನಾನು ಏನನ್ನೂ ಹೇಳಿಲ್ಲ. ಯಾರೊ ಒಬ್ಬರು ಪ್ರತಿಭಟನಾ ಸ್ಥಳದ ಬಗ್ಗೆ ಕೇಳಿದಾಗ ನಾನು ಅಲ್ಲಿನ ಲೊಕೇಶನ್ ಮಾತ್ರ ಹಂಚಿಕೊಂಡಿದ್ದೇನೆ. ಯಾರೋ ಒಬ್ಬರು ನನಗೆ ಮೆಸೇಜ್ ಮಾಡಿದರು, ನಾನು ಅದರನ್ನು ತಿಳಿಸಿದೆ. ಅಷ್ಟಕ್ಕೂ ಅದು ತಪ್ಪಲ್ಲ, ನಾನು ಹಾಕಿದ್ದ ಸಂದೇಶದಲ್ಲಿ ಯಾವುದೇ ಅಪರಾಧವಿಲ್ಲ.” ಎಂದು ಉಮರ್ ಖಾಲಿದ್ ಅವರ ಪರ ವಕೀಲರು ಹೇಳಿದ್ದಾರೆ.

ವಾಟ್ಸಾಪ್ ಗುಂಪಿನಲ್ಲಿ ಉಮರ್ ಖಾಲಿದ್ ಇದ್ದಾರೆ ಎಂಬ ಕಾರಣಕ್ಕೆ ಅದನ್ನು ಕ್ರಿಮಿನಲ್ ಪಿತೂರಿಯ ಪುರಾವೆಯಾಗಿ ದೆಹಲಿ ಪೊಲೀಸರು ಉಲ್ಲೇಖಿಸಿದ್ದಕ್ಕೆ ವಕೀಲ ತ್ರಿದೀಪ್ ಪೈಸ್ ನ್ಯಾಯಾಲಯದಲ್ಲಿ ಪ್ರತಿಕ್ರಿಯಿಸುತ್ತಿದ್ದರು. ವಾಟ್ಸಾಪ್ ಗುಂಪಲ್ಲಿರುವುದು

ಪೊಲೀಸರು ಸಲ್ಲಿಸಿದ್ದ ಆರೋಪಪಟ್ಟಿಯಲ್ಲಿ, ಉಮರ್ ಖಾಲಿದ್ ಪ್ರಸ್ತುತ ಸರ್ಕಾರಿ ವಿರೋಧಿಗಳ ಒಕ್ಕೂಟವನ್ನು ಒಟ್ಟುಗೂಡಿಸಿದ್ದು ವಾಟ್ಸಾಪ್‌ನಲ್ಲಿ ದೆಹಲಿಯ ಪ್ರತಿಭಟನೆ ಬೆಂಬಲಿಗರ ಗುಂಪು ರಚನೆಗೆ ಕಾರಣವಾಯಿತು ಎಂದು ಆರೋಪಿಸಿದ್ದರು.

ಅಲ್ಲದೆ, ”ಜೆಎನ್‌ಯು [ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ]ದ ಮುಸ್ಲಿಂ ವಿದ್ಯಾರ್ಥಿಗಳು” ಎಂಬ ವಿದ್ಯಾರ್ಥಿಗಳ ಗುಂಪಿಗೆ ಮತ್ತೊಬ್ಬ ಹೋರಾಟಗಾರ ಶಾರ್ಜೀಲ್ ಇಮಾಮ್ ಸಹಾಯದಿಂದ ಉಮರ್ ಖಾಲಿದ್ ಮಾರ್ಗದರ್ಶನ ನೀಡಿದ ಕಾರಣಕ್ಕೆ ಈ ವಾಟ್ಸಾಪ್ ಗುಂಪನ್ನು ರಚಿಸಲಾಗಿದೆ ಎಂದು ಪೊಲೀಸರು ಆರೋಪಿಸಿದ್ದರು.

ದೆಹಲಿ ಕಾಂಗ್ರೆಸ್‌ನ ಮಾಜಿ ಕೌನ್ಸಿಲರ್ ಇಶ್ರತ್ ಜಹಾನ್ ಮತ್ತು ಹೋರಾಟಗಾರ್ತಿ ದೇವಾಂಗನಾ ಕಲಿತಾ ಅವರಂತಹ ಇತರರು “ನನಗಿಂತ ಹೆಚ್ಚಿನ ಪಾತ್ರಗಳನ್ನು ಹೊಂದಿದ್ದಾರೆ”, ಆದರೆ ಅವರು ಇನ್ನೂ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ಪೈಸ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಬಲಿಗರು ಮತ್ತು ಅದನ್ನು ವಿರೋಧಿಸುವವರ ನಡುವೆ 2020 ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 2020 ರಲ್ಲಿ ಖಾಲಿದ್ ಅವರನ್ನು ಬಂಧಿಸಲಾಯಿತು. ಈ ಗಲಭೆಯಲ್ಲಿ 53 ಜನರು ಸಾವನ್ನಪ್ಪಿದರು. ಕೊಲ್ಲಲ್ಪಟ್ಟವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದಾರೆ.

ಉಮರ್ ಖಾಲಿದ್ ಮತ್ತು ಇತರ ಹಲವಾರು ಹೋರಾಟಗಾರರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ, ಭಾರತೀಯ ದಂಡ ಸಂಹಿತೆ, ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಅಪರಾಧಗಳಿಗಾಗಿ ಪ್ರಕರಣ ದಾಖಲಿಸಲಾಗಿದೆ.

ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರವು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಮಸಿ ಬಳಿಯುವ ದೊಡ್ಡ ಪಿತೂರಿಯ ಭಾಗವಾಗಿ ನಡೆಸಲಾಗಿದ್ದು, ತಿದ್ದುಪಡಿ ಮಾಡಿದ ಪೌರತ್ವ ಕಾಯ್ದೆಯ ವಿರುದ್ಧ ಪ್ರತಿಭಟನೆಗಳನ್ನು ಆಯೋಜಿಸಿದವರು ಹಾಗೂ ಉಮರ್‌ ಖಾಲಿದ್ ಸೇರಿದಂತೆ ಇತರರು ಇದನ್ನು ಯೋಜಿಸಿದ್ದರು ಎಂದು ದೆಹಲಿ ಪೊಲೀಸರು ಹೇಳಿಕೊಂಡಿದ್ದಾರೆ.

ಪ್ರತಿಭಟನಾಕಾರರು ಪ್ರತ್ಯೇಕತಾವಾದಿ ಉದ್ದೇಶಗಳನ್ನು ಹೊಂದಿದ್ದು, ಸರ್ಕಾರವನ್ನು ಅಸ್ಥಿರಗೊಳಿಸಲು “ನಾಗರಿಕ ಅಸಹಕಾರದ ಮುಖಭಾವ” ವನ್ನು ಬಳಸುತ್ತಿದ್ದರು ಎಂದು ಪೊಲೀಸರು ಹೇಳಿಕೊಂಡಿದ್ದಾರೆ.

ನವೆಂಬರ್ 2020 ರಲ್ಲಿ ಸಲ್ಲಿಸಲಾದ 200 ಪುಟಗಳ ಆರೋಪಪಟ್ಟಿಯಲ್ಲಿ, ಉಮರ್ ಖಾಲಿದ್ ದೆಹಲಿ ಗಲಭೆಯನ್ನು “ಕೂತಲ್ಲಿಂದಲೆ ನಿಯಂತ್ರಿಸಿದರು” ಎಂದು ಪೊಲೀಸರು ನಿರ್ದಿಷ್ಟವಾಗಿ ಆರೋಪಿಸಿದ್ದಾರೆ. ಈ ಗಲಭೆ ವೇಳೆ ಉಮರ್ ಖಾಲಿದ್ ಅರು “ರಹಸ್ಯ ಸಭೆ” ನಡೆಸಿದ್ದಾರೆ, ಅಲ್ಲಿ ಅವರು ಗಲಭೆ ನಡೆಸಲು ವಿವರಗಳನ್ನು ವಿವರಿಸಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ. ಮಾರ್ಚ್ 4 ರಂದು ಹೈಕೋರ್ಟ್ ಈ ಪ್ರಕರಣದ ಮುಂದಿನ ವಿಚಾರಣೆ ನಡೆಸಲಿದೆ.

ಇದನ್ನೂಓದಿ:  ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಪೋಸ್ಟರ್‌ಗಳ ಪ್ರದರ್ಶಿಸಿ ವಿಜಯೋತ್ಸವ ಆಚರಿಸಿದ ಬಿಜೆಪಿ

ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಪೋಸ್ಟರ್‌ಗಳ ಪ್ರದರ್ಶಿಸಿ ವಿಜಯೋತ್ಸವ ಆಚರಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...